AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೇರೆ ದೇಶಗಳ ಸಿನಿಮಾ ಯಾಕೆ ನೋಡಬೇಕು? ವಿವರಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ 17ನೇ ಆವೃತ್ತಿಗೆ ಚಾಲನೆ ವಿಧಾನಸೌಧದ ಮುಂಭಾಗ ನೀಡಲಾಗಿದೆ. ಇಂದು (ಜ.29) ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಸಿನಿಮೋತ್ಸವ ಉದ್ಘಾಟನೆ ಮಾಡಿದ್ದಾರೆ. ಈ ವೇದಿಕೆಯಲ್ಲಿ ಅವರು ಅಂತಾರಾಷ್ಟ್ರೀಯ ಸಿನಿಮಾಗಳ ಬಗ್ಗೆ ಮಾತನಾಡಿದರು. ಅವುಗಳ ಮಹತ್ವವನ್ನು ಅವರು ವಿವರಿಸಿದರು. ಆ ಕುರಿತು ಇಲ್ಲಿದೆ ವಿವರ..

ಬೇರೆ ದೇಶಗಳ ಸಿನಿಮಾ ಯಾಕೆ ನೋಡಬೇಕು? ವಿವರಿಸಿದ ಸಿಎಂ ಸಿದ್ದರಾಮಯ್ಯ
Cm Siddaramaiah
ಮದನ್​ ಕುಮಾರ್​
|

Updated on: Jan 29, 2026 | 9:00 PM

Share

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ‘17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ’ (BIFFes) ಉದ್ಘಾಟಿಸಿ ಮಾತನಾಡಿದರು. ‘ಈ ಬಾರಿ 70 ದೇಶಗಳ ಆಯ್ದ ಸುಮಾರಿ 240 ಸಿನಿಮಾಗಳ ಪ್ರದರ್ಶನ ಆಗಲಿದೆ. ರಾಯಬಾರಿಯಾಗಿ ಪ್ರಕಾಶ್ ರಾಜ್ ಅವರನ್ನು ಆಯ್ಕೆ ಮಾಡಿದ್ದೇನೆ. ಅವರು ಬರೀ ಸಿನಿಮಾಗೆ ಸೀಮಿತ ಆಗಿಲ್ಲ. ಸಾಮಾಜಿಕ ಹೋರಾಟದಲ್ಲಿ ಕೂಡ ಭಾಗಿ ಆಗಿದ್ದಾರೆ. ಅದಕ್ಕಾಗಿ ಅವರಿಗೆ ಧನ್ಯವಾದಗಳು. ಕಳೆದ ಬಾರಿ ಸರ್ವ ಜನಾಂಗದ ಶಾಂತಿಯ ತೋಟ ಥೀಮ್​​ನಲ್ಲಿ ಚಿತ್ರೋತ್ಸವ ಮಾಡಲಾಗಿತ್ತು. ಈಗ ಬಾರಿ ‘ಸ್ರೀ ಎಂದರೆ ಅಷ್ಟೇ ಸಾಕೆ’ ಎಂಬ ಥೀಮ್ ಆಯ್ಕೆ ಮಾಡಿದ್ದೇನೆ. ಚಲನಚಿತ್ರ ಬರೀ ಮನರಂಜನೆಗೆ ಸೀಮಿತವಾಗಿರುವುದು ಅಲ್ಲ. ಸಮಾಜದಲ್ಲಿ ಇರುವ ಅಂಕುಡೊಂಕು ತಿದ್ದುವ ಕೆಲಸ ಆಗಬೇಕು’ ಎಂದು ಸಿದ್ದರಾಮಯ್ಯ (CM Siddaramaiah) ಹೇಳಿದರು.

‘ಸಮಾಜದಲ್ಲಿ ಇಂದು ಅಸಮಾನತೆ, ಬಡತನ ಇದೆ. ದಲಿತರು, ರೈತರು, ಕಾರ್ಮಿಕರು, ಮಹಿಳೆಯರು, ಹಿಂದುಳಿದವರು, ಅಲ್ಪಸಂಖ್ಯಾತರು ಇದ್ದಾರೆ. ಅವರ ವಾಸ್ತವ ಸ್ಥಿತಿಯನ್ನು ಸಿನಿಮಾಗಳು ಜಗತ್ತಿನ ಮುಂದೆ ಇಡಬೇಕು. ಈ ಕೆಲಸವನ್ನು ರಾಜ್​​ಕುಮಾರ್ ಅವರ ಸಿನಿಮಾಗಳು ಯಶಸ್ವಿಯಾಗಿ ಮಾಡಿದ್ದನ್ನು ನಾವು ನೋಡಿದ್ದೇನೆ. ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಯಾಕೆ ಮಾಡುತ್ತೇವೆ ಎಂದರೆ, ಬೇರೆ ದೇಶಗಳ ಜನಜೀವನ, ರಾಜಕೀಯ, ಸಮಾಜ, ಪುರುಷರು-ಮಹಿಳೆಯರ ಸ್ಥಿತಿಗತಿ ಮುಂತಾದ್ದನ್ನು ಅರ್ಥ ಮಾಡಿಕೊಳ್ಳೋದು ಮುಖ್ಯ’ ಎಂದು ಸಿದ್ದರಾಮಯ್ಯ ಅಭಿಪ್ರಾಯಪಟ್ಟರು.

‘ಚಲನಚಿತ್ರೋತ್ಸವ ಒಂದು ಸುವರ್ಣ ಅವಕಾಶ. ಈ ಅವಕಾಶ ಬಳಸಿಕೊಂಡು ನಾವು ಸಮಾಜದಲ್ಲಿ ಬದಲಾವಣೆ ತರುವ ಕೆಲಸ ಮಾಡಬೇಕು. ಸಮಾಜದಲ್ಲಿ ಬದಲಾವಣೆ ಆಗದೇ ಇದ್ದರೆ ಸಿನಿಮಾಗಳು ಕೇವಲ ಮನರಂಜನೆಗೆ ಇರುವ ವಸ್ತುಗಳು ಆಗುತ್ತವೆ. ನಾವೆಲ್ಲ ಮನುಷ್ಯರು. ಮನುಷ್ಯರಾಗಿಯೇ ಬಾಳಬೇಕಾಗಿರುವುದು ಅತ್ಯಂತ ಅವಶ್ಯಕ’ ಎಂದರು ಸಿದ್ದರಾಮಯ್ಯ.

‘ನಾವು ಪ್ರತಿ ವ್ಯಕ್ತಿಯನ್ನು ಪ್ರೀತಿ, ಸ್ನೇಹದಿಂದ ಕಾಣಬೇಕು. ಆಗ ಮಾತ್ರ ಸಮಾನತೆಯ ಸಮಾಜ ಕಟ್ಟಲು ಸಾಧ್ಯತೆ ಆಗುತ್ತದೆ. ಅಸಮಾನತೆಯನ್ನು ಹೋಗಲಾಡಿಸುವ ಕೆಲಸವನ್ನು ಸಿನಿಮಾ ಮಾಧ್ಯಮದ ಮೂಲಕ ಮಾಡಬೇಕು. ಬೇರೆ ದೇಶಗಳಲ್ಲಿ ಯಾಕೆ ಬದಲಾವಣೆ ಆಗಿದೆ? ನಮ್ಮಲ್ಲಿ ಯಾಕೆ ಬದಲಾವಣೆ ಆಗಿಲ್ಲ ಎಂಬುದನ್ನು ಸಿನಿಮಾಗಳ ಮೂಲಕ ಅರ್ಥ ಮಾಡಿಕೊಳ್ಳಬಹುದು’ ಎಂದು ಸಿದ್ದರಾಮಯ್ಯ ಹೇಳಿದರು.

ಇದನ್ನೂ ನೋಡಿ: 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ವಿಡಿಯೋ ನೋಡಿ..

‘ನಮ್ಮ ಸರ್ಕಾರ ಎಲ್ಲ ರೀತಿಯ ಸಹಕಾರವನ್ನು ಸಿನಿಮಾರಂಗದ ಅಭಿವೃದ್ಧಿಗೆ ನೀಡುತ್ತೇವೆ. ನಮ್ಮ ಬದುಕನ್ನು ಹಸನು ಮಾಡುವಂತಹ ಸಿನಿಮಾಗಳು ಕನ್ನಡದಲ್ಲಿ ಬರಲಿ. ಈ ಚಲನಚಿತ್ರೋತ್ಸವ ಯಶಸ್ವಿ ಆಗಲಿ. ಜೈಹಿಂದ್, ಜೈ ಕರ್ನಾಟಕ, ಜೈ ಸಂವಿಧಾನ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾಷಣ ಪೂರ್ಣಗೊಳಿಸಿದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಅಜಿತ್ ಪವಾರ್ ಅಂತ್ಯಕ್ರಿಯೆ; ಮಕ್ಕಳಿಂದ ಅಪ್ಪನ ಚಿತೆಗೆ ಅಗ್ನಿಸ್ಪರ್ಶ
ಅಜಿತ್ ಪವಾರ್ ಅಂತ್ಯಕ್ರಿಯೆ; ಮಕ್ಕಳಿಂದ ಅಪ್ಪನ ಚಿತೆಗೆ ಅಗ್ನಿಸ್ಪರ್ಶ
ಲಕ್ಕುಂಡಿಯಲ್ಲಿ 3 ತಲೆಯ ನಾಗರಕಲ್ಲು ಪ್ರಾಚ್ಯಾವಶೇಷ ಪತ್ತೆ!
ಲಕ್ಕುಂಡಿಯಲ್ಲಿ 3 ತಲೆಯ ನಾಗರಕಲ್ಲು ಪ್ರಾಚ್ಯಾವಶೇಷ ಪತ್ತೆ!