Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿರಂಜೀವಿ ಭೇಟಿ ಮಾಡಿಸೋ ನೆಪದಲ್ಲಿ ಹಣ ಪೀಕಿದ ಖದೀಮರು; ಎಚ್ಚರಿಕೆ ಕೊಟ್ಟ ಮೆಗಾಸ್ಟಾರ್

Megastar Chiranjeevi: ಮೆಗಾಸ್ಟಾರ್ ಚಿರಂಜೀವಿಗೆ ಕೋಟ್ಯಂತರ ಮಂದಿ ಅಭಿಮಾನಿಗಳಿದ್ದಾರೆ. ಚಿರಂಜೀವಿ ಸಹ ತಮ್ಮ ಅಭಿಮಾನಿಗಳನ್ನು ಆಗಾಗ್ಗೆ ಭೇಟಿ ಆಗುತ್ತಿರುತ್ತಾರೆ. ಆದರೆ ಇತ್ತೀಚೆಗೆ ಕೆಲವು ಮೋಸಗಾರರು ಚಿರಂಜೀವಿ ಹೆಸರು ಹೇಳಿಕೊಂಡು ಅವರ ಅಭಿಮಾನಿಗಳಿಗೆ ಮೋಸ ಮಾಡಲು ಮುಂದಾಗಿದ್ದಾರೆ. ಅಂಥಹವರ ಬಗ್ಗೆ ಎಚ್ಚರಿಕೆಯಿಂದ ಇರುವಂತೆ ಚಿರಂಜೀವಿ ಸಂದೇಶ ನೀಡಿದ್ದಾರೆ.

ಚಿರಂಜೀವಿ ಭೇಟಿ ಮಾಡಿಸೋ ನೆಪದಲ್ಲಿ ಹಣ ಪೀಕಿದ ಖದೀಮರು; ಎಚ್ಚರಿಕೆ ಕೊಟ್ಟ ಮೆಗಾಸ್ಟಾರ್
Chiranjeevi
Follow us
 ಶ್ರೀಲಕ್ಷ್ಮೀ ಎಚ್
| Updated By: ಮಂಜುನಾಥ ಸಿ.

Updated on: Mar 21, 2025 | 11:04 PM

ದೊಡ್ಡ ದೊಡ್ಡ ಸೆಲೆಬ್ರಿಟಿಗಳ ಹೆಸರಲ್ಲಿ ಮೋಸಗಳು ನಿರಂತರವಾಗಿ ನಡೆಯುತ್ತಲೇ ಇರುತ್ತವೆ. ಇದನ್ನು ನಿಯಂತ್ರಿಸಲು ಅನೇಕರು ಪ್ರಯತ್ನಿಸಿದರೂ ಅದು ಸಾಧ್ಯವಾಗುತ್ತಿಲ್ಲ. ಈಗ ಚಿರಂಜೀವಿ ಅವರ ಹೆಸರಲ್ಲಿ ಈ ರೀತಿಯ ಮೋಸ ಒಂದು ನಡೆದಿದೆ. ಈ ವಿಚಾರ ನಟನ ಗಮನಕ್ಕೂ ಬಂದಿದೆ. ಈ ಬಗ್ಗೆ ಟ್ವೀಟ್ ಮಾಡುವ ಮೂಲಕ ಅವರು ಎಚ್ಚರಿಕೆ ನೀಡಿದ್ದಾರೆ. ಈ ರೀತಿ ಮೋಸ ಹೋಗದಂತೆ ಅವರು ಅಭಿಮಾನಿಗಳ ಬಳಿ ಕೋರಿಕೊಂಡಿದ್ದಾರೆ.

ಚಿರಂಜೀವಿ ಅವರು ಸದ್ಯ ಇಂಗ್ಲೆಂಡ್​ನಲ್ಲಿದ್ದಾರೆ. ಲಂಡನ್​ನಲ್ಲಿರು ಪಾರ್ಲಿಮೆಂಟ್​ನಲ್ಲಿ ಅವರಿಗೆ ‘ಜೀವಮಾನ ಸಾಧನೆ ಪ್ರಶಸ್ತಿ’ ಸಿಕ್ಕಿದೆ. ಇದನ್ನು ಸ್ವೀಕರಿಸಿದ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಚಿತ್ರರಂಗ ಹಾಗೂ ಸಾಮಾಜಿಕ ಕೆಲಸಕ್ಕೆ ಅವರು ನೀಡಿದ ಕೊಡುಗೆಯನ್ನು ಆಧರಿಸಿ ಈ ಅವಾರ್ಡ್ ನೀಡಲಾಗಿದೆ.

‘ನನ್ನ ಅಭಿಮಾನಿಗಳೇ, ಇಂಗ್ಲೆಂಡ್​ನಲ್ಲಿ ನನ್ನ ಭೇಟಿಗೆ ನೀವು ತೋರುತ್ತಿರುವ ಪ್ರೀತಿ ಹಾಗೂ ವಾತ್ಸಲ್ಯ ನನಗೆ ಖುಷಿ ಕೊಟ್ಟಿದೆ. ಕೆಲವು ವ್ಯಕ್ತಿಗಳು ಅಭಿಮಾನಿಗಳ ಸಭೆಗಳಿಗೆ ಶುಲ್ಕ ವಿಧಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ನನಗೆ ತಿಳಿದು ಬಂದಿದೆ. ಈ ನಡವಳಿಕೆಯನ್ನು ನಾನು ಬಲವಾಗಿ ಖಂಡಿಸುತ್ತೇನೆ’ ಎಂದಿದ್ದಾರೆ ಅವರು.

ಇದನ್ನೂ ಓದಿ:ಚಿರಂಜೀವಿ, ಪವನ್ ಕಲ್ಯಾಣ್ ಸಹೋದರ ನಾಗಬಾಬು ಆಸ್ತಿ ಎಷ್ಟು?

‘ಯಾರಾದರೂ ಹಣ ಪಾವತಿಸಿದ್ದರೆ ತಕ್ಷಣವೇ ಮರುಪಾವತಿಸಲಾಗುತ್ತದೆ. ದಯವಿಟ್ಟು ಜಾಗರೂಕರಾಗಿರಿ ಮತ್ತು ನಾನು ಈ ರೀತಿಯ ವಿಚಾರಗಳನ್ನು ಎಂದಿಗೂ ಬೆಂಬಲಿಸುವುದಿಲ್ಲ. ನಾವು ಹಂಚಿಕೊಳ್ಳುವ ಪ್ರೀತಿ ಮತ್ತು ವಾತ್ಸಲ್ಯದ ಬಂಧವು ಅಮೂಲ್ಯವಾದುದು. ಇದನ್ನು ಯಾರೂ ಬಿಸ್ನೆಸ್ ಮಾಡಬಾರದು. ನಮ್ಮ ಮಾತುಕತೆ ಶೋಷಣೆಯಿಂದ ಮುಕ್ತವಾಗಿರಿಸಿಕೊಳ್ಳೋಣ’ ಎಂದು ಚಿರಂಜೀವಿ ಟ್ವೀಟ್ ಮಾಡಿದ್ದಾರೆ.

ಭಾರತದ ಚಿತ್ರರಂಗದಲ್ಲಿ ಇಂಗ್ಲೆಂಡ್​ಗೆ ಹೋಗಿ ಅಲ್ಲಿನ ಪಾರ್ಲಿಮೆಂಟ್​ನಲ್ಲಿ ‘ಜೀವಮಾನ ಸಾಧನೆ ಅವಾರ್ಡ್​’ ಪಡೆದ ಮೊದಲ ವ್ಯಕ್ತಿ ಎಂಬ ಹೆಗ್ಗಳಿಕೆಗೆ ಚಿರಂಜೀವಿ ಅವರು ಪಾತ್ರರಾಗಿದ್ದಾರೆ. ಅವರಿಗೆ ಸೋಶಿಯಲ್ ಮೀಡಿಯಾದಲ್ಲಿ ಅಭಿನಂದನೆಗಳ ಸುರಿಮಳೆ ಹರಿದು ಬಂದಿದೆ.

ಚಿರಂಜೀವಿ ಅವರು ಸದ್ಯ ‘ವಿಶ್ವಂಭರ’ ಸಿನಿಮಾ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಸಿನಿಮಾ ಶೂಟ್ ಪೂರ್ಣಗೊಂಡಿದ್ದು, ಶೀಘ್ರವೇ ಸಿನಿಮಾ ರಿಲೀಸ್ ಆಗುವ ನಿರೀಕ್ಷೆ ಇದೆ. ಮಲ್ಲಿಡಿ ವಸಿಷ್ಠ ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ನಡೆಯಯತ್ತಿವೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Video: ಗಾಳಿ ಮಳೆಗೆ ಧರೆಗುರಳಿದ ಹುಸ್ಕೂರು ಮದ್ದೂರಮ್ಮ ಜಾತ್ರೆ ತೇರು
Video: ಗಾಳಿ ಮಳೆಗೆ ಧರೆಗುರಳಿದ ಹುಸ್ಕೂರು ಮದ್ದೂರಮ್ಮ ಜಾತ್ರೆ ತೇರು
ಬಂದಷ್ಟೇ ವೇಗವಾಗಿ ಪೆವಿಲಿಯನ್ ಸೇರಿಕೊಂಡ ರಸೆಲ್; ವಿಡಿಯೋ
ಬಂದಷ್ಟೇ ವೇಗವಾಗಿ ಪೆವಿಲಿಯನ್ ಸೇರಿಕೊಂಡ ರಸೆಲ್; ವಿಡಿಯೋ
ಐಪಿಎಲ್ 2025 ರ ಮೊದಲ ಅರ್ಧಶತಕ ಬಾರಿಸಿದ ರಹಾನೆ
ಐಪಿಎಲ್ 2025 ರ ಮೊದಲ ಅರ್ಧಶತಕ ಬಾರಿಸಿದ ರಹಾನೆ
ಜಮ್ಮು ಕಾಶ್ಮೀರದ ಪೂಂಚ್‌ನಲ್ಲಿ ನಡೆದ ಬಸ್ ಅಪಘಾತದಲ್ಲಿ 14 ಜನರಿಗೆ ಗಾಯ
ಜಮ್ಮು ಕಾಶ್ಮೀರದ ಪೂಂಚ್‌ನಲ್ಲಿ ನಡೆದ ಬಸ್ ಅಪಘಾತದಲ್ಲಿ 14 ಜನರಿಗೆ ಗಾಯ
ದೆಹಲಿಯ ಶಾಹೀನ್ ಬಾಗ್ ಮಾರುಕಟ್ಟೆಯ ಚಪ್ಪಲಿ ಶೋ ರೂಂನಲ್ಲಿ ಬೆಂಕಿ ದುರಂತ
ದೆಹಲಿಯ ಶಾಹೀನ್ ಬಾಗ್ ಮಾರುಕಟ್ಟೆಯ ಚಪ್ಪಲಿ ಶೋ ರೂಂನಲ್ಲಿ ಬೆಂಕಿ ದುರಂತ
ಸಿಎಂ ದೂರು ಸಲ್ಲಿಸಲು ಹೇಳಿದರೆ ಸಲ್ಲಿಸುತ್ತೇನೆ, ಬೇಡವೆಂದರೆ ಇಲ್ಲ:ರಾಜೇಂದ್ರ
ಸಿಎಂ ದೂರು ಸಲ್ಲಿಸಲು ಹೇಳಿದರೆ ಸಲ್ಲಿಸುತ್ತೇನೆ, ಬೇಡವೆಂದರೆ ಇಲ್ಲ:ರಾಜೇಂದ್ರ
ರವಿಶಂಕರ್ ಗುರೂಜಿ ಜೊತೆ ಟಿವಿ9 ನೆಟ್‌ವರ್ಕ್‌ ಎಂಡಿ ಬರುಣ್ ದಾಸ್ ಸಂವಾದ
ರವಿಶಂಕರ್ ಗುರೂಜಿ ಜೊತೆ ಟಿವಿ9 ನೆಟ್‌ವರ್ಕ್‌ ಎಂಡಿ ಬರುಣ್ ದಾಸ್ ಸಂವಾದ
ಮಳೆಗಾಲ ಶುರುವಾಗುವ ಮೊದಲು ರಸ್ತೆಗುಂಡಿಗಳು ಮುಚ್ಚಿದರೆ ಸಾಕಿದೆ!
ಮಳೆಗಾಲ ಶುರುವಾಗುವ ಮೊದಲು ರಸ್ತೆಗುಂಡಿಗಳು ಮುಚ್ಚಿದರೆ ಸಾಕಿದೆ!
ಧರ್ಮಾಧಾರಿತ ಮೀಸಲಾತಿ ಕಾನೂನು ಮತ್ತು ಸಂವಿಧಾನಬಾಹಿರ: ವಿಜಯೇಂದ್ರ
ಧರ್ಮಾಧಾರಿತ ಮೀಸಲಾತಿ ಕಾನೂನು ಮತ್ತು ಸಂವಿಧಾನಬಾಹಿರ: ವಿಜಯೇಂದ್ರ
ಹನಿ ಟ್ರ್ಯಾಪಿಂಗ್ ಸಂಬಂಧಿಸಿದಂತೆ ಹೆಚ್​ಎಂ ಹೇಳಿಕೆ ನೀಡಿದ್ದಾರೆ: ಖಾದರ್
ಹನಿ ಟ್ರ್ಯಾಪಿಂಗ್ ಸಂಬಂಧಿಸಿದಂತೆ ಹೆಚ್​ಎಂ ಹೇಳಿಕೆ ನೀಡಿದ್ದಾರೆ: ಖಾದರ್