AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಲಿಯಾ ಭಟ್​ ವಿಚಾರಕ್ಕೆ ದೀಪಿಕಾ ಪಡುಕೋಣೆ- ಸಂಜಯ್​ ಲೀಲಾ ಬನ್ಸಾಲಿ ನಡುವೆ ಕೋಲ್ಡ್​ ವಾರ್!

ಸಂಜಯ್​ ಲೀಲಾ ಬನ್ಸಾಲಿ ಮತ್ತು ದೀಪಿಕಾ ನಡುವೆ ಯಾವುದೂ ಸರಿ ಇಲ್ಲ ಎನ್ನುವ ಬಗ್ಗೆ ಬಾಲಿವುಡ್​ ಅಂಗಳದಲ್ಲಿ ಹರಿದಾಡುತ್ತಿದೆ.

ಆಲಿಯಾ ಭಟ್​ ವಿಚಾರಕ್ಕೆ ದೀಪಿಕಾ ಪಡುಕೋಣೆ- ಸಂಜಯ್​ ಲೀಲಾ ಬನ್ಸಾಲಿ ನಡುವೆ ಕೋಲ್ಡ್​ ವಾರ್!
ದೀಪಿಕಾ-ಸಂಜಯ್​ ಲೀಲಾ ಬನ್ಸಾಲಿ
ರಾಜೇಶ್ ದುಗ್ಗುಮನೆ
|

Updated on:Mar 27, 2021 | 7:05 PM

Share

ರಾಮ್​ ಲೀಲಾ, ಬಾಜಿರಾವ್​ ಮಸ್ತಾನಿ ಮತ್ತು ಪದ್ಮಾವತ್​ ಬಾಲಿವುಡ್​ ಪಾಲಿಗೆ ಸೂಪರ್​ ಹಿಟ್​ ಸಿನಿಮಾಗಳು. ನಿರ್ದೇಶಕ ಸಂಜಯ್​ ಲೀಲಾ ಬನ್ಸಾಲಿ ಮತ್ತು ನಟಿ ದೀಪಿಕಾ ಪಡುಕೋಣೆ ಈ ಚಿತ್ರಗಳಲ್ಲಿ ಒಟ್ಟಾಗಿ ಕೆಲಸ ಮಾಡಿದ್ದಾರೆ. ಅಷ್ಟೇ ಅಲ್ಲ, ದೀಪಿಕಾ ವೃತ್ತಿ ಜೀವನದ ತೂಕ ಹೆಚ್ಚಿಸಿತ್ತು. ಇವರು ಮುಂದಿನ ದಿನಗಳಲ್ಲಿ ಮತ್ತೆ ಕೆಲಸ ಮಾಡಲಿದ್ದಾರೆ ಎನ್ನಲಾಗಿತ್ತು. ಆದರೆ, ಈಗ ಕೇಳಿ ಬರುತ್ತಿರುವ ಲೇಟೆಸ್ಟ್​ ವಿಚಾರ ಎಂದರೆ, ದೀಪಿಕಾ ಹಾಗೂ ಬನ್ಸಾಲಿ ನಡುವೆ ಕೋಲ್ಡ್​ ವಾರ್​ ನಡೆದಿದೆಯಂತೆ. ಇದಕ್ಕೆ ಕಾರಣ ಆಲಿಯಾ ಭಟ್​ ಅನ್ನೋದು ವಿಚಿತ್ರ. ಸಂಜಯ್​ ಲೀಲಾ ಬನ್ಸಾಲಿ ಮತ್ತು ದೀಪಿಕಾ ನಡುವೆ ಯಾವುದೂ ಸರಿ ಇಲ್ಲ ಎನ್ನುವ ಬಗ್ಗೆ ಬಾಲಿವುಡ್​ ಅಂಗಳದಲ್ಲಿ ಸುದ್ದಿ ಹರಿದಾಡುತ್ತಿದೆ. ಗಂಗೂಬಾಯಿ ಕಾಠಿಯಾವಾಡಿ ಸಿನಿಮಾವನ್ನು ಸಂಜಯ್​ ಲೀಲ್​ ಬನ್ಸಾಲಿ ನಿರ್ದೇಶವಿದೆ. ಈ ಚಿತ್ರದಲ್ಲಿ ವಿಶೇಷ ಸಾಂಗ್​ ಒಂದರಲ್ಲಿ ನಟಿಸೋಕೆ ದೀಪಿಕಾಗೆ ಬನ್ಸಾಲಿ ಆಫರ್​ ನೀಡಿದ್ದರಂತೆ. ಆದರೆ, ಈ ಆಫರ್​ಅನ್ನು ದೀಪಿಕಾ ಕಡ್ಡಿಮುರಿದಂತೆ ತಿರಸ್ಕರಿಸಿದ್ದಾರೆ. ನಂತರ ಹೀರಾ ಮಂಡಿಯಲ್ಲಿ ಪ್ರಮುಖ ಪಾತ್ರ ನಿರ್ವಹಿಸುವ ಆಫರ್​ ಕೂಡ ನೀಡಲಾಯಿತಂತೆ. ಆಗಲೂ ದೀಪಿಕಾ ಈ ಆಫರ್​ ತಿರಸ್ಕರಿಸಿದ್ದರು. ಇದು ಈಗ ಹಲವು ಸಂಶಯಗಳಿಗೆ ಕಾರಣವಾಗಿದೆ.

ಸಂಜಯ್​ ಲೀಲಾ ಬನ್ಸಾಲಿ ನಿರ್ದೇಶನದ ಬೈಜು ಬಾವ್ರಾ ಸಿನಿಮಾದಲ್ಲಿ ರಣಬೀರ್​ ಕಪೂರ್​, ಆಲಿಯಾ ಭಟ್ ಮತ್ತು ದೀಪಿಕಾ ಪಡುಕೋಣೆ ನಟಿಸಬೇಕಿತ್ತು. ಆದರೆ, ಈ ಕೋಲ್ಡ್​ ವಾರ್​ನಿಂದ ಈ ಸಿನಿಮಾ ಆಗೋದೆ ಡೌಟ್​ ಎನ್ನುವ ಮಾತು ಬಾಲಿವುಡ್​ ಅಂಗಳದಿಂದ ಕೇಳಿ ಬರುತ್ತಿದೆ.

ಗಂಗೂಬಾಯಿ ಕಾಠಿಯಾವಾಡಿ ಸಿನಿಮಾದಲ್ಲಿ ಲೀಡ್​ ಪಾತ್ರಕ್ಕಾಗಿ ಪ್ರಿಯಾಂಕಾ ಚೋಪ್ರಾ ಅವರನ್ನು ಆಯ್ಕೆ ಮಾಡಿಕೊಳ್ಳಬೇಕು ಎನ್ನುವುದು ಬನ್ಸಾಲಿ ಆಲೋಚನೆ ಆಗಿತ್ತು. ಆದರೆ, ಅವರು ಮದುವೆ ಆಗಿ ಅಮೆರಿಕದಲ್ಲಿದ್ದಾರೆ. ಹೀಗಾಗಿ, ಅವರು ಆಫರ್​ ತಿರಸ್ಕರಿಸಿದ್ದಾರೆ. ಅವರು ಎರಡನೇ ಆಪ್ಶನ್​ ಆಗಿ ದೀಪಿಕಾರನ್ನು ಇಟ್ಟುಕೊಳ್ಳಲಾಗಿತ್ತು. ಆದರೆ, ಬನ್ಸಾಲಿ ಕೊನೆ ಕ್ಷಣದಲ್ಲಿ ಆಲಿಯಾ ಭಟ್​ ಅವರನ್ನು ಆಯ್ಕೆ ಮಾಡಿಕೊಂಡಿರುವುದು ದೀಪಿಕಾ ಕೋಪಕ್ಕೆ ಕಾರಣವಾಗಿದೆ. ಹೀಗಾಗಿ, ಬನ್ಸಾಲಿ ವಿರುದ್ಧ ದೀಪಿಕಾ ಮುನಿಸಿಕೊಂಡಿದ್ದಾರೆ ಎಂಬುದು ಸದ್ಯ ಕೇಳಿ ಬರುತ್ತಿರುವ ಮಾಹಿತಿ.

ಇದನ್ನೂ ಓದಿ: ಗಂಗೂಬಾಯಿ ಕಾಠಿಯಾವಾಡಿ ಸಿನಿಮಾಗೆ ಸಂಕಷ್ಟ; ಆಲಿಯಾ, ಬನ್ಸಾಲಿಗೆ ಸಮನ್ಸ್​ ​

Published On - 6:47 pm, Sat, 27 March 21

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ