AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಮಂತಾ ತಾಯಿ ಆಗೋ ವಿಷಯವನ್ನು ಖಚಿತಪಡಿಸಿದ ಚಿರಂಜೀವಿ

‘ಮಾ ಇಂಟಿ ಬಂಗಾರಂ’ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ 50 ಕೋಟಿ ಗಳಿಸಿ ಭಾರಿ ಯಶಸ್ಸು ಗಳಿಸಿದೆ. ಮೆಗಾಸ್ಟಾರ್ ಚಿರಂಜೀವಿ ಈ ಚಿತ್ರದ ನಿರ್ದೇಶಕಿ ನಂದಿನಿ ರೆಡ್ಡಿ ಮತ್ತು ನಟಿ ಸಮಂತಾ ನಟನೆ, ಮಹಿಳಾ ಪ್ರಧಾನ ಕಥೆಯನ್ನು ಶ್ಲಾಘಿಸಿದ್ದಾರೆ. ಇದೇ ವೇಳೆ, ಸಮಂತಾ ಜೀವನದ ಹೊಸ ಅಧ್ಯಾಯಕ್ಕೆ ಶುಭಕೋರಿ ಅವರ ಗರ್ಭಿಣಿ ಸುದ್ದಿ ಪರೋಕ್ಷವಾಗಿ ಖಚಿತಪಡಿಸಿದ್ದಾರೆ. ಈ ಮೂಲಕ ಸಿನಿಮಾ ಯಶಸ್ಸಿನ ಜೊತೆ ಸಮಂತಾ ಖುಷಿ ಹೆಚ್ಚಿದೆ.

ಸಮಂತಾ ತಾಯಿ ಆಗೋ ವಿಷಯವನ್ನು ಖಚಿತಪಡಿಸಿದ ಚಿರಂಜೀವಿ
ಚಿರಂಜೀವಿ ಜೊತೆ ಸಮಂತಾ
ರಾಜೇಶ್ ದುಗ್ಗುಮನೆ
|

Updated on:Jun 23, 2026 | 2:49 PM

Share

‘ಮಾ ಇಂಟಿ ಬಂಗಾರಂ’ ಸಿನಿಮಾ (Maa Inti Bangaram) ಬಾಕ್ಸ್ ಆಫೀಸ್​​ನಲ್ಲಿ ಅಬ್ಬರಿಸುತ್ತಿದೆ. ಈ ಚಿತ್ರದ ಬಗ್ಗೆ ಎಲ್ಲ ಕಡೆಗಳಲ್ಲಿ ಪಾಸಿಟಿವ್ ಟಾಕ್ ಶುರುವಾಗಿದೆ. ಈ ಸಿನಿಮಾ ನಾಲ್ಕೇ ದಿನಕ್ಕೆ 50 ಕೋಟಿ ರೂಪಾಯಿ ಗಳಿಕೆ ಮಾಡಿರೋದು ವಿಶೇಷ. ಈ ಸಿನಿಮಾ ನೋಡಿದ ಚಿರಂಜೀವಿ ಅವರು ಖುಷಿಪಟ್ಟಿದ್ದಾರೆ. ಹೀಗಾಗಿ, ಸಮಂತಾ ಅವರನ್ನು ಮನೆಗೆ ಕರೆದು ವಿಶೇಷವಾಗಿ ಸತ್ಕಾರ ಮಾಡಿದ್ದಾರೆ. ಈ ಸಂದರ್ಭದ ಫೋಟೋಗಳನ್ನು ಸ್ವತಃ ಅವರೇ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

‘ಮಾ ಇಂಟಿ ಬಂಗಾರಂ ಸಿನಿಮಾ ತುಂಬಾ ಆಸಕ್ತಿದಾಯಕವಾಗಿದೆ. ನಿರ್ದೇಶಕಿ ನಂದಿನಿ ರೆಡ್ಡಿ ಅವರು ಅವಿಭಕ್ತ ಕುಟುಂಬದ ಹಿನ್ನೆಲೆಯಲ್ಲಿ ಆಕ್ಷನ್ ಮತ್ತು ಎಮೋಷನ್ಸ್‌ಗಳನ್ನು ಅದ್ಭುತವಾಗಿ ಬೆರೆಸಿ, ತಮ್ಮದೇ ಆದ ವಿಶಿಷ್ಟ ಶೈಲಿಯಲ್ಲಿ ಈ ಚಿತ್ರವನ್ನು ಅತ್ಯಂತ ಮನರಂಜನಾತ್ಮಕವಾಗಿ ಮಾಡಿದ್ದಾರೆ. ಸೀರೆಯುಟ್ಟು ನಟಿ ಸಮಂತಾ ಮಾಡಿರುವ ಆಕ್ಷನ್ ದೃಶ್ಯಗಳು ಮತ್ತು ಅವರ ನಟನೆ ಈ ಸಿನಿಮಾದಲ್ಲಿ ಪ್ರಮುಖ ಆಕರ್ಷಣೆಯಾಗಿ ಗಮನ ಸೆಳೆಯುತ್ತವೆ’ ಎಂದು ಚಿರಂಜೀವಿ ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಬಾಕ್ಸ್ ಆಫೀಸ್‌ನಲ್ಲಿ ‘ಮಾ ಇಂಟಿ ಬಂಗಾರಂ’ ಹಾಗೂ ‘ಕಾಕ್‌ಟೇಲ್ 2’ ಚಿತ್ರಗಳ ಗಳಿಕೆ ಎಷ್ಟು?

‘ತೆಲುಗು ಚಿತ್ರರಂಗಕ್ಕೆ ಇಂತಹ ವೈವಿಧ್ಯಮಯ ಹಾಗೂ ಮಹಿಳಾ ಪ್ರಧಾನ ಸಿನಿಮಾಗಳ ಅಗತ್ಯ ತುಂಬಾ ಇದೆ. ಈ ದೊಡ್ಡ ಯಶಸ್ಸಿಗಾಗಿ ಸಮಂತಾ, ನಂದಿನಿ ರೆಡ್ಡಿ, ರಾಜ್ ಮತ್ತು ಇಡೀ ಚಿತ್ರತಂಡಕ್ಕೆ ನನ್ನ ಹೃದಯಪೂರ್ವಕ ಅಭಿನಂದನೆಗಳು’ ಎಂದಿದ್ದಾರೆ.

ಸಮಂತಾ ಶೀಘ್ರವೇ ತಾಯಿ ಆಗಲಿದ್ದಾರೆ ಎಂಬ ಸುದ್ದಿ ಹರಿದಾಡಿದೆ. ಈಗ ಚಿರಂಜೀವಿ ಅವರು ವಿಶೇಷವಾಗಿ ಈ ವಿಷಯವನ್ನು ಪರೋಕ್ಷವಾಗಿ ಖಚಿತಪಡಿಸಿದ್ದಾರೆ. ‘ತಮ್ಮ ಜೀವನದ ಹೊಸ ಅಧ್ಯಾಯಕ್ಕೆ ಹೆಜ್ಜೆ ಇಡುತ್ತಿರುವ ಸಮಂತಾ ಮತ್ತು ರಾಜ್ ದಂಪತಿಗೆ ನನ್ನ ವಿಶೇಷ ಶುಭಾಶಯಗಳು’ ಎಂದು ಹೇಳಿದ್ದಾರೆ. ಈ ಮೂಲಕ ಸಮಂತಾ ತಾಯಿ ಆಗುತ್ತಿರುವ ವಿಷಯ ಖಚಿತಪಡಿಸದಂತಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 2:45 pm, Tue, 23 June 26

Follow Us
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ