‘ಹೂ ಅಂತೀಯಾ ಮಾವ..’ ರೀತಿ ಹವಾ ಸೃಷ್ಟಿಸಲು ಹೋಗಿ ವಿವಾದ ಹುಟ್ಟು ಹಾಕಿದ ‘ಆಚಾರ್ಯ’ ಸಿನಿಮಾ ಐಟಂ ಸಾಂಗ್​

ಎಲ್ಲವೂ ಅಂದುಕೊಂಡಂತೆ ನಡೆದರೆ ‘ಆಚಾರ್ಯ’ ಸಿನಿಮಾ ಫೆಬ್ರವರಿ 4ಕ್ಕೆ ತೆರೆಗೆ ಬರಲಿದೆ. ಆದರೆ, ಕೊವಿಡ್ ಕಾರಣದಿಂದ ಸಿನಿಮಾ ರಿಲೀಸ್​ ದಿನಾಂಕ ಮುಂದಕ್ಕೆ ಹೋದರೂ ಅಚ್ಚರಿ ಏನಿಲ್ಲ. ಆದರೆ, ಚಿತ್ರತಂಡ ಸುಮ್ಮನೆ ಕುಳಿತಿಲ್ಲ. ನಿಧಾನಕ್ಕೆ ಪ್ರಚಾರ ಆರಂಭಿಸಿದೆ.

‘ಹೂ ಅಂತೀಯಾ ಮಾವ..’ ರೀತಿ ಹವಾ ಸೃಷ್ಟಿಸಲು ಹೋಗಿ ವಿವಾದ ಹುಟ್ಟು ಹಾಕಿದ ‘ಆಚಾರ್ಯ’ ಸಿನಿಮಾ ಐಟಂ ಸಾಂಗ್​
ಚಿರಂಜೀವಿ
Follow us
| Edited By: Rajesh Duggumane

Updated on: Jan 07, 2022 | 7:01 AM

ಸ್ಟಾರ್​ ನಟರ ಸಿನಿಮಾದಲ್ಲಿ ಬರುವ ಐಟಂ ಸಾಂಗ್​ಗೆ ಲಕ್ಷಲಕ್ಷ ಹಣ ಖರ್ಚು ಮಾಡುತ್ತಾರೆ ನಿರ್ಮಾಪಕರು. ಸಿನಿಮಾಗೆ ಮೈಲೇಜ್​ ಕೊಡೋಕೆ ಈ ಸಾಂಗ್​ ಕೂಡ ಕಾರಣವಾಗಬಹುದು. ಇತ್ತೀಚೆಗೆ ತೆರೆಕಂಡ ‘ಪುಷ್ಪ’  (Pushpa Movie) ಸಿನಿಮಾ ಇದಕ್ಕೆ ಉತ್ತಮ ಉದಾಹರಣೆ. ಈ ಚಿತ್ರದಲ್ಲಿ ಸಮಂತಾ (Samantha) ಹೆಜ್ಜೆ ಹಾಕಿದ ‘ಹೂ ಅಂತೀಯಾ ಮಾವ, ಊಹೂ ಅಂತೀಯಾ ಮಾವ’ ಹಾಡು ದೊಡ್ಡ ಮಟ್ಟದಲ್ಲಿ ಸದ್ದು ಮಾಡಿತ್ತು. ಈ ಚಿತ್ರದಿಂದ ಸಿನಿಮಾದ ಹೈಪ್​ ಹೆಚ್ಚಿತ್ತು. ಇದೇ ರೀತಿ ಹೈಪ್​ ಸೃಷ್ಟಿ ಮಾಡುವ ಭರದಲ್ಲಿ ಚಿರಂಜೀವಿ ನಟನೆಯ ‘ಆಚಾರ್ಯ’  (Acharya) ಚಿತ್ರ ವಿವಾದ ಸೃಷ್ಟಿ ಮಾಡಿದೆ. ಇದು ದೊಡ್ಡ ಮಟ್ಟದಲ್ಲಿ ಚರ್ಚೆ ಆಗುತ್ತಿದೆ.

ಎಲ್ಲವೂ ಅಂದುಕೊಂಡಂತೆ ನಡೆದರೆ ‘ಆಚಾರ್ಯ’ ಸಿನಿಮಾ ಫೆಬ್ರವರಿ 4ಕ್ಕೆ ತೆರೆಗೆ ಬರಲಿದೆ. ಆದರೆ, ಕೊವಿಡ್ ಕಾರಣದಿಂದ ಸಿನಿಮಾ ರಿಲೀಸ್​ ದಿನಾಂಕ ಮುಂದಕ್ಕೆ ಹೋದರೂ ಅಚ್ಚರಿ ಏನಿಲ್ಲ. ಆದರೆ, ಚಿತ್ರತಂಡ ಸುಮ್ಮನೆ ಕುಳಿತಿಲ್ಲ. ನಿಧಾನಕ್ಕೆ ಪ್ರಚಾರ ಆರಂಭಿಸಿದೆ. ಇತ್ತೀಚೆಗೆ ಟೀಸರ್ ರಿಲೀಸ್​ ಮಾಡುವ ಮೂಲಕ ಸಿನಿಮಾದ ನಿರೀಕ್ಷೆಯನ್ನು ಹೆಚ್ಚಿಸುವ ಕೆಲಸವನ್ನು ಚಿತ್ರತಂಡ ಮಾಡಿತ್ತು. ಅದೇ ರೀತಿ ಈಗ ಚಿತ್ರತಂಡದ ವಿಶೇಷ ಹಾಡನ್ನು ಬಿಡುಗಡೆ ಮಾಡಲಾಗಿದೆ. ಈ ಹಾಡಿಗೆ ಈಗ ವಿವಾದ ಅಂಟಿದೆ.

‘ಸಾನಾ ಕಷ್ಟಂ..​’ ಲಿರಿಕಲ್​ ಸಾಂಗ್​ ಬಿಡುಗಡೆ ಆಗಿದೆ. ಈ ಹಾಡಿನಲ್ಲಿ ಆರ್​ಎಂಪಿ ವೈದ್ಯರಿಗೆ ನೋವು ತರುವ ರೀತಿಯಲ್ಲಿ ಲಿರಿಕ್ಸ್​ ಬರೆಯಲಾಗಿದೆ. ‘ಮಹಿಳೆಯರನ್ನು ಸ್ಪರ್ಶಿಸುವ ಅವಕಾಶವನ್ನು ಪಡೆಯಲು ಹುಡುಗರು RMP ವೈದ್ಯರಾಗುತ್ತಿದ್ದಾರೆ’ ಎನ್ನುವ ಸಾಲಿದೆ. ಇದಕ್ಕೆ ತೆಲಂಗಾಣ ವೈದ್ಯರು ದೂರು ದಾಖಲು ಮಾಡಿದ್ದಾರೆ.

ಆಚಾರ್ಯ ಹೆಸರಿನ ಪಾತ್ರದಲ್ಲಿ ಚಿರಂಜೀವಿ ನಟಿಸುತ್ತಿದ್ದಾರೆ. ಕೊರಟಾಲ ಶಿವ ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ಈಗಾಗಲೇ ಶೂಟಿಂಗ್ ಪೂರ್ಣಗೊಳ್ಳಬೇಕಿತ್ತು. ಆದರೆ, ಕೊವಿಡ್ ಕಾರಣದಿಂದ ಸಿನಿಮಾ ಕೆಲಸಗಳು ನಿಂತಿದ್ದವು. ಕೊವಿಡ್​ ಅಬ್ಬರ ಕಡಿಮೆ ಆದ ನಂತರದಲ್ಲಿ ವೇಗವಾಗಿ ಸಿನಿಮಾ ಶೂಟಿಂಗ್​ ಪೂರ್ಣಗೊಳಿಸಲಾಗಿದೆ. ವಿದ್ಯಾರ್ಥಿಗಳ ನಾಯಕ ಸಿದ್ಧ ಹೆಸರಿನ ಪಾತ್ರದಲ್ಲಿ ರಾಮ್​ ಚರಣ್​ ಕಾಣಿಸಿಕೊಳ್ಳುತ್ತಿದ್ದಾರೆ. ಅಂದಹಾಗೆ, ರಾಮ್​ ಚರಣ್​ ಈ ಚಿತ್ರದಲ್ಲಿ ಹೆಚ್ಚು ಹೊತ್ತು ಕಾಣಿಸಿಕೊಳ್ಳುವುದಿಲ್ಲ. ಇದೊಂದು ಅತಿಥಿ ಪಾತ್ರ.

ಇದನ್ನೂ ಓದಿ: ಚಿರಂಜೀವಿ ಅಭಿಮಾನಿಗಳು ಆ.22ರ ಮೇಲೆ ಕಣ್ಣು ಇಟ್ಟಿರೋದು ಯಾಕೆ? ನಿರೀಕ್ಷೆ ಹೆಚ್ಚಿಸಿದ ‘ಆಚಾರ್ಯ’

ತಾಜಾ ಸುದ್ದಿ
‘ನಾನು ವಿಸ್ಮಯ ನೋಡಿದೆ’: ಅಮ್ಮನಿಗೆ ಅಂತಿಮ ವಿದಾಯ ಹೇಳಿದ ವಿನೋದ್ ಭಾವುಕ
‘ನಾನು ವಿಸ್ಮಯ ನೋಡಿದೆ’: ಅಮ್ಮನಿಗೆ ಅಂತಿಮ ವಿದಾಯ ಹೇಳಿದ ವಿನೋದ್ ಭಾವುಕ
ಜನತಾ ದಳದಲ್ಲಿದ್ದಾಗ ಯತ್ನಾಳ್ ಮುಸಲ್ಮಾನರನ್ನು ಓಲೈಸುತ್ತಿದ್ದರು: ಪಾಟೀಲ್
ಜನತಾ ದಳದಲ್ಲಿದ್ದಾಗ ಯತ್ನಾಳ್ ಮುಸಲ್ಮಾನರನ್ನು ಓಲೈಸುತ್ತಿದ್ದರು: ಪಾಟೀಲ್
ಗರುಡ ಮಾಲ್​ನಲ್ಲಿ ಮದ್ಯದ ನಶೆಯಲ್ಲಿ ಮಹಿಳೆ ರಾದ್ಧಾಂತ, ಸಿಬ್ಬಂದಿಗೆ ಥಳಿತ
ಗರುಡ ಮಾಲ್​ನಲ್ಲಿ ಮದ್ಯದ ನಶೆಯಲ್ಲಿ ಮಹಿಳೆ ರಾದ್ಧಾಂತ, ಸಿಬ್ಬಂದಿಗೆ ಥಳಿತ
ಸಕಲ ಸರ್ಕಾರೀ ಗೌರವದೊಂದಿಗೆ ನೆರವೇರಿದ ಲೀಲಾವತಿ ‘ಅಮ್ಮ’ನ ಅಂತಿಮ ಸಂಸ್ಕಾರ
ಸಕಲ ಸರ್ಕಾರೀ ಗೌರವದೊಂದಿಗೆ ನೆರವೇರಿದ ಲೀಲಾವತಿ ‘ಅಮ್ಮ’ನ ಅಂತಿಮ ಸಂಸ್ಕಾರ
ಶಿವಕುಮಾರ್  ನಾರಾಯಣ ಹೃದಯಾಲಯದಲ್ಲಿ ಬೆಡ್ ರೆಡಿ ಮಾಡಿಸಿಕೊಳ್ಳಲಿ: ಯತ್ನಾಳ್
ಶಿವಕುಮಾರ್  ನಾರಾಯಣ ಹೃದಯಾಲಯದಲ್ಲಿ ಬೆಡ್ ರೆಡಿ ಮಾಡಿಸಿಕೊಳ್ಳಲಿ: ಯತ್ನಾಳ್
ಅಶೋಕ ಯಾರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಲ್ಲ: ವಿಶ್ವನಾಥ್, ಬಿಜೆಪಿ ಶಾಸಕ
ಅಶೋಕ ಯಾರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಲ್ಲ: ವಿಶ್ವನಾಥ್, ಬಿಜೆಪಿ ಶಾಸಕ
ಕೆಸಿಆರ್ ಹಿಪ್ ರಿಪ್ಲೇಸ್ಮೆಂಟ್ ಸರ್ಜರಿ, ವಾಕರ್ ಸಹಾಯದಿಂದ ನಡೆದಾಟ ಪ್ರಯತ್ನ
ಕೆಸಿಆರ್ ಹಿಪ್ ರಿಪ್ಲೇಸ್ಮೆಂಟ್ ಸರ್ಜರಿ, ವಾಕರ್ ಸಹಾಯದಿಂದ ನಡೆದಾಟ ಪ್ರಯತ್ನ
ಉತ್ತರ ಕನ್ನಡ: ಫಕೀರರ ವೇಷದಲ್ಲಿ ಅಮಾಯಕರನ್ನ ಮೋಸ ಮಾಡ್ತಿದ್ದ ಯುವಕರು ವಶಕ್ಕೆ
ಉತ್ತರ ಕನ್ನಡ: ಫಕೀರರ ವೇಷದಲ್ಲಿ ಅಮಾಯಕರನ್ನ ಮೋಸ ಮಾಡ್ತಿದ್ದ ಯುವಕರು ವಶಕ್ಕೆ
ವಿನೋದ್ ತಾಯಿಯನ್ನು ನೋಡಿಕೊಂಡ ರೀತಿ ಪ್ರತಿಯೊಬ್ಬರಿಗೂ ಮಾದರಿ: ಶಿವಕುಮಾರ್
ವಿನೋದ್ ತಾಯಿಯನ್ನು ನೋಡಿಕೊಂಡ ರೀತಿ ಪ್ರತಿಯೊಬ್ಬರಿಗೂ ಮಾದರಿ: ಶಿವಕುಮಾರ್
ಕಟುಕರಿಗೆ ಈ ವಾರ ಇದೆ ಮಾರಿ ಹಬ್ಬ; ಸೂಚನೆ ಕೊಟ್ಟ ಸುದೀಪ್
ಕಟುಕರಿಗೆ ಈ ವಾರ ಇದೆ ಮಾರಿ ಹಬ್ಬ; ಸೂಚನೆ ಕೊಟ್ಟ ಸುದೀಪ್