AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿರಂಜೀವಿ ಸಿನಿಮಾ ನೋಡುವಾಗಲೇ ಥಿಯೇಟರ್​​​ನಲ್ಲಿ ಕುಸಿದು ಬಿದ್ದು ಅಭಿಮಾನಿ ಸಾವು

ಕಳೆದ ವರ್ಷ ಸಂಕ್ರಾಂತಿ ಸಂಭ್ರಮದಲ್ಲಿ 'ಮನ ಶಂಕರ ವರ ಪ್ರಸಾದ್ ಗಾರು' ಸಿನಿಮಾ ರಿಲೀಸ್ ಆಗಿ ಬ್ಲಾಕ್‌ಬಸ್ಟರ್ ಆಗಿದೆ. ಚಿರಂಜೀವಿ ಹಲವು ವರ್ಷಗಳ ಬಳಿಕ ಗೆಲುವು ಕಂಡಿದ್ದು, ಅಭಿಮಾನಿಗಳು ಸಂಭ್ರಮದಲ್ಲಿದ್ದಾರೆ. ಆದರೆ, ಹೈದರಾಬಾದ್ ಥಿಯೇಟರ್‌ನಲ್ಲಿ ಸಿನಿಮಾ ನೋಡುತ್ತಿದ್ದ ಅಭಿಮಾನಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವುದು ದುಃಖಕರ ಸಂಗತಿ.

ಚಿರಂಜೀವಿ ಸಿನಿಮಾ ನೋಡುವಾಗಲೇ ಥಿಯೇಟರ್​​​ನಲ್ಲಿ ಕುಸಿದು ಬಿದ್ದು ಅಭಿಮಾನಿ ಸಾವು
ಚಿರಂಜೀವಿ
 ಶ್ರೀಲಕ್ಷ್ಮೀ ಎಚ್
| Edited By: |

Updated on: Jan 13, 2026 | 8:12 AM

Share

‘ಮನ ಶಂಕರ ವರ ಪ್ರಸಾದ್ ಗಾರು’ ಸಿನಿಮಾ ಇತ್ತೀಚೆಗೆ ರಿಲೀಸ್ ಆಗಿ ಬ್ಲಾಕ್​​ಬಸ್ಟರ್ ಆಗಿದೆ. ಈ ಸಿನಿಮಾ ಒಳ್ಳೆಯ ಟಾಕ್ ಪಡೆದುಕೊಂಡಿದೆ. ಅಭಿಮಾನಿಗಳು ವಿಂಟೇಜ್ ಬಾಸ್ ಮತ್ತೆ ಬಂದಿದ್ದಾರೆ ಎಂದು ಸಂಭ್ರಮಿಸುತ್ತಿದ್ದಾರೆ. ಚಿರಂಜೀವಿ ಅವರ ಸಿನಿಮಾ ಹಲವು ವರ್ಷಗಳ ಬಳಿಕೆ ಗೆದ್ದಿದೆ. ಈ ಮಧ್ಯೆ ಚಿರಂಜೀವಿ ವಲಯದಲ್ಲಿ ದುಃಖಕರ ಸುದ್ದಿ ಒಂದು ಸಿಕ್ಕಿದೆ. ಈ ಸಿನಿಮಾ ನೋಡಿದ ಅಭಿಮಾನಿ ಥಿಯೇಟರ್​​ನಲ್ಲಿ ಸಾವನಪ್ಪಿದ್ದಾರೆ.

ಸೋಲು ಕಾಣದ ಅನಿಲ್ ರವಿಪುಡಿ ಆ ಟ್ರ್ಯಾಕ್ ಅನ್ನು ಮುಂದುವರಿಸುತ್ತಿದ್ದಾರೆ ಮತ್ತು ಒಟ್ಟಾರೆಯಾಗಿ ಅವರು ಮನ ಶಂಕರ ವರ ಪ್ರಸಾದ್ ಗಾರು ಸಿನಿಮಾವನ್ನು ಉತ್ತಮವಾಗಿ ಮಾಡಿದ್ದಾರೆ ಎನ್ನಲಾಗುತ್ತಿದೆ. ಅಭಿಮಾನಿಗಳು ಥಿಯೇಟರ್‌ಗಳಲ್ಲಿ ಸಂತೋಷದಿಂದ ಕುಣಿತುತ್ತಿದ್ದಾರೆ. ಅಂತಹ ಸಮಯದಲ್ಲಿ, ಒಂದು ದುರಂತ ಸಂಭವಿಸಿದೆ.

ಚಿರಂಜೀವಿ ನಟಿಸಿದ ‘ಮನ ಶಂಕರ ವರ ಪ್ರಸಾದ್ ಗಾರು’ ಸಿನಿಮಾ ನೋಡುತ್ತಿದ್ದಾಗ ಹೈದರಾಬಾದ್‌ನ ಥಿಯೇಟರ್‌ನಲ್ಲಿ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಸೋಮವಾರ (ಜನವರಿ 12) ಕುಕಟ್ಪಲ್ಲಿ ಭಾಗದ ಅರ್ಜುನ್ ಥಿಯೇಟರ್‌ನಲ್ಲಿ ಈ ಘಟನೆ ನಡೆದಿದೆ. ಆ ವ್ಯಕ್ತಿ ಸಿನಿಮಾ ಪ್ರದರ್ಶನದ ಸಮಯದಲ್ಲಿ ಇದ್ದಕ್ಕಿದ್ದಂತೆ ಕುಸಿದು ಬಿದ್ದರು.

ಅಲ್ಲಿದ್ದವರು ಅವರನ್ನು ಬದುಕಿಸುವ ಪ್ರಯತ್ನಗಳನ್ನು ಮಾಡಿದರು. ಅವರು ಎದ್ದೇಳಲೇ ಇಲ್ಲ. ಥಿಯೇಟರ್ ಸಿಬ್ಬಂದಿ ಅವರಿಗೆ ಮಾಹಿತಿ ನೀಡಿದ ನಂತರ ಪೊಲೀಸರು ಸ್ಥಳಕ್ಕೆ ತಲುಪಿದರು. ಅವರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಶಂಕಿಸಿದ್ದಾರೆ. ಹೆಚ್ಚಿನ ತನಿಖೆ ನಡೆಯುತ್ತಿದೆ. ಮರಣೋತ್ತರ ಪರೀಕ್ಷೆ ವರದಿಯ ನಂತರ ಸಾವಿಗೆ ನಿಖರವಾದ ಕಾರಣ ತಿಳಿಯುವ ಸಾಧ್ಯತೆಯಿದೆ.

ಕಳೆದ ವರ್ಷ ಸಂಕ್ರಾಂತಿ ಸಂಭ್ರಮದಲ್ಲಿ ‘ಸಂಕ್ರಾಂತಿಕಿ ವಸ್ತುನ್ನಾಮ್’ ಸಿನಿಮಾ ಬಂದು ಹಿಟ್ ಆಯಿತು. ಈ ಬಾರಿಯೂ ಅನಿಲ್ ನಿರ್ದೇಶನದ ಮತ್ತೊಂದು ಸಿನಿಮಾ ಬಂದು ಸೂಪರ್ ಹಿಟ್ ಆಯಿತು. ಈ ಮಧ್ಯೆ ಈ ರೀತಿಯ ದುಖಃಕರ ಸುದ್ದಿ ಸಿಕ್ಕಿದೆ.

ಇದನ್ನೂ ಓದಿ: ಮಾರ್ಕ್, ಡೆವಿಲ್ ರೀತಿಯೇ ಬುಕ್ ಮೈ ಶೋ ರೇಟಿಂಗ್ ನಿಷೇಧಿಸಿದ ಚಿರಂಜೀವಿ ಸಿನಿಮಾ

ಚಿರಂಜೀವಿ ಅವರು ಸತತ ಸೋಲಿನಿಂದ ಕಂಗೆಟ್ಟಿದ್ದರು. ಅವರಿಗೆ ಈಗ ಗೆಲುವು ಸಿಕ್ಕಿದೆ. ‘ಮನ ಶಂಕರ ವರ ಪ್ರಸಾದ್ ಗಾರು’ ಚಿತ್ರದಲ್ಲಿ ವಿಕ್ಟರಿ ವೆಂಕಟೇಶ್ ಕೂಡ ಮುಖ್ಯಭೂಮಿಕೆಯಲ್ಲಿ ಇದ್ದಾರೆ ಅನ್ನೋದು ವಿಶೇಷ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ
ಶೌಚಾಲಯದಲ್ಲೇ ಅಡುಗೆ, ಊಟ! ಕೋಲಾರ ಬಸ್ ನಿಲ್ದಾಣದಲ್ಲಿ ಅನಾಗರಿಕ ಕೃತ್ಯ
ಶೌಚಾಲಯದಲ್ಲೇ ಅಡುಗೆ, ಊಟ! ಕೋಲಾರ ಬಸ್ ನಿಲ್ದಾಣದಲ್ಲಿ ಅನಾಗರಿಕ ಕೃತ್ಯ
ರಾಯರ ಆರಾಧನಾ ‌ಮಹೋತ್ಸವದಲ್ಲಿ ಕಿಕ್ಕಿರಿದು ಸೇರಿದ ಭಕ್ತ ಸಮೂಹ!
ರಾಯರ ಆರಾಧನಾ ‌ಮಹೋತ್ಸವದಲ್ಲಿ ಕಿಕ್ಕಿರಿದು ಸೇರಿದ ಭಕ್ತ ಸಮೂಹ!
ಕೈದಿಗಳಿಗೆ ರಾಜಾತಿಥ್ಯ: ಮಂಡ್ಯ ಜೈಲು ಅಧೀಕ್ಷಕಿ ಶಾಂತಮ್ಮ ಬಳ್ಳಾರಿಗೆ ವರ್ಗ
ಕೈದಿಗಳಿಗೆ ರಾಜಾತಿಥ್ಯ: ಮಂಡ್ಯ ಜೈಲು ಅಧೀಕ್ಷಕಿ ಶಾಂತಮ್ಮ ಬಳ್ಳಾರಿಗೆ ವರ್ಗ
ಕಾರವಾರ: ಅರಬ್ಬೀ ಸಮುದ್ರದಲ್ಲಿ ಮೀನುಗಾರಿಕಾ ಬೋಟ್ ಮುಳುಗಡೆ
ಕಾರವಾರ: ಅರಬ್ಬೀ ಸಮುದ್ರದಲ್ಲಿ ಮೀನುಗಾರಿಕಾ ಬೋಟ್ ಮುಳುಗಡೆ