AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬರಿಗಾಲಲ್ಲಿ ಬಂದು ವೋಟ್ ಮಾಡಿದ ಚಿರಂಜೀವಿ; ಫ್ಯಾನ್ಸ್​ಗೆ ಆಶ್ಚರ್ಯ

ಚಿರಂಜೀವಿ ಅವರು ವೋಟಿಂಗ್​ಬೂತ್​ಗೆ ಬರಿಗಾಲಲ್ಲಿ ಆಗಮಿಸಿದ್ದಾರೆ. ಇದನ್ನು ನೋಡಿ ಫ್ಯಾನ್ಸ್ ಅಚ್ಚರಿಗೊಂಡಿದ್ದಾರೆ. ಸದ್ಯ ಈ ವಿಡಿಯೋ ಸೋಶಿಯಲ್ ಮಿಡಿಯಾದಲ್ಲಿ ವೈರಲ್ ಆಗಿದೆ.

ಬರಿಗಾಲಲ್ಲಿ ಬಂದು ವೋಟ್ ಮಾಡಿದ ಚಿರಂಜೀವಿ; ಫ್ಯಾನ್ಸ್​ಗೆ ಆಶ್ಚರ್ಯ
ಚಿರಂಜೀವಿ
ರಾಜೇಶ್ ದುಗ್ಗುಮನೆ
|

Updated on: Nov 30, 2023 | 11:21 AM

Share

ತೆಲಂಗಾಣ ವಿಧಾನಸಭೆ ಚುನಾವಣೆ ಆರಂಭ ಆಗಿದೆ. ಇಂದು (ನವೆಂಬರ್ 30) ಮತದಾನ ನಡೆಯುತ್ತಿದೆ. ಅನೇಕ ಸೆಲೆಬ್ರಿಟಿಗಳು ವೋಟ್ ಮಾಡುತ್ತಿದ್ದಾರೆ. ಚಿರಂಜೀವಿ, ರಾಜಮೌಳಿ (SS Rajamouli) ಸೇರಿ ಅನೇಕ ಸೆಲೆಬ್ರಿಟಿಗಳು ತಮ್ಮ ಹಕ್ಕನ್ನು ಚಲಾಯಿಸಿದ್ದಾರೆ. ಜೊತೆಗೆ ಸೋಶಿಯಲ್ ಮೀಡಿಯಾದಲ್ಲಿ ಫೋಟೋ ಪೋಸ್ಟ್ ಮಾಡಿ ಅಭಿಮಾನಿಗಳ ಬಳಿ ಮತದಾನ ಮಾಡುವಂತೆ ಕೋರಿದ್ದಾರೆ. ಮೆಗಾಸ್ಟಾರ್ ಚಿರಂಜೀವಿ ಅವರು ಪೋಲಿಂಗ್​ಬೂತ್​ಗೆ ಬರಿಗಾಲಿನಲ್ಲಿ ಸಾಗಿದ್ದಾರೆ. ಈ ವಿಡಿಯೋ ಸಖತ್ ವೈರಲ್ ಆಗಿದೆ. ಫ್ಯಾನ್ಸ್ ವಲಯದಲ್ಲಿ ಈ ಬಗ್ಗೆ ಚರ್ಚೆ ಆಗುತ್ತಿದೆ.

ಚಿರಂಜೀವಿ ಅವರು ಕಾರಿನಲ್ಲಿ ಮತದಾನದ ಕೇಂದ್ರಕ್ಕೆ ಬಂದರು. ಅವರು ಜೀನ್ಸ್ ಹಾಗೂ ಶರ್ಟ್ ಹಾಕಿ ಬರಬಹುದು ಎಂದು ಎಲ್ಲರೂ ಭಾವಿಸಿದ್ದರು. ಆದರೆ, ಅವರು ಕಪ್ಪು ಪಂಚೆ ಹಾಗೂ ಕಪ್ಪು ಬಣ್ಣದ ಶರ್ಟ್ ಧರಿಸಿದ್ದರು. ಹೆಗಲಿಗೆ ಕಪ್ಪು ಬಣ್ಣದ ಶಾಲು ಹಾಕಿದ್ದರು. ಕಾಲಿಗೆ ಚಪ್ಪಲಿ ಧರಿಸಿರಲಿಲ್ಲ. ಇದಕ್ಕೆ ಕಾರಣವೂ ಇದೆ. ಅಯ್ಯಪ್ಪ ಸ್ವಾಮಿಗೆ ಮಾಲೆ ಹಾಕಿದರೆ ಈ ರೀತಿಯ ಬಟ್ಟೆ ಧರಿಸುತ್ತಾರೆ. ಹೀಗಾಗಿ, ಚಿರಂಜೀವಿ ಅವರು ಅಯ್ಯಪ್ಪನಿಗೆ ಮಾಲೆ ಹಾಕಿದ್ದಾರೆ ಎಂದು ಎಲ್ಲರೂ ಊಹಿಸಿದ್ದಾರೆ.

ಸಿನಿಮಾ ವಿಚಾರದಲ್ಲಿ ಚಿರಂಜೀವಿ ಅವರು ಅಂದುಕೊಂಡಂತೆ ಯಾವುದೂ ನಡೆಯುತ್ತಿಲ್ಲ. ‘ಗಾಡ್​ ಫಾದರ್’ ಹಾಗೂ ‘ಭೋಲಾ ಶಂಕರ್’ ಸಿನಿಮಾಗಳು ಹೀನಾಯವಾಗಿ ಸೋತವು. ‘ವಾಲ್ತೇರು ವೀರಯ್ಯ’ ಚಿತ್ರ ಕೂಡ ಸಾಧಾರಾಣ ಹಿಟ್ ಎನಿಸಿಕೊಂಡಿತು. ಸದ್ಯ ‘ಮೆಗಾ 156, 157 ಹಾಗೂ 158’ ಸಿನಿಮಾಗಳಲ್ಲಿ ಅವರು ನಟಿಸುತ್ತಿದ್ದಾರೆ. ಎಲ್ಲಾ ಸಿನಿಮಾಗಳು ಘೋಷಣೆ ಆಗಿದ್ದು, ಸಿನಿಮಾ ಕೆಲಸ ಇನ್ನಷ್ಟೇ ಆರಂಭ ಆಗಬೇಕಿದೆ.

ಇದನ್ನೂ ಓದಿ: ಬಾಲ್ಯದ ಗೆಳೆಯನಿಗೆ ಅನಾರೋಗ್ಯ, ಕೂಡಲೇ ಸಹಾಯಕ್ಕೆ ಧಾವಿಸಿದ ಮೆಗಾಸ್ಟಾರ್ ಚಿರಂಜೀವಿ

ಚಿರಂಜೀವಿ 156ನೇ ಚಿತ್ರಕ್ಕೆ ಸುಷ್ಮಿತಾ ಕೊನಿಡೆಲಾ ಅವರು ನಿರ್ದೇಶನ ಮಾಡುತ್ತಿದ್ದಾರೆ. 157ನೇ ಚಿತ್ರಕ್ಕೆ ವಸಿಷ್ಠ ಅವರು ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ಈ ಮೊದಲು ‘ಬಿಂಬಿಸಾರ’ ಚಿತ್ರವನ್ನು ಅವರು ನಿರ್ದೇಶನ ಮಾಡಿದ್ದರು. ಚಿರಂಜೀವಿ 158ನೇ ಚಿತ್ರಕ್ಕೆ ಬೋಯಪತಿ ಶ್ರೀನು ನಿರ್ದೇಶನ ಮಾಡಲಿದ್ದಾರೆ. ಸಾಕಷ್ಟು ಆ್ಯಕ್ಷನ್ ಚಿತ್ರಗಳನ್ನು ಅವರು ನೀಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಬಜೆಟ್​​ ಕುರಿತ ಹೇಳಿಕೆಗೆ ಇಕ್ಬಾಲ್ ಸಮರ್ಥನೆ: ರಾಮನಗರ MLA ಹೇಳಿದ್ದಿಷ್ಟು
ಬಜೆಟ್​​ ಕುರಿತ ಹೇಳಿಕೆಗೆ ಇಕ್ಬಾಲ್ ಸಮರ್ಥನೆ: ರಾಮನಗರ MLA ಹೇಳಿದ್ದಿಷ್ಟು
ಸಚಿವ ಸ್ಥಾನಕ್ಕಾಗಿ ಹಿರಿಯ ಶಾಸಕರ ಪಟ್ಟು: ಹೈಕಮಾಂಡ್​​ ಭೇಟಿಗೆ ಸಿದ್ಧತೆ
ಸಚಿವ ಸ್ಥಾನಕ್ಕಾಗಿ ಹಿರಿಯ ಶಾಸಕರ ಪಟ್ಟು: ಹೈಕಮಾಂಡ್​​ ಭೇಟಿಗೆ ಸಿದ್ಧತೆ
‘ಆಕಾಶ್’ ಸಿನಿಮಾ ನೋಡಲು ಚಿತ್ರಮಂದಿರಕ್ಕೆ ಬಂದ ರಮ್ಯಾ, ರಾಘಣ್ಣ: ವಿಡಿಯೋ
‘ಆಕಾಶ್’ ಸಿನಿಮಾ ನೋಡಲು ಚಿತ್ರಮಂದಿರಕ್ಕೆ ಬಂದ ರಮ್ಯಾ, ರಾಘಣ್ಣ: ವಿಡಿಯೋ
ಬಜೆಟ್​​ ಬಗ್ಗೆ ಶಾಸಕ ಇಕ್ಬಾಲ್​​ ಕಿಡಿ: ಸಚಿವ ರಾಮಲಿಂಗಾರೆಡ್ಡಿ ಏನಂದ್ರು?
ಬಜೆಟ್​​ ಬಗ್ಗೆ ಶಾಸಕ ಇಕ್ಬಾಲ್​​ ಕಿಡಿ: ಸಚಿವ ರಾಮಲಿಂಗಾರೆಡ್ಡಿ ಏನಂದ್ರು?
Video: ಬಾಲಕಿ ಗೇಮ್ ಆಡುತ್ತಿದ್ದಾಗ ಮೊಬೈಲ್ ಸ್ಫೋಟ
Video: ಬಾಲಕಿ ಗೇಮ್ ಆಡುತ್ತಿದ್ದಾಗ ಮೊಬೈಲ್ ಸ್ಫೋಟ
ಮಗುವನ್ನು ಸ್ಕೂಟಿಯ ಡಿಕ್ಕಿಯಲ್ಲಿ ಮಲಗಿಸಿ ಗಾಡಿ ಓಡಿಸಿದ ಮಹಿಳೆ
ಮಗುವನ್ನು ಸ್ಕೂಟಿಯ ಡಿಕ್ಕಿಯಲ್ಲಿ ಮಲಗಿಸಿ ಗಾಡಿ ಓಡಿಸಿದ ಮಹಿಳೆ
ಆಟೋ ಗ್ಯಾಸ್ ಇಲ್ದೆ ಚಾಲಕರ ಪರದಾಟ, ಪ್ರಯಾಣಿಕರಿಗೆ ದರ ಏರಿಕೆ ಬರೆ
ಆಟೋ ಗ್ಯಾಸ್ ಇಲ್ದೆ ಚಾಲಕರ ಪರದಾಟ, ಪ್ರಯಾಣಿಕರಿಗೆ ದರ ಏರಿಕೆ ಬರೆ
ಯಾದಗಿರಿ ಹೋಟೆಲ್​ಗಳ ಅಕ್ರಮವಾಗಿ ಇರಿಸಿದ್ದ 45 ಎಲ್​ಪಿಜಿ ಸಿಲಿಂಡರ್ ಜಪ್ತಿ
ಯಾದಗಿರಿ ಹೋಟೆಲ್​ಗಳ ಅಕ್ರಮವಾಗಿ ಇರಿಸಿದ್ದ 45 ಎಲ್​ಪಿಜಿ ಸಿಲಿಂಡರ್ ಜಪ್ತಿ
ಆಪರೇಷನ್ ಕಮಲ ತಡೆಯಲು ಡಿಕೆ ಪ್ಲಾನ್; ವಂಡರ್ ಲಾಗೆ ತಲುಪಿದ ಅಸ್ಸಾಂ ಶಾಸಕರು!
ಆಪರೇಷನ್ ಕಮಲ ತಡೆಯಲು ಡಿಕೆ ಪ್ಲಾನ್; ವಂಡರ್ ಲಾಗೆ ತಲುಪಿದ ಅಸ್ಸಾಂ ಶಾಸಕರು!
ಲೇಡಿ ಗೆಟಪ್​​​ನಲ್ಲಿ ಗಮನ ಸೆಳೆದ ಚಂದ್ರಪ್ರಭ; ಎಲ್ಲರಿಗೂ ನಗುವೋ ನಗು
ಲೇಡಿ ಗೆಟಪ್​​​ನಲ್ಲಿ ಗಮನ ಸೆಳೆದ ಚಂದ್ರಪ್ರಭ; ಎಲ್ಲರಿಗೂ ನಗುವೋ ನಗು