AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಊಟಿಯಲ್ಲಿ 6 ಎಕರೆ ಖರೀದಿಸಿದ ಚಿರಂಜೀವಿ; ಬೆಲೆ ಎಷ್ಟು?

ಊಟಿಯ ಗುಡ್ಡ ಪ್ರದೇಶದಲ್ಲಿ ಚಿರಂಜೀವಿ ಈ ಜಾಗವನ್ನು ಖರೀದಿ ಮಾಡಿದ್ದಾರೆ. ಈಗಾಗಲೇ ನೋಂದಣಿ ಪ್ರಕ್ರಿಯೆ ಕೂಡ ಪೂರ್ಣಗೊಂಡಿದೆ. ಅವರು 16 ಕೋಟಿ ರೂಪಾಯಿ ಹಣವನ್ನು ಈ ಜಾಗಕ್ಕೆ ನೀಡಿದ್ದಾರೆ. ಅಂದರೆ ಪ್ರತಿ ಎಕರೆಗೆ ಅವರು 2.6 ಕೋಟಿ ರೂಪಾಯಿ ಕೊಟ್ಟಿದ್ದಾರೆ.

ಊಟಿಯಲ್ಲಿ 6 ಎಕರೆ ಖರೀದಿಸಿದ ಚಿರಂಜೀವಿ; ಬೆಲೆ ಎಷ್ಟು?
ಚಿರಂಜೀವಿ
ರಾಜೇಶ್ ದುಗ್ಗುಮನೆ
|

Updated on: Oct 07, 2024 | 12:58 PM

Share

ಮೆಗಾಸ್ಟಾರ್ ಚಿರಂಜೀವಿ ಅವರು ಇಂಡಸ್ಟ್ರಿಯಲ್ಲಿ ಸಾಕಷ್ಟು ಹೆಸರು ಮಾಡಿದ್ದಾರೆ. ಅನೇಕ ಸಕ್ಸಸ್ ಸಿನಿಮಾಗಳನ್ನು ಅವರು ನೀಡಿದ್ದಾರೆ. ಈ ಕಾರಣದಿಂದಲೇ ಅವರಿಗೆ ಹಣದ ಹೊಳೆ ಹರಿದು ಬಂದಿದೆ. ಅವರು ನೂರಾರು ಕೋಟಿ ರೂಪಾಯಿ ಒಡೆಯ. ಖಾಸಗಿ ಜೆಟ್ ಕೂಡ ಅವರ ಬಳಿ ಇದೆ. ಈಗ ಅವರು ಊಟಿಯಲ್ಲಿ ಆರು ಎಕರೆ ಜಾಗ ಖರೀದಿಸಿ ಮಾಡಿದ್ದಾರೆ ಎಂದು ವರದಿ ಆಗಿದೆ. ಇದರ ಬೆಲೆ ಕೇಳಿ ಅನೇಕರಿಗೆ ಅಚ್ಚರಿ ಆಗಿದೆ.

ಚಿರಂಜೀವಿ ಅವರು ಹೈದರಾಬಾದ್​ನಲ್ಲಿ ಮನೆ ಹೊಂದಿದ್ದಾರೆ. ತೆಲುಗು ರಾಜ್ಯಗಳಲ್ಲಿ ಅವರು ಸಾಕಷ್ಟು ಪ್ರಾಪರ್ಟಿ ಹೊಂದಿದ್ದಾರೆ. ಅದೇ ರೀತಿ ಬೆಂಗಳೂರಿನ ಹೊರ ವಲಯದಲ್ಲಿ ಫಾರ್ಮ್​ಹೌಸ್ ಹೊಂದಿದ್ದಾರೆ. ಅವರು ಸಮಯ ಕಳೆಯೋಕೆ ಆಗಾಗ ಇಲ್ಲಿಗೆ ಆಗಮಿಸುತ್ತಾರೆ. ಅವರು ಈ ವರ್ಷ ಕೆಲವು ಹಬ್ಬಗಳನ್ನು ಇಲ್ಲಿಯೇ ಆಚರಿಸಿದ್ದರು. ಈಗ ಚಿರಂಜೀವಿ ಅವರು ಊಟಿಯಲ್ಲಿ ಜಾಗ ಖರೀದಿ ಮಾಡಿದ್ದಾರೆ. ತಮಿಳಿನಾಡಿನಲ್ಲಿರೋ ಈ ಬೆಟ್ಟ ಪ್ರದೇಶದಲ್ಲಿ ಅವರು ಪ್ರಾಪರ್ಟಿ ಪರಿಚಯಿಸಿದ್ದಾರೆ.

ಊಟಿಯ ಗುಡ್ಡ ಪ್ರದೇಶದಲ್ಲಿ ಚಿರಂಜೀವಿ ಈ ಜಾಗವನ್ನು ಖರೀದಿ ಮಾಡಿದ್ದಾರೆ. ಈಗಾಗಲೇ ನೋಂದಣಿ ಪ್ರಕ್ರಿಯೆ ಕೂಡ ಪೂರ್ಣಗೊಂಡಿದೆ. ಅವರು 16 ಕೋಟಿ ರೂಪಾಯಿ ಹಣವನ್ನು ಈ ಜಾಗಕ್ಕೆ ನೀಡಿದ್ದಾರೆ. ಅಂದರೆ ಪ್ರತಿ ಎಕರೆಗೆ ಅವರು 2.6 ಕೋಟಿ ರೂಪಾಯಿ ಕೊಟ್ಟಿದ್ದಾರೆ.

ಚಿರಂಜೀವಿ ಈ ಜಾಗ ಖರೀದಿ ಮಾಡಿದಕ್ಕೂ ಒಂದು ಕಾರಣ ಇದೆ. ಅವರು ಇಲ್ಲಿ ಫಾರ್ಮ್​ಹೌಸ್ ಕಟ್ಟೋ ಆಲೋಚನೆಯಲ್ಲಿ ಇದ್ದಾರೆ. ರಾಮ್ ಚರಣ್ ಹಾಗೂ ಅವರ ಪತ್ನಿ ಉಪಾಸನಾ ಈಗಾಗಲೇ ಇಲ್ಲಿಗೆ ತೆರಳಿ ಒಂದಷ್ಟು ಐಡಿಯಾಗಳನ್ನು ನೀಡಿದ್ದಾರೆ.

ಇದನ್ನೂ ಓದಿ: ಚಿರಂಜೀವಿ ಬೆಂಗಳೂರಿನಲ್ಲಿ ಹೊಂದಿರೋ ಫಾರ್ಮ್​ಹೌಸ್ ಬೆಲೆ ಎಷ್ಟು?

ಚಿರಂಜೀವಿ ಅವರಿಗೆ ಇತ್ತೀಚೆಗೆ ದೊಡ್ಡ ಗೆಲುವು ಸಿಕ್ಕಿಲ್ಲ. ಅವರು ‘ವಿಶ್ವಾಂಬರಂ’ ಸಿನಿಮಾ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಈ ಚಿತ್ರವನ್ನು ವಸಿಷ್ಟ ಅವರ ನಿರ್ದೇಶನ ಮಾಡುತ್ತಿದ್ದಾರೆ. ಈ ಸಿನಿಮಾ ರಿಲೀಸ್​ಗಾಗಿ ಫ್ಯಾನ್ಸ್​ಗಾಗಿ ಕಾದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಬಿಡದಿ ಟೌನ್‌ಶಿಪ್ ಯೋಜನೆ ಪರ ರೈತರಿಂದ ಭೂ ಪರಿಹಾರಕ್ಕೆ ಅರ್ಜಿ ಸಲ್ಲಿಕೆ
ಬಿಡದಿ ಟೌನ್‌ಶಿಪ್ ಯೋಜನೆ ಪರ ರೈತರಿಂದ ಭೂ ಪರಿಹಾರಕ್ಕೆ ಅರ್ಜಿ ಸಲ್ಲಿಕೆ
ಉಳ್ಳಾಲ ಕಡಲತೀರಕ್ಕೆ ಅಪ್ಪಳಿಸಿದ ಲಕ್ಷಾಂತರ ಬೂತಾಯಿ ಮೀನಿನ ರಾಶಿ
ಉಳ್ಳಾಲ ಕಡಲತೀರಕ್ಕೆ ಅಪ್ಪಳಿಸಿದ ಲಕ್ಷಾಂತರ ಬೂತಾಯಿ ಮೀನಿನ ರಾಶಿ
ಬೀದಿಬದಿ ವ್ಯಾಪಾರಿಗಳಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸುವುದು ಸರ್ಕಾರದ ಕರ್ತವ್ಯ
ಬೀದಿಬದಿ ವ್ಯಾಪಾರಿಗಳಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸುವುದು ಸರ್ಕಾರದ ಕರ್ತವ್ಯ
ದೇವೇಗೌಡರ ಪತ್ನಿ ಚೆನ್ನಮ್ಮ ಸ್ಥಿತಿ ಗಂಭೀರ: ಆಸ್ಪತ್ರೆಗೆ ಧಾವಿಸಿದ HDK
ದೇವೇಗೌಡರ ಪತ್ನಿ ಚೆನ್ನಮ್ಮ ಸ್ಥಿತಿ ಗಂಭೀರ: ಆಸ್ಪತ್ರೆಗೆ ಧಾವಿಸಿದ HDK
SIR ಮುಗಿದ ತಕ್ಷಣ ಜಿಬಿಎ ಎಲೆಕ್ಷನ್ ಎಂದ ಕೃಷ್ಣಬೈರೇಗೌಡ
SIR ಮುಗಿದ ತಕ್ಷಣ ಜಿಬಿಎ ಎಲೆಕ್ಷನ್ ಎಂದ ಕೃಷ್ಣಬೈರೇಗೌಡ
ಡಿಕೆಶಿ ಸಚಿವ ಸಂಪುಟ ವಿಸ್ತರಣೆ: ಹೊಸ ಮುಖಗಳಿಗೆ ಹೈಕಮಾಂಡ್​​ ಮಣೆ?
ಡಿಕೆಶಿ ಸಚಿವ ಸಂಪುಟ ವಿಸ್ತರಣೆ: ಹೊಸ ಮುಖಗಳಿಗೆ ಹೈಕಮಾಂಡ್​​ ಮಣೆ?
ಮುಗಿಲು ಮುಟ್ಟಿದ ಲಾವಣ್ಯ ತಾಯಿಯ ಆಕ್ರಂದನ
ಮುಗಿಲು ಮುಟ್ಟಿದ ಲಾವಣ್ಯ ತಾಯಿಯ ಆಕ್ರಂದನ
ಚಿತ್ರೀಕರಣದಲ್ಲಿ ಆದ ಕಷ್ಟಗಳನ್ನು ವಿವರಿಸಿದ ನಟ ತಬಲಾ ನಾಣಿ: ವಿಡಿಯೋ
ಚಿತ್ರೀಕರಣದಲ್ಲಿ ಆದ ಕಷ್ಟಗಳನ್ನು ವಿವರಿಸಿದ ನಟ ತಬಲಾ ನಾಣಿ: ವಿಡಿಯೋ
ಅರಬ್ಬಿ ಸಮುದ್ರದಲ್ಲಿ ಮಗುಚಿದ ನಾಡದೋಣಿ: ನಾಲ್ವರು ಮೀನುಗಾರರು ಪಾರು
ಅರಬ್ಬಿ ಸಮುದ್ರದಲ್ಲಿ ಮಗುಚಿದ ನಾಡದೋಣಿ: ನಾಲ್ವರು ಮೀನುಗಾರರು ಪಾರು
ಸದ್ಯಕ್ಕಿಲ್ಲ ಜಿಬಿಎ ಚುನಾವಣೆ: ಡಿ. 31ರ ಡೆಡ್​ಲೈನ್ ನಿಗದಿಪಡಿಸಿದ ಸುಪ್ರೀಂ
ಸದ್ಯಕ್ಕಿಲ್ಲ ಜಿಬಿಎ ಚುನಾವಣೆ: ಡಿ. 31ರ ಡೆಡ್​ಲೈನ್ ನಿಗದಿಪಡಿಸಿದ ಸುಪ್ರೀಂ