AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಹೂ ಅಂತೀಯಾ ಮಾವ..’ ರೀತಿ ಹವಾ ಸೃಷ್ಟಿಸಲು ಹೋಗಿ ವಿವಾದ ಹುಟ್ಟು ಹಾಕಿದ ‘ಆಚಾರ್ಯ’ ಸಿನಿಮಾ ಐಟಂ ಸಾಂಗ್​

ಎಲ್ಲವೂ ಅಂದುಕೊಂಡಂತೆ ನಡೆದರೆ ‘ಆಚಾರ್ಯ’ ಸಿನಿಮಾ ಫೆಬ್ರವರಿ 4ಕ್ಕೆ ತೆರೆಗೆ ಬರಲಿದೆ. ಆದರೆ, ಕೊವಿಡ್ ಕಾರಣದಿಂದ ಸಿನಿಮಾ ರಿಲೀಸ್​ ದಿನಾಂಕ ಮುಂದಕ್ಕೆ ಹೋದರೂ ಅಚ್ಚರಿ ಏನಿಲ್ಲ. ಆದರೆ, ಚಿತ್ರತಂಡ ಸುಮ್ಮನೆ ಕುಳಿತಿಲ್ಲ. ನಿಧಾನಕ್ಕೆ ಪ್ರಚಾರ ಆರಂಭಿಸಿದೆ.

‘ಹೂ ಅಂತೀಯಾ ಮಾವ..’ ರೀತಿ ಹವಾ ಸೃಷ್ಟಿಸಲು ಹೋಗಿ ವಿವಾದ ಹುಟ್ಟು ಹಾಕಿದ ‘ಆಚಾರ್ಯ’ ಸಿನಿಮಾ ಐಟಂ ಸಾಂಗ್​
ಚಿರಂಜೀವಿ
TV9 Web
| Edited By: |

Updated on: Jan 07, 2022 | 7:01 AM

Share

ಸ್ಟಾರ್​ ನಟರ ಸಿನಿಮಾದಲ್ಲಿ ಬರುವ ಐಟಂ ಸಾಂಗ್​ಗೆ ಲಕ್ಷಲಕ್ಷ ಹಣ ಖರ್ಚು ಮಾಡುತ್ತಾರೆ ನಿರ್ಮಾಪಕರು. ಸಿನಿಮಾಗೆ ಮೈಲೇಜ್​ ಕೊಡೋಕೆ ಈ ಸಾಂಗ್​ ಕೂಡ ಕಾರಣವಾಗಬಹುದು. ಇತ್ತೀಚೆಗೆ ತೆರೆಕಂಡ ‘ಪುಷ್ಪ’  (Pushpa Movie) ಸಿನಿಮಾ ಇದಕ್ಕೆ ಉತ್ತಮ ಉದಾಹರಣೆ. ಈ ಚಿತ್ರದಲ್ಲಿ ಸಮಂತಾ (Samantha) ಹೆಜ್ಜೆ ಹಾಕಿದ ‘ಹೂ ಅಂತೀಯಾ ಮಾವ, ಊಹೂ ಅಂತೀಯಾ ಮಾವ’ ಹಾಡು ದೊಡ್ಡ ಮಟ್ಟದಲ್ಲಿ ಸದ್ದು ಮಾಡಿತ್ತು. ಈ ಚಿತ್ರದಿಂದ ಸಿನಿಮಾದ ಹೈಪ್​ ಹೆಚ್ಚಿತ್ತು. ಇದೇ ರೀತಿ ಹೈಪ್​ ಸೃಷ್ಟಿ ಮಾಡುವ ಭರದಲ್ಲಿ ಚಿರಂಜೀವಿ ನಟನೆಯ ‘ಆಚಾರ್ಯ’  (Acharya) ಚಿತ್ರ ವಿವಾದ ಸೃಷ್ಟಿ ಮಾಡಿದೆ. ಇದು ದೊಡ್ಡ ಮಟ್ಟದಲ್ಲಿ ಚರ್ಚೆ ಆಗುತ್ತಿದೆ.

ಎಲ್ಲವೂ ಅಂದುಕೊಂಡಂತೆ ನಡೆದರೆ ‘ಆಚಾರ್ಯ’ ಸಿನಿಮಾ ಫೆಬ್ರವರಿ 4ಕ್ಕೆ ತೆರೆಗೆ ಬರಲಿದೆ. ಆದರೆ, ಕೊವಿಡ್ ಕಾರಣದಿಂದ ಸಿನಿಮಾ ರಿಲೀಸ್​ ದಿನಾಂಕ ಮುಂದಕ್ಕೆ ಹೋದರೂ ಅಚ್ಚರಿ ಏನಿಲ್ಲ. ಆದರೆ, ಚಿತ್ರತಂಡ ಸುಮ್ಮನೆ ಕುಳಿತಿಲ್ಲ. ನಿಧಾನಕ್ಕೆ ಪ್ರಚಾರ ಆರಂಭಿಸಿದೆ. ಇತ್ತೀಚೆಗೆ ಟೀಸರ್ ರಿಲೀಸ್​ ಮಾಡುವ ಮೂಲಕ ಸಿನಿಮಾದ ನಿರೀಕ್ಷೆಯನ್ನು ಹೆಚ್ಚಿಸುವ ಕೆಲಸವನ್ನು ಚಿತ್ರತಂಡ ಮಾಡಿತ್ತು. ಅದೇ ರೀತಿ ಈಗ ಚಿತ್ರತಂಡದ ವಿಶೇಷ ಹಾಡನ್ನು ಬಿಡುಗಡೆ ಮಾಡಲಾಗಿದೆ. ಈ ಹಾಡಿಗೆ ಈಗ ವಿವಾದ ಅಂಟಿದೆ.

‘ಸಾನಾ ಕಷ್ಟಂ..​’ ಲಿರಿಕಲ್​ ಸಾಂಗ್​ ಬಿಡುಗಡೆ ಆಗಿದೆ. ಈ ಹಾಡಿನಲ್ಲಿ ಆರ್​ಎಂಪಿ ವೈದ್ಯರಿಗೆ ನೋವು ತರುವ ರೀತಿಯಲ್ಲಿ ಲಿರಿಕ್ಸ್​ ಬರೆಯಲಾಗಿದೆ. ‘ಮಹಿಳೆಯರನ್ನು ಸ್ಪರ್ಶಿಸುವ ಅವಕಾಶವನ್ನು ಪಡೆಯಲು ಹುಡುಗರು RMP ವೈದ್ಯರಾಗುತ್ತಿದ್ದಾರೆ’ ಎನ್ನುವ ಸಾಲಿದೆ. ಇದಕ್ಕೆ ತೆಲಂಗಾಣ ವೈದ್ಯರು ದೂರು ದಾಖಲು ಮಾಡಿದ್ದಾರೆ.

ಆಚಾರ್ಯ ಹೆಸರಿನ ಪಾತ್ರದಲ್ಲಿ ಚಿರಂಜೀವಿ ನಟಿಸುತ್ತಿದ್ದಾರೆ. ಕೊರಟಾಲ ಶಿವ ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ಈಗಾಗಲೇ ಶೂಟಿಂಗ್ ಪೂರ್ಣಗೊಳ್ಳಬೇಕಿತ್ತು. ಆದರೆ, ಕೊವಿಡ್ ಕಾರಣದಿಂದ ಸಿನಿಮಾ ಕೆಲಸಗಳು ನಿಂತಿದ್ದವು. ಕೊವಿಡ್​ ಅಬ್ಬರ ಕಡಿಮೆ ಆದ ನಂತರದಲ್ಲಿ ವೇಗವಾಗಿ ಸಿನಿಮಾ ಶೂಟಿಂಗ್​ ಪೂರ್ಣಗೊಳಿಸಲಾಗಿದೆ. ವಿದ್ಯಾರ್ಥಿಗಳ ನಾಯಕ ಸಿದ್ಧ ಹೆಸರಿನ ಪಾತ್ರದಲ್ಲಿ ರಾಮ್​ ಚರಣ್​ ಕಾಣಿಸಿಕೊಳ್ಳುತ್ತಿದ್ದಾರೆ. ಅಂದಹಾಗೆ, ರಾಮ್​ ಚರಣ್​ ಈ ಚಿತ್ರದಲ್ಲಿ ಹೆಚ್ಚು ಹೊತ್ತು ಕಾಣಿಸಿಕೊಳ್ಳುವುದಿಲ್ಲ. ಇದೊಂದು ಅತಿಥಿ ಪಾತ್ರ.

ಇದನ್ನೂ ಓದಿ: ಚಿರಂಜೀವಿ ಅಭಿಮಾನಿಗಳು ಆ.22ರ ಮೇಲೆ ಕಣ್ಣು ಇಟ್ಟಿರೋದು ಯಾಕೆ? ನಿರೀಕ್ಷೆ ಹೆಚ್ಚಿಸಿದ ‘ಆಚಾರ್ಯ’

40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ