ಮಹೇಶ್​ ಬಾಬು-ರಾಜಮೌಳಿ ಸಿನಿಮಾದಲ್ಲಿ ಚಿಯಾನ್​ ವಿಕ್ರಮ್? ಸುಳಿವು ಕೊಟ್ಟ ನಟ

ದೊಡ್ಡ ಮಟ್ಟದಲ್ಲಿ ‘SSMB 29’ ಸಿನಿಮಾ ಮೂಡಿಬರಲಿದೆ. ರಾಜಮೌಳಿ ಮತ್ತು ಮಹೇಶ್ ಬಾಬು ಅವರ ಕಾಂಬಿನೇಷನ್​ನ ಈ ಚಿತ್ರದಲ್ಲಿ ಚಿಯಾನ್​ ವಿಕ್ರಮ್​ ಕೂಡ ಇರುತ್ತಾರಾ ಎಂಬ ಅನುಮಾನ ಹುಟ್ಟಿದೆ. ಅದಕ್ಕೆ ಕಾರಣ ಆಗಿರುವುದು ವಿಕ್ರಮ್ ಅವರ ಒಂದು ಹೇಳಿಕೆ. ‘ತಂಗಲಾನ್​’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಅವರು ಹೊಸ ಸುಳಿವು ನೀಡಿದ್ದಾರೆ.

ಮಹೇಶ್​ ಬಾಬು-ರಾಜಮೌಳಿ ಸಿನಿಮಾದಲ್ಲಿ ಚಿಯಾನ್​ ವಿಕ್ರಮ್? ಸುಳಿವು ಕೊಟ್ಟ ನಟ
ಚಿಯಾನ್​ ವಿಕ್ರಮ್, ರಾಜಮೌಳಿ, ಮಹೇಶ್​ ಬಾಬು
Follow us
|

Updated on: Aug 05, 2024 | 7:10 PM

ನಿರ್ದೇಶಕ ಎಸ್​ಎಸ್​ ರಾಜಮೌಳಿ ಅವರು ‘ಆರ್​ಆರ್​ಆರ್​’ ಸಿನಿಮಾದ ನಂತರ ಮಹೇಶ್​ ಬಾಬು ಜೊತೆ ಕೈ ಜೋಡಿಸಿರುವುದು ಗೊತ್ತೇ ಇದೆ. ಈ ಸಿನಿಮಾ ಬಗ್ಗೆ ಇರುವ ನಿರೀಕ್ಷೆ ಬಹಳ ದೊಡ್ಡದು. ಇನ್ನೂ ಶೂಟಿಂಗ್ ಆರಂಭವಾಗಿಲ್ಲ, ಅಷ್ಟರಲ್ಲಾಗಲೇ ಅನೇಕ ಬಗೆಯ ಎಗ್ಸೈಟಿಂಗ್​ ಸುದ್ದಿಗಳು ಕೇಳಿಬರುತ್ತಿವೆ. ಮಹೇಶ್​ ಬಾಬು ಅವರ ಲುಕ್ ಬಗ್ಗೆ ಜನರು ಮಾತನಾಡಲು ಆರಂಭಿಸಿದ್ದಾರೆ. ಈಗ ಈ ಚಿತ್ರತಂಡದ ಜೊತೆ ಚಿಯಾನ್​ ವಿಕ್ರಮ್ ಅವರ ಹೆಸರು ಕೂಡ ಸೇರಿಕೊಂಡಿದೆ. ಅದಕ್ಕೆ ಕಾರಣ ಆಗಿರುವುದು ಸ್ವತಃ ವಿಕ್ರಮ್​ ಅವರ ಒಂದು ಹೇಳಿಕೆ.

ಚಿಯಾನ್​ ವಿಕ್ರಮ್​ ಅವರು ‘ತಂಗಲಾನ್​’ ಸಿನಿಮಾದಲ್ಲಿ ನಟಿಸಿದ್ದಾರೆ. ಕೋಲಾರ ಚಿನ್ನದ ಗಣಿಯ ಕಹಾನಿ ಹೊಂದಿರುವ ಈ ಸಿನಿಮಾ ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಬಿಡುಗಡೆ ಆಗಲಿದೆ. ಅದರ ಪ್ರಚಾರದ ಸಲುವಾಗಿ ಚಿತ್ರತಂಡದವರು ಇತ್ತೀಚೆಗೆ ಹೈದರಾಬಾದ್​ನಲ್ಲಿ ಸುದ್ದಿಗೋಷ್ಠಿ ನಡೆಸಿದರು. ಈ ವೇಳೆ ಕೇಳಿಬಂದ ಪ್ರಶ್ನೆಗೆ ಉತ್ತರಿಸುವಾಗ ವಿಕ್ರಮ್​ ಅವರು ಒಂದು ಸುಳಿವು ಬಿಟ್ಟುಕೊಟ್ಟಿದ್ದಾರೆ.

‘ಒಂದು ಮಹತ್ವದ ಪ್ರಾಜೆಕ್ಟ್​ ಸಲುವಾಗಿ ನಾವು ಮಾತುಕಥೆ ಮಾಡುತ್ತಿದ್ದೇವೆ. ನಾವಿಬ್ಬರು ಒಂದು ಸಿನಿಮಾದಲ್ಲಿ ಜೊತೆಯಾಗಿ ಕೆಲಸ ಮಾಡುತ್ತೇವೆ. ಅದು ಯಾವ ಸಿನಿಮಾ ಎಂಬುದನ್ನು ನಾನು ವಿಚಾರಿಸಿಲ್ಲ’ ಎಂದು ಚಿಯಾನ್​ ವಿಕ್ರಮ್​ ಅವರು ಹೇಳಿದ್ದಾರೆ. ಅವರು ಮಾತನಾಡಿರುವುದು ‘SSMB 29’ ಸಿನಿಮಾದ ಬಗ್ಗೆಯೇ ಎಂದು ಅಭಿಮಾನಿಗಳು ಊಹಿಸಿದ್ದಾರೆ. ಆ ಮೂಲಕ ಕೌತುಕ ಹೆಚ್ಚಾಗಿದೆ.

ಇದನ್ನೂ ಓದಿ: ಯಶ್​ ರೀತಿ ‘ಗೋಲ್ಡ್​’ ಮೇಲೆ ಕಣ್ಣಿಟ್ಟ ರಾಜಮೌಳಿ-ಮಹೇಶ್​ ಬಾಬು? ಶೀರ್ಷಿಕೆ ಬಗ್ಗೆ ಸುಳಿವು

ರಾಜಮೌಳಿ ಅವರ ಸಿನಿಮಾದಲ್ಲಿ ಹಲವು ಪಾತ್ರಗಳು ಇರುತ್ತವೆ. ಪ್ಯಾನ್​ ಇಂಡಿಯಾ ಸಿನಿಮಾ ಆದ್ದರಿಂದ ಅನೇಕ ಭಾಷೆಯ ಸ್ಟಾರ್​ ಕಲಾವಿದರನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಆ ಕಾರಣದಿಂದಲೇ ‘SSMB 29’ ಸಿನಿಮಾದಲ್ಲಿ ಚಿಯಾನ್​ ವಿಕ್ರಮ್​ ಅವರು ಒಂದು ಮುಖ್ಯ ಪಾತ್ರವನ್ನು ಮಾಡಲಿದ್ದಾರೆ ಎಂದು ಹೇಳಲಾಗುತ್ತಿದೆ. ಆ ಕುರಿತು ಚಿತ್ರತಂಡದವರು ಅಧಿಕೃತವಾಗಿ ಮಾಹಿತಿ ಹಂಚಿಕೊಳ್ಳಲಿ ಎಂದು ಫ್ಯಾನ್ಸ್​ ಕಾಯುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಗದಗ: ಲಂಚದ ಆರೋಪ, ಅಧಿಕಾರಿಗೆ ಸಚಿವ ಎಚ್​ಕೆ ಪಾಟೀಲ್​ ಹಿಗ್ಗಾಮುಗ್ಗಾ ತರಾಟೆ
ಗದಗ: ಲಂಚದ ಆರೋಪ, ಅಧಿಕಾರಿಗೆ ಸಚಿವ ಎಚ್​ಕೆ ಪಾಟೀಲ್​ ಹಿಗ್ಗಾಮುಗ್ಗಾ ತರಾಟೆ
ಪ್ರವಾಹ ಸ್ಥಳದಲ್ಲಿ ಟಿಎಂಸಿ ಶಾಸಕರು, ಸಂಸದರಿದ್ದ ದೋಣಿ ಪಲ್ಟಿ
ಪ್ರವಾಹ ಸ್ಥಳದಲ್ಲಿ ಟಿಎಂಸಿ ಶಾಸಕರು, ಸಂಸದರಿದ್ದ ದೋಣಿ ಪಲ್ಟಿ
ಒಬ್ಬರೇ ಇದ್ದೀರಾ? ಭಯ ಅನಿಸುತ್ತಿದೆಯಾ? ಈ ವೇಳೆ ಜಪಿಸಬೇಕಾದ ನಾಮಗಳು ಇಲ್ಲಿವೆ
ಒಬ್ಬರೇ ಇದ್ದೀರಾ? ಭಯ ಅನಿಸುತ್ತಿದೆಯಾ? ಈ ವೇಳೆ ಜಪಿಸಬೇಕಾದ ನಾಮಗಳು ಇಲ್ಲಿವೆ
ಈ ರಾಶಿಯವರು ಗೊತ್ತಾಗದೇ ಕೆಟ್ಟವರ ಸಹವಾಸವನ್ನು ಮಾಡುವಿರಿ
ಈ ರಾಶಿಯವರು ಗೊತ್ತಾಗದೇ ಕೆಟ್ಟವರ ಸಹವಾಸವನ್ನು ಮಾಡುವಿರಿ
ಚಲಿಸುವಾಗಲೇ ನೀರಿನಲ್ಲಿ ತೇಲಿದ ಕಾರು; ಪ್ರಾಣದ ಹಂಗು ತೊರೆದು ಜನರ ರಕ್ಷಣೆ
ಚಲಿಸುವಾಗಲೇ ನೀರಿನಲ್ಲಿ ತೇಲಿದ ಕಾರು; ಪ್ರಾಣದ ಹಂಗು ತೊರೆದು ಜನರ ರಕ್ಷಣೆ
ಹೃದಯ ವಿದ್ರಾವಕ ಘಟನೆ: ಬೈಕ್‌ನಲ್ಲೇ ತಂದೆಯ ಶವ ಸಾಗಿಸಿದ ಮಕ್ಕಳು
ಹೃದಯ ವಿದ್ರಾವಕ ಘಟನೆ: ಬೈಕ್‌ನಲ್ಲೇ ತಂದೆಯ ಶವ ಸಾಗಿಸಿದ ಮಕ್ಕಳು
ಭಾರತದ ಷೇರುಪೇಟೆ ಇನ್ನೆಷ್ಟು ಬೇಗ ಡಬಲ್ ಆಗುತ್ತೆ?
ಭಾರತದ ಷೇರುಪೇಟೆ ಇನ್ನೆಷ್ಟು ಬೇಗ ಡಬಲ್ ಆಗುತ್ತೆ?
ಸುದ್ದಿಗೋಷ್ಠಿಗೂ ಮುನ್ನ ಸಿಎಂ- ಸಚಿವರುಗಳು ಪಿಸು ಪಿಸು ಮಾತು
ಸುದ್ದಿಗೋಷ್ಠಿಗೂ ಮುನ್ನ ಸಿಎಂ- ಸಚಿವರುಗಳು ಪಿಸು ಪಿಸು ಮಾತು
ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ
ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ
ಡ್ರೋನ್​​ನಲ್ಲಿ ಗಣಪತಿಯನ್ನು ವಿಸರ್ಜನೆ ಮಾಡಿದ ಯುವಕರು! ವಿಡಿಯೋ ನೋಡಿ
ಡ್ರೋನ್​​ನಲ್ಲಿ ಗಣಪತಿಯನ್ನು ವಿಸರ್ಜನೆ ಮಾಡಿದ ಯುವಕರು! ವಿಡಿಯೋ ನೋಡಿ