AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಮಂತಾ ತಾಯಿ ಆಗೋ ವಿಷಯವನ್ನು ಖಚಿತಪಡಿಸಿದ ಚಿರಂಜೀವಿ

‘ಮಾ ಇಂಟಿ ಬಂಗಾರಂ’ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ 50 ಕೋಟಿ ಗಳಿಸಿ ಭಾರಿ ಯಶಸ್ಸು ಗಳಿಸಿದೆ. ಮೆಗಾಸ್ಟಾರ್ ಚಿರಂಜೀವಿ ಈ ಚಿತ್ರದ ನಿರ್ದೇಶಕಿ ನಂದಿನಿ ರೆಡ್ಡಿ ಮತ್ತು ನಟಿ ಸಮಂತಾ ನಟನೆ, ಮಹಿಳಾ ಪ್ರಧಾನ ಕಥೆಯನ್ನು ಶ್ಲಾಘಿಸಿದ್ದಾರೆ. ಇದೇ ವೇಳೆ, ಸಮಂತಾ ಜೀವನದ ಹೊಸ ಅಧ್ಯಾಯಕ್ಕೆ ಶುಭಕೋರಿ ಅವರ ಗರ್ಭಿಣಿ ಸುದ್ದಿ ಪರೋಕ್ಷವಾಗಿ ಖಚಿತಪಡಿಸಿದ್ದಾರೆ. ಈ ಮೂಲಕ ಸಿನಿಮಾ ಯಶಸ್ಸಿನ ಜೊತೆ ಸಮಂತಾ ಖುಷಿ ಹೆಚ್ಚಿದೆ.

ಸಮಂತಾ ತಾಯಿ ಆಗೋ ವಿಷಯವನ್ನು ಖಚಿತಪಡಿಸಿದ ಚಿರಂಜೀವಿ
ಚಿರಂಜೀವಿ ಜೊತೆ ಸಮಂತಾ
ರಾಜೇಶ್ ದುಗ್ಗುಮನೆ
|

Updated on:Jun 23, 2026 | 2:49 PM

Share

‘ಮಾ ಇಂಟಿ ಬಂಗಾರಂ’ ಸಿನಿಮಾ (Maa Inti Bangaram) ಬಾಕ್ಸ್ ಆಫೀಸ್​​ನಲ್ಲಿ ಅಬ್ಬರಿಸುತ್ತಿದೆ. ಈ ಚಿತ್ರದ ಬಗ್ಗೆ ಎಲ್ಲ ಕಡೆಗಳಲ್ಲಿ ಪಾಸಿಟಿವ್ ಟಾಕ್ ಶುರುವಾಗಿದೆ. ಈ ಸಿನಿಮಾ ನಾಲ್ಕೇ ದಿನಕ್ಕೆ 50 ಕೋಟಿ ರೂಪಾಯಿ ಗಳಿಕೆ ಮಾಡಿರೋದು ವಿಶೇಷ. ಈ ಸಿನಿಮಾ ನೋಡಿದ ಚಿರಂಜೀವಿ ಅವರು ಖುಷಿಪಟ್ಟಿದ್ದಾರೆ. ಹೀಗಾಗಿ, ಸಮಂತಾ ಅವರನ್ನು ಮನೆಗೆ ಕರೆದು ವಿಶೇಷವಾಗಿ ಸತ್ಕಾರ ಮಾಡಿದ್ದಾರೆ. ಈ ಸಂದರ್ಭದ ಫೋಟೋಗಳನ್ನು ಸ್ವತಃ ಅವರೇ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

‘ಮಾ ಇಂಟಿ ಬಂಗಾರಂ ಸಿನಿಮಾ ತುಂಬಾ ಆಸಕ್ತಿದಾಯಕವಾಗಿದೆ. ನಿರ್ದೇಶಕಿ ನಂದಿನಿ ರೆಡ್ಡಿ ಅವರು ಅವಿಭಕ್ತ ಕುಟುಂಬದ ಹಿನ್ನೆಲೆಯಲ್ಲಿ ಆಕ್ಷನ್ ಮತ್ತು ಎಮೋಷನ್ಸ್‌ಗಳನ್ನು ಅದ್ಭುತವಾಗಿ ಬೆರೆಸಿ, ತಮ್ಮದೇ ಆದ ವಿಶಿಷ್ಟ ಶೈಲಿಯಲ್ಲಿ ಈ ಚಿತ್ರವನ್ನು ಅತ್ಯಂತ ಮನರಂಜನಾತ್ಮಕವಾಗಿ ಮಾಡಿದ್ದಾರೆ. ಸೀರೆಯುಟ್ಟು ನಟಿ ಸಮಂತಾ ಮಾಡಿರುವ ಆಕ್ಷನ್ ದೃಶ್ಯಗಳು ಮತ್ತು ಅವರ ನಟನೆ ಈ ಸಿನಿಮಾದಲ್ಲಿ ಪ್ರಮುಖ ಆಕರ್ಷಣೆಯಾಗಿ ಗಮನ ಸೆಳೆಯುತ್ತವೆ’ ಎಂದು ಚಿರಂಜೀವಿ ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಬಾಕ್ಸ್ ಆಫೀಸ್‌ನಲ್ಲಿ ‘ಮಾ ಇಂಟಿ ಬಂಗಾರಂ’ ಹಾಗೂ ‘ಕಾಕ್‌ಟೇಲ್ 2’ ಚಿತ್ರಗಳ ಗಳಿಕೆ ಎಷ್ಟು?

‘ತೆಲುಗು ಚಿತ್ರರಂಗಕ್ಕೆ ಇಂತಹ ವೈವಿಧ್ಯಮಯ ಹಾಗೂ ಮಹಿಳಾ ಪ್ರಧಾನ ಸಿನಿಮಾಗಳ ಅಗತ್ಯ ತುಂಬಾ ಇದೆ. ಈ ದೊಡ್ಡ ಯಶಸ್ಸಿಗಾಗಿ ಸಮಂತಾ, ನಂದಿನಿ ರೆಡ್ಡಿ, ರಾಜ್ ಮತ್ತು ಇಡೀ ಚಿತ್ರತಂಡಕ್ಕೆ ನನ್ನ ಹೃದಯಪೂರ್ವಕ ಅಭಿನಂದನೆಗಳು’ ಎಂದಿದ್ದಾರೆ.

ಸಮಂತಾ ಶೀಘ್ರವೇ ತಾಯಿ ಆಗಲಿದ್ದಾರೆ ಎಂಬ ಸುದ್ದಿ ಹರಿದಾಡಿದೆ. ಈಗ ಚಿರಂಜೀವಿ ಅವರು ವಿಶೇಷವಾಗಿ ಈ ವಿಷಯವನ್ನು ಪರೋಕ್ಷವಾಗಿ ಖಚಿತಪಡಿಸಿದ್ದಾರೆ. ‘ತಮ್ಮ ಜೀವನದ ಹೊಸ ಅಧ್ಯಾಯಕ್ಕೆ ಹೆಜ್ಜೆ ಇಡುತ್ತಿರುವ ಸಮಂತಾ ಮತ್ತು ರಾಜ್ ದಂಪತಿಗೆ ನನ್ನ ವಿಶೇಷ ಶುಭಾಶಯಗಳು’ ಎಂದು ಹೇಳಿದ್ದಾರೆ. ಈ ಮೂಲಕ ಸಮಂತಾ ತಾಯಿ ಆಗುತ್ತಿರುವ ವಿಷಯ ಖಚಿತಪಡಿಸದಂತಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 2:45 pm, Tue, 23 June 26

Follow Us
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್