AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬರಿಗಾಲಲ್ಲಿ ಬಂದು ವೋಟ್ ಮಾಡಿದ ಚಿರಂಜೀವಿ; ಫ್ಯಾನ್ಸ್​ಗೆ ಆಶ್ಚರ್ಯ

ಚಿರಂಜೀವಿ ಅವರು ವೋಟಿಂಗ್​ಬೂತ್​ಗೆ ಬರಿಗಾಲಲ್ಲಿ ಆಗಮಿಸಿದ್ದಾರೆ. ಇದನ್ನು ನೋಡಿ ಫ್ಯಾನ್ಸ್ ಅಚ್ಚರಿಗೊಂಡಿದ್ದಾರೆ. ಸದ್ಯ ಈ ವಿಡಿಯೋ ಸೋಶಿಯಲ್ ಮಿಡಿಯಾದಲ್ಲಿ ವೈರಲ್ ಆಗಿದೆ.

ಬರಿಗಾಲಲ್ಲಿ ಬಂದು ವೋಟ್ ಮಾಡಿದ ಚಿರಂಜೀವಿ; ಫ್ಯಾನ್ಸ್​ಗೆ ಆಶ್ಚರ್ಯ
ಚಿರಂಜೀವಿ
ರಾಜೇಶ್ ದುಗ್ಗುಮನೆ
|

Updated on: Nov 30, 2023 | 11:21 AM

Share

ತೆಲಂಗಾಣ ವಿಧಾನಸಭೆ ಚುನಾವಣೆ ಆರಂಭ ಆಗಿದೆ. ಇಂದು (ನವೆಂಬರ್ 30) ಮತದಾನ ನಡೆಯುತ್ತಿದೆ. ಅನೇಕ ಸೆಲೆಬ್ರಿಟಿಗಳು ವೋಟ್ ಮಾಡುತ್ತಿದ್ದಾರೆ. ಚಿರಂಜೀವಿ, ರಾಜಮೌಳಿ (SS Rajamouli) ಸೇರಿ ಅನೇಕ ಸೆಲೆಬ್ರಿಟಿಗಳು ತಮ್ಮ ಹಕ್ಕನ್ನು ಚಲಾಯಿಸಿದ್ದಾರೆ. ಜೊತೆಗೆ ಸೋಶಿಯಲ್ ಮೀಡಿಯಾದಲ್ಲಿ ಫೋಟೋ ಪೋಸ್ಟ್ ಮಾಡಿ ಅಭಿಮಾನಿಗಳ ಬಳಿ ಮತದಾನ ಮಾಡುವಂತೆ ಕೋರಿದ್ದಾರೆ. ಮೆಗಾಸ್ಟಾರ್ ಚಿರಂಜೀವಿ ಅವರು ಪೋಲಿಂಗ್​ಬೂತ್​ಗೆ ಬರಿಗಾಲಿನಲ್ಲಿ ಸಾಗಿದ್ದಾರೆ. ಈ ವಿಡಿಯೋ ಸಖತ್ ವೈರಲ್ ಆಗಿದೆ. ಫ್ಯಾನ್ಸ್ ವಲಯದಲ್ಲಿ ಈ ಬಗ್ಗೆ ಚರ್ಚೆ ಆಗುತ್ತಿದೆ.

ಚಿರಂಜೀವಿ ಅವರು ಕಾರಿನಲ್ಲಿ ಮತದಾನದ ಕೇಂದ್ರಕ್ಕೆ ಬಂದರು. ಅವರು ಜೀನ್ಸ್ ಹಾಗೂ ಶರ್ಟ್ ಹಾಕಿ ಬರಬಹುದು ಎಂದು ಎಲ್ಲರೂ ಭಾವಿಸಿದ್ದರು. ಆದರೆ, ಅವರು ಕಪ್ಪು ಪಂಚೆ ಹಾಗೂ ಕಪ್ಪು ಬಣ್ಣದ ಶರ್ಟ್ ಧರಿಸಿದ್ದರು. ಹೆಗಲಿಗೆ ಕಪ್ಪು ಬಣ್ಣದ ಶಾಲು ಹಾಕಿದ್ದರು. ಕಾಲಿಗೆ ಚಪ್ಪಲಿ ಧರಿಸಿರಲಿಲ್ಲ. ಇದಕ್ಕೆ ಕಾರಣವೂ ಇದೆ. ಅಯ್ಯಪ್ಪ ಸ್ವಾಮಿಗೆ ಮಾಲೆ ಹಾಕಿದರೆ ಈ ರೀತಿಯ ಬಟ್ಟೆ ಧರಿಸುತ್ತಾರೆ. ಹೀಗಾಗಿ, ಚಿರಂಜೀವಿ ಅವರು ಅಯ್ಯಪ್ಪನಿಗೆ ಮಾಲೆ ಹಾಕಿದ್ದಾರೆ ಎಂದು ಎಲ್ಲರೂ ಊಹಿಸಿದ್ದಾರೆ.

ಸಿನಿಮಾ ವಿಚಾರದಲ್ಲಿ ಚಿರಂಜೀವಿ ಅವರು ಅಂದುಕೊಂಡಂತೆ ಯಾವುದೂ ನಡೆಯುತ್ತಿಲ್ಲ. ‘ಗಾಡ್​ ಫಾದರ್’ ಹಾಗೂ ‘ಭೋಲಾ ಶಂಕರ್’ ಸಿನಿಮಾಗಳು ಹೀನಾಯವಾಗಿ ಸೋತವು. ‘ವಾಲ್ತೇರು ವೀರಯ್ಯ’ ಚಿತ್ರ ಕೂಡ ಸಾಧಾರಾಣ ಹಿಟ್ ಎನಿಸಿಕೊಂಡಿತು. ಸದ್ಯ ‘ಮೆಗಾ 156, 157 ಹಾಗೂ 158’ ಸಿನಿಮಾಗಳಲ್ಲಿ ಅವರು ನಟಿಸುತ್ತಿದ್ದಾರೆ. ಎಲ್ಲಾ ಸಿನಿಮಾಗಳು ಘೋಷಣೆ ಆಗಿದ್ದು, ಸಿನಿಮಾ ಕೆಲಸ ಇನ್ನಷ್ಟೇ ಆರಂಭ ಆಗಬೇಕಿದೆ.

ಇದನ್ನೂ ಓದಿ: ಬಾಲ್ಯದ ಗೆಳೆಯನಿಗೆ ಅನಾರೋಗ್ಯ, ಕೂಡಲೇ ಸಹಾಯಕ್ಕೆ ಧಾವಿಸಿದ ಮೆಗಾಸ್ಟಾರ್ ಚಿರಂಜೀವಿ

ಚಿರಂಜೀವಿ 156ನೇ ಚಿತ್ರಕ್ಕೆ ಸುಷ್ಮಿತಾ ಕೊನಿಡೆಲಾ ಅವರು ನಿರ್ದೇಶನ ಮಾಡುತ್ತಿದ್ದಾರೆ. 157ನೇ ಚಿತ್ರಕ್ಕೆ ವಸಿಷ್ಠ ಅವರು ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ಈ ಮೊದಲು ‘ಬಿಂಬಿಸಾರ’ ಚಿತ್ರವನ್ನು ಅವರು ನಿರ್ದೇಶನ ಮಾಡಿದ್ದರು. ಚಿರಂಜೀವಿ 158ನೇ ಚಿತ್ರಕ್ಕೆ ಬೋಯಪತಿ ಶ್ರೀನು ನಿರ್ದೇಶನ ಮಾಡಲಿದ್ದಾರೆ. ಸಾಕಷ್ಟು ಆ್ಯಕ್ಷನ್ ಚಿತ್ರಗಳನ್ನು ಅವರು ನೀಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ