AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಊಟಿಯಲ್ಲಿ 6 ಎಕರೆ ಖರೀದಿಸಿದ ಚಿರಂಜೀವಿ; ಬೆಲೆ ಎಷ್ಟು?

ಊಟಿಯ ಗುಡ್ಡ ಪ್ರದೇಶದಲ್ಲಿ ಚಿರಂಜೀವಿ ಈ ಜಾಗವನ್ನು ಖರೀದಿ ಮಾಡಿದ್ದಾರೆ. ಈಗಾಗಲೇ ನೋಂದಣಿ ಪ್ರಕ್ರಿಯೆ ಕೂಡ ಪೂರ್ಣಗೊಂಡಿದೆ. ಅವರು 16 ಕೋಟಿ ರೂಪಾಯಿ ಹಣವನ್ನು ಈ ಜಾಗಕ್ಕೆ ನೀಡಿದ್ದಾರೆ. ಅಂದರೆ ಪ್ರತಿ ಎಕರೆಗೆ ಅವರು 2.6 ಕೋಟಿ ರೂಪಾಯಿ ಕೊಟ್ಟಿದ್ದಾರೆ.

ಊಟಿಯಲ್ಲಿ 6 ಎಕರೆ ಖರೀದಿಸಿದ ಚಿರಂಜೀವಿ; ಬೆಲೆ ಎಷ್ಟು?
ಚಿರಂಜೀವಿ
ರಾಜೇಶ್ ದುಗ್ಗುಮನೆ
|

Updated on: Oct 07, 2024 | 12:58 PM

Share

ಮೆಗಾಸ್ಟಾರ್ ಚಿರಂಜೀವಿ ಅವರು ಇಂಡಸ್ಟ್ರಿಯಲ್ಲಿ ಸಾಕಷ್ಟು ಹೆಸರು ಮಾಡಿದ್ದಾರೆ. ಅನೇಕ ಸಕ್ಸಸ್ ಸಿನಿಮಾಗಳನ್ನು ಅವರು ನೀಡಿದ್ದಾರೆ. ಈ ಕಾರಣದಿಂದಲೇ ಅವರಿಗೆ ಹಣದ ಹೊಳೆ ಹರಿದು ಬಂದಿದೆ. ಅವರು ನೂರಾರು ಕೋಟಿ ರೂಪಾಯಿ ಒಡೆಯ. ಖಾಸಗಿ ಜೆಟ್ ಕೂಡ ಅವರ ಬಳಿ ಇದೆ. ಈಗ ಅವರು ಊಟಿಯಲ್ಲಿ ಆರು ಎಕರೆ ಜಾಗ ಖರೀದಿಸಿ ಮಾಡಿದ್ದಾರೆ ಎಂದು ವರದಿ ಆಗಿದೆ. ಇದರ ಬೆಲೆ ಕೇಳಿ ಅನೇಕರಿಗೆ ಅಚ್ಚರಿ ಆಗಿದೆ.

ಚಿರಂಜೀವಿ ಅವರು ಹೈದರಾಬಾದ್​ನಲ್ಲಿ ಮನೆ ಹೊಂದಿದ್ದಾರೆ. ತೆಲುಗು ರಾಜ್ಯಗಳಲ್ಲಿ ಅವರು ಸಾಕಷ್ಟು ಪ್ರಾಪರ್ಟಿ ಹೊಂದಿದ್ದಾರೆ. ಅದೇ ರೀತಿ ಬೆಂಗಳೂರಿನ ಹೊರ ವಲಯದಲ್ಲಿ ಫಾರ್ಮ್​ಹೌಸ್ ಹೊಂದಿದ್ದಾರೆ. ಅವರು ಸಮಯ ಕಳೆಯೋಕೆ ಆಗಾಗ ಇಲ್ಲಿಗೆ ಆಗಮಿಸುತ್ತಾರೆ. ಅವರು ಈ ವರ್ಷ ಕೆಲವು ಹಬ್ಬಗಳನ್ನು ಇಲ್ಲಿಯೇ ಆಚರಿಸಿದ್ದರು. ಈಗ ಚಿರಂಜೀವಿ ಅವರು ಊಟಿಯಲ್ಲಿ ಜಾಗ ಖರೀದಿ ಮಾಡಿದ್ದಾರೆ. ತಮಿಳಿನಾಡಿನಲ್ಲಿರೋ ಈ ಬೆಟ್ಟ ಪ್ರದೇಶದಲ್ಲಿ ಅವರು ಪ್ರಾಪರ್ಟಿ ಪರಿಚಯಿಸಿದ್ದಾರೆ.

ಊಟಿಯ ಗುಡ್ಡ ಪ್ರದೇಶದಲ್ಲಿ ಚಿರಂಜೀವಿ ಈ ಜಾಗವನ್ನು ಖರೀದಿ ಮಾಡಿದ್ದಾರೆ. ಈಗಾಗಲೇ ನೋಂದಣಿ ಪ್ರಕ್ರಿಯೆ ಕೂಡ ಪೂರ್ಣಗೊಂಡಿದೆ. ಅವರು 16 ಕೋಟಿ ರೂಪಾಯಿ ಹಣವನ್ನು ಈ ಜಾಗಕ್ಕೆ ನೀಡಿದ್ದಾರೆ. ಅಂದರೆ ಪ್ರತಿ ಎಕರೆಗೆ ಅವರು 2.6 ಕೋಟಿ ರೂಪಾಯಿ ಕೊಟ್ಟಿದ್ದಾರೆ.

ಚಿರಂಜೀವಿ ಈ ಜಾಗ ಖರೀದಿ ಮಾಡಿದಕ್ಕೂ ಒಂದು ಕಾರಣ ಇದೆ. ಅವರು ಇಲ್ಲಿ ಫಾರ್ಮ್​ಹೌಸ್ ಕಟ್ಟೋ ಆಲೋಚನೆಯಲ್ಲಿ ಇದ್ದಾರೆ. ರಾಮ್ ಚರಣ್ ಹಾಗೂ ಅವರ ಪತ್ನಿ ಉಪಾಸನಾ ಈಗಾಗಲೇ ಇಲ್ಲಿಗೆ ತೆರಳಿ ಒಂದಷ್ಟು ಐಡಿಯಾಗಳನ್ನು ನೀಡಿದ್ದಾರೆ.

ಇದನ್ನೂ ಓದಿ: ಚಿರಂಜೀವಿ ಬೆಂಗಳೂರಿನಲ್ಲಿ ಹೊಂದಿರೋ ಫಾರ್ಮ್​ಹೌಸ್ ಬೆಲೆ ಎಷ್ಟು?

ಚಿರಂಜೀವಿ ಅವರಿಗೆ ಇತ್ತೀಚೆಗೆ ದೊಡ್ಡ ಗೆಲುವು ಸಿಕ್ಕಿಲ್ಲ. ಅವರು ‘ವಿಶ್ವಾಂಬರಂ’ ಸಿನಿಮಾ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಈ ಚಿತ್ರವನ್ನು ವಸಿಷ್ಟ ಅವರ ನಿರ್ದೇಶನ ಮಾಡುತ್ತಿದ್ದಾರೆ. ಈ ಸಿನಿಮಾ ರಿಲೀಸ್​ಗಾಗಿ ಫ್ಯಾನ್ಸ್​ಗಾಗಿ ಕಾದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ದಿಢೀರ್​​ ಜಮೀರ್​ ಅಹ್ಮದ್​​ ಭೇಟಿಯಾದ ಡಿ.ಕೆ. ಸುರೇಶ್
ದಿಢೀರ್​​ ಜಮೀರ್​ ಅಹ್ಮದ್​​ ಭೇಟಿಯಾದ ಡಿ.ಕೆ. ಸುರೇಶ್
ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವ ಎಸ್ ಜೈಶಂಕರ್ ಆಕಸ್ಮಿಕ ಭೇಟಿ!
ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವ ಎಸ್ ಜೈಶಂಕರ್ ಆಕಸ್ಮಿಕ ಭೇಟಿ!
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್