AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡ್ಯಾನ್ಸ್ ವಿಚಾರದಲ್ಲಿ ಟ್ರೋಲ್​ ಆದ ದಳಪತಿ ವಿಜಯ್; ಇದಕ್ಕೆಲ್ಲ ಕಾರಣ ಕೀರ್ತಿ ಸುರೇಶ್​

ಮೆಗಾ ಸ್ಟಾರ್​ ಚಿರಂಜೀವಿ ಹಾಗೂ ದಳಪತಿ ವಿಜಯ್​ ನಡುವೆ ಬೆಸ್ಟ್​ ಡ್ಯಾನ್ಸರ್​ ಯಾರು? ಈ ಪ್ರಶ್ನೆಗೆ ಉತ್ತರವಾಗಿ ನಟಿ ಕೀರ್ತಿ ಸುರೇಶ್ ಅವರು ವಿಜಯ್​ ಹೆಸರನ್ನು ಹೇಳಿದ್ದರು. ಆದರೆ ‘ದಿ ಗ್ರೇಟೆಸ್ಟ್​ ಆಫ್​ ಆಲ್​ ಟೈಮ್​’ ಸಿನಿಮಾದ ಹೊಸ ಹಾಡನ್ನು ನೋಡಿದವರಿಗೆ ವಿಜಯ್​ ಡ್ಯಾನ್ಸ್​ ಸ್ವಲ್ಪವೂ ಇಷ್ಟ ಆಗಿಲ್ಲ. ಹಾಗಾಗಿ ಸೋಶಿಯಲ್​ ಮೀಡಿಯಾದಲ್ಲಿ ಟ್ರೋಲ್​ ಮಾಡಲಾಗುತ್ತಿದೆ.

ಡ್ಯಾನ್ಸ್ ವಿಚಾರದಲ್ಲಿ ಟ್ರೋಲ್​ ಆದ ದಳಪತಿ ವಿಜಯ್; ಇದಕ್ಕೆಲ್ಲ ಕಾರಣ ಕೀರ್ತಿ ಸುರೇಶ್​
ದಳಪತಿ ವಿಜಯ್​, ಕೀರ್ತಿ ಸುರೇಶ್
ಮದನ್​ ಕುಮಾರ್​
|

Updated on: Aug 05, 2024 | 10:08 PM

Share

ಕಾಲಿವುಡ್​ನ ಸ್ಟಾರ್​ ನಟ ದಳಪತಿ ವಿಜಯ್​ ಅವರನ್ನು ಟ್ರೋಲ್ ಮಾಡಲಾಗುತ್ತಿದೆ. ಅವರಿಗೆ ಸರಿಯಾಗಿ ಡ್ಯಾನ್ಸ್​ ಮಾಡಲು ಬರುವುದಿಲ್ಲ ಎಂದು ನೆಟ್ಟಿಗರು ಟೀಕೆ ಮಾಡುತ್ತಿದ್ದಾರೆ. ದಳಪತಿ ವಿಜಯ್​ ಅವರು ಈ ರೀತಿ ಟ್ರೋಲ್​ ಆಗಲು ಕಾರಣ ನಟಿ ಕೀರ್ತಿ ಸುರೇಶ್​. ಹೌದು, ನಟಿ ನೀಡಿದ ಒಂದೇ ಒಂದು ಹೇಳಿಕೆಯಿಂದಾಗಿ ಸೋಶಿಯಲ್​ ಮೀಡಿಯಾದಲ್ಲಿ ದಳಪತಿ ವಿಜಯ್​ ಅವರು ಟ್ರೋಲ್ ಆಗುವಂತಾಗಿದೆ. ಮೆಗಾ ಸ್ಟಾರ್ ಚಿರಂಜೀವಿ ಅವರಿಗಿಂತಲೂ ದಳಪತಿ ವಿಜಯ್​ ಅವರೇ ಅತ್ಯುತ್ತಮ ಡ್ಯಾನ್ಸರ್​ ಎಂದು ಕೀರ್ತಿ ಸುರೇಶ್​ ಹೇಳಿದ್ದರಿಂದ ಇಷ್ಟೆಲ್ಲ ಆಗಿದೆ.

ಇತ್ತೀಚೆಗೆ ನಟಿ ಕೀರ್ತಿ ಸುರೇಶ್​ ಅವರು ಸಂದರ್ಶನವೊಂದರಲ್ಲಿ ಭಾಗಿಯಾಗಿದ್ದರು. ದಳಪತಿ ವಿಜಯ್​ ಮತ್ತು ಮೆಗಾ ಸ್ಟಾರ್​ ಚಿರಂಜೀವಿ ಈ ಇಬ್ಬರಲ್ಲಿ ಯಾರು ಬೆಸ್ಟ್​ ಡ್ಯಾನ್ಸರ್​ ಎಂದು ಕೇಳಿದ ಪ್ರಶ್ನೆಗೆ ಕೀರ್ತಿ ಸುರೇಶ್​ ಅವರು ದಳಪತಿ ವಿಜಯ್​ ಹೆಸರನ್ನು ಆಯ್ಕೆ ಮಾಡಿದ್ದರು. ಇದರಿಂದ ಚಿರಂಜೀವಿ ಅವರ ಅಭಿಮಾನಿಗಳಿಗೆ ಬೇಸರ ಆಗಿತ್ತು. ಕೀರ್ತಿ ಅವರ ಅಭಿಪ್ರಾಯ ಸರಿಯಿಲ್ಲ ಎಂಬುದನ್ನು ಚಿರು ಅಭಿಮಾನಿಗಳು ಈಗ ಸಾಕ್ಷಿ ಸಮೇತ ಸಾಬೀತುಪಡಿಸುತ್ತಿದ್ದಾರೆ.

ದಳಪತಿ ವಿಜಯ್​ ಅವರು ‘ದಿ ಗ್ರೇಟೆಸ್ಟ್​ ಆಫ್​ ಆಲ್​ ಟೈಮ್​’ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಚಿತ್ರದಿಂದ ಹೊಸ ಹಾಡನ್ನು ಬಿಡುಗಡೆ ಮಾಡಲಾಗಿದೆ. ಇದರಲ್ಲಿ ವಿಜಯ್​ ಮಾಡಿದ ಡ್ಯಾನ್ಸ್​ ಸರಿಯಿಲ್ಲ ಎಂದು ನೆಟ್ಟಿಗರು ಟೀಕಿಸುತ್ತಿದ್ದಾರೆ. ವಿಜಯ್​ ಮಾಡಿರುವ ಸ್ಟೆಪ್​ಗಳು ತುಂಬ ಎಡವಟ್ಟಿನಿಂದ ಕೂಡಿವೆ ಎಂಬುದು ಚಿರಂಜೀವಿಯ ಕಟ್ಟಾ ಅಭಿಮಾನಿಗಳ ಅಭಿಪ್ರಾಯ.

ಇದನ್ನೂ ಓದಿ: ‘ಮಹಾರಾಜ’ ಸಿನಿಮಾ ನಿರ್ದೇಶಕನ ಭೇಟಿಯಾದ ದಳಪತಿ ವಿಜಯ್

‘ದಿ ಗ್ರೇಟೆಸ್ಟ್​ ಆಫ್​ ಆಲ್​ ಟೈಮ್​’ ಸಿನಿಮಾಗೆ ವೆಂಕಟ್​ ಪ್ರಭು ನಿರ್ದೇಶನ ಮಾಡಿದ್ದಾರೆ. ಯುವನ್ ಶಂಕರ್​ ರಾಜಾ ಅವರು ಈ ಚಿತ್ರಕ್ಕೆ ಸಂಗೀತ ನೀಡಿದ್ದಾರೆ. ದಳಪತಿ ವಿಜಯ್​ ಅವರ ಅಭಿಮಾನಿಗಳಿಗೆ ಈ ಹೊಸ ಸಾಂಗ್​ ಇಷ್ಟ ಆಗಿದೆ. ಆದರೆ ಚಿರಂಜೀವಿ ಅಭಿಮಾನಿಗಳು ಟ್ರೋಲ್​ ಮಾಡುತ್ತಲೇ ಇದ್ದಾರೆ. ಇಷ್ಟೆಲ್ಲ ಆದ ಬಳಿಕ ಕೀರ್ತಿ ಸುರೇಶ್​ ಅವರು ತಮ್ಮ ಅಭಿಪ್ರಾಯ ಬದಲಾಯಿಸಿಕೊಳ್ಳುತ್ತಾರಾ ಎಂಬ ಕೌತುಕ ಎಲ್ಲರಲ್ಲೂ ಇದೆ. ಅವರಿಂದ ಪ್ರತಿಕ್ರಿಯೆ ಬರಬಹುದು ಎಂದು ನೆಟ್ಟಿಗರು ಕಾಯುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್