AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಲಿಯಾ ಭಟ್​ ವಿಚಾರಕ್ಕೆ ದೀಪಿಕಾ ಪಡುಕೋಣೆ- ಸಂಜಯ್​ ಲೀಲಾ ಬನ್ಸಾಲಿ ನಡುವೆ ಕೋಲ್ಡ್​ ವಾರ್!

ಸಂಜಯ್​ ಲೀಲಾ ಬನ್ಸಾಲಿ ಮತ್ತು ದೀಪಿಕಾ ನಡುವೆ ಯಾವುದೂ ಸರಿ ಇಲ್ಲ ಎನ್ನುವ ಬಗ್ಗೆ ಬಾಲಿವುಡ್​ ಅಂಗಳದಲ್ಲಿ ಹರಿದಾಡುತ್ತಿದೆ.

ಆಲಿಯಾ ಭಟ್​ ವಿಚಾರಕ್ಕೆ ದೀಪಿಕಾ ಪಡುಕೋಣೆ- ಸಂಜಯ್​ ಲೀಲಾ ಬನ್ಸಾಲಿ ನಡುವೆ ಕೋಲ್ಡ್​ ವಾರ್!
ದೀಪಿಕಾ-ಸಂಜಯ್​ ಲೀಲಾ ಬನ್ಸಾಲಿ
ರಾಜೇಶ್ ದುಗ್ಗುಮನೆ
|

Updated on:Mar 27, 2021 | 7:05 PM

Share

ರಾಮ್​ ಲೀಲಾ, ಬಾಜಿರಾವ್​ ಮಸ್ತಾನಿ ಮತ್ತು ಪದ್ಮಾವತ್​ ಬಾಲಿವುಡ್​ ಪಾಲಿಗೆ ಸೂಪರ್​ ಹಿಟ್​ ಸಿನಿಮಾಗಳು. ನಿರ್ದೇಶಕ ಸಂಜಯ್​ ಲೀಲಾ ಬನ್ಸಾಲಿ ಮತ್ತು ನಟಿ ದೀಪಿಕಾ ಪಡುಕೋಣೆ ಈ ಚಿತ್ರಗಳಲ್ಲಿ ಒಟ್ಟಾಗಿ ಕೆಲಸ ಮಾಡಿದ್ದಾರೆ. ಅಷ್ಟೇ ಅಲ್ಲ, ದೀಪಿಕಾ ವೃತ್ತಿ ಜೀವನದ ತೂಕ ಹೆಚ್ಚಿಸಿತ್ತು. ಇವರು ಮುಂದಿನ ದಿನಗಳಲ್ಲಿ ಮತ್ತೆ ಕೆಲಸ ಮಾಡಲಿದ್ದಾರೆ ಎನ್ನಲಾಗಿತ್ತು. ಆದರೆ, ಈಗ ಕೇಳಿ ಬರುತ್ತಿರುವ ಲೇಟೆಸ್ಟ್​ ವಿಚಾರ ಎಂದರೆ, ದೀಪಿಕಾ ಹಾಗೂ ಬನ್ಸಾಲಿ ನಡುವೆ ಕೋಲ್ಡ್​ ವಾರ್​ ನಡೆದಿದೆಯಂತೆ. ಇದಕ್ಕೆ ಕಾರಣ ಆಲಿಯಾ ಭಟ್​ ಅನ್ನೋದು ವಿಚಿತ್ರ. ಸಂಜಯ್​ ಲೀಲಾ ಬನ್ಸಾಲಿ ಮತ್ತು ದೀಪಿಕಾ ನಡುವೆ ಯಾವುದೂ ಸರಿ ಇಲ್ಲ ಎನ್ನುವ ಬಗ್ಗೆ ಬಾಲಿವುಡ್​ ಅಂಗಳದಲ್ಲಿ ಸುದ್ದಿ ಹರಿದಾಡುತ್ತಿದೆ. ಗಂಗೂಬಾಯಿ ಕಾಠಿಯಾವಾಡಿ ಸಿನಿಮಾವನ್ನು ಸಂಜಯ್​ ಲೀಲ್​ ಬನ್ಸಾಲಿ ನಿರ್ದೇಶವಿದೆ. ಈ ಚಿತ್ರದಲ್ಲಿ ವಿಶೇಷ ಸಾಂಗ್​ ಒಂದರಲ್ಲಿ ನಟಿಸೋಕೆ ದೀಪಿಕಾಗೆ ಬನ್ಸಾಲಿ ಆಫರ್​ ನೀಡಿದ್ದರಂತೆ. ಆದರೆ, ಈ ಆಫರ್​ಅನ್ನು ದೀಪಿಕಾ ಕಡ್ಡಿಮುರಿದಂತೆ ತಿರಸ್ಕರಿಸಿದ್ದಾರೆ. ನಂತರ ಹೀರಾ ಮಂಡಿಯಲ್ಲಿ ಪ್ರಮುಖ ಪಾತ್ರ ನಿರ್ವಹಿಸುವ ಆಫರ್​ ಕೂಡ ನೀಡಲಾಯಿತಂತೆ. ಆಗಲೂ ದೀಪಿಕಾ ಈ ಆಫರ್​ ತಿರಸ್ಕರಿಸಿದ್ದರು. ಇದು ಈಗ ಹಲವು ಸಂಶಯಗಳಿಗೆ ಕಾರಣವಾಗಿದೆ.

ಸಂಜಯ್​ ಲೀಲಾ ಬನ್ಸಾಲಿ ನಿರ್ದೇಶನದ ಬೈಜು ಬಾವ್ರಾ ಸಿನಿಮಾದಲ್ಲಿ ರಣಬೀರ್​ ಕಪೂರ್​, ಆಲಿಯಾ ಭಟ್ ಮತ್ತು ದೀಪಿಕಾ ಪಡುಕೋಣೆ ನಟಿಸಬೇಕಿತ್ತು. ಆದರೆ, ಈ ಕೋಲ್ಡ್​ ವಾರ್​ನಿಂದ ಈ ಸಿನಿಮಾ ಆಗೋದೆ ಡೌಟ್​ ಎನ್ನುವ ಮಾತು ಬಾಲಿವುಡ್​ ಅಂಗಳದಿಂದ ಕೇಳಿ ಬರುತ್ತಿದೆ.

ಗಂಗೂಬಾಯಿ ಕಾಠಿಯಾವಾಡಿ ಸಿನಿಮಾದಲ್ಲಿ ಲೀಡ್​ ಪಾತ್ರಕ್ಕಾಗಿ ಪ್ರಿಯಾಂಕಾ ಚೋಪ್ರಾ ಅವರನ್ನು ಆಯ್ಕೆ ಮಾಡಿಕೊಳ್ಳಬೇಕು ಎನ್ನುವುದು ಬನ್ಸಾಲಿ ಆಲೋಚನೆ ಆಗಿತ್ತು. ಆದರೆ, ಅವರು ಮದುವೆ ಆಗಿ ಅಮೆರಿಕದಲ್ಲಿದ್ದಾರೆ. ಹೀಗಾಗಿ, ಅವರು ಆಫರ್​ ತಿರಸ್ಕರಿಸಿದ್ದಾರೆ. ಅವರು ಎರಡನೇ ಆಪ್ಶನ್​ ಆಗಿ ದೀಪಿಕಾರನ್ನು ಇಟ್ಟುಕೊಳ್ಳಲಾಗಿತ್ತು. ಆದರೆ, ಬನ್ಸಾಲಿ ಕೊನೆ ಕ್ಷಣದಲ್ಲಿ ಆಲಿಯಾ ಭಟ್​ ಅವರನ್ನು ಆಯ್ಕೆ ಮಾಡಿಕೊಂಡಿರುವುದು ದೀಪಿಕಾ ಕೋಪಕ್ಕೆ ಕಾರಣವಾಗಿದೆ. ಹೀಗಾಗಿ, ಬನ್ಸಾಲಿ ವಿರುದ್ಧ ದೀಪಿಕಾ ಮುನಿಸಿಕೊಂಡಿದ್ದಾರೆ ಎಂಬುದು ಸದ್ಯ ಕೇಳಿ ಬರುತ್ತಿರುವ ಮಾಹಿತಿ.

ಇದನ್ನೂ ಓದಿ: ಗಂಗೂಬಾಯಿ ಕಾಠಿಯಾವಾಡಿ ಸಿನಿಮಾಗೆ ಸಂಕಷ್ಟ; ಆಲಿಯಾ, ಬನ್ಸಾಲಿಗೆ ಸಮನ್ಸ್​ ​

Published On - 6:47 pm, Sat, 27 March 21

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ