AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಲಿಯಾ ಭಟ್​ ವಿಚಾರಕ್ಕೆ ದೀಪಿಕಾ ಪಡುಕೋಣೆ- ಸಂಜಯ್​ ಲೀಲಾ ಬನ್ಸಾಲಿ ನಡುವೆ ಕೋಲ್ಡ್​ ವಾರ್!

ಸಂಜಯ್​ ಲೀಲಾ ಬನ್ಸಾಲಿ ಮತ್ತು ದೀಪಿಕಾ ನಡುವೆ ಯಾವುದೂ ಸರಿ ಇಲ್ಲ ಎನ್ನುವ ಬಗ್ಗೆ ಬಾಲಿವುಡ್​ ಅಂಗಳದಲ್ಲಿ ಹರಿದಾಡುತ್ತಿದೆ.

ಆಲಿಯಾ ಭಟ್​ ವಿಚಾರಕ್ಕೆ ದೀಪಿಕಾ ಪಡುಕೋಣೆ- ಸಂಜಯ್​ ಲೀಲಾ ಬನ್ಸಾಲಿ ನಡುವೆ ಕೋಲ್ಡ್​ ವಾರ್!
ದೀಪಿಕಾ-ಸಂಜಯ್​ ಲೀಲಾ ಬನ್ಸಾಲಿ
ರಾಜೇಶ್ ದುಗ್ಗುಮನೆ
|

Updated on:Mar 27, 2021 | 7:05 PM

Share

ರಾಮ್​ ಲೀಲಾ, ಬಾಜಿರಾವ್​ ಮಸ್ತಾನಿ ಮತ್ತು ಪದ್ಮಾವತ್​ ಬಾಲಿವುಡ್​ ಪಾಲಿಗೆ ಸೂಪರ್​ ಹಿಟ್​ ಸಿನಿಮಾಗಳು. ನಿರ್ದೇಶಕ ಸಂಜಯ್​ ಲೀಲಾ ಬನ್ಸಾಲಿ ಮತ್ತು ನಟಿ ದೀಪಿಕಾ ಪಡುಕೋಣೆ ಈ ಚಿತ್ರಗಳಲ್ಲಿ ಒಟ್ಟಾಗಿ ಕೆಲಸ ಮಾಡಿದ್ದಾರೆ. ಅಷ್ಟೇ ಅಲ್ಲ, ದೀಪಿಕಾ ವೃತ್ತಿ ಜೀವನದ ತೂಕ ಹೆಚ್ಚಿಸಿತ್ತು. ಇವರು ಮುಂದಿನ ದಿನಗಳಲ್ಲಿ ಮತ್ತೆ ಕೆಲಸ ಮಾಡಲಿದ್ದಾರೆ ಎನ್ನಲಾಗಿತ್ತು. ಆದರೆ, ಈಗ ಕೇಳಿ ಬರುತ್ತಿರುವ ಲೇಟೆಸ್ಟ್​ ವಿಚಾರ ಎಂದರೆ, ದೀಪಿಕಾ ಹಾಗೂ ಬನ್ಸಾಲಿ ನಡುವೆ ಕೋಲ್ಡ್​ ವಾರ್​ ನಡೆದಿದೆಯಂತೆ. ಇದಕ್ಕೆ ಕಾರಣ ಆಲಿಯಾ ಭಟ್​ ಅನ್ನೋದು ವಿಚಿತ್ರ. ಸಂಜಯ್​ ಲೀಲಾ ಬನ್ಸಾಲಿ ಮತ್ತು ದೀಪಿಕಾ ನಡುವೆ ಯಾವುದೂ ಸರಿ ಇಲ್ಲ ಎನ್ನುವ ಬಗ್ಗೆ ಬಾಲಿವುಡ್​ ಅಂಗಳದಲ್ಲಿ ಸುದ್ದಿ ಹರಿದಾಡುತ್ತಿದೆ. ಗಂಗೂಬಾಯಿ ಕಾಠಿಯಾವಾಡಿ ಸಿನಿಮಾವನ್ನು ಸಂಜಯ್​ ಲೀಲ್​ ಬನ್ಸಾಲಿ ನಿರ್ದೇಶವಿದೆ. ಈ ಚಿತ್ರದಲ್ಲಿ ವಿಶೇಷ ಸಾಂಗ್​ ಒಂದರಲ್ಲಿ ನಟಿಸೋಕೆ ದೀಪಿಕಾಗೆ ಬನ್ಸಾಲಿ ಆಫರ್​ ನೀಡಿದ್ದರಂತೆ. ಆದರೆ, ಈ ಆಫರ್​ಅನ್ನು ದೀಪಿಕಾ ಕಡ್ಡಿಮುರಿದಂತೆ ತಿರಸ್ಕರಿಸಿದ್ದಾರೆ. ನಂತರ ಹೀರಾ ಮಂಡಿಯಲ್ಲಿ ಪ್ರಮುಖ ಪಾತ್ರ ನಿರ್ವಹಿಸುವ ಆಫರ್​ ಕೂಡ ನೀಡಲಾಯಿತಂತೆ. ಆಗಲೂ ದೀಪಿಕಾ ಈ ಆಫರ್​ ತಿರಸ್ಕರಿಸಿದ್ದರು. ಇದು ಈಗ ಹಲವು ಸಂಶಯಗಳಿಗೆ ಕಾರಣವಾಗಿದೆ.

ಸಂಜಯ್​ ಲೀಲಾ ಬನ್ಸಾಲಿ ನಿರ್ದೇಶನದ ಬೈಜು ಬಾವ್ರಾ ಸಿನಿಮಾದಲ್ಲಿ ರಣಬೀರ್​ ಕಪೂರ್​, ಆಲಿಯಾ ಭಟ್ ಮತ್ತು ದೀಪಿಕಾ ಪಡುಕೋಣೆ ನಟಿಸಬೇಕಿತ್ತು. ಆದರೆ, ಈ ಕೋಲ್ಡ್​ ವಾರ್​ನಿಂದ ಈ ಸಿನಿಮಾ ಆಗೋದೆ ಡೌಟ್​ ಎನ್ನುವ ಮಾತು ಬಾಲಿವುಡ್​ ಅಂಗಳದಿಂದ ಕೇಳಿ ಬರುತ್ತಿದೆ.

ಗಂಗೂಬಾಯಿ ಕಾಠಿಯಾವಾಡಿ ಸಿನಿಮಾದಲ್ಲಿ ಲೀಡ್​ ಪಾತ್ರಕ್ಕಾಗಿ ಪ್ರಿಯಾಂಕಾ ಚೋಪ್ರಾ ಅವರನ್ನು ಆಯ್ಕೆ ಮಾಡಿಕೊಳ್ಳಬೇಕು ಎನ್ನುವುದು ಬನ್ಸಾಲಿ ಆಲೋಚನೆ ಆಗಿತ್ತು. ಆದರೆ, ಅವರು ಮದುವೆ ಆಗಿ ಅಮೆರಿಕದಲ್ಲಿದ್ದಾರೆ. ಹೀಗಾಗಿ, ಅವರು ಆಫರ್​ ತಿರಸ್ಕರಿಸಿದ್ದಾರೆ. ಅವರು ಎರಡನೇ ಆಪ್ಶನ್​ ಆಗಿ ದೀಪಿಕಾರನ್ನು ಇಟ್ಟುಕೊಳ್ಳಲಾಗಿತ್ತು. ಆದರೆ, ಬನ್ಸಾಲಿ ಕೊನೆ ಕ್ಷಣದಲ್ಲಿ ಆಲಿಯಾ ಭಟ್​ ಅವರನ್ನು ಆಯ್ಕೆ ಮಾಡಿಕೊಂಡಿರುವುದು ದೀಪಿಕಾ ಕೋಪಕ್ಕೆ ಕಾರಣವಾಗಿದೆ. ಹೀಗಾಗಿ, ಬನ್ಸಾಲಿ ವಿರುದ್ಧ ದೀಪಿಕಾ ಮುನಿಸಿಕೊಂಡಿದ್ದಾರೆ ಎಂಬುದು ಸದ್ಯ ಕೇಳಿ ಬರುತ್ತಿರುವ ಮಾಹಿತಿ.

ಇದನ್ನೂ ಓದಿ: ಗಂಗೂಬಾಯಿ ಕಾಠಿಯಾವಾಡಿ ಸಿನಿಮಾಗೆ ಸಂಕಷ್ಟ; ಆಲಿಯಾ, ಬನ್ಸಾಲಿಗೆ ಸಮನ್ಸ್​ ​

Published On - 6:47 pm, Sat, 27 March 21

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್