AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಹೂ ಅಂತೀಯಾ ಮಾವ..’ ರೀತಿ ಹವಾ ಸೃಷ್ಟಿಸಲು ಹೋಗಿ ವಿವಾದ ಹುಟ್ಟು ಹಾಕಿದ ‘ಆಚಾರ್ಯ’ ಸಿನಿಮಾ ಐಟಂ ಸಾಂಗ್​

ಎಲ್ಲವೂ ಅಂದುಕೊಂಡಂತೆ ನಡೆದರೆ ‘ಆಚಾರ್ಯ’ ಸಿನಿಮಾ ಫೆಬ್ರವರಿ 4ಕ್ಕೆ ತೆರೆಗೆ ಬರಲಿದೆ. ಆದರೆ, ಕೊವಿಡ್ ಕಾರಣದಿಂದ ಸಿನಿಮಾ ರಿಲೀಸ್​ ದಿನಾಂಕ ಮುಂದಕ್ಕೆ ಹೋದರೂ ಅಚ್ಚರಿ ಏನಿಲ್ಲ. ಆದರೆ, ಚಿತ್ರತಂಡ ಸುಮ್ಮನೆ ಕುಳಿತಿಲ್ಲ. ನಿಧಾನಕ್ಕೆ ಪ್ರಚಾರ ಆರಂಭಿಸಿದೆ.

‘ಹೂ ಅಂತೀಯಾ ಮಾವ..’ ರೀತಿ ಹವಾ ಸೃಷ್ಟಿಸಲು ಹೋಗಿ ವಿವಾದ ಹುಟ್ಟು ಹಾಕಿದ ‘ಆಚಾರ್ಯ’ ಸಿನಿಮಾ ಐಟಂ ಸಾಂಗ್​
ಚಿರಂಜೀವಿ
TV9 Web
| Edited By: |

Updated on: Jan 07, 2022 | 7:01 AM

Share

ಸ್ಟಾರ್​ ನಟರ ಸಿನಿಮಾದಲ್ಲಿ ಬರುವ ಐಟಂ ಸಾಂಗ್​ಗೆ ಲಕ್ಷಲಕ್ಷ ಹಣ ಖರ್ಚು ಮಾಡುತ್ತಾರೆ ನಿರ್ಮಾಪಕರು. ಸಿನಿಮಾಗೆ ಮೈಲೇಜ್​ ಕೊಡೋಕೆ ಈ ಸಾಂಗ್​ ಕೂಡ ಕಾರಣವಾಗಬಹುದು. ಇತ್ತೀಚೆಗೆ ತೆರೆಕಂಡ ‘ಪುಷ್ಪ’  (Pushpa Movie) ಸಿನಿಮಾ ಇದಕ್ಕೆ ಉತ್ತಮ ಉದಾಹರಣೆ. ಈ ಚಿತ್ರದಲ್ಲಿ ಸಮಂತಾ (Samantha) ಹೆಜ್ಜೆ ಹಾಕಿದ ‘ಹೂ ಅಂತೀಯಾ ಮಾವ, ಊಹೂ ಅಂತೀಯಾ ಮಾವ’ ಹಾಡು ದೊಡ್ಡ ಮಟ್ಟದಲ್ಲಿ ಸದ್ದು ಮಾಡಿತ್ತು. ಈ ಚಿತ್ರದಿಂದ ಸಿನಿಮಾದ ಹೈಪ್​ ಹೆಚ್ಚಿತ್ತು. ಇದೇ ರೀತಿ ಹೈಪ್​ ಸೃಷ್ಟಿ ಮಾಡುವ ಭರದಲ್ಲಿ ಚಿರಂಜೀವಿ ನಟನೆಯ ‘ಆಚಾರ್ಯ’  (Acharya) ಚಿತ್ರ ವಿವಾದ ಸೃಷ್ಟಿ ಮಾಡಿದೆ. ಇದು ದೊಡ್ಡ ಮಟ್ಟದಲ್ಲಿ ಚರ್ಚೆ ಆಗುತ್ತಿದೆ.

ಎಲ್ಲವೂ ಅಂದುಕೊಂಡಂತೆ ನಡೆದರೆ ‘ಆಚಾರ್ಯ’ ಸಿನಿಮಾ ಫೆಬ್ರವರಿ 4ಕ್ಕೆ ತೆರೆಗೆ ಬರಲಿದೆ. ಆದರೆ, ಕೊವಿಡ್ ಕಾರಣದಿಂದ ಸಿನಿಮಾ ರಿಲೀಸ್​ ದಿನಾಂಕ ಮುಂದಕ್ಕೆ ಹೋದರೂ ಅಚ್ಚರಿ ಏನಿಲ್ಲ. ಆದರೆ, ಚಿತ್ರತಂಡ ಸುಮ್ಮನೆ ಕುಳಿತಿಲ್ಲ. ನಿಧಾನಕ್ಕೆ ಪ್ರಚಾರ ಆರಂಭಿಸಿದೆ. ಇತ್ತೀಚೆಗೆ ಟೀಸರ್ ರಿಲೀಸ್​ ಮಾಡುವ ಮೂಲಕ ಸಿನಿಮಾದ ನಿರೀಕ್ಷೆಯನ್ನು ಹೆಚ್ಚಿಸುವ ಕೆಲಸವನ್ನು ಚಿತ್ರತಂಡ ಮಾಡಿತ್ತು. ಅದೇ ರೀತಿ ಈಗ ಚಿತ್ರತಂಡದ ವಿಶೇಷ ಹಾಡನ್ನು ಬಿಡುಗಡೆ ಮಾಡಲಾಗಿದೆ. ಈ ಹಾಡಿಗೆ ಈಗ ವಿವಾದ ಅಂಟಿದೆ.

‘ಸಾನಾ ಕಷ್ಟಂ..​’ ಲಿರಿಕಲ್​ ಸಾಂಗ್​ ಬಿಡುಗಡೆ ಆಗಿದೆ. ಈ ಹಾಡಿನಲ್ಲಿ ಆರ್​ಎಂಪಿ ವೈದ್ಯರಿಗೆ ನೋವು ತರುವ ರೀತಿಯಲ್ಲಿ ಲಿರಿಕ್ಸ್​ ಬರೆಯಲಾಗಿದೆ. ‘ಮಹಿಳೆಯರನ್ನು ಸ್ಪರ್ಶಿಸುವ ಅವಕಾಶವನ್ನು ಪಡೆಯಲು ಹುಡುಗರು RMP ವೈದ್ಯರಾಗುತ್ತಿದ್ದಾರೆ’ ಎನ್ನುವ ಸಾಲಿದೆ. ಇದಕ್ಕೆ ತೆಲಂಗಾಣ ವೈದ್ಯರು ದೂರು ದಾಖಲು ಮಾಡಿದ್ದಾರೆ.

ಆಚಾರ್ಯ ಹೆಸರಿನ ಪಾತ್ರದಲ್ಲಿ ಚಿರಂಜೀವಿ ನಟಿಸುತ್ತಿದ್ದಾರೆ. ಕೊರಟಾಲ ಶಿವ ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ಈಗಾಗಲೇ ಶೂಟಿಂಗ್ ಪೂರ್ಣಗೊಳ್ಳಬೇಕಿತ್ತು. ಆದರೆ, ಕೊವಿಡ್ ಕಾರಣದಿಂದ ಸಿನಿಮಾ ಕೆಲಸಗಳು ನಿಂತಿದ್ದವು. ಕೊವಿಡ್​ ಅಬ್ಬರ ಕಡಿಮೆ ಆದ ನಂತರದಲ್ಲಿ ವೇಗವಾಗಿ ಸಿನಿಮಾ ಶೂಟಿಂಗ್​ ಪೂರ್ಣಗೊಳಿಸಲಾಗಿದೆ. ವಿದ್ಯಾರ್ಥಿಗಳ ನಾಯಕ ಸಿದ್ಧ ಹೆಸರಿನ ಪಾತ್ರದಲ್ಲಿ ರಾಮ್​ ಚರಣ್​ ಕಾಣಿಸಿಕೊಳ್ಳುತ್ತಿದ್ದಾರೆ. ಅಂದಹಾಗೆ, ರಾಮ್​ ಚರಣ್​ ಈ ಚಿತ್ರದಲ್ಲಿ ಹೆಚ್ಚು ಹೊತ್ತು ಕಾಣಿಸಿಕೊಳ್ಳುವುದಿಲ್ಲ. ಇದೊಂದು ಅತಿಥಿ ಪಾತ್ರ.

ಇದನ್ನೂ ಓದಿ: ಚಿರಂಜೀವಿ ಅಭಿಮಾನಿಗಳು ಆ.22ರ ಮೇಲೆ ಕಣ್ಣು ಇಟ್ಟಿರೋದು ಯಾಕೆ? ನಿರೀಕ್ಷೆ ಹೆಚ್ಚಿಸಿದ ‘ಆಚಾರ್ಯ’

Follow Us
ದರೋಡೆಗೆ ಬಂದ ಕಳ್ಳರನ್ನೇ ಕೂಡಿಹಾಕಿದ ಜನರು!
ದರೋಡೆಗೆ ಬಂದ ಕಳ್ಳರನ್ನೇ ಕೂಡಿಹಾಕಿದ ಜನರು!
ಸಂಪುಟ ಪುನಾರಚನೆಗೆ ಎಐಸಿಸಿ ಅಧ್ಯಕ್ಷ ಖರ್ಗೆ ಮಹತ್ವದ ಭರವಸೆ: ಶಾಸಕರು ಖುಷ್​
ಸಂಪುಟ ಪುನಾರಚನೆಗೆ ಎಐಸಿಸಿ ಅಧ್ಯಕ್ಷ ಖರ್ಗೆ ಮಹತ್ವದ ಭರವಸೆ: ಶಾಸಕರು ಖುಷ್​
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್