AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Coffee Nadu Chandu: ರಾಜಕೀಯಕ್ಕೆ ಸೇರಿ ಅಂತ ಬಿಟ್ಟಿ ಸಲಹೆ ಕೊಟ್ಟವರಿಗೆ ಖಡಕ್​ ತಿರುಗೇಟು ನೀಡಿದ ಕಾಫಿ ನಾಡು ಚಂದು

Coffee Nadu Chandu Viral Video: ಸೋಶಿಯಲ್​ ಮೀಡಿಯಾದಲ್ಲಿ ಚಂದು ಅವರಿಗೆ ಸಖತ್​ ಜನಪ್ರಿಯತೆ ಸಿಕ್ಕಿದೆ. ಇನ್​ಸ್ಟಾಗ್ರಾಮ್​ನಲ್ಲಿ ಅವರನ್ನು ಫಾಲೋ ಮಾಡುವವರ ಸಂಖ್ಯೆ ಹೆಚ್ಚುತ್ತಲೇ ಇದೆ.

Coffee Nadu Chandu: ರಾಜಕೀಯಕ್ಕೆ ಸೇರಿ ಅಂತ ಬಿಟ್ಟಿ ಸಲಹೆ ಕೊಟ್ಟವರಿಗೆ ಖಡಕ್​ ತಿರುಗೇಟು ನೀಡಿದ ಕಾಫಿ ನಾಡು ಚಂದು
ಕಾಫಿ ನಾಡು ಚಂದು
TV9 Web
| Edited By: |

Updated on:Sep 04, 2022 | 3:53 PM

Share

ಕಾಫಿ ನಾಡು ಚಂದು (Coffee Nadu Chandu) ಜನಪ್ರಿಯತೆ ದಿನೇದಿನೇ ಹೆಚ್ಚುತ್ತಿದೆ. ಹಲವಾರು ಕಡೆಗಳಲ್ಲಿ ಅವರನ್ನು ಕರೆದು ಸನ್ಮಾನ ಮಾಡಲಾಗುತ್ತಿದೆ. ಅವರ ವಿಡಿಯೋಗಳಿಗೆ (Coffee Nadu Chandu Video) ಸಿಕ್ಕಾಪಟ್ಟೆ ಲೈಕ್ಸ್​ ಸಿಗುತ್ತಿದೆ. ‘ಡ್ಯಾನ್ಸ್​ ಕರ್ನಾಟಕ ಡ್ಯಾನ್ಸ್​’ ರೀತಿಯ ಕಿರುತೆರೆ ಕಾರ್ಯಕ್ರಮಗಳ ವೇದಿಕೆಯಲ್ಲೂ ಕಾಫಿ ನಾಡು ಚಂದು ಮಿಂಚಿದ್ದಾರೆ. ಇಷ್ಟೆಲ್ಲ ಮಾಡಿರುವ ಅವರಿಗೆ ಕೆಲವರು ಬಿಟ್ಟಿ ಸಲಹೆ ನೀಡಿದ್ದು ಕೂಡ ಇದೆ. ‘ನೀವು ರಾಯಕೀಯಕ್ಕೆ (Politics) ಸೇರಬಹುದಲ್ಲ’ ಎಂದು ಒಂದಷ್ಟು ಮಂದಿ ಹೇಳಿದ್ದಾರಂತೆ. ಅಂಥವರಿಗೆ ಚಂದು ಖಡಕ್​ ತಿರುಗೇಟು ನೀಡಿದ್ದಾರೆ. ಅದು ಕೂಡ ತಮ್ಮದೇ ಶೈಲಿಯಲ್ಲಿ. ಈ ಕುರಿತು ಒಂದು ವಿಡಿಯೋ ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿದೆ.

‘ನೀವು ರಾಜಕೀಯಕ್ಕೆ ನಿಂತುಕೊಳ್ಳಬಹುದಿತ್ತಲ್ಲ ಅಂತ ಯಾರೋ ಒಬ್ಬರು ಹೇಳಿದ್ರು. ನನಗೆ ಅದರಲ್ಲಿ ಇಂಟರೆಸ್ಟ್​ ಇಲ್ಲ. ಯಾಕೆಂದರೆ ಕಾಂಗ್ರೆಸ್​, ಬಿಜೆಪಿ, ಜೆಡಿಎಸ್​ ಇದಾವೆ. ಓಹೋ ಚಂದು ಕಾಂಗ್ರೆಸ್​ಗೆ ನಿಂತುಕೊಂಡು, ಬಿಜೆಪಿಗೆ ನಿಂತುಕೊಂಡ ಅಂತ ಜನರು ಹೇಳೋದು ಬೇಡ. ನನಗೆ ಈಗ ಇರುವ ಲೈಫ್​ ಚೆನ್ನಾಗಿದೆ. ರಾಜಕೀಯದ ಬಗ್ಗೆ ಮಾತಾಡೋಕೆ ನಾನು ರಾಜಕಾರಣಿ ಅಲ್ಲ. ದೇವಸ್ಥಾನದ ಬಗ್ಗೆ ಮಾತಾಡೋಕೆ ಪೂಜಾರಿನೂ ಅಲ್ಲ. ಪಾಠ ಮಾಡೋಕೆ ನಾನು ಮೇಷ್ಟ್ರು ಅಲ್ಲ. ನಾನು ಪುನೀತಣ್ಣ, ಶಿವಣ್ಣ ಅವರ ಅಭಿಮಾನಿ’ ಎಂದು ಚಂದು ಹೇಳಿರುವ ವಿಡಿಯೋ ವೈರಲ್​ ಆಗಿದೆ.

ಇದನ್ನೂ ಓದಿ
Image
Coffee Nadu Chandu: ಕಾಫಿ ನಾಡು ಚಂದುಗೆ ಅನುಶ್ರೀ ಪ್ರೀತಿಯ ಗಿಫ್ಟ್​; ಶಿವಣ್ಣನ ಎದುರು ಎಮೋಷನಲ್​ ಆದ ರೀಲ್ಸ್​ ಹೀರೋ
Image
‘ಇಂಥ ಅಭಿಮಾನಿ ಪಡೆಯಲು ಪುಣ್ಯ ಮಾಡಿರಬೇಕು’: ಕಾಫಿ ನಾಡು ಚಂದು ಬಗ್ಗೆ ಶಿವಣ್ಣನ ಮಾತು
Image
Coffee Nadu Chandu: ಈಡೇರಿತು ಕಾಫಿ ನಾಡು ಚಂದು ಆಸೆ; ಶಿವಣ್ಣನ ಭೇಟಿ ಮಾಡಿದ ವೈರಲ್​ ಸ್ಟಾರ್​ಗೆ ಅನುಶ್ರೀ ಸಾಥ್​
Image
‘5 ಸಾವಿರ ಕರೆ ಬರ್ತಿದೆ, ದಿನಕ್ಕೊಂದು ನಂಬರ್ ಬದಲಿಸುತ್ತಿದ್ದೇನೆ’; ಕಾಫಿ ನಾಡು ಚಂದು

ಚಿಕ್ಕಮಗಳೂರಿನಲ್ಲಿ ಆಟೋ ಓಡಿಸಿಕೊಂಡು ಜೀವನ ನಡೆಸುವವರು ಚಂದು. ತಮ್ಮ ಆತ್ಮೀಯರಿಗೆ ತಮ್ಮದೇ ಶೈಲಿಯಲ್ಲಿ ಬರ್ತ್​ಡೇ ವಿಶ್​ ಮಾಡುವ ಮೂಲಕ ಅವರು ಫೇಮಸ್​ ಆದರು. ಅವರ ವಿಡಿಯೋಗಳು ಸಿಕ್ಕಾಪಟ್ಟೆ ವೈರಲ್​ ಆದ ಬಳಿಕ ರಾಜ್ಯಾದ್ಯಂತ ಮನೆಮಾತಾದರು. ಅನೇಕ ಕಡೆಗಳಲ್ಲಿ ಅವರು ಸಂದರ್ಶನ ನೀಡಿದ್ದಾರೆ. ಒಂದಷ್ಟು ಜನಪರ ಕಾರ್ಯಗಳನ್ನು ಮಾಡುತ್ತಲೂ ಅವರು ಶೈನ್​ ಆಗುತ್ತಿದ್ದಾರೆ.

ಸೋಶಿಯಲ್​ ಮೀಡಿಯಾದಲ್ಲಿ ಚಂದು ಅವರಿಗೆ ಸಖತ್​ ಜನಪ್ರಿಯತೆ ಸಿಕ್ಕಿದೆ. ಇನ್​ಸ್ಟಾಗ್ರಾಮ್​ನಲ್ಲಿ ಅವರನ್ನು ಫಾಲೋ ಮಾಡುವವರ ಸಂಖ್ಯೆ ಹೆಚ್ಚುತ್ತಲೇ ಇದೆ. ಆರಂಭದಲ್ಲಿ ಕೆಲವೇ ಕೆಲವು ಫಾಲೋವರ್ಸ್​ ಇದ್ದರು. ಈಗ ಅವರನ್ನು ಬರೋಬ್ಬರಿ 4 ಲಕ್ಷಕ್ಕೂ ಅಧಿಕ ಜನರು ಫಾಲೋ ಮಾಡುತ್ತಿದ್ದಾರೆ ಎಂಬುದು ವಿಶೇಷ.

ಶಿವರಾಜ್​ಕುಮಾರ್​ ಅವರನ್ನು ನೋಡಬೇಕು ಎಂಬುದು ಕಾಫಿ ನಾಡು ಚಂದು ಅವರ ಮಹಾನ್​ ಆಸೆ ಆಗಿತ್ತು. ಜೀ ಕನ್ನಡದ ‘ಡ್ಯಾನ್ಸ್​ ಕರ್ನಾಟಕ ಡ್ಯಾನ್ಸ್​’ ಶೋ ಮೂಲಕ ಅವರ ಆಸೆ ಇತ್ತೀಚೆಗೆ ಈಡೇರಿತು. ಆ ವಿಡಿಯೋಗಳು ಕೂಡ ಸಖತ್​ ವೈರಲ್​ ಆಗಿವೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 3:53 pm, Sun, 4 September 22

ಮೈಲಾರಿಗೆ 14 ನ್ಯಾಯಾಂಗ ಬಂಧನ: ಜೈಲಿಗೆ ಹೋಗುವ ಮುನ್ನ ಸಿಂಗರ್ ಹೇಳಿದ್ದೇನು?
ಮೈಲಾರಿಗೆ 14 ನ್ಯಾಯಾಂಗ ಬಂಧನ: ಜೈಲಿಗೆ ಹೋಗುವ ಮುನ್ನ ಸಿಂಗರ್ ಹೇಳಿದ್ದೇನು?
ಬೆಂಗಳೂರಿನಲ್ಲಿ ಐಪಿಎಲ್ ಉದ್ಘಾಟನಾ ಪಂದ್ಯ ನಡೆಸಲು ಬಿಸಿಸಿಐ ಗ್ರೀನ್ ಸಿಗ್ನಲ್
ಬೆಂಗಳೂರಿನಲ್ಲಿ ಐಪಿಎಲ್ ಉದ್ಘಾಟನಾ ಪಂದ್ಯ ನಡೆಸಲು ಬಿಸಿಸಿಐ ಗ್ರೀನ್ ಸಿಗ್ನಲ್
ತನ್ನ ಪತ್ನಿ ಜತೆ ಸಹೋದರ ಲವ್ವಿಡವ್ವಿ: ತಮ್ಮನನ್ನು ಕೊಂದ ಅಣ್ಣ,
ತನ್ನ ಪತ್ನಿ ಜತೆ ಸಹೋದರ ಲವ್ವಿಡವ್ವಿ: ತಮ್ಮನನ್ನು ಕೊಂದ ಅಣ್ಣ,
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ಚೈತ್ರಾಗೆ ಕೀ ಕೊಟ್ಟ ಗಿಲ್ಲಿ: ನಕ್ಕು ಸುಸ್ತಾದ ರಜತ್-ರಘು
ಚೈತ್ರಾಗೆ ಕೀ ಕೊಟ್ಟ ಗಿಲ್ಲಿ: ನಕ್ಕು ಸುಸ್ತಾದ ರಜತ್-ರಘು
ಗೃಹಲಕ್ಷ್ಮಿ ಬಗ್ಗೆ ತಪ್ಪು ಮಾಹಿತಿ: ವಿಷಾದ ವ್ಯಕ್ತಪಡಿಸಿದ ಹೆಬ್ಬಾಳ್ಕರ್
ಗೃಹಲಕ್ಷ್ಮಿ ಬಗ್ಗೆ ತಪ್ಪು ಮಾಹಿತಿ: ವಿಷಾದ ವ್ಯಕ್ತಪಡಿಸಿದ ಹೆಬ್ಬಾಳ್ಕರ್
ಜೈಲಲ್ಲಿ ಖಾಕಿ ಕಾರ್ಯಾಚರಣೆಗೆ ಪತರುಗುಟ್ಟಿದ ಕೈದಿಗಳು
ಜೈಲಲ್ಲಿ ಖಾಕಿ ಕಾರ್ಯಾಚರಣೆಗೆ ಪತರುಗುಟ್ಟಿದ ಕೈದಿಗಳು