AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳುನಾಡು ದಳಪತಿ ವಿಜಯ್ ಭೇಟಿಯಾದ ನಟಿ ರಮ್ಯಾ; ಫೋಟೋ ವೈರಲ್

ನಟಿ-ನಿರೂಪಕಿ ರಮ್ಯಾ ಸುಬ್ರಮಣಿಯನ್ ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರನ್ನು ಭೇಟಿಯಾಗಿ, ಅವರ ವಿನಮ್ರ ಸ್ವಭಾವ ಮತ್ತು ಬದಲಾಗದ ವ್ಯಕ್ತಿತ್ವವನ್ನು ಹೊಗಳಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ. ಈ ಪೋಸ್ಟ್ ಇಂಟರ್ನೆಟ್‌ನಲ್ಲಿ ವೈರಲ್ ಆಗಿದೆ. ರಮ್ಯಾ ಅವರು ಸಿಎಂ ವಿಜಯ್‌ಗೆ ತಡವಾಗಿ ಜನ್ಮದಿನದ ಶುಭಾಶಯ ಕೋರಿ, ಮುಖ್ಯಮಂತ್ರಿಯಾಗಿ 40 ದಿನ ಯಶಸ್ವಿಯಾಗಿ ಪೂರೈಸಿದ್ದಕ್ಕೆ ಅಭಿನಂದಿಸಿದ್ದಾರೆ.

ತಮಿಳುನಾಡು ದಳಪತಿ ವಿಜಯ್ ಭೇಟಿಯಾದ ನಟಿ ರಮ್ಯಾ; ಫೋಟೋ ವೈರಲ್
ವಿಜಯ್-ರಮ್ಯಾ
 ಶ್ರೀಲಕ್ಷ್ಮೀ ಎಚ್
| Edited By: |

Updated on: Jun 26, 2026 | 8:48 AM

Share

ಮುಖ್ಯಾಂಶಗಳು

  • ರಮ್ಯಾ ಸುಬ್ರಮಣಿಯನ್ ಮತ್ತು ಸಿಎಂ ವಿಜಯ್ ಭೇಟಿ
  • ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರ ಬದಲಾಗದ ವ್ಯಕ್ತಿತ್ವ ಮತ್ತು ಸರಳತೆ ಹೊಗಳಿದ ರಮ್ಯಾ
  • ನಟಿ ರಮ್ಯಾ ಕಡೆಯಿಂದ ಸಿಎಂ ವಿಜಯ್‌ಗೆ ಹುಟ್ಟುಹಬ್ಬದ ಶುಭಾಶಯ

ತಮಿಳುನಾಡಿನ ನೂತನ ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರನ್ನು (Vijay) ನಟಿ ಮತ್ತು ಖ್ಯಾತ ವಿಜೆ ರಮ್ಯಾ ಸುಬ್ರಮಣಿಯನ್ ಭೇಟಿಯಾಗಿದ್ದಾರೆ. ಸಿಎಂ ಭೇಟಿಯಾದ ಫೋಟೋವನ್ನು ರಮ್ಯಾ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ವಿಜಯ್ ಅವರಿಗೆ ತಡವಾಗಿ ಜನ್ಮದಿನದ ಶುಭಾಶಯ ಕೋರಿ ದೊಡ್ಡ ಪೋಸ್ಟ್ ಒಂದನ್ನು ಬರೆದುಕೊಂಡಿದ್ದಾರೆ. ಮುಖ್ಯಮಂತ್ರಿಯಾದ ಮೇಲೂ ವಿಜಯ್ ಅವರ ಗುಣ ಬದಲಾಗಿಲ್ಲ ಎಂದು ರಮ್ಯಾ ಹೊಗಳಿದ್ದಾರೆ. ಸದ್ಯ ಈ ಪೋಸ್ಟ್ ಇಂಟರ್ನೆಟ್‌ನಲ್ಲಿ ಭಾರಿ ವೈರಲ್ ಆಗುತ್ತಿದೆ.

ರಮ್ಯಾ ತಮ್ಮ ಪೋಸ್ಟ್‌ನಲ್ಲಿ ಬರೆದಿದ್ದೇನು?

‘ಆರು ತಿಂಗಳ ಹಿಂದೆ ಮಲೇಷ್ಯಾದಲ್ಲಿ ನಡೆದ ಅವರ ಕೊನೆಯ ಸಿನಿಮಾದ ಕಾರ್ಯಕ್ರಮವನ್ನು ನಾನು ನಿರೂಪಣೆ ಮಾಡಿದ್ದೆ. ನಿನ್ನೆ ಸಂಜೆ ನಾನು ನಮ್ಮ ಮುಖ್ಯಮಂತ್ರಿಯವರನ್ನು ಭೇಟಿಯಾದೆ. ಕಾಲ ಬದಲಾಗಿದೆ. ಅವರ ಬಿರುದುಗಳು ಬದಲಾಗಿವೆ. ಇತಿಹಾಸವೇ ಬದಲಾಗಿದೆ. ಆದರೆ ವಿಜಯ್ ಮಾತ್ರ ಬದಲಾಗಿಲ್ಲ. ಬಹುಶಃ ಇದೇ ಅವರ ದೊಡ್ಡ ಶಕ್ತಿ’ ಎಂದು ರಮ್ಯಾ ಬರೆದಿದ್ದಾರೆ.

‘ಕಳೆದ ಎರಡು ದಶಕಗಳಿಂದ ನಾನು ಅವರನ್ನು ನೋಡುತ್ತಿದ್ದೇನೆ. ಅವರು ಎಲ್ಲರಿಗಿಂತ ವಿಭಿನ್ನವಾಗಿ ಕಾಣುತ್ತಾರೆ. ಅದಕ್ಕೆ ಅವರ ಸ್ಟಾರ್‌ಡಮ್ ಕಾರಣವಲ್ಲ. ಅವರು ಯಾವುದೇ ಕಾರ್ಯಕ್ರಮದಲ್ಲಿದ್ದರೂ ಬೇರೆಯವರಿಗೆ ಹೆಚ್ಚು ಗೌರವ ನೀಡುತ್ತಾರೆ’ ಎಂದು ರಮ್ಯಾ ಗುಣಗಾನ ಮಾಡಿದ್ದಾರೆ.

ವಿಜಯ್ ಒಬ್ಬ ಜಂಟಲ್‌ಮನ್!

‘ವಿಜಯ್ ಎಲ್ಲವನ್ನೂ ನೆನಪಿನಲ್ಲಿಟ್ಟುಕೊಳ್ಳುತ್ತಾರೆ. ಎದುರಿಗಿರುವವರು ಹೇಳುವುದನ್ನು ತಾಳ್ಮೆಯಿಂದ ಕೇಳುತ್ತಾರೆ. ಎಲ್ಲರ ಮೇಲೂ ಕಾಳಜಿ ತೋರಿಸುತ್ತಾರೆ. ಅವರು ಸದಾ ಭರವಸೆಯನ್ನು ನೀಡುತ್ತಾರೆ. ಈ ಜಗತ್ತಿನಲ್ಲಿ ಅವರು ಒಬ್ಬ ನಿಜವಾದ ಜಂಟಲ್‌ಮನ್ ತರಹ ನಡೆದುಕೊಳ್ಳುತ್ತಾರೆ’ ಎಂದು ರಮ್ಯಾ ಹೇಳಿದ್ದಾರೆ.

‘ಇಂದು ಅವರು ಮುಖ್ಯಮಂತ್ರಿಯಾಗಿದ್ದರೂ ನಮ್ಮ ಭೇಟಿಯ ಶೈಲಿ ಮೊದಲಿನಂತೆಯೇ ಇತ್ತು. ಅದೇ ನಗು ಮತ್ತು ಅದೇ ಪ್ರೀತಿ ನಮ್ಮ ನಡುವೆ ಇತ್ತು’ ಎಂದು ರಮ್ಯಾ ಸಂತಸ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ:  ಮಂಗಳೂರಿನಲ್ಲಿ ಬಂದಿಳಿದ ತಮಿಳುನಾಡು ಸಿಎಂ ಜೋಸೆಫ್ ವಿಜಯ್​: ರಸ್ತೆ ಮಾರ್ಗವಾಗಿ ಕೊಲ್ಲೂರಿಗೆ ಪ್ರಯಾಣ

ತಡವಾಗಿ ಶುಭಾಶಯ ತಿಳಿಸಿದ ರಮ್ಯಾ

‘ನನ್ನ ಪ್ರೀತಿಯ ಸಿಎಂ ಜೋಸೆಫ್ ವಿಜಯ್ ಅವರಿಗೆ ಜನ್ಮದಿನದ ಶುಭಾಶಯಗಳು. ತಮಿಳುನಾಡಿನ ಮುಖ್ಯಮಂತ್ರಿಯಾಗಿ ಯಶಸ್ವಿಯಾಗಿ 40 ದಿನ ಪೂರೈಸಿದ್ದಕ್ಕೆ ಅಭಿನಂದನೆಗಳು’ ಎಂದು ರಮ್ಯಾ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ. ನಟಿ ರಮ್ಯಾ ಅವರು ಚಿತ್ರರಂಗದಲ್ಲಿ ನಟನೆಯ ಜೊತೆಗೆ ಹಲವು ದೊಡ್ಡ ಸಿನಿಮಾಗಳ ಆಡಿಯೋ ಲಾಂಚ್ ಕಾರ್ಯಕ್ರಮಗಳನ್ನು ನಿರೂಪಣೆ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಇಂದು ಈ ರಾಶಿಯವರಿಗೆ ಇಂದು ಅನಾರೋಗ್ಯ ಕಾಡಬಹುದು, ಎಚ್ಚರ!
ಇಂದು ಈ ರಾಶಿಯವರಿಗೆ ಇಂದು ಅನಾರೋಗ್ಯ ಕಾಡಬಹುದು, ಎಚ್ಚರ!
ಭಾವಿ ಪತ್ನಿಗೆ ಹಾಕಿದ್ದ ಚಿನ್ನ ನಕಲಿ: ಮದ್ವೆ ಕ್ಯಾನ್ಸಲ್, ಕಂಗಾಲಾದ ಯುವಕ
ಭಾವಿ ಪತ್ನಿಗೆ ಹಾಕಿದ್ದ ಚಿನ್ನ ನಕಲಿ: ಮದ್ವೆ ಕ್ಯಾನ್ಸಲ್, ಕಂಗಾಲಾದ ಯುವಕ
ಜಮ್ಮು ಕಾಶ್ಮೀರದ ಬಾರಾಮುಲ್ಲಾದಲ್ಲಿ ಸೇತುವೆ ಕುಸಿತ; 10 ಜನರಿಗೆ ಗಾಯ
ಜಮ್ಮು ಕಾಶ್ಮೀರದ ಬಾರಾಮುಲ್ಲಾದಲ್ಲಿ ಸೇತುವೆ ಕುಸಿತ; 10 ಜನರಿಗೆ ಗಾಯ
ಮಂಗಳೂರಿಗೆ ಬಂದ ಶಾರುಖ್ ಖಾನ್, ಬಾದ್​​ಶಾನ ನೋಡಲು ಮುಗಿಬಿದ್ದ ಜನ
ಮಂಗಳೂರಿಗೆ ಬಂದ ಶಾರುಖ್ ಖಾನ್, ಬಾದ್​​ಶಾನ ನೋಡಲು ಮುಗಿಬಿದ್ದ ಜನ
ಅಂಗಡಿ ಗೋಡೆ ಕೊರೆದು 10 ಕೆಜಿ ಬೆಳ್ಳಿ ಕಳ್ಳತನ ಕೇಸ್​​: ಯುವಕ ಅರೆಸ್ಟ್
ಅಂಗಡಿ ಗೋಡೆ ಕೊರೆದು 10 ಕೆಜಿ ಬೆಳ್ಳಿ ಕಳ್ಳತನ ಕೇಸ್​​: ಯುವಕ ಅರೆಸ್ಟ್
33 ಕ್ರಸ್ಟ್ ಗೇಟ್ ಚೇಂಜ್ ಮಾಡಿ ಉದ್ಘಾಟಿಸಿದ್ದು ನನ್ನ ಭಾಗ್ಯ: ಡಿಕೆಶಿ
33 ಕ್ರಸ್ಟ್ ಗೇಟ್ ಚೇಂಜ್ ಮಾಡಿ ಉದ್ಘಾಟಿಸಿದ್ದು ನನ್ನ ಭಾಗ್ಯ: ಡಿಕೆಶಿ
ಕೃಷಿ ತಾಪಂಡ ಮನೆಯಲ್ಲಿ ಉದ್ಯಮಿ ವೈಶಾಖ್ ಸಾವು, ಆಪ್ತ ಗೆಳೆಯ ಹೇಳಿದ್ದೇನು?
ಕೃಷಿ ತಾಪಂಡ ಮನೆಯಲ್ಲಿ ಉದ್ಯಮಿ ವೈಶಾಖ್ ಸಾವು, ಆಪ್ತ ಗೆಳೆಯ ಹೇಳಿದ್ದೇನು?
ಜೂ 28ರಂದು ರಾಷ್ಟ್ರೀಯ ಲಸಿಕಾ ದಿನ: ಚಿಕ್ಕ ಮಕ್ಕಳಿಗೆ ತಪ್ಪದೇ ಲಸಿಕೆ ಹಾಕಿಸಿ
ಜೂ 28ರಂದು ರಾಷ್ಟ್ರೀಯ ಲಸಿಕಾ ದಿನ: ಚಿಕ್ಕ ಮಕ್ಕಳಿಗೆ ತಪ್ಪದೇ ಲಸಿಕೆ ಹಾಕಿಸಿ
ಮುತ್ತತ್ತಿ ದುರಂತ: ಕೊನೇ ಕ್ಷಣದ ವಿಡಿಯೋ ವೈರಲ್
ಮುತ್ತತ್ತಿ ದುರಂತ: ಕೊನೇ ಕ್ಷಣದ ವಿಡಿಯೋ ವೈರಲ್
ಮೂರು ರಾಜ್ಯಗಳ ಮುಖ್ಯಮಂತ್ರಿಗಳಿಂದ ಕ್ರಸ್ಟ್ ಗೇಟ್‌ಗಳು ಲೋಕಾರ್ಪಣೆ
ಮೂರು ರಾಜ್ಯಗಳ ಮುಖ್ಯಮಂತ್ರಿಗಳಿಂದ ಕ್ರಸ್ಟ್ ಗೇಟ್‌ಗಳು ಲೋಕಾರ್ಪಣೆ