AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bigg Boss OTT Kannada: ಚಂದುಗೆ ಇಲ್ಲ ಚಾನ್ಸ್​: ಬೇಸರ ವ್ಯಕ್ತಪಡಿಸಿದ ಅಭಿಮಾನಿಗಳು

Coffee Nadu Chandu: ಶನಿವಾರ ನಡೆದ ಅದ್ಧೂರಿ ಕಾರ್ಯಕ್ರಮದಲ್ಲಿ ಕಿಚ್ಚ ಸುದೀಪ್ ಒಬ್ಬೊಬ್ಬರೇ ಸ್ಪರ್ಧಿಗಳನ್ನು ಬರ ಮಾಡಿಕೊಂಡರು. ಹೀಗೆ 16 ಸ್ಪರ್ಧಿಗಳು ಮನೆಗೆ ಎಂಟ್ರಿ ಕೊಟ್ಟರೂ ಕಾಫಿನಾಡು ಚಂದು ಮಾತ್ರ ಕಾಣಿಸಿಕೊಂಡಿಲ್ಲ.

Bigg Boss OTT Kannada: ಚಂದುಗೆ ಇಲ್ಲ ಚಾನ್ಸ್​: ಬೇಸರ ವ್ಯಕ್ತಪಡಿಸಿದ ಅಭಿಮಾನಿಗಳು
coffee nadu chandu
TV9 Web
| Edited By: |

Updated on:Aug 07, 2022 | 1:42 PM

Share

ಬಿಗ್ ಬಾಸ್ ಕನ್ನಡ ಒಟಿಟಿ (Bigg Boss OTT Kannada) ಸೀಸನ್​ 1 ಗೆ ಶನಿವಾರದಿಂದ ಶುರುವಾಗಿದೆ. ಇದರೊಂದಿಗೆ ಈ ಬಾರಿ ಬಿಗ್ ಬಾಸ್​ನಲ್ಲಿ ಕಾಣಿಸಿಕೊಳ್ಳುವ ಸ್ಪರ್ಧಿಗಳು ಯಾರೆಲ್ಲಾ ಎಂಬ ಕುತೂಹಲಕ್ಕೆ ಕೂಡ ತೆರೆಬಿದ್ದಿದೆ. ಅಚ್ಚರಿ ಎಂಬಂತೆ ಒಟಿಟಿ ಬಿಗ್ ಬಾಸ್​ನಲ್ಲಿ ರೀಲ್ಸ್ ರಾಣಿ ಸೋನು ಗೌಡ (Sonu Gowda) ಕಾಣಿಸಿಕೊಂಡಿದ್ದಾರೆ. ಆದರೆ 16 ಸ್ಪರ್ಧಿಗಳಲ್ಲಿ ಸೋಷಿಯಲ್ ಮೀಡಿಯಾ ಸೆನ್ಸೇಷನ್ ಕಾಫಿನಾಡು ಚಂದು (Coffee Nadu Chandu ) ಕಾಣಿಸಿಕೊಳ್ಳದಿರುವುದು ಅಭಿಮಾನಿಗಳ ಬೇಸರಕ್ಕೆ ಕಾರಣವಾಗಿದೆ.

ಸೋಷಿಯಲ್ ಮೀಡಿಯಾಗಳಲ್ಲಿ ಹಾಡು ಹಾಗೂ ಡ್ಯಾನ್ಸ್​ ಮೂಲಕ ಎಲ್ಲರನ್ನು ರಂಜಿಸುತ್ತಿರುವ ಕಾಫಿನಾಡು ಚಂದು ಈ ಬಾರಿ ಬಿಗ್ ಬಾಸ್​ನಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿತ್ತು. ಅಲ್ಲದೆ ಸಂಭಾವ್ಯ ಸ್ಪರ್ಧಿಗಳ ಪಟ್ಟಿಯಲ್ಲೂ ಚಂದು ಹೆಸರು ಕೂಡ ರಾರಾಜಿಸಿತ್ತು. ಅತ್ತ ಕಡೆ ಅವಕಾಶ ನೀಡಿದರೆ ನಾನು ಸಹ ಬಿಗ್ ಬಾಸ್​ಗೆ ಹೋಗುತ್ತೇನೆ ಎಂದು ಕಾಫಿನಾಡು ಚಂದು ಕೂಡ ಹೇಳಿಕೊಂಡಿದ್ದರು. ಹೀಗಾಗಿ ಚಿಕ್ಕಮಗಳೂರಿನ ಈ ‘ಅಸಾಮಾನ್ಯ’ ಪ್ರತಿಭೆ ಬಿಗ್ ಬಾಸ್​ಗೆ ಎಂಟ್ರಿ ಕೊಡಲಿದ್ದಾರೆ ಎಂಬ ಸುದ್ದಿಗಳು ಹರಿದಾಡಿದ್ದವು.

ಆದರೆ ಶನಿವಾರ ನಡೆದ ಅದ್ಧೂರಿ ಕಾರ್ಯಕ್ರಮದಲ್ಲಿ ಕಿಚ್ಚ ಸುದೀಪ್ ಒಬ್ಬೊಬ್ಬರೇ ಸ್ಪರ್ಧಿಗಳನ್ನು ಬರ ಮಾಡಿಕೊಂಡರು. ಹೀಗೆ 16 ಸ್ಪರ್ಧಿಗಳು ಮನೆಗೆ ಎಂಟ್ರಿ ಕೊಟ್ಟರೂ ಕಾಫಿನಾಡು ಚಂದು ಮಾತ್ರ ಕಾಣಿಸಿಕೊಂಡಿಲ್ಲ. ಹೀಗಾಗಿಯೇ ಇದೀಗ ಕಾಫಿನಾಡು ಚಂದುವಿಗೆ ಯಾಕೆ ಅವಕಾಶ ನೀಡಲಾಗಿಲ್ಲ ಎಂಬ ಪ್ರಶ್ನೆಗಳನ್ನು ಹಲವು ಅಭಿಮಾನಿಗಳು ಸೋಷಿಯಲ್ ಮೀಡಿಯಾ ಮೂಲಕ ಮುಂದಿಡುತ್ತಿದ್ದಾರೆ.

ಇದನ್ನೂ ಓದಿ
Image
Team India: 7 ತಿಂಗಳಲ್ಲಿ 7 ನಾಯಕರು: ವಿಶೇಷ ದಾಖಲೆ ಬರೆದ ಟೀಮ್ ಇಂಡಿಯಾ
Image
ಸಚಿನ್, ಧೋನಿಗೂ ಸಿಕ್ಕಿಲ್ಲ ಈ ಗೌರವ: ಇಂಗ್ಲೆಂಡ್ ಕ್ರಿಕೆಟ್ ಸ್ಟೇಡಿಯಂಗೆ ಭಾರತೀಯ ಕ್ರಿಕೆಟಿಗನ ಹೆಸರು..!
Image
Cheteshwar Pujara: ಒಟ್ಟು 997 ರನ್​: ಕೌಂಟಿ ಕ್ರಿಕೆಟ್​ನಲ್ಲಿ ಹೊಸ ಇತಿಹಾಸ ಬರೆದ ಪೂಜಾರ
Image
T20 World Cup 2022: ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ 16 ತಂಡಗಳು ಫೈನಲ್

ಸಾಮಾಜಿಕ ಜಾಲತಾಣದ ಮೂಲಕ ಅತ್ಯುತ್ತಮ ಮನರಂಜನೆ ನೀಡುತ್ತಿರುವ ಚಂದು ಬಿಗ್​ ಬಾಸ್​ಗೆ ಸೂಕ್ತ ವ್ಯಕ್ತಿ. ಎಲ್ಲರೂ ಮನರಂಜನೆಯನ್ನು ಬಯಸಿ ಬಿಗ್ ಬಾಸ್ ನೋಡುತ್ತಾರೆ. ಇದೀಗ ಆಯ್ಕೆಯಾಗಿರುವ ಸ್ಪರ್ಧಿಗಳಿಗಿಂತ ಚಂದು ಅತ್ಯುತ್ತಮ ಎಂಟರ್ಟೈನರ್. ಹೀಗಾಗಿ ಕಾಫಿನಾಡು ಚಂದುಗೆ ಅವಕಾಶ ನೀಡಬೇಕಿತ್ತು ಎಂದು ಅನೇಕರು ಸೋಷಿಯಲ್ ಮೀಡಿಯಾದಲ್ಲಿ ಪ್ರತಿಕ್ರಿಯಿಸಿದ್ದಾರೆ.

ಇನ್ನು ಬಾರಿ ಬಿಗ್ ಬಾಸ್ ಒಟಿಟಿ ಪ್ಲಾಟ್​ಫಾರ್ಮ್​ನಲ್ಲಿ ಪ್ರಸಾರವಾಗಲಿದ್ದು, ಇದರ ಬಳಿಕ ಬಿಗ್ ಬಾಸ್ ಸೀಸನ್ 9 ಶುರುವಾಗಲಿದೆ. ಹೀಗಾಗಿ ಟಿವಿ ಚಾನೆಲ್​ನಲ್ಲಿ ಪ್ರಸಾರವಾಗಲಿರುವ ಬಿಗ್ ಬಾಸ್​ನಲ್ಲಿ ಕಾಫಿನಾಡು ಚಂದು ಅವಕಾಶ ಪಡೆಯಲಿದ್ದಾರಾ ಕಾದು ನೋಡಬೇಕಿದೆ.

ಒಟ್ಟಿನಲ್ಲಿ ಚಂದುವಿನ ಟ್ರೆಂಡಿಂಗ್ ಹಾಡನ್ನು ಬಿಗ್ ಬಾಸ್​ನಲ್ಲಿ ನಿರೀಕ್ಷಿಸಿದ್ದ ಅಭಿಮಾನಿಗಳು ಇದೀಗ ಚಂದು ಅಣ್ಣ…ಚಂದು ಅಣ್ಣ ಯಾವಾಗ್ ಬರ್ತೀರ…ಬಿಗ್ ಬಾಸ್​ಗೆ ಯಾವಾಗ್ ಬರ್ತೀರಾ ಎಂದು ಹಾಡುತ್ತಿರುವುದಂತು ಸುಳ್ಳಲ್ಲ.

Published On - 1:32 pm, Sun, 7 August 22

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್