AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದು ಲಕ್ಷ ರೂಪಾಯಿ ಸಹಾಯ ನಿರೀಕ್ಷೆಯಲ್ಲಿದ್ದವನಿಗೆ 1 ಕೋಟಿ ಕೊಟ್ಟ ಚಿರಂಜೀವಿ

ಚಿರಂಜೀವಿ ಅವರ ವಿಶಾಲ ಮನಸ್ಸಿನ ಬಗ್ಗೆ ತಮಿಳು ಸ್ಟಂಟ್ ಮಾಸ್ಟರ್ ಪೂನ್ನಂಬಲಂ ಅವರು ಮಾತನಾಡಿದ್ದಾರೆ. ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಅವರಿಗೆ ಚಿರಂಜೀವಿ 1 ಕೋಟಿ ರೂಪಾಯಿಗಳ ಸಹಾಯ ಮಾಡಿದ್ದಾರೆ. ಇದು ಪೂನ್ನಂಬಲಂ ಅವರ ಜೀವನದಲ್ಲಿ ಒಂದು ದೊಡ್ಡ ಬದಲಾವಣೆ ತಂದಿದೆ. ಚಿರಂಜೀವಿ ಅವರು ಚಲನಚಿತ್ರೋದ್ಯಮದವರಿಗೆ ಮತ್ತು ಸಾಮಾನ್ಯ ಜನರಿಗೆ ಸಹಾಯ ಮಾಡುವುದರಲ್ಲಿ ಯಾವಾಗಲೂ ಮುಂಚೂಣಿಯಲ್ಲಿದ್ದಾರೆ.

ಒಂದು ಲಕ್ಷ ರೂಪಾಯಿ ಸಹಾಯ ನಿರೀಕ್ಷೆಯಲ್ಲಿದ್ದವನಿಗೆ 1 ಕೋಟಿ ಕೊಟ್ಟ ಚಿರಂಜೀವಿ
ಚಿರಂಜೀವಿ
 ಶ್ರೀಲಕ್ಷ್ಮೀ ಎಚ್
| Edited By: |

Updated on: Aug 15, 2025 | 10:37 AM

Share

ಚಿರಂಜೀವಿ ಅವರು ಯಾವಾಗಲೂ ಸಾಮಾಜಿಕ ಕೆಲಸಗಳ ಮೂಲಕ ಸುದ್ದಿ ಆಗುತ್ತಾ ಇರುತ್ತಾರೆ. ಅವರು ಈ ಮೂಲಕ ಅನೇಕರಿಗೆ ಮಾದರಿ ಆಗಿದ್ದಾರೆ ಎನ್ನಬಹುದು. ಅವರು ಮಾಡುವ ಅನೇಕ ಒಳ್ಳೆಯ ಕೆಲಸಗಳು ಹೊರಗೆ ಬರೋದೆ ಇಲ್ಲ. ಈಗ ತಮಿಳಿನ ಸ್ಟಂಟ್ ಮಾಸ್ಟರ್ ಹಾಗೂ ಕ್ಯಾರೆಕ್ಟರ್ ಆರ್ಟಿಸ್ಟ್ ಪೂನ್ನಂಬಲಂ ಈ ಬಗ್ಗೆ ಹೇಳಿದ್ದಾರೆ. ತಾವು ಕಷ್ಟದಲ್ಲಿ ಇದ್ದಾಗ ಚಿರಂಜೀವಿಯಿಂದ (Chiranjeevi) ಬಂದ ಸಹಾಯವನ್ನು ನೆನಪಿಸಿಕೊಂಡಿದ್ದಾರೆ.

ಪೊನ್ನಂಬಲಂ ಅವರು ಸ್ಟಂಟ್ ಮಾಸ್ಟರ್ ಆಗಿ ಕೆಲಸ ಮಾಡುತ್ತಿದ್ದಾರೆ. ಇದರ ಜೊತೆಗೆ ಸಣ್ಣ ಪುಟ್ಟ ಪಾತ್ರಗಳನ್ನು ಮಾಡಿಕೊಂಡಿದ್ದಾರೆ. ಅವರು ಆರ್ಥಿಕವಾಗಿ ಅಷ್ಟು ಸಬಲರಾಗಿಲ್ಲ. ಅವರ ದಿನ ನಿತ್ಯದ ಕೂಳಿಗೆ ಅವರ ಈ ಕೆಲಸದ ಹಣ ಸಾಕಾಗುತ್ತದೆ. ಆದರೆ, ಅವರಿಗೆ ಕಿಡ್ನಿ ಸಂಬಂಧಿತ ಸಮಸ್ಯೆ ಬಂದಿತು. ಇದರಿಂದ ಅವರಿಗೆ ಸಾಕಷ್ಟು ಸಮಸ್ಯೆ ಕೂಡ ಉಂಟಾಯಿತು. ಆಗ, ಚಿರಂಜೀವಿ ಅವರು ಸಹಾಯ ಮಾಡಿದ್ದರು. ಅದೂ ಅಂತಿಂಥ ಸಹಾಯವಲ್ಲ ಎಂಬುದು ಇಲ್ಲಿ ಗಮನಿಸಬೇಕಾದ ವಿಚಾರ.

ಸಮಸ್ಯೆ ಉಂಟಾದಾಗ ಪೊನ್ನಂಬಲಂ ಅವರು ಹೋಗಿ ಚಿರಂಜೀವಿ ಮನೆಯ ಬಾಗಿಲು ತಟ್ಟಿದರು. ಅವರು ಚಿರಂಜೀವಿ ಅವರಿಂದ 1 ಲಕ್ಷ ರೂಪಾಯಿ ಸಹಾಯ ನಿರೀಕ್ಷೆ ಮಾಡಿದ್ದರು. ಆದರೆ, ಅವರಿಗೆ ಸಿಕ್ಕಿದ್ದು 1 ಲಕ್ಷವಲ್ಲ ಬದಲಿಗೆ ಒಂದು ಕೋಟಿ ರೂಪಾಯಿ. ಈಗ ಅವರು ಸಂಪೂರ್ಣವಾಗಿ ರಿಕವರಿ ಆಗಿದ್ದಾರೆ. ಇದಕ್ಕೆ ಕಾರಣ ಚಿರಂಜೀವಿ ಎಂದು ಅವರು ಹೆಮ್ಮೆಯಿಂದ ಹೇಳುತ್ತಾರೆ.

ಇದನ್ನೂ ಓದಿ
Image
ಒಬ್ಬರದ್ದು ಕಣ್ಣೀರು, ಇನ್ನೊಬ್ಬರದ್ದು ಹರಟೆ; ಒಂದೇ ಬ್ಯಾರಕ್​ನಲ್ಲಿ ಗ್ಯಾಂಗ
Image
ಫ್ಲಾಪ್ ಆದರೂ ಭಾರೀ ಗಳಿಕೆ ಮಾಡಿದ ‘ವಾರ್ 2’; ಕೈ ಕೊಟ್ಟ ಹಿಂದಿ ಮಂದಿ
Image
ರಜನಿ ಅಬ್ಬರಕ್ಕೆ ಬಾಕ್ಸ್ ಆಫೀಸ್ ಉಡೀಸ್; ‘ಕೂಲಿ’ ಮೊದಲ ದಿನದ ಗಳಿಕೆ ಎಷ್ಟು?
Image
ಗೌತಮ್ ಕೈಯಲ್ಲಿ ತಾಯಿಯ ಹಿಸ್ಟರಿ; ದುರ್ಗಾಗೆ ಬಂತು ಅಕ್ಕನ ನೆನಪು

ಸಂದರ್ಶನ ಒಂದರಲ್ಲಿ ಚಿರಂಜೀವಿಗೆ ಅವರು ಧನ್ಯವಾದ ಹೇಳಿದ್ದಾರೆ. ತಾವು ಇಷ್ಟು ಆರೋಗ್ಯವಾಗಿ ಇರಲು ಕಾರಣ ಚಿರಂಜೀವಿ ಎಂದು ಮೆಚ್ಚುಗೆ ಮಾತನಾಡಿದ್ದಾರೆ. ‘ನನಗೆ ಅನಾರೋಗ್ಯ ಆದಾಗ ಚಿರಂಜೀವಿಗೆ ಕರೆ ಮಾಡಿ ಸಹಾಯ ಕೇಳಿದೆ. 1 ಲಕ್ಷ ಸಿಕ್ಕರೆ ದೊಡ್ಡದು ಎಂದುಕೊಂಡಿದ್ದೆ. ಆದರೆ, 1 ಕೋಟಿ ರೂಪಾಯಿಗೂ ಹೆಚ್ಚಿನ ಹಣ ಕೊಟ್ಟರು’ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಚಿರಂಜೀವಿ ಸಿನಿಮಾ ಕಂಟೆಂಟ್ ಲೀಕ್: ಖಡಕ್ ಎಚ್ಚರಿಕೆ ಕೊಟ್ಟ ನಿರ್ಮಾಣ ಸಂಸ್ಥೆ

ಚಿರಂಜೀವಿ ಅವರು ಬೇರೆಯವರ ಸಹಾಯಕ್ಕೆ ಸದಾ ಸಿದ್ಧ. ಅದರಲ್ಲೂ ಇಂಡಸ್ಟ್ರಿಯವರು ಸಹಾಯ ಕೇಳಿದರೆ ಅವರು ಮಾಡಿಯೇ ಮಾಡುತ್ತಾರೆ. ಕೊವಿಡ್ ಸಮಯದಲ್ಲಿ ಸಾಕಷ್ಟು ಜನರಿಗೆ ಸಹಾಯ ಮಾಡಿದ್ದರು. ಅವರು ಬ್ಲಡ್ ಬ್ಯಾಂಕ್ ಕೂಡ ಹೊಂದಿದ್ದಾರೆ. ಚಿರಂಜೀವಿ ಅವರು ‘ವಿಶ್ವಂಭರ’ ಹಾಗೂ ಅನಿಲ್ ರವಿಪುಡಿ ಜೊತೆಗೆ ಒಂದು ಸಿನಿಮಾ ಮಾಡುತ್ತಾ ಇದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಶ್ರೀನಂದಾ ಸಾವು ಕಾಲು ಜಾರಿ ಬಿದ್ದಿದ್ದಾ ಅಥವಾ ಕೊಲೆಯೇ?
ಶ್ರೀನಂದಾ ಸಾವು ಕಾಲು ಜಾರಿ ಬಿದ್ದಿದ್ದಾ ಅಥವಾ ಕೊಲೆಯೇ?
ರಾಜ್ಯಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ ಬಿಹಾರ ಸಿಎಂ ನಿತೀಶ್ ಕುಮಾರ್
ರಾಜ್ಯಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ ಬಿಹಾರ ಸಿಎಂ ನಿತೀಶ್ ಕುಮಾರ್
ಪಡಿಕ್ಕಲ್, ಕೊಹ್ಲಿ ಬಾಲ್ಯದಲ್ಲಿ ಹೇಗಿದ್ರು ನೋಡಿ
ಪಡಿಕ್ಕಲ್, ಕೊಹ್ಲಿ ಬಾಲ್ಯದಲ್ಲಿ ಹೇಗಿದ್ರು ನೋಡಿ
ತೆಂಗಿನಕಾಯಿ ಬೆಳೆಗಾರರಿಗೆ ಜಾಕ್​​ಪಾಟ್​​: ದಾಖಲೆ ಬರೆದ ಕೊಬ್ಬರಿ ಬೆಲೆ
ತೆಂಗಿನಕಾಯಿ ಬೆಳೆಗಾರರಿಗೆ ಜಾಕ್​​ಪಾಟ್​​: ದಾಖಲೆ ಬರೆದ ಕೊಬ್ಬರಿ ಬೆಲೆ
'ಝೋಂಬಿ ಡ್ರಗ್ಸ್​ ಎನ್ನುವುದು ಏನೂ ಇಲ್ಲ': ಗೃಹ ಸಚಿವ ಪರಮೇಶ್ವರ್
'ಝೋಂಬಿ ಡ್ರಗ್ಸ್​ ಎನ್ನುವುದು ಏನೂ ಇಲ್ಲ': ಗೃಹ ಸಚಿವ ಪರಮೇಶ್ವರ್
ನಾಪತ್ತೆಯಾದ ಬಾಲಕಿಯ ಕಿಡ್ನ್ಯಾಪ್ ಶಂಕೆ ವ್ಯಕ್ತಪಡಿಸಿದ ಜಿ. ಪರಮೇಶ್ವರ್!
ನಾಪತ್ತೆಯಾದ ಬಾಲಕಿಯ ಕಿಡ್ನ್ಯಾಪ್ ಶಂಕೆ ವ್ಯಕ್ತಪಡಿಸಿದ ಜಿ. ಪರಮೇಶ್ವರ್!
ದೇವರಿಗೆ ಕೈ ಮುಗಿದು, ಕುಂಕುಮ ಹಚ್ಚಿಕೊಂಡು ಹುಂಡಿ ಹಣ ಕದ್ದ ಕಳ್ಳ!
ದೇವರಿಗೆ ಕೈ ಮುಗಿದು, ಕುಂಕುಮ ಹಚ್ಚಿಕೊಂಡು ಹುಂಡಿ ಹಣ ಕದ್ದ ಕಳ್ಳ!
ಎಲೆಕ್ಟ್ರಾನಿಕ್ ಸಿಟಿಯ ನೀಲಾದ್ರಿ ರಸ್ತೆಯಲ್ಲಿ ಸಂಚರಿಸುವುದು ನರಕಯಾತನೆ
ಎಲೆಕ್ಟ್ರಾನಿಕ್ ಸಿಟಿಯ ನೀಲಾದ್ರಿ ರಸ್ತೆಯಲ್ಲಿ ಸಂಚರಿಸುವುದು ನರಕಯಾತನೆ
ಚಿಕ್ಕಮಗಳೂರಲ್ಲಿ ಬಾಲಕಿ ನಾಪತ್ತೆ ಕೇಸ್​: 3 ದಿನ ಕಳೆದರೂ ಸಿಕ್ಕಿಲ್ಲ ಸುಳಿವು
ಚಿಕ್ಕಮಗಳೂರಲ್ಲಿ ಬಾಲಕಿ ನಾಪತ್ತೆ ಕೇಸ್​: 3 ದಿನ ಕಳೆದರೂ ಸಿಕ್ಕಿಲ್ಲ ಸುಳಿವು
ಫಾಸ್ಟ್‌ಟ್ಯಾಗಲ್ಲಿ ಹಣವಿಲ್ಲದ್ದಕ್ಕೆ ಹಿಗ್ಗಾಮುಗ್ಗಾ ಥಳಿತ! ವಿಡಿಯೋ ವೈರಲ್
ಫಾಸ್ಟ್‌ಟ್ಯಾಗಲ್ಲಿ ಹಣವಿಲ್ಲದ್ದಕ್ಕೆ ಹಿಗ್ಗಾಮುಗ್ಗಾ ಥಳಿತ! ವಿಡಿಯೋ ವೈರಲ್