AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡ್ಯಾನ್ಸ್ ವಿಚಾರದಲ್ಲಿ ಟ್ರೋಲ್​ ಆದ ದಳಪತಿ ವಿಜಯ್; ಇದಕ್ಕೆಲ್ಲ ಕಾರಣ ಕೀರ್ತಿ ಸುರೇಶ್​

ಮೆಗಾ ಸ್ಟಾರ್​ ಚಿರಂಜೀವಿ ಹಾಗೂ ದಳಪತಿ ವಿಜಯ್​ ನಡುವೆ ಬೆಸ್ಟ್​ ಡ್ಯಾನ್ಸರ್​ ಯಾರು? ಈ ಪ್ರಶ್ನೆಗೆ ಉತ್ತರವಾಗಿ ನಟಿ ಕೀರ್ತಿ ಸುರೇಶ್ ಅವರು ವಿಜಯ್​ ಹೆಸರನ್ನು ಹೇಳಿದ್ದರು. ಆದರೆ ‘ದಿ ಗ್ರೇಟೆಸ್ಟ್​ ಆಫ್​ ಆಲ್​ ಟೈಮ್​’ ಸಿನಿಮಾದ ಹೊಸ ಹಾಡನ್ನು ನೋಡಿದವರಿಗೆ ವಿಜಯ್​ ಡ್ಯಾನ್ಸ್​ ಸ್ವಲ್ಪವೂ ಇಷ್ಟ ಆಗಿಲ್ಲ. ಹಾಗಾಗಿ ಸೋಶಿಯಲ್​ ಮೀಡಿಯಾದಲ್ಲಿ ಟ್ರೋಲ್​ ಮಾಡಲಾಗುತ್ತಿದೆ.

ಡ್ಯಾನ್ಸ್ ವಿಚಾರದಲ್ಲಿ ಟ್ರೋಲ್​ ಆದ ದಳಪತಿ ವಿಜಯ್; ಇದಕ್ಕೆಲ್ಲ ಕಾರಣ ಕೀರ್ತಿ ಸುರೇಶ್​
ದಳಪತಿ ವಿಜಯ್​, ಕೀರ್ತಿ ಸುರೇಶ್
ಮದನ್​ ಕುಮಾರ್​
|

Updated on: Aug 05, 2024 | 10:08 PM

Share

ಕಾಲಿವುಡ್​ನ ಸ್ಟಾರ್​ ನಟ ದಳಪತಿ ವಿಜಯ್​ ಅವರನ್ನು ಟ್ರೋಲ್ ಮಾಡಲಾಗುತ್ತಿದೆ. ಅವರಿಗೆ ಸರಿಯಾಗಿ ಡ್ಯಾನ್ಸ್​ ಮಾಡಲು ಬರುವುದಿಲ್ಲ ಎಂದು ನೆಟ್ಟಿಗರು ಟೀಕೆ ಮಾಡುತ್ತಿದ್ದಾರೆ. ದಳಪತಿ ವಿಜಯ್​ ಅವರು ಈ ರೀತಿ ಟ್ರೋಲ್​ ಆಗಲು ಕಾರಣ ನಟಿ ಕೀರ್ತಿ ಸುರೇಶ್​. ಹೌದು, ನಟಿ ನೀಡಿದ ಒಂದೇ ಒಂದು ಹೇಳಿಕೆಯಿಂದಾಗಿ ಸೋಶಿಯಲ್​ ಮೀಡಿಯಾದಲ್ಲಿ ದಳಪತಿ ವಿಜಯ್​ ಅವರು ಟ್ರೋಲ್ ಆಗುವಂತಾಗಿದೆ. ಮೆಗಾ ಸ್ಟಾರ್ ಚಿರಂಜೀವಿ ಅವರಿಗಿಂತಲೂ ದಳಪತಿ ವಿಜಯ್​ ಅವರೇ ಅತ್ಯುತ್ತಮ ಡ್ಯಾನ್ಸರ್​ ಎಂದು ಕೀರ್ತಿ ಸುರೇಶ್​ ಹೇಳಿದ್ದರಿಂದ ಇಷ್ಟೆಲ್ಲ ಆಗಿದೆ.

ಇತ್ತೀಚೆಗೆ ನಟಿ ಕೀರ್ತಿ ಸುರೇಶ್​ ಅವರು ಸಂದರ್ಶನವೊಂದರಲ್ಲಿ ಭಾಗಿಯಾಗಿದ್ದರು. ದಳಪತಿ ವಿಜಯ್​ ಮತ್ತು ಮೆಗಾ ಸ್ಟಾರ್​ ಚಿರಂಜೀವಿ ಈ ಇಬ್ಬರಲ್ಲಿ ಯಾರು ಬೆಸ್ಟ್​ ಡ್ಯಾನ್ಸರ್​ ಎಂದು ಕೇಳಿದ ಪ್ರಶ್ನೆಗೆ ಕೀರ್ತಿ ಸುರೇಶ್​ ಅವರು ದಳಪತಿ ವಿಜಯ್​ ಹೆಸರನ್ನು ಆಯ್ಕೆ ಮಾಡಿದ್ದರು. ಇದರಿಂದ ಚಿರಂಜೀವಿ ಅವರ ಅಭಿಮಾನಿಗಳಿಗೆ ಬೇಸರ ಆಗಿತ್ತು. ಕೀರ್ತಿ ಅವರ ಅಭಿಪ್ರಾಯ ಸರಿಯಿಲ್ಲ ಎಂಬುದನ್ನು ಚಿರು ಅಭಿಮಾನಿಗಳು ಈಗ ಸಾಕ್ಷಿ ಸಮೇತ ಸಾಬೀತುಪಡಿಸುತ್ತಿದ್ದಾರೆ.

ದಳಪತಿ ವಿಜಯ್​ ಅವರು ‘ದಿ ಗ್ರೇಟೆಸ್ಟ್​ ಆಫ್​ ಆಲ್​ ಟೈಮ್​’ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಚಿತ್ರದಿಂದ ಹೊಸ ಹಾಡನ್ನು ಬಿಡುಗಡೆ ಮಾಡಲಾಗಿದೆ. ಇದರಲ್ಲಿ ವಿಜಯ್​ ಮಾಡಿದ ಡ್ಯಾನ್ಸ್​ ಸರಿಯಿಲ್ಲ ಎಂದು ನೆಟ್ಟಿಗರು ಟೀಕಿಸುತ್ತಿದ್ದಾರೆ. ವಿಜಯ್​ ಮಾಡಿರುವ ಸ್ಟೆಪ್​ಗಳು ತುಂಬ ಎಡವಟ್ಟಿನಿಂದ ಕೂಡಿವೆ ಎಂಬುದು ಚಿರಂಜೀವಿಯ ಕಟ್ಟಾ ಅಭಿಮಾನಿಗಳ ಅಭಿಪ್ರಾಯ.

ಇದನ್ನೂ ಓದಿ: ‘ಮಹಾರಾಜ’ ಸಿನಿಮಾ ನಿರ್ದೇಶಕನ ಭೇಟಿಯಾದ ದಳಪತಿ ವಿಜಯ್

‘ದಿ ಗ್ರೇಟೆಸ್ಟ್​ ಆಫ್​ ಆಲ್​ ಟೈಮ್​’ ಸಿನಿಮಾಗೆ ವೆಂಕಟ್​ ಪ್ರಭು ನಿರ್ದೇಶನ ಮಾಡಿದ್ದಾರೆ. ಯುವನ್ ಶಂಕರ್​ ರಾಜಾ ಅವರು ಈ ಚಿತ್ರಕ್ಕೆ ಸಂಗೀತ ನೀಡಿದ್ದಾರೆ. ದಳಪತಿ ವಿಜಯ್​ ಅವರ ಅಭಿಮಾನಿಗಳಿಗೆ ಈ ಹೊಸ ಸಾಂಗ್​ ಇಷ್ಟ ಆಗಿದೆ. ಆದರೆ ಚಿರಂಜೀವಿ ಅಭಿಮಾನಿಗಳು ಟ್ರೋಲ್​ ಮಾಡುತ್ತಲೇ ಇದ್ದಾರೆ. ಇಷ್ಟೆಲ್ಲ ಆದ ಬಳಿಕ ಕೀರ್ತಿ ಸುರೇಶ್​ ಅವರು ತಮ್ಮ ಅಭಿಪ್ರಾಯ ಬದಲಾಯಿಸಿಕೊಳ್ಳುತ್ತಾರಾ ಎಂಬ ಕೌತುಕ ಎಲ್ಲರಲ್ಲೂ ಇದೆ. ಅವರಿಂದ ಪ್ರತಿಕ್ರಿಯೆ ಬರಬಹುದು ಎಂದು ನೆಟ್ಟಿಗರು ಕಾಯುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
'ತಮಿಳುನಾಡಿಗೆ ಇನ್ನೂ ನೀರು ಹರಿಸಿಲ್ಲ': ಡಿಕೆ ಶಿವಕುಮಾರ್
'ತಮಿಳುನಾಡಿಗೆ ಇನ್ನೂ ನೀರು ಹರಿಸಿಲ್ಲ': ಡಿಕೆ ಶಿವಕುಮಾರ್
ಮೋದಿ ಭೇಟಿ ಹಿನ್ನೆಲೆ ಮೈಸೂರಿನಲ್ಲಿ ಬಿಗಿ ಬಂದೋಬಸ್ತ್: ಭದ್ರತೆ ಹೇಗಿದೆ ನೋಡಿ
ಮೋದಿ ಭೇಟಿ ಹಿನ್ನೆಲೆ ಮೈಸೂರಿನಲ್ಲಿ ಬಿಗಿ ಬಂದೋಬಸ್ತ್: ಭದ್ರತೆ ಹೇಗಿದೆ ನೋಡಿ
ಎಲ್ಲರೂ ಸೇರಿದ್ರೆ ಸಿನಿಮಾ, ನಿರ್ದೇಶಕರಿಗೆ ಹಲವು ಆಯ್ಕೆ ಇರುತ್ತೆ; ಗುರುದತ್
ಎಲ್ಲರೂ ಸೇರಿದ್ರೆ ಸಿನಿಮಾ, ನಿರ್ದೇಶಕರಿಗೆ ಹಲವು ಆಯ್ಕೆ ಇರುತ್ತೆ; ಗುರುದತ್
ರವಿ ಕರ್ಕಾಟಕ, ಚಂದ್ರ ಕುಂಭರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ
ರವಿ ಕರ್ಕಾಟಕ, ಚಂದ್ರ ಕುಂಭರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ
ಪರಪ್ಪನ ಅಗ್ರಹಾರ ಜೈಲಿನಿಂದ ನಗುನಗುತ್ತಲೇ ಹೊರ ಬಂದ ವಿನಯ್ ಕುಲಕರ್ಣಿ
ಪರಪ್ಪನ ಅಗ್ರಹಾರ ಜೈಲಿನಿಂದ ನಗುನಗುತ್ತಲೇ ಹೊರ ಬಂದ ವಿನಯ್ ಕುಲಕರ್ಣಿ
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ
ಜೈಲಿನಲ್ಲಿ ದರ್ಶನ್ ಜೊತೆ 1 ಗಂಟೆಗೂ ಹೆಚ್ಚು ಕಾಲ ವಿಜಯಲಕ್ಷ್ಮಿ ಸಮಾಲೋಚನೆ
ಜೈಲಿನಲ್ಲಿ ದರ್ಶನ್ ಜೊತೆ 1 ಗಂಟೆಗೂ ಹೆಚ್ಚು ಕಾಲ ವಿಜಯಲಕ್ಷ್ಮಿ ಸಮಾಲೋಚನೆ
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ