ಡ್ಯಾನ್ಸ್ ವಿಚಾರದಲ್ಲಿ ಟ್ರೋಲ್​ ಆದ ದಳಪತಿ ವಿಜಯ್; ಇದಕ್ಕೆಲ್ಲ ಕಾರಣ ಕೀರ್ತಿ ಸುರೇಶ್​

ಮೆಗಾ ಸ್ಟಾರ್​ ಚಿರಂಜೀವಿ ಹಾಗೂ ದಳಪತಿ ವಿಜಯ್​ ನಡುವೆ ಬೆಸ್ಟ್​ ಡ್ಯಾನ್ಸರ್​ ಯಾರು? ಈ ಪ್ರಶ್ನೆಗೆ ಉತ್ತರವಾಗಿ ನಟಿ ಕೀರ್ತಿ ಸುರೇಶ್ ಅವರು ವಿಜಯ್​ ಹೆಸರನ್ನು ಹೇಳಿದ್ದರು. ಆದರೆ ‘ದಿ ಗ್ರೇಟೆಸ್ಟ್​ ಆಫ್​ ಆಲ್​ ಟೈಮ್​’ ಸಿನಿಮಾದ ಹೊಸ ಹಾಡನ್ನು ನೋಡಿದವರಿಗೆ ವಿಜಯ್​ ಡ್ಯಾನ್ಸ್​ ಸ್ವಲ್ಪವೂ ಇಷ್ಟ ಆಗಿಲ್ಲ. ಹಾಗಾಗಿ ಸೋಶಿಯಲ್​ ಮೀಡಿಯಾದಲ್ಲಿ ಟ್ರೋಲ್​ ಮಾಡಲಾಗುತ್ತಿದೆ.

ಡ್ಯಾನ್ಸ್ ವಿಚಾರದಲ್ಲಿ ಟ್ರೋಲ್​ ಆದ ದಳಪತಿ ವಿಜಯ್; ಇದಕ್ಕೆಲ್ಲ ಕಾರಣ ಕೀರ್ತಿ ಸುರೇಶ್​
ದಳಪತಿ ವಿಜಯ್​, ಕೀರ್ತಿ ಸುರೇಶ್
Follow us
|

Updated on: Aug 05, 2024 | 10:08 PM

ಕಾಲಿವುಡ್​ನ ಸ್ಟಾರ್​ ನಟ ದಳಪತಿ ವಿಜಯ್​ ಅವರನ್ನು ಟ್ರೋಲ್ ಮಾಡಲಾಗುತ್ತಿದೆ. ಅವರಿಗೆ ಸರಿಯಾಗಿ ಡ್ಯಾನ್ಸ್​ ಮಾಡಲು ಬರುವುದಿಲ್ಲ ಎಂದು ನೆಟ್ಟಿಗರು ಟೀಕೆ ಮಾಡುತ್ತಿದ್ದಾರೆ. ದಳಪತಿ ವಿಜಯ್​ ಅವರು ಈ ರೀತಿ ಟ್ರೋಲ್​ ಆಗಲು ಕಾರಣ ನಟಿ ಕೀರ್ತಿ ಸುರೇಶ್​. ಹೌದು, ನಟಿ ನೀಡಿದ ಒಂದೇ ಒಂದು ಹೇಳಿಕೆಯಿಂದಾಗಿ ಸೋಶಿಯಲ್​ ಮೀಡಿಯಾದಲ್ಲಿ ದಳಪತಿ ವಿಜಯ್​ ಅವರು ಟ್ರೋಲ್ ಆಗುವಂತಾಗಿದೆ. ಮೆಗಾ ಸ್ಟಾರ್ ಚಿರಂಜೀವಿ ಅವರಿಗಿಂತಲೂ ದಳಪತಿ ವಿಜಯ್​ ಅವರೇ ಅತ್ಯುತ್ತಮ ಡ್ಯಾನ್ಸರ್​ ಎಂದು ಕೀರ್ತಿ ಸುರೇಶ್​ ಹೇಳಿದ್ದರಿಂದ ಇಷ್ಟೆಲ್ಲ ಆಗಿದೆ.

ಇತ್ತೀಚೆಗೆ ನಟಿ ಕೀರ್ತಿ ಸುರೇಶ್​ ಅವರು ಸಂದರ್ಶನವೊಂದರಲ್ಲಿ ಭಾಗಿಯಾಗಿದ್ದರು. ದಳಪತಿ ವಿಜಯ್​ ಮತ್ತು ಮೆಗಾ ಸ್ಟಾರ್​ ಚಿರಂಜೀವಿ ಈ ಇಬ್ಬರಲ್ಲಿ ಯಾರು ಬೆಸ್ಟ್​ ಡ್ಯಾನ್ಸರ್​ ಎಂದು ಕೇಳಿದ ಪ್ರಶ್ನೆಗೆ ಕೀರ್ತಿ ಸುರೇಶ್​ ಅವರು ದಳಪತಿ ವಿಜಯ್​ ಹೆಸರನ್ನು ಆಯ್ಕೆ ಮಾಡಿದ್ದರು. ಇದರಿಂದ ಚಿರಂಜೀವಿ ಅವರ ಅಭಿಮಾನಿಗಳಿಗೆ ಬೇಸರ ಆಗಿತ್ತು. ಕೀರ್ತಿ ಅವರ ಅಭಿಪ್ರಾಯ ಸರಿಯಿಲ್ಲ ಎಂಬುದನ್ನು ಚಿರು ಅಭಿಮಾನಿಗಳು ಈಗ ಸಾಕ್ಷಿ ಸಮೇತ ಸಾಬೀತುಪಡಿಸುತ್ತಿದ್ದಾರೆ.

ದಳಪತಿ ವಿಜಯ್​ ಅವರು ‘ದಿ ಗ್ರೇಟೆಸ್ಟ್​ ಆಫ್​ ಆಲ್​ ಟೈಮ್​’ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಚಿತ್ರದಿಂದ ಹೊಸ ಹಾಡನ್ನು ಬಿಡುಗಡೆ ಮಾಡಲಾಗಿದೆ. ಇದರಲ್ಲಿ ವಿಜಯ್​ ಮಾಡಿದ ಡ್ಯಾನ್ಸ್​ ಸರಿಯಿಲ್ಲ ಎಂದು ನೆಟ್ಟಿಗರು ಟೀಕಿಸುತ್ತಿದ್ದಾರೆ. ವಿಜಯ್​ ಮಾಡಿರುವ ಸ್ಟೆಪ್​ಗಳು ತುಂಬ ಎಡವಟ್ಟಿನಿಂದ ಕೂಡಿವೆ ಎಂಬುದು ಚಿರಂಜೀವಿಯ ಕಟ್ಟಾ ಅಭಿಮಾನಿಗಳ ಅಭಿಪ್ರಾಯ.

ಇದನ್ನೂ ಓದಿ: ‘ಮಹಾರಾಜ’ ಸಿನಿಮಾ ನಿರ್ದೇಶಕನ ಭೇಟಿಯಾದ ದಳಪತಿ ವಿಜಯ್

‘ದಿ ಗ್ರೇಟೆಸ್ಟ್​ ಆಫ್​ ಆಲ್​ ಟೈಮ್​’ ಸಿನಿಮಾಗೆ ವೆಂಕಟ್​ ಪ್ರಭು ನಿರ್ದೇಶನ ಮಾಡಿದ್ದಾರೆ. ಯುವನ್ ಶಂಕರ್​ ರಾಜಾ ಅವರು ಈ ಚಿತ್ರಕ್ಕೆ ಸಂಗೀತ ನೀಡಿದ್ದಾರೆ. ದಳಪತಿ ವಿಜಯ್​ ಅವರ ಅಭಿಮಾನಿಗಳಿಗೆ ಈ ಹೊಸ ಸಾಂಗ್​ ಇಷ್ಟ ಆಗಿದೆ. ಆದರೆ ಚಿರಂಜೀವಿ ಅಭಿಮಾನಿಗಳು ಟ್ರೋಲ್​ ಮಾಡುತ್ತಲೇ ಇದ್ದಾರೆ. ಇಷ್ಟೆಲ್ಲ ಆದ ಬಳಿಕ ಕೀರ್ತಿ ಸುರೇಶ್​ ಅವರು ತಮ್ಮ ಅಭಿಪ್ರಾಯ ಬದಲಾಯಿಸಿಕೊಳ್ಳುತ್ತಾರಾ ಎಂಬ ಕೌತುಕ ಎಲ್ಲರಲ್ಲೂ ಇದೆ. ಅವರಿಂದ ಪ್ರತಿಕ್ರಿಯೆ ಬರಬಹುದು ಎಂದು ನೆಟ್ಟಿಗರು ಕಾಯುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಪ್ರಧಾನಿ ಮೋದಿ ಬಗ್ಗೆ ಅಪಾರ ಗೌರವ ಇದೆ ಎಂದ ಡಿಕೆ ಸುರೇಶ್
ಪ್ರಧಾನಿ ಮೋದಿ ಬಗ್ಗೆ ಅಪಾರ ಗೌರವ ಇದೆ ಎಂದ ಡಿಕೆ ಸುರೇಶ್
ಹೀಗೂ ಉಂಟು! ಸಾರಿಗೆ ಬಸ್ಸಿಗೂ ಗ್ರಾಮಸ್ಥರಿಂದ ಭಾವನಾತ್ಮಕ ಬೀಳ್ಕೊಡುಗೆ
ಹೀಗೂ ಉಂಟು! ಸಾರಿಗೆ ಬಸ್ಸಿಗೂ ಗ್ರಾಮಸ್ಥರಿಂದ ಭಾವನಾತ್ಮಕ ಬೀಳ್ಕೊಡುಗೆ
ಗದಗ: ಲಂಚದ ಆರೋಪ, ಅಧಿಕಾರಿಗೆ ಸಚಿವ ಎಚ್​ಕೆ ಪಾಟೀಲ್​ ಹಿಗ್ಗಾಮುಗ್ಗಾ ತರಾಟೆ
ಗದಗ: ಲಂಚದ ಆರೋಪ, ಅಧಿಕಾರಿಗೆ ಸಚಿವ ಎಚ್​ಕೆ ಪಾಟೀಲ್​ ಹಿಗ್ಗಾಮುಗ್ಗಾ ತರಾಟೆ
ಪ್ರವಾಹ ಸ್ಥಳದಲ್ಲಿ ಟಿಎಂಸಿ ಶಾಸಕರು, ಸಂಸದರಿದ್ದ ದೋಣಿ ಪಲ್ಟಿ
ಪ್ರವಾಹ ಸ್ಥಳದಲ್ಲಿ ಟಿಎಂಸಿ ಶಾಸಕರು, ಸಂಸದರಿದ್ದ ದೋಣಿ ಪಲ್ಟಿ
ಸಿಎಂ ಸಿದ್ದರಾಮಯ್ಯಗೆ ಧನ್ಯವಾದ ಹೇಳಿದ ದುನಿಯಾ ವಿಜಯ್; ಕಾರಣವೇನು?
ಸಿಎಂ ಸಿದ್ದರಾಮಯ್ಯಗೆ ಧನ್ಯವಾದ ಹೇಳಿದ ದುನಿಯಾ ವಿಜಯ್; ಕಾರಣವೇನು?
ಒಬ್ಬರೇ ಇದ್ದೀರಾ? ಭಯ ಅನಿಸುತ್ತಿದೆಯಾ? ಈ ವೇಳೆ ಜಪಿಸಬೇಕಾದ ನಾಮಗಳು ಇಲ್ಲಿವೆ
ಒಬ್ಬರೇ ಇದ್ದೀರಾ? ಭಯ ಅನಿಸುತ್ತಿದೆಯಾ? ಈ ವೇಳೆ ಜಪಿಸಬೇಕಾದ ನಾಮಗಳು ಇಲ್ಲಿವೆ
ಈ ರಾಶಿಯವರು ಗೊತ್ತಾಗದೇ ಕೆಟ್ಟವರ ಸಹವಾಸವನ್ನು ಮಾಡುವಿರಿ
ಈ ರಾಶಿಯವರು ಗೊತ್ತಾಗದೇ ಕೆಟ್ಟವರ ಸಹವಾಸವನ್ನು ಮಾಡುವಿರಿ
ಚಲಿಸುವಾಗಲೇ ನೀರಿನಲ್ಲಿ ತೇಲಿದ ಕಾರು; ಪ್ರಾಣದ ಹಂಗು ತೊರೆದು ಜನರ ರಕ್ಷಣೆ
ಚಲಿಸುವಾಗಲೇ ನೀರಿನಲ್ಲಿ ತೇಲಿದ ಕಾರು; ಪ್ರಾಣದ ಹಂಗು ತೊರೆದು ಜನರ ರಕ್ಷಣೆ
ಹೃದಯ ವಿದ್ರಾವಕ ಘಟನೆ: ಬೈಕ್‌ನಲ್ಲೇ ತಂದೆಯ ಶವ ಸಾಗಿಸಿದ ಮಕ್ಕಳು
ಹೃದಯ ವಿದ್ರಾವಕ ಘಟನೆ: ಬೈಕ್‌ನಲ್ಲೇ ತಂದೆಯ ಶವ ಸಾಗಿಸಿದ ಮಕ್ಕಳು
ಭಾರತದ ಷೇರುಪೇಟೆ ಇನ್ನೆಷ್ಟು ಬೇಗ ಡಬಲ್ ಆಗುತ್ತೆ?
ಭಾರತದ ಷೇರುಪೇಟೆ ಇನ್ನೆಷ್ಟು ಬೇಗ ಡಬಲ್ ಆಗುತ್ತೆ?