AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ರಾಜ್​ಕುಮಾರ್, ವಿಷ್ಣುವರ್ಧನ್ ಅವರಂತಹ ದಿಗ್ಗಜರನ್ನು ಬಾಲಿವುಡ್​ ಗುರುತಿಸಲಿಲ್ಲ’; ತೆಲುಗು ನಟ ಚಿರಂಜೀವಿ ಬೇಸರ

ಪಾರ್ಟಿ ಏರ್ಪಡಿಸಿದ್ದ ಸ್ಥಳದಲ್ಲಿ ಪೃಥ್ವಿರಾಜ್​ ಕಪೂರ್ ಅವರಿಂದ ಹಿಡಿದು ಅಮಿತಾಭ್​ ಬಚ್ಚನ್​ವರೆಗೆ ಎಲ್ಲಾ ಬಾಲಿವುಡ್ ಸ್ಟಾರ್ ನಟರ​ ಫೋಟೋಗಳಿದ್ದವು. ಅವರು ಮಾಡಿದ ಸಾಧನೆ ಏನು ಎಂಬುದನ್ನು ಬರೆಯಲಾಗಿತ್ತು. ಆದರೆ, ದಕ್ಷಿಣ ಭಾರತದ ಖ್ಯಾತ ನಟರ ಫೋಟೋಗಳು ಅಲ್ಲಿ ಇರಲಿಲ್ಲ.  

‘ರಾಜ್​ಕುಮಾರ್, ವಿಷ್ಣುವರ್ಧನ್ ಅವರಂತಹ ದಿಗ್ಗಜರನ್ನು ಬಾಲಿವುಡ್​ ಗುರುತಿಸಲಿಲ್ಲ’; ತೆಲುಗು ನಟ ಚಿರಂಜೀವಿ ಬೇಸರ
ರಾಜ್​ಕುಮಾರ್-ಚಿರಂಜೀವಿ-ವಿಷ್ಣುವರ್ಧನ್
TV9 Web
| Edited By: |

Updated on:Apr 28, 2022 | 1:55 PM

Share

ಬಾಲಿವುಡ್​ನಲ್ಲಿ (Bollywood) ಈಗ ದಕ್ಷಿಣ ಭಾರತದ ಸಿನಿಮಾಗಳು ಪಾರುಪತ್ಯ ಸಾಧಿಸಿವೆ. ಆದರೆ, ಮೊದಲು ಈ ರೀತಿ ಇರಲಿಲ್ಲ. ಬಾಲಿವುಡ್ ಎಂದರೆ ಭಾರತೀಯ ಚಿತ್ರರಂಗ, ಭಾರತೀಯ ಚಿತ್ರರಂಗ ಎಂದರೆ ಬಾಲಿವುಡ್ ಎಂದು ಬಿಂಬಿಸಲಾಗಿತ್ತು. ದಕ್ಷಿಣ ಭಾರತದ ಸಿನಿಮಾಗಳಿಗೆ ಪ್ರಾದೇಶಿಕ ಸಿನಿಮಾಗಳು ಎನ್ನುವ ಹಣೆಪಟ್ಟಿ ಕಟ್ಟಲಾಗಿತ್ತು. ಇದರಿಂದ ಸ್ಟಾರ್ ನಟ ಚಿರಂಜೀವಿಗೆ (Chiranjeevi) ಅವಮಾನ ಆಗಿತ್ತು. ದಕ್ಷಿಣದವರನ್ನು ಈ ರೀತಿ ಕಡೆಗಣಿಸಿದ್ದಕ್ಕೆ ತುಂಬಾನೇ ಬೇಸರ ಆಗಿತ್ತು. ಈ ಬಗ್ಗೆ ಅವರು ಮಾತನಾಡಿದ್ದಾರೆ. ಒಂದು ಘಟನೆಯನ್ನು ಅವರು ನೆನಪಿಸಿಕೊಂಡಿದ್ದಾರೆ.

ಅದು 1989ರಲ್ಲಿ ನಡೆದ ಘಟನೆ. ಚಿರಂಜೀವಿ ನಟನೆಯ ‘ರುದ್ರವೇಣಿ’ ಸಿನಿಮಾಗೆ ‘ನರ್ಗೀಸ್ ದತ್​ ಅವಾರ್ಡ್’​ ಸಿಕ್ಕಿತ್ತು. ಈ ಅವಾರ್ಡ್ ಪಡೆಯಲು ಅವರು ದೆಹಲಿಗೆ ತೆರಳಿದ್ದರು. ಈ ಕಾರ್ಯಕ್ರಮದ ಹಿಂದಿನ ದಿನ ಒಂದು ಟೀ ಪಾರ್ಟಿ ಏರ್ಪಡಿಸಲಾಗಿತ್ತು. ಇದರಲ್ಲಿ ಚಿರಂಜೀವಿ ಭಾಗಿ ಆಗಿದ್ದರು.

ಪಾರ್ಟಿ ಏರ್ಪಡಿಸಿದ್ದ ಸ್ಥಳದಲ್ಲಿ ಪೃಥ್ವಿರಾಜ್​ ಕಪೂರ್ ಅವರಿಂದ ಹಿಡಿದು ಅಮಿತಾಭ್​ ಬಚ್ಚನ್​ವರೆಗೆ ಎಲ್ಲಾ ಬಾಲಿವುಡ್ ಸ್ಟಾರ್ ನಟರ​ ಫೋಟೋಗಳಿದ್ದವು. ಅವರು ಮಾಡಿದ ಸಾಧನೆ ಏನು ಎಂಬುದನ್ನು ಬರೆಯಲಾಗಿತ್ತು. ಆದರೆ, ದಕ್ಷಿಣ ಭಾರತದ ಖ್ಯಾತ ನಟರ ಫೋಟೋಗಳು ಅಲ್ಲಿ ಇರಲಿಲ್ಲ.

‘ದಕ್ಷಿಣ ಭಾರತದ ಸಿನಿಮಾಗಳ ಬಗ್ಗೆ ಏನನ್ನಾದರೂ ಬರೆದಿರುತ್ತಾರೋ ಎಂಬುದನ್ನು ನೋಡಿದೆ. ಆದರೆ, ಅಲ್ಲಿ ಜಯಲಲಿತಾ-ಎಂಜಿಆರ್ ಒಟ್ಟಾಗಿ ಇರುವ ಒಂದು ಸ್ಟಿಲ್ ಹಾಗೂ ಪ್ರೇಮ್ ನಜೀರ್ ಫೋಟೋವನ್ನು ಹಾಕಿ, ಇದಕ್ಕೆ ಅವರು ಅದನ್ನು ದಕ್ಷಿಣ ಭಾರತದ ಸಿನಿಮಾ ಎಂದು ಕರೆದಿದ್ದರು. ದಿಗ್ಗಜರಾದ ರಾಜ್​ಕುಮಾರ್, ವಿಷ್ಣುವರ್ಧನ್, ಎನ್.ಟಿ. ರಾಮರಾವ್, ನಾಗೇಶ್ವರರಾವ್, ಶಿವಾಜಿ ಗಣೇಶನ್ ಅಥವಾ ನಮ್ಮ ಇಂಡಸ್ಟ್ರಿಯ ಖ್ಯಾತ ಚಿತ್ರ ನಿರ್ದೇಶಕರನ್ನು ಅವರು ಗುರುತಿಸಲಿಲ್ಲ. ಆ ಕ್ಷಣ ನನಗೆ ತುಂಬಾ ಅವಮಾನವಾಯಿತು. ಅವರು ಹಿಂದಿ ಚಿತ್ರರಂಗವನ್ನು ಭಾರತೀಯ ಸಿನಿಮಾ ಎಂದು ಬಿಂಬಿಸಿದರು. ಇತರ ಚಿತ್ರಗಳನ್ನು ಪ್ರಾದೇಶಿಕ ಸಿನಿಮಾಗಳು ಎಂದು ವರ್ಗೀಕರಿಸಿದರು ಮತ್ತು ಗೌರವವನ್ನು ನೀಡಲಿಲ್ಲ’ ಎಂದು ಬೇಸರ ವ್ಯಕ್ತಪಡಿಸಿದ್ದಾರೆ ಚಿರಂಜೀವಿ.

‘ಆರ್​ಆರ್​ಆರ್ ಚಿತ್ರದಿಂದ ನಮ್ಮ ನಿರ್ದೇಶಕರು, ನಟರು ಹಾಗೂ ಇಲ್ಲಿನ ಬರಹಗಾರರನ್ನು ಅವರು ಗುರುತಿಸುವಂತಾಯಿತು. ಯಶ್ ನಟನೆಯ ಕೆಜಿಎಫ್ 2 ಹಾಗೂ ಅಲ್ಲು ಅರ್ಜುನ್ ಅಭಿನಯದ ಪುಷ್ಪ ಚಿತ್ರ ಮಾಡಿದ ಸಾಧನೆ ಕೂಡ ದೊಡ್ಡದು. ಈ ಮೂರು ಚಿತ್ರಗಳ ಯಶಸ್ಸಿನಿಂದ ನಮ್ಮ ಹೀರೋಗಳು ಪ್ಯಾನ್ ಇಂಡಿಯಾ ಸ್ಟಾರ್ ಆಗಿದ್ದಾರೆ’ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ‘ಆಚಾರ್ಯ’ ಚಿತ್ರದಲ್ಲಿ ಕಾಜಲ್‌ ಪಾತ್ರ ಏಕಿಲ್ಲ? ಕಾರಣ ಬಹಿರಂಗಪಡಿಸಿದ ನಿರ್ದೇಶಕ

‘ಆರ್​ಆರ್​ಆರ್​’ ನಿರ್ದೇಶಕ ರಾಜಮೌಳಿ ಮನೆಗೆ ಬಂತು ಹೊಸ ಕಾರು; ಇದರ ಬೆಲೆ ಎಷ್ಟು?

Published On - 1:55 pm, Thu, 28 April 22

ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ