AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕ್ಕಿನೇನಿ ನಾಗಾರ್ಜುನಗೆ ವಿಶೇಷ ಅಡುಗೆ ಮಾಡಿದ್ದ ಚಿರಂಜೀವಿ; ಕಾರಣವೇನು?

ಚಿರಂಜೀವಿ ಮತ್ತು ನಾಗಾರ್ಜುನರ ನಡುವಿನ ಆಪ್ತ ಸ್ನೇಹವನ್ನು ಈ ಲೇಖನ ವಿವರಿಸುತ್ತದೆ. 2021ರ ಕೋವಿಡ್ ಎರಡನೇ ಅಲೆಯ ಸಮಯದಲ್ಲಿ, ಚಿರಂಜೀವಿ ನಾಗಾರ್ಜುನರಿಗೆ ವಿಶೇಷ ಅಡುಗೆ ಮಾಡಿ ತಿನ್ನಿಸಿದ್ದರು. ಈ ಘಟನೆಯ ಫೋಟೋಗಳನ್ನು ನಾಗಾರ್ಜುನ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು.

ಅಕ್ಕಿನೇನಿ ನಾಗಾರ್ಜುನಗೆ ವಿಶೇಷ ಅಡುಗೆ ಮಾಡಿದ್ದ ಚಿರಂಜೀವಿ; ಕಾರಣವೇನು?
chiranjeevi
 ಶ್ರೀಲಕ್ಷ್ಮೀ ಎಚ್
| Edited By: |

Updated on: Oct 28, 2024 | 8:25 AM

Share

ಚಿರಂಜೀವಿ ಹಾಗೂ ನಾಗಾರ್ಜುನ ಮಧ್ಯೆ ಒಳ್ಳೆಯ ಬಾಂಡಿಂಗ್ ಇದೆ. ಇದು ಪದೇ ಪದೇ ಸಾಬೀತು ಆಗುತ್ತಲೇ ಇರುತ್ತದೆ. ಇಬ್ಬರ ಮಧ್ಯೆ ತುಂಬಾ ಆಪ್ತವಾಗಿದ್ದಾರೆ. ಈ ಮೊದಲು ಚಿರಂಜೀವಿ ಅವರು ನಾಗಾರ್ಜುನ ಅವರಿಗೆ ವಿಶೇಷ ರೀತಿಯಲ್ಲಿ ಅಡುಗೆಯನ್ನು ಮಾಡಿಕೊಟ್ಟಿದ್ದರು. ಈ ಫೋಟೋಗಳನ್ನು ನಾಗಾರ್ಜುನ ಅವರು ಶೇರ್ ಮಾಡಿಕೊಂಡಿದ್ದರು.

ಅದು 2021ರ ಸಮಯ. ಕೊವಿಡ್ ಎರಡನೇ ಅಲೆ ಎದ್ದ ಕಾಲ. ಆಗ ಒಬ್ಬರನ್ನೊಬ್ಬರು ಭೇಟಿ ಮಾಡಲೂ ಹೆದರುತ್ತಿದ್ದ ಕಾಲ ಅದಾಗಿತ್ತು. ಆಗ, ಚಿರಂಜೀವಿ ಹಾಗೂ ಅಕ್ಕಿನೇನಿ ನಾಗಾರ್ಜುನ ಅವರು ಪರಸ್ಪರ ಭೇಟಿ ಆಗಿದ್ದರು. ಈ ಭೇಟಿ ಸಂದರ್ಭದಲ್ಲಿ ಚಿರಂಜೀವಿ ಅವರು ನಾಗಾರ್ಜುನ ಅವರಿಗೆ ವಿಶೇಷ ಅಡುಗೆ ಮಾಡಿ ತಿನ್ನಿಸಿದ್ದರು. ಇದನ್ನು ಸವಿದಿದ್ದರು ನಾಗಾರ್ಜುನ.

ಆ ಸಂದರ್ಭದಲ್ಲಿ ಚಿರಂಜೀವಿ ನಟನೆಯ ‘ವೈಲ್ಡ್​ ಡಾಗ್’ ರಿಲೀಸ್ ಆಗುವುದರಲ್ಲಿ ಇತ್ತು. ಕೊವಿಡ್ ಸಂದರ್ಭ ಆಗಿದ್ದರಿಂದ ಜನರು ನಾನಾ ರೀತಿಯಲ್ಲಿ ಸಿನಿಮಾ ಪ್ರಚಾರ ಮಾಡುವ ಭರದಲ್ಲಿ ಇದ್ದರು. ಆಗ ಈ ರೀತಿಯಲ್ಲಿ ಚಿರಂಜೀವಿ ಅವರು ತಮ್ಮ ಸಿನಿಮಾನ ಪ್ರಚಾರ ಮಾಡಿದ್ದರು ಅನ್ನೋದು ವಿಶೇಷ.

ಚಿರಂಜೀವಿ ಪ್ಲೇಟ್​ನಲ್ಲಿ ನಾನ್​ ವೆಜ್ ಇತ್ತು. ಈ ಅಡುಗೆ ಮಾಡಿ ಚಿರಂಜೀವಿ ಪೋಸ್​ ಕೊಟ್ಟಿದ್ದರು. ಅಲ್ಲಿಯೇ ನಾಗಾರ್ಜುನ ಕೂಡ ಇದ್ದರು.  ಈ ಮೂಲಕ ಚಿರಂಜೀವಿ ಅವರು ತಾವು ಒಳ್ಳೆಯ ಕುಕ್ ಎಂಬುದನ್ನು ಅವರು ಸಾಬೀತು ಮಾಡಿದ್ದರು.

ಟಾಲಿವುಡ್​ನಲ್ಲಿ ಹೀರೋಗಳ ಮಧ್ಯೆ ಒಳ್ಳೆಯ ಬಾಂಡಿಂಗ್ ಇದೆ. ಒಬ್ಬರಿಗೊಬ್ಬರು ಸಪೋರ್ಟ್ ಮಾಡಿಕೊಳ್ಳುತ್ತಾ ಬಂದಿದ್ದಾರೆ. ಆದರೆ, ಕನ್ನಡದಲ್ಲಿ ಅಷ್ಟಾಗಿ ಇಲ್ಲ ಎಂಬುದು ಬೇಸರದ ವಿಚಾರ ಎಂದು ಹೇಳಿದರೂ ತಪ್ಪಾಗಲಾರದು.

ಇದನ್ನೂ ಓದಿ: ಸಚಿವೆ ಕೊಂಡ ಸುರೇಖಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ ನಾಗಾರ್ಜುನ

ಅಕ್ಕಿನೇನಿ ನಾಗಾರ್ಜುನ ಅವರು ಸದ್ಯ ಬಿಗ್ ಬಾಸ್​ನಲ್ಲಿ ಬ್ಯುಸಿ ಇದ್ದಾರೆ. ಇದಲ್ಲದೆ ರಜನಿಕಾಂತ್ ನಟನೆಯ ‘ಕೂಲಿ’ ಸಿನಿಮಾದಲ್ಲಿ ಅವರು ಅಭಿನಯಿಸುತ್ತಿದ್ದಾರೆ. ‘ಕುಬೇರ’ ಚಿತ್ರದಲ್ಲೂ ಅವರು ನಟಿಸುತ್ತಿದ್ದಾರೆ. ಇನ್ನು, ಚಿರಂಜೀವಿ ಅವರು ‘ವಿಶ್ವಂಭರ’ ಹೆಸರಿನ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾ 2025ರಲ್ಲಿ ರಿಲೀಸ್ ಆಗಲಿದೆ. ಅವರ ಕೊನೆಯ ಸಿನಿಮಾ ‘ಭೋಲಾ ಶಂಕರ್’ 2023ರಲ್ಲಿ ರಿಲೀಸ್ ಆಗಿ ಸೋತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Shreelaxmi H
Shreelaxmi H

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು