AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chiyan Vikram: ರಜನಿಕಾಂತ್​ಗೆ ವಿಲನ್ ಆದ ಚಿಯಾನ್ ವಿಕ್ರಮ್; ಸಿಗ್ತಿದೆ ಭರ್ಜರಿ ಸಂಭಾವನೆ

ವಿಕ್ರಮ್ ಅವರಿಗೆ ಮತ್ತೊಂದು ಸಿನಿಮಾ ಆಫರ್ ಸಿಕ್ಕಿದೆ. ಅದು ರಜನಿಕಾಂತ್ ಸಿನಿಮಾದಲ್ಲಿ ಅನ್ನೋದು ವಿಶೇಷ. ರಜನಿ ವಿರುದ್ಧ ವಿಕ್ರಮ್ ತೊಡೆತಟ್ಟಲಿದ್ದಾರೆ ಎಂಬುದು ವಿಶೇಷ.

Chiyan Vikram: ರಜನಿಕಾಂತ್​ಗೆ ವಿಲನ್ ಆದ ಚಿಯಾನ್ ವಿಕ್ರಮ್; ಸಿಗ್ತಿದೆ ಭರ್ಜರಿ ಸಂಭಾವನೆ
ರಜನಿ-ಚಿಯಾನ್ ವಿಕ್ರಮ್
TV9 Web
| Edited By: |

Updated on: May 19, 2023 | 6:30 AM

Share

ರಜನಿಕಾಂತ್ ಎದುರು ಖಡಕ್ ವಿಲನ್ ತರಬೇಕು ಎಂದು ನಿರ್ಮಾಪಕರು ಹಾಗೂ ನಿರ್ದೇಶಕರು ಪ್ರಯತ್ನಿಸುತ್ತಾರೆ. ವಿಲನ್ ರಗಡ್ ಆಗಿದ್ದರೆ ಹೀರೋ ತೂಕ ಹೆಚ್ಚುತ್ತದೆ. ಈಗ ರಜನಿಕಾಂತ್ (Rajinikanth) ನಟನೆಯ 170ನೇ ಸಿನಿಮಾಗೆ ವಿಲನ್ ಹೆಸರು ಫೈನಲ್ ಆಗಿದೆ. ಮೂಲಗಳ ಪ್ರಕಾರ ಚಿಯಾನ್ ವಿಕ್ರಮ್ (Chiyan Vikram) ಅವರು ಈ ಚಿತ್ರದಲ್ಲಿ ವಿಲನ್ ಪಾತ್ರ ನಿರ್ವಹಿಸಲಿದ್ದಾರೆ ಎನ್ನಲಾಗುತ್ತಿದೆ. ಇದಕ್ಕಾಗಿ ಅವರು ಪಡೆಯುತ್ತಿರುವ ಸಂಭಾವನೆ ಬರೋಬ್ಬರಿ 50 ಕೋಟಿ ರೂಪಾಯಿ ಅನ್ನೋದು ವಿಶೇಷ. ಈ ವಿಚಾರ ಫ್ಯಾನ್ಸ್​ಗೆ ಅಚ್ಚರಿ ಮೂಡಿಸಿದೆ.

ಚಿಯಾನ್ ವಿಕ್ರಮ್ ಅವರು ಕಾಲಿವುಡ್​ನ ಬೇಡಿಕೆಯ ಹೀರೋ. ಕೇವಲ ಒಂದೇ ರೀತಿಯ ಪಾತ್ರಕ್ಕೆ ಅವರು ಕಟ್ಟುಬಿದ್ದಿಲ್ಲ. ವೃತ್ತಿ ಜೀವನದಲ್ಲಿ ಹಲವು ಡಿಫರೆಂಟ್ ರೋಲ್​ಗಳನ್ನು ಮಾಡಿ ಭೇಷ್ ಎನಿಸಿಕೊಂಡಿದ್ದಾರೆ. ಈಗ ಅವರಿಗೆ ಮತ್ತೊಂದು ಸಿನಿಮಾ ಆಫರ್ ಸಿಕ್ಕಿದೆ. ಅದು ರಜನಿಕಾಂತ್ ಸಿನಿಮಾದಲ್ಲಿ ಅನ್ನೋದು ವಿಶೇಷ. ರಜನಿ ವಿರುದ್ಧ ವಿಕ್ರಮ್ ತೊಡೆತಟ್ಟಲಿದ್ದಾರೆ ಎಂಬುದು ವಿಶೇಷ.

‘ತಲೈವರ್ 170’ನೇ ಚಿತ್ರಕ್ಕೆ ಟಿಜಿ ಜ್ಞಾನವೇಲ್ ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರಕ್ಕೆ ಲೈಕಾ ಪ್ರೊಡಕ್ಷನ್ ಬಂಡವಾಳ ಹೂಡುತ್ತಿದೆ. ತಮಿಳುನಾಡಿನಲ್ಲಿ ಹಲವು ಬಿಗ್ ಬಜೆಟ್ ಚಿತ್ರಗಳನ್ನು ನಿರ್ಮಿಸಿದ ಖ್ಯಾತಿ ಲೈಕಾಗೆ ಇದೆ. ಅವರು ವಿಲನ್ ರೋಲ್​ಗೆ ವಿಕ್ರಮ್ ಅವರನ್ನು ಅಪ್ರೋಚ್ ಮಾಡಿದ್ದಾರೆ. ಒಂದೇ ಹಂತದಲ್ಲಿ 50 ಕೋಟಿ ರೂಪಾಯಿ ಪೇಮೆಂಟ್ ಕೊಡಲು ಲೈಕಾ ಒಪ್ಪಿದೆ.

ಇದನ್ನೂ ಓದಿ: ರಜನಿಕಾಂತ್, ವಿಷ್ಣುವರ್ಧನ್ ಒಟ್ಟಾಗಿ ನಟಿಸಿದ್ದ ಸಿನಿಮಾದ ಅಪರೂಪದ ದೃಶ್ಯ ವೈರಲ್

ಯಾವುದೇ ಪಾತ್ರ ಸಿಕ್ಕರೂ ಅದನ್ನು ಯಶಸ್ವಿಯಾಗಿ ನಿರ್ವಹಿಸುವ ಕಲೆ ವಿಕ್ರಮ್​ಗೆ ಒಲಿದಿದೆ. ಇತ್ತೀಚೆಗೆ ರಿಲೀಸ್ ಆಗಿ ಯಶಸ್ಸು ಕಂಡ ‘ಪೊನ್ನಿಯಿನ್ ಸೆಲ್ವನ್​’, ‘ಪೊನ್ನಿಯಿನ್ ಸೆಲ್ವನ್ 2’ ಚಿತ್ರಗಳಲ್ಲಿ ಅವರಿಗೆ ಒಳ್ಳೆಯ ಪಾತ್ರ ಸಿಕ್ಕಿತ್ತು. ಈಗ ಅವರು ವಿಲನ್ ರೋಲ್ ಮಾಡಲು ಒಪ್ಪಿದ್ದಾರೆ. ‘ಪಿಎಸ್’ ಸರಣಿಯ ಸಿನಿಮಾಗಳನ್ನು ನಿರ್ಮಿಸಿದ್ದು ಲೈಕಾ. ಹೀಗಾಗಿ ಈ ಹೀರೋ ಜೊತೆ ಅವರಿಗೆ ಒಳ್ಳೆಯ ಬಾಂಧವ್ಯ ಇದೆ.

ಇತ್ತೀಚೆಗೆ ಲೈಕಾ ಸಂಸ್ಥೆಯ ಮೇಲೆ ಐಟಿ ದಾಳಿ ನಡೆದಿತ್ತು. ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಈ ಕಂಪನಿ ಭಾಗಿಯಾಗಿದೆ ಎನ್ನುವ ಆರೋಪ ಇರುವುದರಿಂದ ಈ ದಾಳಿ ನಡೆದಿತ್ತು. ಆದರೆ, ಈ ದಾಳಿಗಳು ಸಿನಿಮಾ ಕೆಲಸದ ಮೇಲೆ ಯಾವುದೇ ಪ್ರಭಾವ ಬೀರಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್