AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ವಿರಾಟಪುರ ವಿರಾಗಿ’ ಚಿತ್ರದ ಧ್ವನಿ ಸುರುಳಿ, ಟ್ರೈಲರ್ ಬಿಡುಗಡೆ ಮಾಡಿದ ಸಿಎಂ ಬೊಮ್ಮಾಯಿ

ಪೂಜ್ಯ ಹಾನಗಲ್ ಶ್ರೀ ಕುಮಾರ ಶಿವಯೋಗಿ ಜೀವನ ಚರಿತ್ರೆ ಆಧಾರಿತ 'ವಿರಾಟಪುರ ವಿರಾಗಿ' ಚಿತ್ರದ ಧ್ವನಿ ಸುರುಳಿ ಮತ್ತು ಟ್ರೈಲರ್​ನ್ನು ಸಿಎಂ ಬೊಮ್ಮಾಯಿ ಬಿಡುಗಡೆ ಮಾಡಿದರು.

'ವಿರಾಟಪುರ ವಿರಾಗಿ' ಚಿತ್ರದ ಧ್ವನಿ ಸುರುಳಿ, ಟ್ರೈಲರ್ ಬಿಡುಗಡೆ ಮಾಡಿದ ಸಿಎಂ ಬೊಮ್ಮಾಯಿ
ವಿರಾಟಪುರ ವಿರಾಗಿ ಚಿತ್ರದ ಪೋಸ್ಟರ್​, ಸಿಎಂ ಬೊಮ್ಮಾಯಿ
TV9 Web
| Edited By: |

Updated on: Dec 20, 2022 | 5:34 PM

Share

ಪೂಜ್ಯ ಹಾನಗಲ್ ಶ್ರೀ ಕುಮಾರ ಶಿವಯೋಗಿ (Hanagal Sri Kumara Shivayogi) ಜೀವನ ಚರಿತ್ರೆ ಆಧಾರಿತ ವಿರಾಟಪುರ ವಿರಾಗಿ’ (Viratapura Viragi) ಚಿತ್ರದ ಧ್ವನಿ ಸುರುಳಿ ಮತ್ತು ಟ್ರೈಲರ್​ನ್ನು ಇಂದು (ಡಿ. 20) ಸಿಎಂ ಬಸವರಾಜ ಬೊಮ್ಮಾಯಿ ಅವರು ಬಿಡುಗಡೆ ಮಾಡಿದರು. ಬಳಿಕ ಮಾತನಾಡಿ ಸಿಎಂ ಬೊಮ್ಮಾಯಿ ಹಾನಗಲ್ ಶ್ರೀ ಕುಮಾರಸ್ವಾಮಿ ಅವರ ಜೀವನಾದರ್ಶಗಳನ್ನು ಸಾರುವ ಚಲನಚಿತ್ರ ಈಗಿನ ಸಮಾಜ ಹಾಗೂ ಯುವಪೀಳಿಗೆಗೆ ಪ್ರೇರಣೆಯಾಗಲಿ ಎಂದು ಹೇಳಿದರು. ಶ್ರೀ ಕುಮಾರ್ ಶಿವಯೋಗಿಗಳು ಮಹಾನ್ ಸಾಧಕರು. ಹಾನಗಲ್ ಕುಮಾರಸ್ವಾಮಿಗಳು 12 ನೇ ಶತಮಾನದ ಸಾಮಾಜಿಕ ಕ್ರಾಂತಿ ತೆರೆಗೆ ಸರಿಯುತ್ತಿರುವ ಸಂದರ್ಭದಲ್ಲಿ ಹಾನಗಲ್ ಕುಮಾರಸ್ವಾಮಿಯವರು ಹೊಸ ರೂಪ ಕೊಟ್ಟರು. ವೀರಶೈವ ಲಿಂಗಾಯತ ಸಮಾಜವನ್ನು ಎತ್ತಿಹಿಡಿದ ಮಹಾನ್ ಯೋಗಿ. ಅವರು ಸ್ಥಾಪನೆ ಮಾಡಿರುವ ಶಿವಯೋಗಿ ಮಂದಿರ ಇಂದಿಗೂ ಕೂಡ ಎಲ್ಲ ಅಧ್ಯಾತ್ಮಿಕ ಚಿಂತನೆಯನ್ನು ಮಾಡುವ ಸಂಸ್ಥೆಯಾಗಿದೆ. ವ್ಯವಸ್ಥಿತವಾದ ಇಂತಹ ಸಂಸ್ಥೆ ಬೇರೆಲ್ಲೂ ಕಾಣಲು ಸಿಗುವುದಿಲ್ಲ. ನಮ್ಮ ಪರಂಪರೆ, ಸಂಸ್ಕೃತಿ, ಸಂಸ್ಕಾರ ಗಳನ್ನು ಶಿವಯೋಗಿ ಮಂದಿರದ ಮೂಲಕ ಕಾಪಾಡಿಕೊಂಡು ಬರಲಾಗಿದೆ. ಇಂತಹ ಸಂಸ್ಥೆಯನ್ನು ಕಟ್ಟಿದ ಹಾನಗಲ್ ಕುಮಾರಸ್ವಾಮಿಯವರಿಗೆ ಅಭಿನಂದನೆಗಳನ್ನು ಸಲ್ಲಿಸಿದರು.

ಇದನ್ನೂ ಓದಿ: ಇನ್ಮುಂದೆ ರಾಜಣ್ಣ- ರೂಪೇಶ್ ಬೆಸ್ಟ್ ಫ್ರೆಂಡ್ಸ್ ಅಲ್ಲ; ಒಂದು ಮಾತಿನಿಂದ ಮುರಿದುಬಿತ್ತು ಫ್ರೆಂಡ್​ಶಿಪ್

ಚಲನಶೀಲ ಸಮಾಜ:

ಶಿವಯೋಗಿ ಮಂದಿರ ಜೀರ್ಣೊದ್ದಾರಕ್ಕೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಹಣ ನೀಡಿ ಜೀರ್ಣೊದ್ದಾರ ಮಾಡಿದ್ದಾರೆ. ವೀರಶೈವ ಲಿಂಗಾಯತ ಸಮಾಜ ಪ್ರಗತಿಪರವಾಗಿದ್ದು, ಈ ಸಮಾಜ ಕಾಲಕ್ಕೆ ತಕ್ಕಂತೆ ಎಲ್ಲವನ್ನು ಒಪ್ಪಿಕೊಳ್ಳುವ ಚಲನಶೀಲ ಸಮಾಜವಾಗಿದೆ. ಈ ಸಮಾಜ ಚಲನಶೀಲವಾಗಿರುವುದರಿಂದ ಈ ಸಮಾಜಕ್ಕೆ ಯಾವುದೇ ಧಕ್ಕೆ ಇಲ್ಲ. ಅವರು ಅಖಿಲ ಭಾರತ ವೀರಶೈವ ಮಹಾಸಭಾ ಸ್ಥಾಪನೆ ಮಾಡಿದ ಪೂಜ್ಯ ಹಾನಗಲ್ ಕುಮಾರಸ್ವಾಮಿಯವರು, ಪ್ರಥಮ ಅಧ್ಯಕ್ಷರಾಗಿದ್ದರು‌ ಅವರು ಶಿಕ್ಷಣ ಸಂಸ್ಥೆಗಳನ್ನು ತೆರೆದು ಗ್ರಾಮೀಣ ಪ್ರದೇಶದಲ್ಲಿ ಶಿಕ್ಷಣಕ್ಕೆ ಅದ್ಯತೆ ನೀಡಿದರು‌.

ಇದನ್ನೂ ಓದಿ: ಮೇಘನಾ ರಾಜ್ ಗೆಳತಿ, ನಟಿ ನಜ್ರಿಯಾ ನಜಿಮ್​​ಗೆ ಬರ್ತ್​ಡೇ ಸಂಭ್ರಮ; ಇಲ್ಲಿದೆ ಕ್ಯೂಟ್ ಫೋಟೋ

ತ್ರಿವಿಧ ದಾಸೋಹದಲ್ಲಿ ತೊಡಗಿರುವ ಮಠ:

ಕರ್ನಾಟಕದಲ್ಲಿ ಶಿಕ್ಷಣ ಉತ್ತಮಗೊಳ್ಳುವಲ್ಲಿ ಮಠಮಾನ್ಯಗಳು ಶಿಕ್ಷಣ ಕ್ಷೇತ್ರಕ್ಕೆ ನೀಡುತ್ತಿರುವ ಕೊಡುಗೆ ಕಾರಣವಾಗಿದೆ. ಶಿಕ್ಷಣ ಸಂಸ್ಥೆಗಳು, ವಿದ್ಯಾರ್ಥಿ ನಿಲಯಗಳನ್ನು ನಿರ್ಮಿಸುವ ಮೂಲಕ ಸರ್ಕಾರ ಮಾಡುವ ಕೆಲಸವನ್ನು ಮಾಡಿದರು. ಬೆಳಗಾವಿಯ ನಿಪ್ಪಾಣಿಹಿಂದ ಕೊಳ್ಳೆಗಾಲದವರೆಗೆ ಬೀದರ್ ನಿಂದ ಕೊಳ್ಳೆಗಾಲದವರೆಗು ಎಲ್ಲ ಗ್ರಾಮಗಳಲ್ಲಿ ವೀರಶೈವ ಲಿಂಗಾಯತ ಮಠಗಳು ಅಧ್ಯಾತ್ಮದ ಜೊತೆಗೆ ತ್ರಿವಿಧ ದಾಸೋಹದಲ್ಲಿ ತೊಡಗಿಕೊಂಡಿವೆ ವಿಜಯ ಸಂಕೇಶ್ವರ್ ಅವರ ಜೀವನ ಚರಿತ್ರೆ ಚಿತ್ರ ಬಿಡುಗಡೆಯಾಗಿದೆ.

ಯಶಸ್ಸು ನಮಗಾಗಿ ಅಲ್ಲ ಸಮಾಜಕ್ಕಾಗಿ ಪ್ರೇರಣೆಯಾಗಬೇಕೆಂದು ವಿಜಯ ಸಂಕೇಶ್ವರರು ತಿಳಿಸಿದ್ದನ್ನು ಸ್ಮರಿಸಿದರು. ಈ ಸಮಾರಂಭದಲ್ಲಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಮಾಜಿ ರಾಜ್ಯಸಭಾ ಸದಸ್ಯ ಪ್ರಭಾಕರ್ ಕೊರೆ, ಮಾಜಿ ಪರಿಷತ್ ಸದಸ್ಯ ಮಹಾಂತೇಶ್ ಕವಟಗಿಮಠ ಹಾಗೂ ಸ್ವಾಮೀಜಿಗಳು ಹಾಜರಿದ್ದರು.

ಮತ್ತಷ್ಟು ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Follow Us
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
SSLC ಬೋರ್ಡ್ ಎಡವಟ್ಟಿಗೆ ಪ್ರತಿಭಾವಂತ ಅಂಧ ವಿದ್ಯಾರ್ಥಿನಿ ಫೇಲ್
SSLC ಬೋರ್ಡ್ ಎಡವಟ್ಟಿಗೆ ಪ್ರತಿಭಾವಂತ ಅಂಧ ವಿದ್ಯಾರ್ಥಿನಿ ಫೇಲ್
SSLC Results 2026: 1 ಅಂಕದಿಂದ ಫಸ್ಟ್ ರ‍್ಯಾಂಕ್ ಮಿಸ್!
SSLC Results 2026: 1 ಅಂಕದಿಂದ ಫಸ್ಟ್ ರ‍್ಯಾಂಕ್ ಮಿಸ್!
ಡೆನ್​ಮಾರ್ಕ್ನಲ್ಲಿ ಎರಡು ರೈಲುಗಳು ಮುಖಾಮುಖಿ ಡಿಕ್ಕಿ, 12 ಮಂದಿಗೆ ಗಾಯ
ಡೆನ್​ಮಾರ್ಕ್ನಲ್ಲಿ ಎರಡು ರೈಲುಗಳು ಮುಖಾಮುಖಿ ಡಿಕ್ಕಿ, 12 ಮಂದಿಗೆ ಗಾಯ
ತೃತೀಯ ಭಾಷೆ ಹಿಂದಿಯಲ್ಲಿ ಅನುತ್ತೀರ್ಣರಾದವರ ಸಂಖ್ಯೆ ಬಾರಿ ಇಳಿಕೆ
ತೃತೀಯ ಭಾಷೆ ಹಿಂದಿಯಲ್ಲಿ ಅನುತ್ತೀರ್ಣರಾದವರ ಸಂಖ್ಯೆ ಬಾರಿ ಇಳಿಕೆ