AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬರಿಗಾಲಲ್ಲಿ ಬಂದು ವೋಟ್ ಮಾಡಿದ ಚಿರಂಜೀವಿ; ಫ್ಯಾನ್ಸ್​ಗೆ ಆಶ್ಚರ್ಯ

ಚಿರಂಜೀವಿ ಅವರು ವೋಟಿಂಗ್​ಬೂತ್​ಗೆ ಬರಿಗಾಲಲ್ಲಿ ಆಗಮಿಸಿದ್ದಾರೆ. ಇದನ್ನು ನೋಡಿ ಫ್ಯಾನ್ಸ್ ಅಚ್ಚರಿಗೊಂಡಿದ್ದಾರೆ. ಸದ್ಯ ಈ ವಿಡಿಯೋ ಸೋಶಿಯಲ್ ಮಿಡಿಯಾದಲ್ಲಿ ವೈರಲ್ ಆಗಿದೆ.

ಬರಿಗಾಲಲ್ಲಿ ಬಂದು ವೋಟ್ ಮಾಡಿದ ಚಿರಂಜೀವಿ; ಫ್ಯಾನ್ಸ್​ಗೆ ಆಶ್ಚರ್ಯ
ಚಿರಂಜೀವಿ
ರಾಜೇಶ್ ದುಗ್ಗುಮನೆ
|

Updated on: Nov 30, 2023 | 11:21 AM

Share

ತೆಲಂಗಾಣ ವಿಧಾನಸಭೆ ಚುನಾವಣೆ ಆರಂಭ ಆಗಿದೆ. ಇಂದು (ನವೆಂಬರ್ 30) ಮತದಾನ ನಡೆಯುತ್ತಿದೆ. ಅನೇಕ ಸೆಲೆಬ್ರಿಟಿಗಳು ವೋಟ್ ಮಾಡುತ್ತಿದ್ದಾರೆ. ಚಿರಂಜೀವಿ, ರಾಜಮೌಳಿ (SS Rajamouli) ಸೇರಿ ಅನೇಕ ಸೆಲೆಬ್ರಿಟಿಗಳು ತಮ್ಮ ಹಕ್ಕನ್ನು ಚಲಾಯಿಸಿದ್ದಾರೆ. ಜೊತೆಗೆ ಸೋಶಿಯಲ್ ಮೀಡಿಯಾದಲ್ಲಿ ಫೋಟೋ ಪೋಸ್ಟ್ ಮಾಡಿ ಅಭಿಮಾನಿಗಳ ಬಳಿ ಮತದಾನ ಮಾಡುವಂತೆ ಕೋರಿದ್ದಾರೆ. ಮೆಗಾಸ್ಟಾರ್ ಚಿರಂಜೀವಿ ಅವರು ಪೋಲಿಂಗ್​ಬೂತ್​ಗೆ ಬರಿಗಾಲಿನಲ್ಲಿ ಸಾಗಿದ್ದಾರೆ. ಈ ವಿಡಿಯೋ ಸಖತ್ ವೈರಲ್ ಆಗಿದೆ. ಫ್ಯಾನ್ಸ್ ವಲಯದಲ್ಲಿ ಈ ಬಗ್ಗೆ ಚರ್ಚೆ ಆಗುತ್ತಿದೆ.

ಚಿರಂಜೀವಿ ಅವರು ಕಾರಿನಲ್ಲಿ ಮತದಾನದ ಕೇಂದ್ರಕ್ಕೆ ಬಂದರು. ಅವರು ಜೀನ್ಸ್ ಹಾಗೂ ಶರ್ಟ್ ಹಾಕಿ ಬರಬಹುದು ಎಂದು ಎಲ್ಲರೂ ಭಾವಿಸಿದ್ದರು. ಆದರೆ, ಅವರು ಕಪ್ಪು ಪಂಚೆ ಹಾಗೂ ಕಪ್ಪು ಬಣ್ಣದ ಶರ್ಟ್ ಧರಿಸಿದ್ದರು. ಹೆಗಲಿಗೆ ಕಪ್ಪು ಬಣ್ಣದ ಶಾಲು ಹಾಕಿದ್ದರು. ಕಾಲಿಗೆ ಚಪ್ಪಲಿ ಧರಿಸಿರಲಿಲ್ಲ. ಇದಕ್ಕೆ ಕಾರಣವೂ ಇದೆ. ಅಯ್ಯಪ್ಪ ಸ್ವಾಮಿಗೆ ಮಾಲೆ ಹಾಕಿದರೆ ಈ ರೀತಿಯ ಬಟ್ಟೆ ಧರಿಸುತ್ತಾರೆ. ಹೀಗಾಗಿ, ಚಿರಂಜೀವಿ ಅವರು ಅಯ್ಯಪ್ಪನಿಗೆ ಮಾಲೆ ಹಾಕಿದ್ದಾರೆ ಎಂದು ಎಲ್ಲರೂ ಊಹಿಸಿದ್ದಾರೆ.

ಸಿನಿಮಾ ವಿಚಾರದಲ್ಲಿ ಚಿರಂಜೀವಿ ಅವರು ಅಂದುಕೊಂಡಂತೆ ಯಾವುದೂ ನಡೆಯುತ್ತಿಲ್ಲ. ‘ಗಾಡ್​ ಫಾದರ್’ ಹಾಗೂ ‘ಭೋಲಾ ಶಂಕರ್’ ಸಿನಿಮಾಗಳು ಹೀನಾಯವಾಗಿ ಸೋತವು. ‘ವಾಲ್ತೇರು ವೀರಯ್ಯ’ ಚಿತ್ರ ಕೂಡ ಸಾಧಾರಾಣ ಹಿಟ್ ಎನಿಸಿಕೊಂಡಿತು. ಸದ್ಯ ‘ಮೆಗಾ 156, 157 ಹಾಗೂ 158’ ಸಿನಿಮಾಗಳಲ್ಲಿ ಅವರು ನಟಿಸುತ್ತಿದ್ದಾರೆ. ಎಲ್ಲಾ ಸಿನಿಮಾಗಳು ಘೋಷಣೆ ಆಗಿದ್ದು, ಸಿನಿಮಾ ಕೆಲಸ ಇನ್ನಷ್ಟೇ ಆರಂಭ ಆಗಬೇಕಿದೆ.

ಇದನ್ನೂ ಓದಿ: ಬಾಲ್ಯದ ಗೆಳೆಯನಿಗೆ ಅನಾರೋಗ್ಯ, ಕೂಡಲೇ ಸಹಾಯಕ್ಕೆ ಧಾವಿಸಿದ ಮೆಗಾಸ್ಟಾರ್ ಚಿರಂಜೀವಿ

ಚಿರಂಜೀವಿ 156ನೇ ಚಿತ್ರಕ್ಕೆ ಸುಷ್ಮಿತಾ ಕೊನಿಡೆಲಾ ಅವರು ನಿರ್ದೇಶನ ಮಾಡುತ್ತಿದ್ದಾರೆ. 157ನೇ ಚಿತ್ರಕ್ಕೆ ವಸಿಷ್ಠ ಅವರು ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ಈ ಮೊದಲು ‘ಬಿಂಬಿಸಾರ’ ಚಿತ್ರವನ್ನು ಅವರು ನಿರ್ದೇಶನ ಮಾಡಿದ್ದರು. ಚಿರಂಜೀವಿ 158ನೇ ಚಿತ್ರಕ್ಕೆ ಬೋಯಪತಿ ಶ್ರೀನು ನಿರ್ದೇಶನ ಮಾಡಲಿದ್ದಾರೆ. ಸಾಕಷ್ಟು ಆ್ಯಕ್ಷನ್ ಚಿತ್ರಗಳನ್ನು ಅವರು ನೀಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
SSLC ಬೋರ್ಡ್ ಎಡವಟ್ಟಿಗೆ ಪ್ರತಿಭಾವಂತ ಅಂಧ ವಿದ್ಯಾರ್ಥಿನಿ ಫೇಲ್
SSLC ಬೋರ್ಡ್ ಎಡವಟ್ಟಿಗೆ ಪ್ರತಿಭಾವಂತ ಅಂಧ ವಿದ್ಯಾರ್ಥಿನಿ ಫೇಲ್
SSLC Results 2026: 1 ಅಂಕದಿಂದ ಫಸ್ಟ್ ರ‍್ಯಾಂಕ್ ಮಿಸ್!
SSLC Results 2026: 1 ಅಂಕದಿಂದ ಫಸ್ಟ್ ರ‍್ಯಾಂಕ್ ಮಿಸ್!
ಡೆನ್​ಮಾರ್ಕ್ನಲ್ಲಿ ಎರಡು ರೈಲುಗಳು ಮುಖಾಮುಖಿ ಡಿಕ್ಕಿ, 12 ಮಂದಿಗೆ ಗಾಯ
ಡೆನ್​ಮಾರ್ಕ್ನಲ್ಲಿ ಎರಡು ರೈಲುಗಳು ಮುಖಾಮುಖಿ ಡಿಕ್ಕಿ, 12 ಮಂದಿಗೆ ಗಾಯ
ತೃತೀಯ ಭಾಷೆ ಹಿಂದಿಯಲ್ಲಿ ಅನುತ್ತೀರ್ಣರಾದವರ ಸಂಖ್ಯೆ ಬಾರಿ ಇಳಿಕೆ
ತೃತೀಯ ಭಾಷೆ ಹಿಂದಿಯಲ್ಲಿ ಅನುತ್ತೀರ್ಣರಾದವರ ಸಂಖ್ಯೆ ಬಾರಿ ಇಳಿಕೆ
ವಿದ್ಯಾರ್ಥಿಗಳೇ ಗಮನಿಸಿ: SSLC ಫೇಲ್​​ ಆದವರಿಗೆ 3ನೇ ಬಾರಿ ಪರೀಕ್ಷೆ ಇರಲ್ಲ
ವಿದ್ಯಾರ್ಥಿಗಳೇ ಗಮನಿಸಿ: SSLC ಫೇಲ್​​ ಆದವರಿಗೆ 3ನೇ ಬಾರಿ ಪರೀಕ್ಷೆ ಇರಲ್ಲ