AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ರಾಜ್​ಕುಮಾರ್, ವಿಷ್ಣುವರ್ಧನ್ ಅವರಂತಹ ದಿಗ್ಗಜರನ್ನು ಬಾಲಿವುಡ್​ ಗುರುತಿಸಲಿಲ್ಲ’; ತೆಲುಗು ನಟ ಚಿರಂಜೀವಿ ಬೇಸರ

ಪಾರ್ಟಿ ಏರ್ಪಡಿಸಿದ್ದ ಸ್ಥಳದಲ್ಲಿ ಪೃಥ್ವಿರಾಜ್​ ಕಪೂರ್ ಅವರಿಂದ ಹಿಡಿದು ಅಮಿತಾಭ್​ ಬಚ್ಚನ್​ವರೆಗೆ ಎಲ್ಲಾ ಬಾಲಿವುಡ್ ಸ್ಟಾರ್ ನಟರ​ ಫೋಟೋಗಳಿದ್ದವು. ಅವರು ಮಾಡಿದ ಸಾಧನೆ ಏನು ಎಂಬುದನ್ನು ಬರೆಯಲಾಗಿತ್ತು. ಆದರೆ, ದಕ್ಷಿಣ ಭಾರತದ ಖ್ಯಾತ ನಟರ ಫೋಟೋಗಳು ಅಲ್ಲಿ ಇರಲಿಲ್ಲ.  

‘ರಾಜ್​ಕುಮಾರ್, ವಿಷ್ಣುವರ್ಧನ್ ಅವರಂತಹ ದಿಗ್ಗಜರನ್ನು ಬಾಲಿವುಡ್​ ಗುರುತಿಸಲಿಲ್ಲ’; ತೆಲುಗು ನಟ ಚಿರಂಜೀವಿ ಬೇಸರ
ರಾಜ್​ಕುಮಾರ್-ಚಿರಂಜೀವಿ-ವಿಷ್ಣುವರ್ಧನ್
TV9 Web
| Edited By: |

Updated on:Apr 28, 2022 | 1:55 PM

Share

ಬಾಲಿವುಡ್​ನಲ್ಲಿ (Bollywood) ಈಗ ದಕ್ಷಿಣ ಭಾರತದ ಸಿನಿಮಾಗಳು ಪಾರುಪತ್ಯ ಸಾಧಿಸಿವೆ. ಆದರೆ, ಮೊದಲು ಈ ರೀತಿ ಇರಲಿಲ್ಲ. ಬಾಲಿವುಡ್ ಎಂದರೆ ಭಾರತೀಯ ಚಿತ್ರರಂಗ, ಭಾರತೀಯ ಚಿತ್ರರಂಗ ಎಂದರೆ ಬಾಲಿವುಡ್ ಎಂದು ಬಿಂಬಿಸಲಾಗಿತ್ತು. ದಕ್ಷಿಣ ಭಾರತದ ಸಿನಿಮಾಗಳಿಗೆ ಪ್ರಾದೇಶಿಕ ಸಿನಿಮಾಗಳು ಎನ್ನುವ ಹಣೆಪಟ್ಟಿ ಕಟ್ಟಲಾಗಿತ್ತು. ಇದರಿಂದ ಸ್ಟಾರ್ ನಟ ಚಿರಂಜೀವಿಗೆ (Chiranjeevi) ಅವಮಾನ ಆಗಿತ್ತು. ದಕ್ಷಿಣದವರನ್ನು ಈ ರೀತಿ ಕಡೆಗಣಿಸಿದ್ದಕ್ಕೆ ತುಂಬಾನೇ ಬೇಸರ ಆಗಿತ್ತು. ಈ ಬಗ್ಗೆ ಅವರು ಮಾತನಾಡಿದ್ದಾರೆ. ಒಂದು ಘಟನೆಯನ್ನು ಅವರು ನೆನಪಿಸಿಕೊಂಡಿದ್ದಾರೆ.

ಅದು 1989ರಲ್ಲಿ ನಡೆದ ಘಟನೆ. ಚಿರಂಜೀವಿ ನಟನೆಯ ‘ರುದ್ರವೇಣಿ’ ಸಿನಿಮಾಗೆ ‘ನರ್ಗೀಸ್ ದತ್​ ಅವಾರ್ಡ್’​ ಸಿಕ್ಕಿತ್ತು. ಈ ಅವಾರ್ಡ್ ಪಡೆಯಲು ಅವರು ದೆಹಲಿಗೆ ತೆರಳಿದ್ದರು. ಈ ಕಾರ್ಯಕ್ರಮದ ಹಿಂದಿನ ದಿನ ಒಂದು ಟೀ ಪಾರ್ಟಿ ಏರ್ಪಡಿಸಲಾಗಿತ್ತು. ಇದರಲ್ಲಿ ಚಿರಂಜೀವಿ ಭಾಗಿ ಆಗಿದ್ದರು.

ಪಾರ್ಟಿ ಏರ್ಪಡಿಸಿದ್ದ ಸ್ಥಳದಲ್ಲಿ ಪೃಥ್ವಿರಾಜ್​ ಕಪೂರ್ ಅವರಿಂದ ಹಿಡಿದು ಅಮಿತಾಭ್​ ಬಚ್ಚನ್​ವರೆಗೆ ಎಲ್ಲಾ ಬಾಲಿವುಡ್ ಸ್ಟಾರ್ ನಟರ​ ಫೋಟೋಗಳಿದ್ದವು. ಅವರು ಮಾಡಿದ ಸಾಧನೆ ಏನು ಎಂಬುದನ್ನು ಬರೆಯಲಾಗಿತ್ತು. ಆದರೆ, ದಕ್ಷಿಣ ಭಾರತದ ಖ್ಯಾತ ನಟರ ಫೋಟೋಗಳು ಅಲ್ಲಿ ಇರಲಿಲ್ಲ.

‘ದಕ್ಷಿಣ ಭಾರತದ ಸಿನಿಮಾಗಳ ಬಗ್ಗೆ ಏನನ್ನಾದರೂ ಬರೆದಿರುತ್ತಾರೋ ಎಂಬುದನ್ನು ನೋಡಿದೆ. ಆದರೆ, ಅಲ್ಲಿ ಜಯಲಲಿತಾ-ಎಂಜಿಆರ್ ಒಟ್ಟಾಗಿ ಇರುವ ಒಂದು ಸ್ಟಿಲ್ ಹಾಗೂ ಪ್ರೇಮ್ ನಜೀರ್ ಫೋಟೋವನ್ನು ಹಾಕಿ, ಇದಕ್ಕೆ ಅವರು ಅದನ್ನು ದಕ್ಷಿಣ ಭಾರತದ ಸಿನಿಮಾ ಎಂದು ಕರೆದಿದ್ದರು. ದಿಗ್ಗಜರಾದ ರಾಜ್​ಕುಮಾರ್, ವಿಷ್ಣುವರ್ಧನ್, ಎನ್.ಟಿ. ರಾಮರಾವ್, ನಾಗೇಶ್ವರರಾವ್, ಶಿವಾಜಿ ಗಣೇಶನ್ ಅಥವಾ ನಮ್ಮ ಇಂಡಸ್ಟ್ರಿಯ ಖ್ಯಾತ ಚಿತ್ರ ನಿರ್ದೇಶಕರನ್ನು ಅವರು ಗುರುತಿಸಲಿಲ್ಲ. ಆ ಕ್ಷಣ ನನಗೆ ತುಂಬಾ ಅವಮಾನವಾಯಿತು. ಅವರು ಹಿಂದಿ ಚಿತ್ರರಂಗವನ್ನು ಭಾರತೀಯ ಸಿನಿಮಾ ಎಂದು ಬಿಂಬಿಸಿದರು. ಇತರ ಚಿತ್ರಗಳನ್ನು ಪ್ರಾದೇಶಿಕ ಸಿನಿಮಾಗಳು ಎಂದು ವರ್ಗೀಕರಿಸಿದರು ಮತ್ತು ಗೌರವವನ್ನು ನೀಡಲಿಲ್ಲ’ ಎಂದು ಬೇಸರ ವ್ಯಕ್ತಪಡಿಸಿದ್ದಾರೆ ಚಿರಂಜೀವಿ.

‘ಆರ್​ಆರ್​ಆರ್ ಚಿತ್ರದಿಂದ ನಮ್ಮ ನಿರ್ದೇಶಕರು, ನಟರು ಹಾಗೂ ಇಲ್ಲಿನ ಬರಹಗಾರರನ್ನು ಅವರು ಗುರುತಿಸುವಂತಾಯಿತು. ಯಶ್ ನಟನೆಯ ಕೆಜಿಎಫ್ 2 ಹಾಗೂ ಅಲ್ಲು ಅರ್ಜುನ್ ಅಭಿನಯದ ಪುಷ್ಪ ಚಿತ್ರ ಮಾಡಿದ ಸಾಧನೆ ಕೂಡ ದೊಡ್ಡದು. ಈ ಮೂರು ಚಿತ್ರಗಳ ಯಶಸ್ಸಿನಿಂದ ನಮ್ಮ ಹೀರೋಗಳು ಪ್ಯಾನ್ ಇಂಡಿಯಾ ಸ್ಟಾರ್ ಆಗಿದ್ದಾರೆ’ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ‘ಆಚಾರ್ಯ’ ಚಿತ್ರದಲ್ಲಿ ಕಾಜಲ್‌ ಪಾತ್ರ ಏಕಿಲ್ಲ? ಕಾರಣ ಬಹಿರಂಗಪಡಿಸಿದ ನಿರ್ದೇಶಕ

‘ಆರ್​ಆರ್​ಆರ್​’ ನಿರ್ದೇಶಕ ರಾಜಮೌಳಿ ಮನೆಗೆ ಬಂತು ಹೊಸ ಕಾರು; ಇದರ ಬೆಲೆ ಎಷ್ಟು?

Published On - 1:55 pm, Thu, 28 April 22

Follow Us
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ