AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಮಂತಾ ತಾಯಿ ಆಗೋ ವಿಷಯವನ್ನು ಖಚಿತಪಡಿಸಿದ ಚಿರಂಜೀವಿ

‘ಮಾ ಇಂಟಿ ಬಂಗಾರಂ’ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ 50 ಕೋಟಿ ಗಳಿಸಿ ಭಾರಿ ಯಶಸ್ಸು ಗಳಿಸಿದೆ. ಮೆಗಾಸ್ಟಾರ್ ಚಿರಂಜೀವಿ ಈ ಚಿತ್ರದ ನಿರ್ದೇಶಕಿ ನಂದಿನಿ ರೆಡ್ಡಿ ಮತ್ತು ನಟಿ ಸಮಂತಾ ನಟನೆ, ಮಹಿಳಾ ಪ್ರಧಾನ ಕಥೆಯನ್ನು ಶ್ಲಾಘಿಸಿದ್ದಾರೆ. ಇದೇ ವೇಳೆ, ಸಮಂತಾ ಜೀವನದ ಹೊಸ ಅಧ್ಯಾಯಕ್ಕೆ ಶುಭಕೋರಿ ಅವರ ಗರ್ಭಿಣಿ ಸುದ್ದಿ ಪರೋಕ್ಷವಾಗಿ ಖಚಿತಪಡಿಸಿದ್ದಾರೆ. ಈ ಮೂಲಕ ಸಿನಿಮಾ ಯಶಸ್ಸಿನ ಜೊತೆ ಸಮಂತಾ ಖುಷಿ ಹೆಚ್ಚಿದೆ.

ಸಮಂತಾ ತಾಯಿ ಆಗೋ ವಿಷಯವನ್ನು ಖಚಿತಪಡಿಸಿದ ಚಿರಂಜೀವಿ
ಚಿರಂಜೀವಿ ಜೊತೆ ಸಮಂತಾ
ರಾಜೇಶ್ ದುಗ್ಗುಮನೆ
|

Updated on:Jun 23, 2026 | 2:49 PM

Share

‘ಮಾ ಇಂಟಿ ಬಂಗಾರಂ’ ಸಿನಿಮಾ (Maa Inti Bangaram) ಬಾಕ್ಸ್ ಆಫೀಸ್​​ನಲ್ಲಿ ಅಬ್ಬರಿಸುತ್ತಿದೆ. ಈ ಚಿತ್ರದ ಬಗ್ಗೆ ಎಲ್ಲ ಕಡೆಗಳಲ್ಲಿ ಪಾಸಿಟಿವ್ ಟಾಕ್ ಶುರುವಾಗಿದೆ. ಈ ಸಿನಿಮಾ ನಾಲ್ಕೇ ದಿನಕ್ಕೆ 50 ಕೋಟಿ ರೂಪಾಯಿ ಗಳಿಕೆ ಮಾಡಿರೋದು ವಿಶೇಷ. ಈ ಸಿನಿಮಾ ನೋಡಿದ ಚಿರಂಜೀವಿ ಅವರು ಖುಷಿಪಟ್ಟಿದ್ದಾರೆ. ಹೀಗಾಗಿ, ಸಮಂತಾ ಅವರನ್ನು ಮನೆಗೆ ಕರೆದು ವಿಶೇಷವಾಗಿ ಸತ್ಕಾರ ಮಾಡಿದ್ದಾರೆ. ಈ ಸಂದರ್ಭದ ಫೋಟೋಗಳನ್ನು ಸ್ವತಃ ಅವರೇ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

‘ಮಾ ಇಂಟಿ ಬಂಗಾರಂ ಸಿನಿಮಾ ತುಂಬಾ ಆಸಕ್ತಿದಾಯಕವಾಗಿದೆ. ನಿರ್ದೇಶಕಿ ನಂದಿನಿ ರೆಡ್ಡಿ ಅವರು ಅವಿಭಕ್ತ ಕುಟುಂಬದ ಹಿನ್ನೆಲೆಯಲ್ಲಿ ಆಕ್ಷನ್ ಮತ್ತು ಎಮೋಷನ್ಸ್‌ಗಳನ್ನು ಅದ್ಭುತವಾಗಿ ಬೆರೆಸಿ, ತಮ್ಮದೇ ಆದ ವಿಶಿಷ್ಟ ಶೈಲಿಯಲ್ಲಿ ಈ ಚಿತ್ರವನ್ನು ಅತ್ಯಂತ ಮನರಂಜನಾತ್ಮಕವಾಗಿ ಮಾಡಿದ್ದಾರೆ. ಸೀರೆಯುಟ್ಟು ನಟಿ ಸಮಂತಾ ಮಾಡಿರುವ ಆಕ್ಷನ್ ದೃಶ್ಯಗಳು ಮತ್ತು ಅವರ ನಟನೆ ಈ ಸಿನಿಮಾದಲ್ಲಿ ಪ್ರಮುಖ ಆಕರ್ಷಣೆಯಾಗಿ ಗಮನ ಸೆಳೆಯುತ್ತವೆ’ ಎಂದು ಚಿರಂಜೀವಿ ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಬಾಕ್ಸ್ ಆಫೀಸ್‌ನಲ್ಲಿ ‘ಮಾ ಇಂಟಿ ಬಂಗಾರಂ’ ಹಾಗೂ ‘ಕಾಕ್‌ಟೇಲ್ 2’ ಚಿತ್ರಗಳ ಗಳಿಕೆ ಎಷ್ಟು?

‘ತೆಲುಗು ಚಿತ್ರರಂಗಕ್ಕೆ ಇಂತಹ ವೈವಿಧ್ಯಮಯ ಹಾಗೂ ಮಹಿಳಾ ಪ್ರಧಾನ ಸಿನಿಮಾಗಳ ಅಗತ್ಯ ತುಂಬಾ ಇದೆ. ಈ ದೊಡ್ಡ ಯಶಸ್ಸಿಗಾಗಿ ಸಮಂತಾ, ನಂದಿನಿ ರೆಡ್ಡಿ, ರಾಜ್ ಮತ್ತು ಇಡೀ ಚಿತ್ರತಂಡಕ್ಕೆ ನನ್ನ ಹೃದಯಪೂರ್ವಕ ಅಭಿನಂದನೆಗಳು’ ಎಂದಿದ್ದಾರೆ.

ಸಮಂತಾ ಶೀಘ್ರವೇ ತಾಯಿ ಆಗಲಿದ್ದಾರೆ ಎಂಬ ಸುದ್ದಿ ಹರಿದಾಡಿದೆ. ಈಗ ಚಿರಂಜೀವಿ ಅವರು ವಿಶೇಷವಾಗಿ ಈ ವಿಷಯವನ್ನು ಪರೋಕ್ಷವಾಗಿ ಖಚಿತಪಡಿಸಿದ್ದಾರೆ. ‘ತಮ್ಮ ಜೀವನದ ಹೊಸ ಅಧ್ಯಾಯಕ್ಕೆ ಹೆಜ್ಜೆ ಇಡುತ್ತಿರುವ ಸಮಂತಾ ಮತ್ತು ರಾಜ್ ದಂಪತಿಗೆ ನನ್ನ ವಿಶೇಷ ಶುಭಾಶಯಗಳು’ ಎಂದು ಹೇಳಿದ್ದಾರೆ. ಈ ಮೂಲಕ ಸಮಂತಾ ತಾಯಿ ಆಗುತ್ತಿರುವ ವಿಷಯ ಖಚಿತಪಡಿಸದಂತಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 2:45 pm, Tue, 23 June 26

Follow Us
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ