AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯ್ ಬರ್ತ್‌ಡೇ ದಿನವೂ ಇಲ್ಲ ‘ಜನ ನಾಯಗನ್’ ಅಪ್‌ಡೇಟ್; ಸಿನಿಮಾ ಆಸೆಯನ್ನೇ ಕೈಬಿಟ್ಟಿತೇ ಚಿತ್ರತಂಡ?

ದಳಪತಿ ವಿಜಯ್ ಜನ್ಮದಿನದಂದು 'ಜನನಾಯಗನ್' ಸಿನಿಮಾ ಅಪ್‌ಡೇಟ್ ಬಾರದ ಹಿನ್ನೆಲೆ, ಅಭಿಮಾನಿಗಳಲ್ಲಿ ನಿರಾಸೆ ಮೂಡಿದೆ. ಮುಖ್ಯಮಂತ್ರಿ ಜವಾಬ್ದಾರಿ ವಹಿಸಿಕೊಂಡ ವಿಜಯ್, ತಮ್ಮ ರಾಜಕೀಯ ಜೀವನಕ್ಕೆ ಆದ್ಯತೆ ನೀಡಿದ್ದಾರೆ. ಇನ್ನು, ಸೆನ್ಸಾರ್ ಪ್ರಕ್ರಿಯೆ ಮುಗಿದಿಲ್ಲ. ಇದರಿಂದ 'ಜನನಾಯಗನ್' ಬಿಡುಗಡೆ ಮತ್ತಷ್ಟು ವಿಳಂಬವಾಗುವ ಸಾಧ್ಯತೆ ಇದೆ, ಚಿತ್ರತಂಡವೂ ಆಸಕ್ತಿ ಕಳೆದುಕೊಂಡಂತೆ ಕಾಣುತ್ತಿದೆ.

ವಿಜಯ್ ಬರ್ತ್‌ಡೇ ದಿನವೂ ಇಲ್ಲ ‘ಜನ ನಾಯಗನ್’ ಅಪ್‌ಡೇಟ್; ಸಿನಿಮಾ ಆಸೆಯನ್ನೇ ಕೈಬಿಟ್ಟಿತೇ ಚಿತ್ರತಂಡ?
ವಿಜಯ್
ರಾಜೇಶ್ ದುಗ್ಗುಮನೆ
|

Updated on: Jun 23, 2026 | 9:06 AM

Share

ತಮಿಳುನಾಡು ಮುಖ್ಯಮಂತ್ರಿ ದಳಪತಿ ವಿಜಯ್ ಜೂನ್ 22ರಂದು ತಮ್ಮ ಜನ್ಮದಿನವನ್ನು ಆಚರಿಸಿಕೊಂಡಿದ್ದಾರೆ. ಈ ವಿಶೇಷ ದಿನದಂದು ಅವರ ಬಹುನಿರೀಕ್ಷಿತ ‘ಜನ ನಾಯಗನ್’ ಸಿನಿಮಾದಿಂದ ಏನಾದರೂ ಒಂದು ಅಪ್‌ಡೇಟ್ ಬರಬಹುದು ಎಂದು ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದರು. ಆದರೆ ಚಿತ್ರತಂಡದಿಂದ ಯಾವುದೇ ಅಪ್‌ಡೇಟ್ ಬಂದಿಲ್ಲ. ವಿಜಯ್​ ಅವರಿಗೆ ಕೆವಿಎನ್ ಕಡೆಯಿಂದ ಕೇವಲ ಒಂದು ವಿಶ್ ಸಿಕ್ಕಿದೆ ಅಷ್ಟೇ. ಹೀಗಾಗಿ ಈ ಸಿನಿಮಾದ ಮೇಲಿನ ಆಸೆಯನ್ನು ಚಿತ್ರತಂಡದವರು ಸಂಪೂರ್ಣವಾಗಿ ಬಿಟ್ಟರೇ ಎಂಬ ಅನುಮಾನ ಈಗ ಮೂಡಿದೆ.

‘ಜನ ನಾಯಗನ್’ ಸಿನಿಮಾ ಜನವರಿ ತಿಂಗಳಲ್ಲೇ ತೆರೆಗೆ ಬರಬೇಕಿತ್ತು. ತಂಡದವರು ಸೆನ್ಸಾರ್​​ಗೆ ಅಪ್ಲೈ ಮಾಡಿದ್ದು ಕಳೆದ ವರ್ಷ ಡಿಸೆಂಬರ್​​ನಲ್ಲಿ. ಆದರೆ ಸೆನ್ಸಾರ್ ಪ್ರಮಾಣ ಪತ್ರ ಸಿಗದ ಕಾರಣಗಳಿಂದ ಸಿನಿಮಾ ಮುಂದೂಡಲ್ಪಟ್ಟಿತು. ವಿಜಯ್ ಮುಖ್ಯಮಂತ್ರಿಯಾದ ಮೇಲಾದರೂ ಅವರ ಹುಟ್ಟುಹಬ್ಬದ ಉಡುಗೊರೆಯಾಗಿ ಚಿತ್ರದ ಬಿಡುಗಡೆ ಆಗಬಹುದು ಎಂದುಕೊಂಡಿದ್ದರು. ಅದೂ ಆಗಿಲ್ಲ. ಕೊನೆಪಕ್ಷ ವಿಜಯ್ ಜನ್ಮದಿನಕ್ಕೆ ಚಿತ್ರದ ರಿಲೀಸ್ ದಿನಾಂಕ ಪ್ರಕಟಿಸಬಹುದು ಎಂದು ಅಭಿಮಾನಿಗಳು ನಂಬಿದ್ದರು. ಆದರೆ ಪ್ರೊಡಕ್ಷನ್ ಹೌಸ್‌ನಿಂದ ಈ ಬಗ್ಗೆ ಪೋಸ್ಟ್ ಬಂದಿಲ್ಲ.

ಸಿನಿಮಾದಿಂದ ದೂರ ಸರಿದ ಸಿಎಂ ವಿಜಯ್:

ಚುನಾವಣೆ ಮುಗಿದ ಮೇಲೂ ವಿಜಯ್ ಅವರು ‘ಜನ ನಾಯಗನ್’ ಚಿತ್ರದ ನಿರ್ಮಾಪಕರ ಜೊತೆ ಉತ್ತಮ ಒಡನಾಟದಲ್ಲೇ ಇದ್ದಾರೆ. ಆದರೂ ಸಿನಿಮಾ ಬಗ್ಗೆ aವರು ಮಾತನಾಡುತ್ತಿಲ್ಲ. ಜನರು ತಮ್ಮನ್ನು ಒಬ್ಬ ಗಂಭೀರ ಮತ್ತು ಪೂರ್ಣಾವಧಿ ರಾಜಕಾರಣಿಯಾಗಿ ಮಾತ್ರ ನೋಡಬೇಕು ಎಂದು ಅವರು ಬಯಸುತ್ತಿದ್ದಾರೆ ಎನ್ನಲಾಗಿದೆ. ಇನ್ನು, ಸೆನ್ಸಾರ್ ಪ್ರಕ್ರಿಯೆ ಕೂಡ ಪೂರ್ಣಗೊಂಡಿಲ್ಲ. ಇದು ಕೂಡ ಸಿನಿಮಾ ವಿಳಂಬಕ್ಕೆ ಕಾರಣ.

ಇದನ್ನೂ ಓದಿ: ವಿಜಯ್ ನಗುವನ್ನು ಕಿತ್ತುಕೊಂಡಿತು ಆ ಸಾವು; ಸಂಪೂರ್ಣವಾಗಿ ಬದಲಾದ ದಳಪತಿ

ಬಿಡುಗಡೆ ಮತ್ತಷ್ಟು ವಿಳಂಬ

ವಿಜಯ್ ಅವರು ಮುಖ್ಯಮಂತ್ರಿಯಾಗಿ ಜವಾಬ್ದಾರಿ ವಹಿಸಿಕೊಂಡಾಗಿನಿಂದ ಸಿನಿಮಾ ಕಾರ್ಯಕ್ರಮಗಳಿಂದ ಸಂಪೂರ್ಣವಾಗಿ ದೂರ ಉಳಿದಿದ್ದಾರೆ. ತಮ್ಮ ಉಪಸ್ಥಿತಿಯಿಂದಾಗಿ ರಾಜಕೀಯಕ್ಕೆ ಯಾವುದೇ ಧಕ್ಕೆ ಬರಬಾರದು ಎಂಬುದು ಅವರ ಉದ್ದೇಶವಾಗಿದೆ. ‘ಜನ ನಾಯಗನ್’ ಸಿನಿಮಾ ಭವಿಷ್ಯದಲ್ಲಿ ಚಿತ್ರಮಂದಿರಗಳಿಗೆ ಬರುವುದು ಖಚಿತವಾದರೂ, ಅದು ತೆರೆಗೆ ಬರಲು ಇನ್ನು ಸಾಕಷ್ಟು ಸಮಯ ತೆಗೆದುಕೊಳ್ಳುವ ಸಾಧ್ಯತೆ ದಟ್ಟವಾಗಿದೆ. ಚಿತ್ರತಂಡದವರು ಸಿನಿಮಾ ಮೇಲಿನ ಆಸೆಯನ್ನು ಸಂಪೂರ್ಣವಾಗಿ ಕೈ ಬಿಟ್ಟಂತೆಯೂ ಕಾಣುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್