AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟ ಚಿರಂಜೀವಿ ಭೇಟಿಯಾಗಲು 600 ಕಿ.ಮೀ. ಸೈಕಲ್​ ತುಳಿದ ಅಭಿಮಾನಿ

ಈಶ್ವರಯ್ಯ ಚಿತ್ತೂರಿನವರು. ಅಲ್ಲಿಂದ ಹೈದರಾಬಾದ್​ಗೆ ಸುಮಾರು 600 ಕಿ.ಮೀ ಅಂತರ. ಈ ದೂರವನ್ನು ಕ್ರಮಿಸಲು ಅವರು 12 ದಿನ ತೆಗೆದುಕೊಂಡಿದ್ದಾರೆ.

ನಟ ಚಿರಂಜೀವಿ ಭೇಟಿಯಾಗಲು 600 ಕಿ.ಮೀ. ಸೈಕಲ್​ ತುಳಿದ ಅಭಿಮಾನಿ
ನಟ ಚಿರಂಜೀವಿ ಭೇಟಿಯಾಗಲು 600 ಕಿ.ಮೀ. ಸೈಕಲ್​ ತುಳಿದ ಅಭಿಮಾನಿ
TV9 Web
| Edited By: |

Updated on: Aug 27, 2021 | 9:36 PM

Share

ನೆಚ್ಚಿನ ನಟನಿಗೋಸ್ಕರ ಅಭಿಮಾನಿಗಳು ಏನು ಮಾಡೋಕೂ ರೆಡಿ ಇರುತ್ತಾರೆ. ದೂರದ ಊರುಗಳಿಂದ ನಡೆದು ಬಂದು ನೆಚ್ಚಿನ ನಟನನ್ನು ಭೇಟಿ ಮಾಡುತ್ತಾರೆ. ತಾವು ಇಷ್ಟಪಡುವ ನಟನಿಗೆ ಒಳ್ಳೆಯದಾಗಲಿ ಎಂದು ಹರಕೆ ಹೊತ್ತಿಕೊಳ್ಳುವ ಅಭಿಮಾನಿಗಳೂ ಇದ್ದಾರೆ. ಅದೇ ರೀತಿ ಈಗ ಎನ್. ಈಶ್ವರಯ್ಯ ಹೆಸರಿನ ವ್ಯಕ್ತಿ ಸುಮಾರು 600 ಕಿ.ಮೀ. ಸೈಕಲ್​ ತುಳಿದಿದ್ದಾರೆ. ಈ ಮೂಲಕ ತಮ್ಮ ನೆಚ್ಚಿನ ನಟ ಮೆಗಾಸ್ಟಾರ್​ ಚಿರಂಜೀವಿಯನ್ನು ಭೇಟಿ ಮಾಡಿದ್ದಾರೆ.

ಈಶ್ವರಯ್ಯ ಚಿತ್ತೂರಿನವರು. ಅಲ್ಲಿಂದ ಹೈದರಾಬಾದ್​ಗೆ ಸುಮಾರು 600 ಕಿ.ಮೀ ಅಂತರ. ಈ ದೂರವನ್ನು ಕ್ರಮಿಸಲು ಅವರು 12 ದಿನ ತೆಗೆದುಕೊಂಡಿದ್ದಾರೆ. ಇನ್ನು, ಚಿರಂಜೀವಿಗೆ ಒಳ್ಳೆಯದಾಗಲಿ ಎಂದು ಈಶ್ವರಯ್ಯ ಅವರು ಹನುಮ ದೀಕ್ಷೆಯನ್ನೂ ತೊಟ್ಟಿದ್ದಾರೆ ಅನ್ನೋದು ವಿಶೇಷ.

ನಿವಾಸದ ಬಳಿ ಬಂದ ಈಶ್ವರಯ್ಯ ಅವರನ್ನು ಚಿರಂಜೀವಿ ಭೇಟಿ ಮಾಡಿದ್ದಾರೆ. ‘ನಮ್ಮ ಬಗ್ಗೆ ಅಭಿಮಾನಿಗಳು ಹೀಗೆ ಯೋಚನೆ ಮಾಡುತ್ತಾರೆ. ನಮ್ಮ ಅಭಿಮಾನಿಗಳಿಗೆ ಹಾಗೂ ಅವರ ಕುಟುಂಬದವರಿಗೋಸ್ಕರ ಒಳಿತನ್ನು ಬಯಸುತ್ತೇವೆ ಎಂದಿದ್ದಾರೆ. 12 ದಿನಗಳ ಕಾಲ ಸೈಕಲ್​ ತುಳಿಯುವುದು ಎಂದರೆ ಅದು ಸುಲಭದ ಕೆಲಸವಲ್ಲ. ಹೀಗಾಗಿ, ಇನ್ನುಮುಂದೆ ಈ ರೀತಿ ಮಾಡದಂತೆ ಚಿರಂಜೀವಿ ಅವರು ಅಭಿಮಾನಿಗೆ ಕಿವಿಮಾತು ಹೇಳಿದ್ದಾರೆ.

ಚಿರಂಜೀವಿ ಅವರು ಇತ್ತೀಚೆಗೆ 66ನೇ ವಸಂತಕ್ಕೆ ಕಾಲಿಟ್ಟಿದ್ದರು. ಅವರ ಬರ್ತ್​ಡೇ ಪ್ರಯುಕ್ತ ಹೊಸ ಸಿನಿಮಾದ ಟೈಟಲ್​ ಲಾಂಚ್​ ಆಗಿತ್ತು. ಚಿರು 153ನೇ ಚಿತ್ರಕ್ಕೆ ‘ಗಾಡ್​ಫಾದರ್’​ ಎಂದು ಹೆಸರಿಡಲಾಗಿದೆ. ಮೋಹನ್​ಲಾಲ್​ ನಟನೆಯ ‘ಲೂಸಿಫರ್​’ ಸಿನಿಮಾ ದೊಡ್ಡ ಮಟ್ಟದಲ್ಲಿ ಯಶಸ್ಸು ಕಂಡಿತ್ತು.  ಡ್ರಗ್​ ಹಾಗೂ ರಾಜಕೀಯ ಅನಾಚಾರಗಳ ವಿಚಾರವನ್ನು ಸಿನಿಮಾದಲ್ಲಿ ಹೇಳಲಾಗಿದೆ. ಈಗ ಈ ಸಿನಿಮಾವನ್ನು ತೆಲುಗಿಗೆ ರಿಮೇಕ್​ ಮಾಡಲಾಗುತ್ತಿದೆ. ಈ ಸಿನಿಮಾದಲ್ಲಿ ಚಿರಂಜೀವಿ ಲೀಡ್​ರೋಲ್​ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಚಿತ್ರಕ್ಕೆ ಗಾಡ್​ಫಾದರ್​ ಎಂದು ನಾಮಕರಣ ಮಾಡಲಾಗಿದ್ದು, ಅಭಿಮಾನಿಗಳು ಖುಷಿಯಾಗಿದ್ದಾರೆ.

ಇದನ್ನೂ ಓದಿ: Chiranjeevi Birthday: ಚಿರಂಜೀವಿ ಜನ್ಮದಿನಕ್ಕೆ 153ನೇ ಸಿನಿಮಾ ಟೈಟಲ್​ ಅನಾವರಣ; ಗಾಡ್​​ಫಾದರ್​ ಆದ ಮೆಗಾಸ್ಟಾರ್​

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?