AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತ್ರಿಶಾ ಜೊತೆಯಲ್ಲೇ ಬಂದು ಅಜಿತ್ ತಾಯಿಯ ಅಂತಿಮ ದರ್ಶನ ಪಡೆದ ಸಿಎಂ ವಿಜಯ್

ಅಭಿಮಾನಿಗಳ ನಡುವೆ ಎಷ್ಟೇ ಕಿತ್ತಾಟ ಇದ್ದರೂ ಅಜಿತ್ ಕುಮಾರ್ ಮತ್ತು ದಳಪತಿ ವಿಜಯ್ ಅವರು ಆಪ್ತವಾಗಿದ್ದಾರೆ. ಅವರ ಜೊತೆ ನಟಿ ತ್ರಿಶಾ ಅವರಿಗೂ ಉತ್ತಮ ಬಾಂಧವ್ಯ ಇದೆ. ಅಜಿತ್ ತಾಯಿಯ ಅಂತಿಮ ದರ್ಶನ ಪಡೆಯಲು ತ್ರಿಶಾ ಮತ್ತು ವಿಜಯ್ ಅವರು ಒಟ್ಟಾಗಿ ಆಗಮಿಸಿದ್ದಾರೆ.

ತ್ರಿಶಾ ಜೊತೆಯಲ್ಲೇ ಬಂದು ಅಜಿತ್ ತಾಯಿಯ ಅಂತಿಮ ದರ್ಶನ ಪಡೆದ ಸಿಎಂ ವಿಜಯ್
Ajith, Cm Vijay, Trisha Krishnan
ಮದನ್​ ಕುಮಾರ್​
|

Updated on: May 31, 2026 | 8:17 AM

Share

ತಮಿಳು ಚಿತ್ರರಂಗದ ಖ್ಯಾತ ನಟ ಅಜಿತ್ ಕುಮಾರ್ (Ajith Kumar) ಅವರ ತಾಯಿ ಮೋಹಿನಿ ಮಣಿ (89) ಶನಿವಾರ (ಮೇ 30) ವಯೋಸಹಜ ಅನಾರೋಗ್ಯದಿಂದ ನಿಧನರಾಗಿದ್ದಾರೆ. ತಾಯಿಯನ್ನು ಕಳೆದುಕೊಂಡು ದುಃಖದಲ್ಲಿರುವ ಅಜಿತ್ ಕುಮಾರ್ ಅವರ ನಿವಾಸಕ್ಕೆ ತಮಿಳುನಾಡು ಮುಖ್ಯಮಂತ್ರಿ ಹಾಗೂ ಖ್ಯಾತ ನಟ ದಳಪತಿ ವಿಜಯ್ (CM Vijay) ಭೇಟಿ ನೀಡಿ ಸಂತಾಪ ಸೂಚಿಸಿದ್ದಾರೆ. ಈ ವೇಳೆ ವಿಜಯ್ ಅವರೊಂದಿಗೆ ಖ್ಯಾತ ನಟಿ ತ್ರಿಶಾ ಕೃಷ್ಣನ್ (Trisha Krishnan) ಕೂಡ ಸಾಂತ್ವನ ಹೇಳಲು ಆಗಮಿಸಿದ್ದು ವಿಶೇಷವಾಗಿ ಗಮನ ಸೆಳೆದಿದೆ. ಈ ಸಂದರ್ಭದ ವಿಡಿಯೋ ಈಗ ವೈರಲ್ ಆಗಿದೆ.

ತಮಿಳುನಾಡಿನ ಮುಖ್ಯಮಂತ್ರಿಯಾದ ಬಳಿಕವೂ ತಮ್ಮ ಹಳೇ ಗೆಳೆಯ ಹಾಗೂ ಚಿತ್ರರಂಗದ ಸಹೋದ್ಯೋಗಿ ಅಜಿತ್ ಕುಮಾರ್ ಅವರ ಕುಟುಂಬಕ್ಕೆ ಸಾಂತ್ವನ ಹೇಳಲು ಬಂದ ಸಿಎಂ ವಿಜಯ್ ಅವರು ಅಜಿತ್ ಅವರನ್ನು ಆತ್ಮೀಯವಾಗಿ ಅಪ್ಪಿಕೊಂಡು ದುಃಖವನ್ನು ಹಂಚಿಕೊಂಡಿದ್ದಾರೆ. ವಿಜಯ್ ಅವರ ಜೊತೆಯಲ್ಲೇ ಆಗಮಿಸಿದ ತ್ರಿಶಾ ಕೂಡ ಅಜಿತ್ ಕುಟುಂಬಕ್ಕೆ ಧೈರ್ಯ ತುಂಬಿದ್ದಾರೆ. ಬಿಗಿ ಭದ್ರತೆಯ ನಡುವೆ ಇಬ್ಬರೂ ತಾರೆಯರು ಅಜಿತ್ ಮನೆಗೆ ಭೇಟಿ ನೀಡುತ್ತಿರುವ ವಿಡಿಯೋಗಳು ಈಗ ಸಾಮಾಜಿಕ ಜಾಲತಾಣಗಳಲ್ಲಿ ಗಮನ ಸೆಳೆದಿವೆ.

ಅಭಿಮಾನಿಗಳ ನಡುವೆ ಸಾಮಾಜಿಕ ಜಾಲತಾಣಗಳಲ್ಲಿ ಎಷ್ಟೇ ಪೈಪೋಟಿ ಇದ್ದರೂ, ವಿಜಯ್ ಮತ್ತು ಅಜಿತ್ ಕುಮಾರ್ ನಡುವೆ ಮೊದಲಿನಿಂದಲೂ ಉತ್ತಮ ಬಾಂಧವ್ಯವಿದೆ. ತಮ್ಮ ವೃತ್ತಿಜೀವನದ ಆರಂಭದಲ್ಲಿ ‘ರಾಜಾತಿನ್ ಪಾರ್ವಯಿಲೆ’ ಸಿನಿಮಾದಲ್ಲಿ ಅವರಿಬ್ಬರೂ ಒಟ್ಟಿಗೆ ನಟಿಸಿದ್ದರು. ಇದು ಇವರಿಬ್ಬರೂ ಒಟ್ಟಿಗೆ ತೆರೆ ಹಂಚಿಕೊಂಡ ಏಕೈಕ ಚಿತ್ರವಾಗಿದೆ. ಇತ್ತೀಚೆಗಷ್ಟೇ ತಮಿಳುನಾಡು ಚುನಾವಣೆಯಲ್ಲಿ ವಿಜಯ್ ಭರ್ಜರಿ ಜಯ ಸಾಧಿಸಿದಾಗ ಅಜಿತ್ ಕುಮಾರ್ ಖುದ್ದಾಗಿ ಫೋನ್ ಮಾಡಿ ಶುಭ ಕೋರಿದ್ದರು ಎಂದು ವರದಿಯಾಗಿತ್ತು.

ಇನ್ನು ನಟಿ ತ್ರಿಶಾ ಕೂಡ ಅಜಿತ್ ಕುಮಾರ್ ಅವರೊಂದಿಗೆ ಸುದೀರ್ಘ ವೃತ್ತಿಪರ ಸಂಬಂಧ ಹೊಂದಿದ್ದಾರೆ. ‘ಜಿ’, ‘ಎನ್ನೈ ಅರಿಂದಾಲ್’ ಹಾಗೂ ಇತ್ತೀಚಿನ ‘ವಿಡಾಮುಯರ್ಚಿ’ ಸೇರಿದಂತೆ ಹಲವು ಚಿತ್ರಗಳಲ್ಲಿ ಅಜಿತ್‌ಗೆ ಜೋಡಿಯಾಗಿ ತ್ರಿಶಾ ನಟಿಸಿದ್ದಾರೆ. ಸಿನಿಮಾ ಮಾತ್ರವಲ್ಲದೇ ಅದರ ಆಚೆಗೂ ಅವರಿಬ್ಬರ ನಡುವೆ ಉತ್ತಮ ಸ್ನೇಹವಿದೆ.

ಇದನ್ನೂ ಓದಿ: ಸಿಎಂ ದಳಪತಿ ವಿಜಯ್ ಭೇಟಿಯಾದ ಲೋಕೇಶ್ ಕನಗರಾಜ್: ‘ಲಿಯೋ 2’ ನಿರೀಕ್ಷೆಯಲ್ಲಿ ಅಭಿಮಾನಿಗಳು

ಅಜಿತ್ ಕುಮಾರ್ ಅವರ ತಾಯಿ ಮೋಹಿನಿ ಮಣಿ ಶನಿವಾರ ಮುಂಜಾನೆ ನಿದ್ದೆಯಲ್ಲೇ ಕೊನೆಯುಸಿರೆಳೆದಿದ್ದಾರೆ ಎಂದು ಕುಟುಂಬಸ್ಥರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ‘ಕಳೆದ ಕೆಲವು ವರ್ಷಗಳಿಂದ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ನಮ್ಮ ತಾಯಿ ನಿದ್ದೆಯಲ್ಲೇ ಇಹಲೋಕ ತ್ಯಜಿಸಿದ್ದಾರೆ. ಅವರಿಗೆ ಸೂಕ್ತ ಚಿಕಿತ್ಸೆ ಮತ್ತು ಕಾಳಜಿ ನೀಡಿದ ವೈದ್ಯಕೀಯ ಸಿಬ್ಬಂದಿಗೆ ನಾವು ಕೃತಜ್ಞರಾಗಿದ್ದೇವೆ’ ಎಂದು ಅಜಿತ್ ಸಹೋದರ ಅನಿಲ್ ಕುಮಾರ್ ತಿಳಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ
ದೇವರ ಮೂರ್ತಿ ಎದುರಲ್ಲೇ ಕಿರಣ್ ಶಾಸ್ತ್ರಿ ಕಳ್ಳಾಟ; ಬಯಲು ಮಾಡಿದ ಸುದೀಪ್
ದೇವರ ಮೂರ್ತಿ ಎದುರಲ್ಲೇ ಕಿರಣ್ ಶಾಸ್ತ್ರಿ ಕಳ್ಳಾಟ; ಬಯಲು ಮಾಡಿದ ಸುದೀಪ್
ಹೆಚ್ಚುತ್ತಿರುವ ಕಸ್ತೂರಿ ರಂಗನ್ ಕಿಚ್ಚು ನಾಳೆ ಶೃಂಗೇರಿ ಬಂದ್​​ಗೆ ಕರೆ!
ಹೆಚ್ಚುತ್ತಿರುವ ಕಸ್ತೂರಿ ರಂಗನ್ ಕಿಚ್ಚು ನಾಳೆ ಶೃಂಗೇರಿ ಬಂದ್​​ಗೆ ಕರೆ!
ಇಸ್ಲಾಂಪೇಟೆಯಲ್ಲಿ ಮತ್ತೆ ಗಣಪತಿ ಮೆರವಣಿಗೆಗೆ ಶಾಸಕ ಕೃಷ್ಣಾನಾಯಕ್ ಚಾಲನೆ!
ಇಸ್ಲಾಂಪೇಟೆಯಲ್ಲಿ ಮತ್ತೆ ಗಣಪತಿ ಮೆರವಣಿಗೆಗೆ ಶಾಸಕ ಕೃಷ್ಣಾನಾಯಕ್ ಚಾಲನೆ!