AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಹೂ ಅಂತೀಯಾ ಮಾವ..’ ರೀತಿ ಹವಾ ಸೃಷ್ಟಿಸಲು ಹೋಗಿ ವಿವಾದ ಹುಟ್ಟು ಹಾಕಿದ ‘ಆಚಾರ್ಯ’ ಸಿನಿಮಾ ಐಟಂ ಸಾಂಗ್​

ಎಲ್ಲವೂ ಅಂದುಕೊಂಡಂತೆ ನಡೆದರೆ ‘ಆಚಾರ್ಯ’ ಸಿನಿಮಾ ಫೆಬ್ರವರಿ 4ಕ್ಕೆ ತೆರೆಗೆ ಬರಲಿದೆ. ಆದರೆ, ಕೊವಿಡ್ ಕಾರಣದಿಂದ ಸಿನಿಮಾ ರಿಲೀಸ್​ ದಿನಾಂಕ ಮುಂದಕ್ಕೆ ಹೋದರೂ ಅಚ್ಚರಿ ಏನಿಲ್ಲ. ಆದರೆ, ಚಿತ್ರತಂಡ ಸುಮ್ಮನೆ ಕುಳಿತಿಲ್ಲ. ನಿಧಾನಕ್ಕೆ ಪ್ರಚಾರ ಆರಂಭಿಸಿದೆ.

‘ಹೂ ಅಂತೀಯಾ ಮಾವ..’ ರೀತಿ ಹವಾ ಸೃಷ್ಟಿಸಲು ಹೋಗಿ ವಿವಾದ ಹುಟ್ಟು ಹಾಕಿದ ‘ಆಚಾರ್ಯ’ ಸಿನಿಮಾ ಐಟಂ ಸಾಂಗ್​
ಚಿರಂಜೀವಿ
TV9 Web
| Edited By: |

Updated on: Jan 07, 2022 | 7:01 AM

Share

ಸ್ಟಾರ್​ ನಟರ ಸಿನಿಮಾದಲ್ಲಿ ಬರುವ ಐಟಂ ಸಾಂಗ್​ಗೆ ಲಕ್ಷಲಕ್ಷ ಹಣ ಖರ್ಚು ಮಾಡುತ್ತಾರೆ ನಿರ್ಮಾಪಕರು. ಸಿನಿಮಾಗೆ ಮೈಲೇಜ್​ ಕೊಡೋಕೆ ಈ ಸಾಂಗ್​ ಕೂಡ ಕಾರಣವಾಗಬಹುದು. ಇತ್ತೀಚೆಗೆ ತೆರೆಕಂಡ ‘ಪುಷ್ಪ’  (Pushpa Movie) ಸಿನಿಮಾ ಇದಕ್ಕೆ ಉತ್ತಮ ಉದಾಹರಣೆ. ಈ ಚಿತ್ರದಲ್ಲಿ ಸಮಂತಾ (Samantha) ಹೆಜ್ಜೆ ಹಾಕಿದ ‘ಹೂ ಅಂತೀಯಾ ಮಾವ, ಊಹೂ ಅಂತೀಯಾ ಮಾವ’ ಹಾಡು ದೊಡ್ಡ ಮಟ್ಟದಲ್ಲಿ ಸದ್ದು ಮಾಡಿತ್ತು. ಈ ಚಿತ್ರದಿಂದ ಸಿನಿಮಾದ ಹೈಪ್​ ಹೆಚ್ಚಿತ್ತು. ಇದೇ ರೀತಿ ಹೈಪ್​ ಸೃಷ್ಟಿ ಮಾಡುವ ಭರದಲ್ಲಿ ಚಿರಂಜೀವಿ ನಟನೆಯ ‘ಆಚಾರ್ಯ’  (Acharya) ಚಿತ್ರ ವಿವಾದ ಸೃಷ್ಟಿ ಮಾಡಿದೆ. ಇದು ದೊಡ್ಡ ಮಟ್ಟದಲ್ಲಿ ಚರ್ಚೆ ಆಗುತ್ತಿದೆ.

ಎಲ್ಲವೂ ಅಂದುಕೊಂಡಂತೆ ನಡೆದರೆ ‘ಆಚಾರ್ಯ’ ಸಿನಿಮಾ ಫೆಬ್ರವರಿ 4ಕ್ಕೆ ತೆರೆಗೆ ಬರಲಿದೆ. ಆದರೆ, ಕೊವಿಡ್ ಕಾರಣದಿಂದ ಸಿನಿಮಾ ರಿಲೀಸ್​ ದಿನಾಂಕ ಮುಂದಕ್ಕೆ ಹೋದರೂ ಅಚ್ಚರಿ ಏನಿಲ್ಲ. ಆದರೆ, ಚಿತ್ರತಂಡ ಸುಮ್ಮನೆ ಕುಳಿತಿಲ್ಲ. ನಿಧಾನಕ್ಕೆ ಪ್ರಚಾರ ಆರಂಭಿಸಿದೆ. ಇತ್ತೀಚೆಗೆ ಟೀಸರ್ ರಿಲೀಸ್​ ಮಾಡುವ ಮೂಲಕ ಸಿನಿಮಾದ ನಿರೀಕ್ಷೆಯನ್ನು ಹೆಚ್ಚಿಸುವ ಕೆಲಸವನ್ನು ಚಿತ್ರತಂಡ ಮಾಡಿತ್ತು. ಅದೇ ರೀತಿ ಈಗ ಚಿತ್ರತಂಡದ ವಿಶೇಷ ಹಾಡನ್ನು ಬಿಡುಗಡೆ ಮಾಡಲಾಗಿದೆ. ಈ ಹಾಡಿಗೆ ಈಗ ವಿವಾದ ಅಂಟಿದೆ.

‘ಸಾನಾ ಕಷ್ಟಂ..​’ ಲಿರಿಕಲ್​ ಸಾಂಗ್​ ಬಿಡುಗಡೆ ಆಗಿದೆ. ಈ ಹಾಡಿನಲ್ಲಿ ಆರ್​ಎಂಪಿ ವೈದ್ಯರಿಗೆ ನೋವು ತರುವ ರೀತಿಯಲ್ಲಿ ಲಿರಿಕ್ಸ್​ ಬರೆಯಲಾಗಿದೆ. ‘ಮಹಿಳೆಯರನ್ನು ಸ್ಪರ್ಶಿಸುವ ಅವಕಾಶವನ್ನು ಪಡೆಯಲು ಹುಡುಗರು RMP ವೈದ್ಯರಾಗುತ್ತಿದ್ದಾರೆ’ ಎನ್ನುವ ಸಾಲಿದೆ. ಇದಕ್ಕೆ ತೆಲಂಗಾಣ ವೈದ್ಯರು ದೂರು ದಾಖಲು ಮಾಡಿದ್ದಾರೆ.

ಆಚಾರ್ಯ ಹೆಸರಿನ ಪಾತ್ರದಲ್ಲಿ ಚಿರಂಜೀವಿ ನಟಿಸುತ್ತಿದ್ದಾರೆ. ಕೊರಟಾಲ ಶಿವ ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ಈಗಾಗಲೇ ಶೂಟಿಂಗ್ ಪೂರ್ಣಗೊಳ್ಳಬೇಕಿತ್ತು. ಆದರೆ, ಕೊವಿಡ್ ಕಾರಣದಿಂದ ಸಿನಿಮಾ ಕೆಲಸಗಳು ನಿಂತಿದ್ದವು. ಕೊವಿಡ್​ ಅಬ್ಬರ ಕಡಿಮೆ ಆದ ನಂತರದಲ್ಲಿ ವೇಗವಾಗಿ ಸಿನಿಮಾ ಶೂಟಿಂಗ್​ ಪೂರ್ಣಗೊಳಿಸಲಾಗಿದೆ. ವಿದ್ಯಾರ್ಥಿಗಳ ನಾಯಕ ಸಿದ್ಧ ಹೆಸರಿನ ಪಾತ್ರದಲ್ಲಿ ರಾಮ್​ ಚರಣ್​ ಕಾಣಿಸಿಕೊಳ್ಳುತ್ತಿದ್ದಾರೆ. ಅಂದಹಾಗೆ, ರಾಮ್​ ಚರಣ್​ ಈ ಚಿತ್ರದಲ್ಲಿ ಹೆಚ್ಚು ಹೊತ್ತು ಕಾಣಿಸಿಕೊಳ್ಳುವುದಿಲ್ಲ. ಇದೊಂದು ಅತಿಥಿ ಪಾತ್ರ.

ಇದನ್ನೂ ಓದಿ: ಚಿರಂಜೀವಿ ಅಭಿಮಾನಿಗಳು ಆ.22ರ ಮೇಲೆ ಕಣ್ಣು ಇಟ್ಟಿರೋದು ಯಾಕೆ? ನಿರೀಕ್ಷೆ ಹೆಚ್ಚಿಸಿದ ‘ಆಚಾರ್ಯ’

Follow Us
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ