AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘RRR’, ‘ಬಾಹುಬಲಿ’ ಕ್ಯಾಮೆರಾಮ್ಯಾನ್ ಸೆಂಥಿಲ್ ಕುಮಾರ್ ಪತ್ನಿ ನಿಧನ

Senthil Kumar: ‘ಬಾಹುಬಲಿ’, ‘ಆರ್​ಆರ್​ಆರ್’, ‘ಈಗ’ ಇನ್ನೂ ಹಲವು ಜನಪ್ರಿಯ ಸಿನಿಮಾಗಳ ಸಿನಿಮಾಟೊಗ್ರಾಫರ್ ಸೆಂಥಿಲ್ ಕುಮಾರ್ ಅವರ ಪತ್ನಿ ನಿಧನ ಹೊಂದಿದ್ದಾರೆ.

‘RRR’, ‘ಬಾಹುಬಲಿ’ ಕ್ಯಾಮೆರಾಮ್ಯಾನ್ ಸೆಂಥಿಲ್ ಕುಮಾರ್ ಪತ್ನಿ ನಿಧನ
ಮಂಜುನಾಥ ಸಿ.
|

Updated on: Feb 15, 2024 | 10:35 PM

Share

ಭಾರತದ ಖ್ಯಾತ ನಿರ್ದೇಶಕ ಎಸ್​ಎಸ್ ರಾಜಮೌಳಿ (Rajamouli) ಅವರ ಅಚ್ಚು-ಮೆಚ್ಚಿನ ಸಿನಿಮಾಟೊಗ್ರಾಫರ್ ಕೆಕೆ ಸೆಂಥಿಲ್ ಕುಮಾರ್ ಅವರ ಪತ್ನಿ ರೂಹಿ ನಿಧನ ಹೊಂದಿದ್ದಾರೆ. ರೂಹಿ ಅವರು ಕಳೆದ ಕೆಲವು ದಿನಗಳಿಂದ ತೀವ್ರ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು, ಅವರನ್ನು ಸಿಖಂದರಾಬಾದ್​ನ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಚಿಕಿತ್ಸೆಗೆ ಸ್ಪಂದಿಸದೆ ಅವರು ಇಂದು (ಫೆಬ್ರವರಿ 15) ಮಧ್ಯಾಹ್ನ ಕೊನೆ ಉಸಿರೆಳೆದಿದ್ದಾರೆ.

ಸೆಂಥಿಲ್ ಕುಮಾರ್ ಹಾಗೂ ರೂಹಿ 2009 ರಲ್ಲಿ ವಿವಾಹವಾಗಿದ್ದರು. ರೂಹಿಗೂ ಸಹ ಚಿತ್ರರಂಗದೊಟ್ಟಿಗೆ ನಂಟಿತ್ತು. ಯೋಗ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದ ರೂಹಿ, ಕೆಲವು ಟಾಲಿವುಡ್ ನಟಿಯರಿಗೂ ಯೋಗ ತರಬೇತಿ ನೀಡುತ್ತಿದ್ದರು. ಟಾಲಿವುಡ್​ನ ಖ್ಯಾತ ನಟಿ ಅನುಷ್ಕಾ ಶೆಟ್ಟಿ ಜೊತೆಗೆ ಹಲವು ವರ್ಷಗಳ ಕಾಲ ರೂಹಿ ಕೆಲಸ ಮಾಡಿದ್ದರು.

ರೂಹಿ ಅವರಿಗೆ 2019ರಲ್ಲಿ ಕೋವಿಡ್ ಆಗಿತ್ತು, ಆಗಿನಿಂದಲೂ ಅವರ ಆರೋಗ್ಯ ಸರಿಯಿರಲಿಲ್ಲ. ಪದೇ ಪದೇ ಅನಾರೋಗ್ಯಕ್ಕೆ ಒಳಗಾಗುತ್ತಲೇ ಇದ್ದರು. ಇತ್ತೀಚೆಗೆ ಮತ್ತೆ ಆರೋಗ್ಯ ಸಮಸ್ಯೆ ಉಲ್ಬಣವಾದಾಗ ಅವರನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿಯೇ ಅವರು ಕೊನೆ ಉಸಿರೆಳೆದಿದ್ದಾರೆ.

ಇದನ್ನೂ ಓದಿ:‘ಸಲಾರ್’ ಕತೆಯ ಬಗ್ಗೆ ರಾಜಮೌಳಿಗೆ ಹಲವು ಅನುಮಾನ, ಪ್ರಶಾಂತ್ ನೀಲ್ ಕ್ಷಮೆ ಕೇಳಿದ್ದೇಕೆ?

ಸೆಂಥಿಲ್ ಕುಮಾರ್, ಭಾರತದ ಅತ್ಯುತ್ತಮ ಸಿನಿಮಾಟೊಗ್ರಫರ್​ಗಳಲ್ಲಿ ಒಬ್ಬರು. ರಾಜಮೌಳಿ ನಿರ್ದೇಶಿಸಿರುವ ಬಹುತೇಕ ಸಿನಿಮಾಗಳಿಗೆ ಕ್ಯಾಮೆರಾ ಕೆಲಸ ಮಾಡಿರುವುದು ಸೆಂಥಿಲ್ ಕುಮಾರ್. 2003 ರಲ್ಲಿ ಬಿಡುಗಡೆ ಆದ ‘ಐತೆ’ ಸಿನಿಮಾ ಮೂಲಕ ಸಿನಿಮಾಟೊಗ್ರಾಫರ್ ಆಗಿ ಚಿತ್ರರಂಗಕ್ಕೆ ಕಾಲಿಟ್ಟ ಸೆಂಥಿಲ್​ರ ಪ್ರತಿಭೆಯನ್ನು ಆರಂಭದಲ್ಲಿಯೇ ಅಳೆದಿದ್ದ ರಾಜಮೌಳಿ 2004ರಲ್ಲಿ ಬಿಡುಗಡೆ ಆದ ತಮ್ಮ ‘ಸೈ’ ಸಿನಿಮಾ ತಂಡಕ್ಕೆ ಸೇರಿಕೊಂಡರು. ‘ಸೈ’ ಸೆಂಥಿಲ್ ಸಿನಿಮಾಟೊಗ್ರಫಿ ಮಾಡಿದ ಮೊದಲ ರಾಜಮೌಳಿ ಸಿನಿಮಾ. ಅದಾದ ಬಳಿಕ ಈವರೆಗಿನ ಎಲ್ಲ ರಾಜಮೌಳಿ ಸಿನಿಮಾಗಳಿಗೂ ಸೆಂಥಿಲ್ ಕ್ಯಾಮೆರಾಮ್ಯಾನ್ ಆಗಿ ಕೆಲಸ ಮಾಡಿದ್ದಾರೆ. ‘ಬಾಹುಬಲಿ 1 ಮತ್ತು 2’, ‘ಆರ್​ಆರ್​ಆರ್’ ಸಿನಿಮಾಕ್ಕೂ ಅವರೇ ಕ್ಯಾಮೆರಾಮ್ಯಾನ್. ಇದೀಗ ರಾಜಮೌಳಿ ನಿರ್ದೇಶಿಸಲಿರುವ ಮುಂದಿನ ಸಿನಿಮಾಕ್ಕೂ ಅವರೇ ಕ್ಯಾಮೆರಾಮ್ಯಾನ್ ಆಗಿರಲಿದ್ದಾರೆ ಎನ್ನಲಾಗುತ್ತಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ