Bigg Boss OTT Kannada: ಚಂದುಗೆ ಇಲ್ಲ ಚಾನ್ಸ್​: ಬೇಸರ ವ್ಯಕ್ತಪಡಿಸಿದ ಅಭಿಮಾನಿಗಳು

Coffee Nadu Chandu: ಶನಿವಾರ ನಡೆದ ಅದ್ಧೂರಿ ಕಾರ್ಯಕ್ರಮದಲ್ಲಿ ಕಿಚ್ಚ ಸುದೀಪ್ ಒಬ್ಬೊಬ್ಬರೇ ಸ್ಪರ್ಧಿಗಳನ್ನು ಬರ ಮಾಡಿಕೊಂಡರು. ಹೀಗೆ 16 ಸ್ಪರ್ಧಿಗಳು ಮನೆಗೆ ಎಂಟ್ರಿ ಕೊಟ್ಟರೂ ಕಾಫಿನಾಡು ಚಂದು ಮಾತ್ರ ಕಾಣಿಸಿಕೊಂಡಿಲ್ಲ.

Bigg Boss OTT Kannada: ಚಂದುಗೆ ಇಲ್ಲ ಚಾನ್ಸ್​: ಬೇಸರ ವ್ಯಕ್ತಪಡಿಸಿದ ಅಭಿಮಾನಿಗಳು
coffee nadu chandu
Follow us
| Updated By: ಝಾಹಿರ್ ಯೂಸುಫ್

Updated on:Aug 07, 2022 | 1:42 PM

ಬಿಗ್ ಬಾಸ್ ಕನ್ನಡ ಒಟಿಟಿ (Bigg Boss OTT Kannada) ಸೀಸನ್​ 1 ಗೆ ಶನಿವಾರದಿಂದ ಶುರುವಾಗಿದೆ. ಇದರೊಂದಿಗೆ ಈ ಬಾರಿ ಬಿಗ್ ಬಾಸ್​ನಲ್ಲಿ ಕಾಣಿಸಿಕೊಳ್ಳುವ ಸ್ಪರ್ಧಿಗಳು ಯಾರೆಲ್ಲಾ ಎಂಬ ಕುತೂಹಲಕ್ಕೆ ಕೂಡ ತೆರೆಬಿದ್ದಿದೆ. ಅಚ್ಚರಿ ಎಂಬಂತೆ ಒಟಿಟಿ ಬಿಗ್ ಬಾಸ್​ನಲ್ಲಿ ರೀಲ್ಸ್ ರಾಣಿ ಸೋನು ಗೌಡ (Sonu Gowda) ಕಾಣಿಸಿಕೊಂಡಿದ್ದಾರೆ. ಆದರೆ 16 ಸ್ಪರ್ಧಿಗಳಲ್ಲಿ ಸೋಷಿಯಲ್ ಮೀಡಿಯಾ ಸೆನ್ಸೇಷನ್ ಕಾಫಿನಾಡು ಚಂದು (Coffee Nadu Chandu ) ಕಾಣಿಸಿಕೊಳ್ಳದಿರುವುದು ಅಭಿಮಾನಿಗಳ ಬೇಸರಕ್ಕೆ ಕಾರಣವಾಗಿದೆ.

ಸೋಷಿಯಲ್ ಮೀಡಿಯಾಗಳಲ್ಲಿ ಹಾಡು ಹಾಗೂ ಡ್ಯಾನ್ಸ್​ ಮೂಲಕ ಎಲ್ಲರನ್ನು ರಂಜಿಸುತ್ತಿರುವ ಕಾಫಿನಾಡು ಚಂದು ಈ ಬಾರಿ ಬಿಗ್ ಬಾಸ್​ನಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿತ್ತು. ಅಲ್ಲದೆ ಸಂಭಾವ್ಯ ಸ್ಪರ್ಧಿಗಳ ಪಟ್ಟಿಯಲ್ಲೂ ಚಂದು ಹೆಸರು ಕೂಡ ರಾರಾಜಿಸಿತ್ತು. ಅತ್ತ ಕಡೆ ಅವಕಾಶ ನೀಡಿದರೆ ನಾನು ಸಹ ಬಿಗ್ ಬಾಸ್​ಗೆ ಹೋಗುತ್ತೇನೆ ಎಂದು ಕಾಫಿನಾಡು ಚಂದು ಕೂಡ ಹೇಳಿಕೊಂಡಿದ್ದರು. ಹೀಗಾಗಿ ಚಿಕ್ಕಮಗಳೂರಿನ ಈ ‘ಅಸಾಮಾನ್ಯ’ ಪ್ರತಿಭೆ ಬಿಗ್ ಬಾಸ್​ಗೆ ಎಂಟ್ರಿ ಕೊಡಲಿದ್ದಾರೆ ಎಂಬ ಸುದ್ದಿಗಳು ಹರಿದಾಡಿದ್ದವು.

ಆದರೆ ಶನಿವಾರ ನಡೆದ ಅದ್ಧೂರಿ ಕಾರ್ಯಕ್ರಮದಲ್ಲಿ ಕಿಚ್ಚ ಸುದೀಪ್ ಒಬ್ಬೊಬ್ಬರೇ ಸ್ಪರ್ಧಿಗಳನ್ನು ಬರ ಮಾಡಿಕೊಂಡರು. ಹೀಗೆ 16 ಸ್ಪರ್ಧಿಗಳು ಮನೆಗೆ ಎಂಟ್ರಿ ಕೊಟ್ಟರೂ ಕಾಫಿನಾಡು ಚಂದು ಮಾತ್ರ ಕಾಣಿಸಿಕೊಂಡಿಲ್ಲ. ಹೀಗಾಗಿಯೇ ಇದೀಗ ಕಾಫಿನಾಡು ಚಂದುವಿಗೆ ಯಾಕೆ ಅವಕಾಶ ನೀಡಲಾಗಿಲ್ಲ ಎಂಬ ಪ್ರಶ್ನೆಗಳನ್ನು ಹಲವು ಅಭಿಮಾನಿಗಳು ಸೋಷಿಯಲ್ ಮೀಡಿಯಾ ಮೂಲಕ ಮುಂದಿಡುತ್ತಿದ್ದಾರೆ.

ಇದನ್ನೂ ಓದಿ
Image
Team India: 7 ತಿಂಗಳಲ್ಲಿ 7 ನಾಯಕರು: ವಿಶೇಷ ದಾಖಲೆ ಬರೆದ ಟೀಮ್ ಇಂಡಿಯಾ
Image
ಸಚಿನ್, ಧೋನಿಗೂ ಸಿಕ್ಕಿಲ್ಲ ಈ ಗೌರವ: ಇಂಗ್ಲೆಂಡ್ ಕ್ರಿಕೆಟ್ ಸ್ಟೇಡಿಯಂಗೆ ಭಾರತೀಯ ಕ್ರಿಕೆಟಿಗನ ಹೆಸರು..!
Image
Cheteshwar Pujara: ಒಟ್ಟು 997 ರನ್​: ಕೌಂಟಿ ಕ್ರಿಕೆಟ್​ನಲ್ಲಿ ಹೊಸ ಇತಿಹಾಸ ಬರೆದ ಪೂಜಾರ
Image
T20 World Cup 2022: ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ 16 ತಂಡಗಳು ಫೈನಲ್

ಸಾಮಾಜಿಕ ಜಾಲತಾಣದ ಮೂಲಕ ಅತ್ಯುತ್ತಮ ಮನರಂಜನೆ ನೀಡುತ್ತಿರುವ ಚಂದು ಬಿಗ್​ ಬಾಸ್​ಗೆ ಸೂಕ್ತ ವ್ಯಕ್ತಿ. ಎಲ್ಲರೂ ಮನರಂಜನೆಯನ್ನು ಬಯಸಿ ಬಿಗ್ ಬಾಸ್ ನೋಡುತ್ತಾರೆ. ಇದೀಗ ಆಯ್ಕೆಯಾಗಿರುವ ಸ್ಪರ್ಧಿಗಳಿಗಿಂತ ಚಂದು ಅತ್ಯುತ್ತಮ ಎಂಟರ್ಟೈನರ್. ಹೀಗಾಗಿ ಕಾಫಿನಾಡು ಚಂದುಗೆ ಅವಕಾಶ ನೀಡಬೇಕಿತ್ತು ಎಂದು ಅನೇಕರು ಸೋಷಿಯಲ್ ಮೀಡಿಯಾದಲ್ಲಿ ಪ್ರತಿಕ್ರಿಯಿಸಿದ್ದಾರೆ.

ಇನ್ನು ಬಾರಿ ಬಿಗ್ ಬಾಸ್ ಒಟಿಟಿ ಪ್ಲಾಟ್​ಫಾರ್ಮ್​ನಲ್ಲಿ ಪ್ರಸಾರವಾಗಲಿದ್ದು, ಇದರ ಬಳಿಕ ಬಿಗ್ ಬಾಸ್ ಸೀಸನ್ 9 ಶುರುವಾಗಲಿದೆ. ಹೀಗಾಗಿ ಟಿವಿ ಚಾನೆಲ್​ನಲ್ಲಿ ಪ್ರಸಾರವಾಗಲಿರುವ ಬಿಗ್ ಬಾಸ್​ನಲ್ಲಿ ಕಾಫಿನಾಡು ಚಂದು ಅವಕಾಶ ಪಡೆಯಲಿದ್ದಾರಾ ಕಾದು ನೋಡಬೇಕಿದೆ.

ಒಟ್ಟಿನಲ್ಲಿ ಚಂದುವಿನ ಟ್ರೆಂಡಿಂಗ್ ಹಾಡನ್ನು ಬಿಗ್ ಬಾಸ್​ನಲ್ಲಿ ನಿರೀಕ್ಷಿಸಿದ್ದ ಅಭಿಮಾನಿಗಳು ಇದೀಗ ಚಂದು ಅಣ್ಣ…ಚಂದು ಅಣ್ಣ ಯಾವಾಗ್ ಬರ್ತೀರ…ಬಿಗ್ ಬಾಸ್​ಗೆ ಯಾವಾಗ್ ಬರ್ತೀರಾ ಎಂದು ಹಾಡುತ್ತಿರುವುದಂತು ಸುಳ್ಳಲ್ಲ.

Published On - 1:32 pm, Sun, 7 August 22

ಹಮಾಸ್ ಮುಖ್ಯಸ್ಥ ಯಾಹ್ಯಾ ಸಿನ್ವಾರ್ ಸಾವಿನ ಕ್ಷಣದ ವಿಡಿಯೋ ವೈರಲ್
ಹಮಾಸ್ ಮುಖ್ಯಸ್ಥ ಯಾಹ್ಯಾ ಸಿನ್ವಾರ್ ಸಾವಿನ ಕ್ಷಣದ ವಿಡಿಯೋ ವೈರಲ್
'ಡಿ. 9ರೊಳಗೆ ನಿರ್ಧಾರ ಪ್ರಕಟಿಸದಿದ್ದರೆ ಸುವರ್ಣ ಸೌಧಕ್ಕೆ ಮುತ್ತಿಗೆ'
'ಡಿ. 9ರೊಳಗೆ ನಿರ್ಧಾರ ಪ್ರಕಟಿಸದಿದ್ದರೆ ಸುವರ್ಣ ಸೌಧಕ್ಕೆ ಮುತ್ತಿಗೆ'
ತೆಲಂಗಾಣದಲ್ಲಿ ಮಿತಿ ಮೀರಿದ ಕೋಳಿಗಳ ಕಳ್ಳತನ
ತೆಲಂಗಾಣದಲ್ಲಿ ಮಿತಿ ಮೀರಿದ ಕೋಳಿಗಳ ಕಳ್ಳತನ
ಚನ್ನಪಟ್ಟಣಕ್ಕೆ ನಾನೇ ಅಭ್ಯರ್ಥಿ ಅಂತ 53ನೇ ಸಲ ಹೇಳಿದ ಡಿಕೆ ಶಿವಕುಮಾರ್!
ಚನ್ನಪಟ್ಟಣಕ್ಕೆ ನಾನೇ ಅಭ್ಯರ್ಥಿ ಅಂತ 53ನೇ ಸಲ ಹೇಳಿದ ಡಿಕೆ ಶಿವಕುಮಾರ್!
ಶಿಗ್ಗಾವಿ ಮತ್ತು ಸಂಡೂರು ಜೆಡಿಎಸ್ ಮುಖಂಡರ ಜೊತೆ ನಾಳೆ ಮಾತುಕತೆ: ನಿಖಿಲ್
ಶಿಗ್ಗಾವಿ ಮತ್ತು ಸಂಡೂರು ಜೆಡಿಎಸ್ ಮುಖಂಡರ ಜೊತೆ ನಾಳೆ ಮಾತುಕತೆ: ನಿಖಿಲ್
ದೀಪಕ್ ಅರಸ್ ನಿಧನ: ಅಂತಿಮ ದರ್ಶನ ಪಡೆದು ಒಡನಾಟ ನೆನಪಿಸಿಕೊಂಡ ತರುಣ್ ಸುಧೀರ್
ದೀಪಕ್ ಅರಸ್ ನಿಧನ: ಅಂತಿಮ ದರ್ಶನ ಪಡೆದು ಒಡನಾಟ ನೆನಪಿಸಿಕೊಂಡ ತರುಣ್ ಸುಧೀರ್
ಜೈಲಿಗೆ ಬಂದ ಸಹೋದರ, ಪತ್ನಿಯ ಭೇಟಿಗೆ ಬೇಸರದಲ್ಲೇ ಬಂದ ದರ್ಶನ್: ವಿಡಿಯೋ
ಜೈಲಿಗೆ ಬಂದ ಸಹೋದರ, ಪತ್ನಿಯ ಭೇಟಿಗೆ ಬೇಸರದಲ್ಲೇ ಬಂದ ದರ್ಶನ್: ವಿಡಿಯೋ
ಅತ್ಯಂತ ದುರದೃಷ್ಟಕರ ರೀತಿಯಲ್ಲಿ ಔಟಾದ ರೋಹಿತ್ ಶರ್ಮಾ
ಅತ್ಯಂತ ದುರದೃಷ್ಟಕರ ರೀತಿಯಲ್ಲಿ ಔಟಾದ ರೋಹಿತ್ ಶರ್ಮಾ
ಈಡಿಗೆ ಬೇಕಿರುವ ಕಾಗದಪತ್ರಗಳನ್ನು ಮುಡಾ ಅಧಿಕಾರಿಗಳು ನೀಡುತ್ತಾರೆ: ಸಚಿವ
ಈಡಿಗೆ ಬೇಕಿರುವ ಕಾಗದಪತ್ರಗಳನ್ನು ಮುಡಾ ಅಧಿಕಾರಿಗಳು ನೀಡುತ್ತಾರೆ: ಸಚಿವ
ಲೋಕಾಯುಕ್ತ ಅಧಿಕಾರಿಗಳಿಂದ ನಿಷ್ಪಕ್ಷ ತನಿಖೆ ಸಾಧ್ಯವಿಲ್ಲ: ಕುಮಾರಸ್ವಾಮಿ
ಲೋಕಾಯುಕ್ತ ಅಧಿಕಾರಿಗಳಿಂದ ನಿಷ್ಪಕ್ಷ ತನಿಖೆ ಸಾಧ್ಯವಿಲ್ಲ: ಕುಮಾರಸ್ವಾಮಿ