AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಊಟಿಯಲ್ಲಿ 6 ಎಕರೆ ಖರೀದಿಸಿದ ಚಿರಂಜೀವಿ; ಬೆಲೆ ಎಷ್ಟು?

ಊಟಿಯ ಗುಡ್ಡ ಪ್ರದೇಶದಲ್ಲಿ ಚಿರಂಜೀವಿ ಈ ಜಾಗವನ್ನು ಖರೀದಿ ಮಾಡಿದ್ದಾರೆ. ಈಗಾಗಲೇ ನೋಂದಣಿ ಪ್ರಕ್ರಿಯೆ ಕೂಡ ಪೂರ್ಣಗೊಂಡಿದೆ. ಅವರು 16 ಕೋಟಿ ರೂಪಾಯಿ ಹಣವನ್ನು ಈ ಜಾಗಕ್ಕೆ ನೀಡಿದ್ದಾರೆ. ಅಂದರೆ ಪ್ರತಿ ಎಕರೆಗೆ ಅವರು 2.6 ಕೋಟಿ ರೂಪಾಯಿ ಕೊಟ್ಟಿದ್ದಾರೆ.

ಊಟಿಯಲ್ಲಿ 6 ಎಕರೆ ಖರೀದಿಸಿದ ಚಿರಂಜೀವಿ; ಬೆಲೆ ಎಷ್ಟು?
ಚಿರಂಜೀವಿ
ರಾಜೇಶ್ ದುಗ್ಗುಮನೆ
|

Updated on: Oct 07, 2024 | 12:58 PM

Share

ಮೆಗಾಸ್ಟಾರ್ ಚಿರಂಜೀವಿ ಅವರು ಇಂಡಸ್ಟ್ರಿಯಲ್ಲಿ ಸಾಕಷ್ಟು ಹೆಸರು ಮಾಡಿದ್ದಾರೆ. ಅನೇಕ ಸಕ್ಸಸ್ ಸಿನಿಮಾಗಳನ್ನು ಅವರು ನೀಡಿದ್ದಾರೆ. ಈ ಕಾರಣದಿಂದಲೇ ಅವರಿಗೆ ಹಣದ ಹೊಳೆ ಹರಿದು ಬಂದಿದೆ. ಅವರು ನೂರಾರು ಕೋಟಿ ರೂಪಾಯಿ ಒಡೆಯ. ಖಾಸಗಿ ಜೆಟ್ ಕೂಡ ಅವರ ಬಳಿ ಇದೆ. ಈಗ ಅವರು ಊಟಿಯಲ್ಲಿ ಆರು ಎಕರೆ ಜಾಗ ಖರೀದಿಸಿ ಮಾಡಿದ್ದಾರೆ ಎಂದು ವರದಿ ಆಗಿದೆ. ಇದರ ಬೆಲೆ ಕೇಳಿ ಅನೇಕರಿಗೆ ಅಚ್ಚರಿ ಆಗಿದೆ.

ಚಿರಂಜೀವಿ ಅವರು ಹೈದರಾಬಾದ್​ನಲ್ಲಿ ಮನೆ ಹೊಂದಿದ್ದಾರೆ. ತೆಲುಗು ರಾಜ್ಯಗಳಲ್ಲಿ ಅವರು ಸಾಕಷ್ಟು ಪ್ರಾಪರ್ಟಿ ಹೊಂದಿದ್ದಾರೆ. ಅದೇ ರೀತಿ ಬೆಂಗಳೂರಿನ ಹೊರ ವಲಯದಲ್ಲಿ ಫಾರ್ಮ್​ಹೌಸ್ ಹೊಂದಿದ್ದಾರೆ. ಅವರು ಸಮಯ ಕಳೆಯೋಕೆ ಆಗಾಗ ಇಲ್ಲಿಗೆ ಆಗಮಿಸುತ್ತಾರೆ. ಅವರು ಈ ವರ್ಷ ಕೆಲವು ಹಬ್ಬಗಳನ್ನು ಇಲ್ಲಿಯೇ ಆಚರಿಸಿದ್ದರು. ಈಗ ಚಿರಂಜೀವಿ ಅವರು ಊಟಿಯಲ್ಲಿ ಜಾಗ ಖರೀದಿ ಮಾಡಿದ್ದಾರೆ. ತಮಿಳಿನಾಡಿನಲ್ಲಿರೋ ಈ ಬೆಟ್ಟ ಪ್ರದೇಶದಲ್ಲಿ ಅವರು ಪ್ರಾಪರ್ಟಿ ಪರಿಚಯಿಸಿದ್ದಾರೆ.

ಊಟಿಯ ಗುಡ್ಡ ಪ್ರದೇಶದಲ್ಲಿ ಚಿರಂಜೀವಿ ಈ ಜಾಗವನ್ನು ಖರೀದಿ ಮಾಡಿದ್ದಾರೆ. ಈಗಾಗಲೇ ನೋಂದಣಿ ಪ್ರಕ್ರಿಯೆ ಕೂಡ ಪೂರ್ಣಗೊಂಡಿದೆ. ಅವರು 16 ಕೋಟಿ ರೂಪಾಯಿ ಹಣವನ್ನು ಈ ಜಾಗಕ್ಕೆ ನೀಡಿದ್ದಾರೆ. ಅಂದರೆ ಪ್ರತಿ ಎಕರೆಗೆ ಅವರು 2.6 ಕೋಟಿ ರೂಪಾಯಿ ಕೊಟ್ಟಿದ್ದಾರೆ.

ಚಿರಂಜೀವಿ ಈ ಜಾಗ ಖರೀದಿ ಮಾಡಿದಕ್ಕೂ ಒಂದು ಕಾರಣ ಇದೆ. ಅವರು ಇಲ್ಲಿ ಫಾರ್ಮ್​ಹೌಸ್ ಕಟ್ಟೋ ಆಲೋಚನೆಯಲ್ಲಿ ಇದ್ದಾರೆ. ರಾಮ್ ಚರಣ್ ಹಾಗೂ ಅವರ ಪತ್ನಿ ಉಪಾಸನಾ ಈಗಾಗಲೇ ಇಲ್ಲಿಗೆ ತೆರಳಿ ಒಂದಷ್ಟು ಐಡಿಯಾಗಳನ್ನು ನೀಡಿದ್ದಾರೆ.

ಇದನ್ನೂ ಓದಿ: ಚಿರಂಜೀವಿ ಬೆಂಗಳೂರಿನಲ್ಲಿ ಹೊಂದಿರೋ ಫಾರ್ಮ್​ಹೌಸ್ ಬೆಲೆ ಎಷ್ಟು?

ಚಿರಂಜೀವಿ ಅವರಿಗೆ ಇತ್ತೀಚೆಗೆ ದೊಡ್ಡ ಗೆಲುವು ಸಿಕ್ಕಿಲ್ಲ. ಅವರು ‘ವಿಶ್ವಾಂಬರಂ’ ಸಿನಿಮಾ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಈ ಚಿತ್ರವನ್ನು ವಸಿಷ್ಟ ಅವರ ನಿರ್ದೇಶನ ಮಾಡುತ್ತಿದ್ದಾರೆ. ಈ ಸಿನಿಮಾ ರಿಲೀಸ್​ಗಾಗಿ ಫ್ಯಾನ್ಸ್​ಗಾಗಿ ಕಾದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಗೃಹಲಕ್ಷ್ಮೀಯರಿಗೆ ಗುಡ್​ನ್ಯೂಸ್: ಸದ್ಯದಲ್ಲೇ ನಿಮ್ ಅಕೌಂಟ್​​ ಲಕ್ಷ್ಮೀ!
ಗೃಹಲಕ್ಷ್ಮೀಯರಿಗೆ ಗುಡ್​ನ್ಯೂಸ್: ಸದ್ಯದಲ್ಲೇ ನಿಮ್ ಅಕೌಂಟ್​​ ಲಕ್ಷ್ಮೀ!
ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ
ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ