AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೆಲುಗು ಚಿತ್ರರಂಗದ ಮೇಲೆ ಮತ್ತೆ ಬೇಸರ ಹೊರಹಾಕಿದ ತೆಲಂಗಾಣ ಸಿಎಂ ರೇವಂತ್ ರೆಡ್ಡಿ

ತೆಲುಗು ಚಿತ್ರರಂಗದ ಮೇಲೆ ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಬಹಿರಂಗವಾಗಿಯೇ ಅಸಮಾಧಾನ ಹೊರ ಹಾಕಿದ್ದಾರೆ. ಈ ಹಿಂದೆಯೂ ಸಹ ಸಿನಿಮಾಗಳಿಗೆ ತೆರಿಗೆ ವಿನಾಯಿತಿ, ಟಿಕೆಟ್ ದರ ಹೆಚ್ಚಳಕ್ಕೆ ಅನುಮತಿ ಕೋರುವ ವಿಚಾರವಾಗಿಯೂ ರೇವಂತ್ ರೆಡ್ಡಿ ಅಸಮಾಧಾನ ಹೊರಹಾಕಿದ್ದರು.

ತೆಲುಗು ಚಿತ್ರರಂಗದ ಮೇಲೆ ಮತ್ತೆ ಬೇಸರ ಹೊರಹಾಕಿದ ತೆಲಂಗಾಣ ಸಿಎಂ ರೇವಂತ್ ರೆಡ್ಡಿ
ಮಂಜುನಾಥ ಸಿ.
|

Updated on: Jul 31, 2024 | 3:23 PM

Share

ಬಾಲಿವುಡ್ ಬಳಿಕ ಬಜೆಟ್ ಗಾತ್ರದಲ್ಲಿ ಅತಿ ದೊಡ್ಡ ಚಿತ್ರವೆಂದರೆ ಅದು ತೆಲುಗು ಚಿತ್ರರಂಗ. ಬಾಲಿವುಡ್​ಗಿಂತಲೂ ಹೆಚ್ಚಿನ ಹಣವನ್ನು ಟಾಲಿವುಡ್ ಗುಡ್ಡೆ ಹಾಕುತ್ತಿದೆ. ಆದರೆ ಎರಡು ತೆಲುಗು ರಾಜ್ಯಗಳಾದಾಗಿನಿಂದ ತೆಲುಗು ಚಿತ್ರರಂಗ ಕೆಲವು ಪೀಕಲಾಟಗಳಿಗೆ ಸಹ ಸಿಲುಕಿಕೊಂಡಿದೆ. ಎರಡು ರಾಜ್ಯಗಳ ಸರ್ಕಾರಗಳನ್ನು ಸರಿದೂಗಿಸಿಕೊಂಡು ಹೋಗುವ ‘ಸಮಸ್ಯೆ’ ತೆಲುಗು ಚಿತ್ರರಂಗಕ್ಕೆ ಎದುರಾಗಿದೆ. ಇದೀಗ ತೆಲುಗು ಚಿತ್ರರಂಗದ ಪ್ರತಿಷ್ಠಿತ ಪ್ರಶಸ್ತಿಯಾದ ‘ನಂದಿ’ ಅವಾರ್ಡ್ಸ್ ಕುರಿತು ಸಮಸ್ಯೆ ಭುಗಿಲೆದ್ದಿದೆ. ತೆಲಂಗಾಣ ಸಿಎಂ ರೇವಂತ್ ರೆಡ್ಡಿ, ಬಹಿರಂಗವಾಗಿಯೇ ತೆಲುಗು ಚಿತ್ರರಂಗದ ಪ್ರಮುಖರ ಮೇಲೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನಂದಿ ಅವಾರ್ಡ್ಸ್​ ತೆಲುಗಿನ ಅತ್ಯಂತ ಪ್ರಮುಖ ಸಿನಿಮಾ ಪ್ರಶಸ್ತಿ. ಹಲವು ವರ್ಷಗಳಿಂದಲೂ ಈ ಪ್ರಶಸ್ತಿಯನ್ನು ಕೊಡಲಾಗುತ್ತಿದೆ. ಆದರೆ ಕಳೆದ ಕೆಲವು ವರ್ಷಗಳಿಂದ ನಂದಿ ಅವಾರ್ಡ್ಸ್​ಗೆ ಬ್ರೇಕ್ ಬಿದ್ದಿದೆ. ಇದೀಗ ಆಂಧ್ರದಲ್ಲಿ ಸರ್ಕಾರ ಬದಲಾದ ಬೆನ್ನಲ್ಲೆ ಮತ್ತೆ ನಂದಿ ಅವಾರ್ಡ್ಸ್ ಪ್ರಶಸ್ತಿಯ ಬಗ್ಗೆ ಚರ್ಚೆ ಎದ್ದಿದೆ. ಆದರೆ ಇದೇ ಚರ್ಚೆ ಈಗ ತೆಲುಗು ಚಿತ್ರರಂಗವನ್ನು ಇಕ್ಕಟ್ಟಿಗೆ ಸಿಲುಕಿಸಿದೆ. ತೆಲಂಗಾಣ ಸಿಎಂ ರೇವಂತ್ ರೆಡ್ಡಿ, ಚಿತ್ರರಂಗದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಲು ಕಾರಣವಾಗಿದೆ.

ನಂದಿ ಅವಾರ್ಡ್ಸ್ ಅನ್ನು ಗದ್ದರ್ ಅವಾರ್ಡ್ಸ್ ಎಂದು ಮರುನಾಮಕರಣ ಮಾಡಿ ಪ್ರಶಸ್ತಿ ವಿತರಿಸುವ ಪ್ರಸ್ತಾವನೆಯನ್ನು ಸಿಎಂ ರೇವಂತ್ ರೆಡ್ಡಿ ಸಲ್ಲಿಸಿದ್ದರು. ಗದ್ದರ್ ತೆಲುಗು ರಾಜ್ಯಗಳ ದಲಿತ ಹೋರಾಟಗಾರ, ದಲಿತ ಜನಪದ ರಾಯಭಾರಿ, ಸ್ವತಃ ಸಿನಿಮಾ ನಟರೂ ಆಗಿದ್ದಾರೆ. ಬಂಡಾಯ ಚಳವಳಿ ಕುರಿತ ಸಿನಿಮಾಗಳು, ಫ್ಯಾಸಿಸಂ ವಿರುದ್ಧ ಹೋರಾಟಗಳನ್ನು ಕತಾವಸ್ತುಗಳನ್ನಾಗಿ ಇಟ್ಟುಕೊಂಡು ಸಿನಿಮಾ ಮಾಡಿದ್ದರು ಗದರ್. ಇತ್ತೀಚೆಗಷ್ಟೆ ಗದರ್ ನಿಧನ ಹೊಂದಿದ್ದು ಅವರ ಸ್ಮರಣಾರ್ಥ ನಂದಿ ಅವಾರ್ಡ್ಸ್​ಗೆ ಗದರ್ ಅವಾರ್ಡ್ಸ್ ಎಂದು ಹೆಸರು ಬದಲಾಯಿಸಲು ಸಿಎಂ ರೇವಂತ್ ರೆಡ್ಡಿ ಮುಂದಾಗಿದ್ದರು.

ಇದನ್ನೂ ಓದಿ:ತೆಲಂಗಾಣ ಸಿಎಂ ರೇವಂತ್ ರೆಡ್ಡಿಗೆ ಕ್ಷಮೆ ಕೋರಿದ ನಟ ಸಿದ್ಧಾರ್ಥ್, ಕಾರಣ?

ನಂದಿ ಅವಾರ್ಡ್ಸ್ ಅನ್ನು ಗದರ್ ಅವಾರ್ಡ್ಸ್ ಎಂದು ಬದಲಿಗೆ ಗದರ್ ಹೆಸರಿನಲ್ಲಿಯೇ ಸಿನಿಮಾ ಪ್ರಶಸ್ತಿಗಳನ್ನು ನೀಡುವ ಪ್ರಸ್ತಾವನೆಗೆ ತೆಲುಗು ಚಿತ್ರರಂಗದಿಂದ ಸಲಹೆಗಳನ್ನು ಸಹ ಕೇಳಿದ್ದರು. ಆದರೆ ಇತ್ತೀಚೆಗೆ ರೇವಂತ್ ರೆಡ್ಡಿ ಹೇಳಿರುವಂತೆ ತೆಲುಗು ಚಿತ್ರರಂಗದ ಯಾರೂ ಸಹ ಈ ಬಗ್ಗೆ ಪ್ರತಿಕ್ರಿಯಿಸಿಲ್ಲ. ಇದು ತಮಗೆ ಬೇಸರ ಮೂಡಿಸಿದೆ ಎಂದು ಸಹ ರೇವಂತ್ ರೆಡ್ಡಿ ಹೇಳಿದ್ದಾರೆ.

ರೇವಂತ್ ರೆಡ್ಡಿ ಹೇಳಿಕೆಯ ನಂತರ ಮಾತನಾಡಿರುವ ಮೆಗಾಸ್ಟಾರ್ ಚಿರಂಜೀವಿ, ರೇವಂತ್ ರೆಡ್ಡಿಯವರ ಹೇಳಿಕೆಯನ್ನು ಸ್ವಾಗತಿದ್ದು, ಗದರ್ ಅಂಥಹಾ ಮಹನೀಯರ ಹೆಸರಿನಲ್ಲಿ ಸಿನಿಮಾ ಮಂದಿಗೆ ಪ್ರಶಸ್ತಿ ನೀಡುವುದು ಗೌರವದಾಯಕ, ಇದಕ್ಕೆ ನನ್ನ ಬೆಂಬಲ ಇದೆ’ ಎಂದಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ