AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋಪಿಗೆ ಪೂಜೆ ಮಾಡಿದ್ದಕ್ಕೆ ಕ್ಷಮೆ ಕೇಳಿದ ಖ್ಯಾತ ಹಾಸ್ಯನಟ ಆಲಿ

Comedian Ali: ಗರ್ ಸೋಪಿನ ಜಾಹೀರಾತುಗಳು ಸಾಮಾಜಿಕ ಜಾಲತಾಣದಲ್ಲಿ ತುಂಬಿ ಹೋಗಿವೆ. ಸ್ಟಾರ್ ನಟರಲ್ಲದ ಆದರೆ ಜನಪ್ರಿಯತೆ ಹೊಂದಿರುವ ನಟ-ನಟಿಯರು ಹಲವಾರು ಮಂದಿ ಈ ಗರ್ ಸೋಪಿನ ಜಾಹೀರಾತುಗಳಲ್ಲಿ ನಟಿಸಿದ್ದಾರೆ. ಈ ಸೋಪಿನಿಂದ ಕಪ್ಪಗಿರುವ ದೇಹದ ಬಣ್ಣ ಬಿಳಿ ಆಗುತ್ತದೆ ಎಂಬುದು ಈ ಸೋಪು ಕಂಪೆನಿಯ ವಾದ. ಆದರೆ ಇದೇ ಸೋಪಿನ ಜಾಹೀರಾತಿನಲ್ಲಿ ನಟಿಸಿ ತೆಲುಗಿನ ಬಲು ಜನಪ್ರಿಯ ಹಾಸ್ಯನಟರೊಬ್ಬರು ವಿವಾದಕ್ಕೆ ಸಿಲುಕಿದ್ದಾರೆ. ಬಳಿಕ ಕ್ಷಮೆಯನ್ನೂ ಕೋರಿದ್ದಾರೆ.

ಸೋಪಿಗೆ ಪೂಜೆ ಮಾಡಿದ್ದಕ್ಕೆ ಕ್ಷಮೆ ಕೇಳಿದ ಖ್ಯಾತ ಹಾಸ್ಯನಟ ಆಲಿ
Comedian Ali
ಮಂಜುನಾಥ ಸಿ.
|

Updated on:May 14, 2026 | 3:02 PM

Share

ಗರ್ ಸೋಪಿನ ಜಾಹೀರಾತುಗಳು ಸಾಮಾಜಿಕ ಜಾಲತಾಣದಲ್ಲಿ (Social Media) ತುಂಬಿ ಹೋಗಿವೆ. ಸ್ಟಾರ್ ನಟರಲ್ಲದ ಆದರೆ ಜನಪ್ರಿಯತೆ ಹೊಂದಿರುವ ನಟ-ನಟಿಯರು ಹಲವಾರು ಮಂದಿ ಈ ಗರ್ ಸೋಪಿನ ಜಾಹೀರಾತುಗಳಲ್ಲಿ ನಟಿಸಿದ್ದಾರೆ. ಈ ಸೋಪಿನಿಂದ ಕಪ್ಪಗಿರುವ ದೇಹದ ಬಣ್ಣ ಬಿಳಿ ಆಗುತ್ತದೆ ಎಂಬುದು ಈ ಸೋಪು ಕಂಪೆನಿಯ ವಾದ. ಆದರೆ ಇದೇ ಸೋಪಿನ ಜಾಹೀರಾತಿನಲ್ಲಿ ನಟಿಸಿ ತೆಲುಗಿನ ಬಲು ಜನಪ್ರಿಯ ಹಾಸ್ಯನಟರೊಬ್ಬರು ವಿವಾದಕ್ಕೆ ಸಿಲುಕಿದ್ದಾರೆ. ಬಳಿಕ ಕ್ಷಮೆಯನ್ನೂ ಕೋರಿದ್ದಾರೆ.

ಮೊಹಮ್ಮದ್ ಅಲಿ ಅಲಿಯಾಸ್ ಆಲಿ, ತೆಲುಗು ಚಿತ್ರರಂಗದ ಬಲು ಜನಪ್ರಿಯ ಹಾಸ್ಯನಟ. ಬ್ರಹ್ಮಾನಂದಂ ಬಳಿಕ ಅತಿ ಹೆಚ್ಚು ಅಭಿಮಾನಿಗಳನ್ನು ಹೊಂದಿರುವ ಹಾಸ್ಯನಟರೂ ಹೌದು ಆಲಿ. ಇತ್ತೀಚೆಗೆ ಇವರು ನಟಿಸಿರುವ ಗರ್ ಸೋಪಿನ ಜಾಹೀರಾತೊಂದು ಬಿಡುಗಡೆ ಆಗಿತ್ತು. ಜಾಹೀರಾತಿನಲ್ಲಿ ಆಲಿ, ಗರ್ ಸೋಪಿಗೆ ಪೂಜೆ ಮಾಡುತ್ತಿರುವ ದೃಶ್ಯವಿತ್ತು. ಹೀಗೆ ಪೂಜೆ ಮಾಡುವ ವೇಳೆ ಆಲಿ ಲಕ್ಷ್ಮಿ ದೇವಿಯ ಕುರಿತು ಹಾಡನ್ನು ಹಾಡುತ್ತಿದ್ದರು. ಅದೀಗ ವಿವಾದಕ್ಕೆ ಕಾರಣವಾಗಿದೆ.

ಇದನ್ನೂ ಓದಿ:ತ್ರಿಶಾ ನಟನೆಯ ‘ಕರುಪ್ಪು’ ಸಿನಿಮಾಗೆ ವಿಶೇಷ ಅನುಮತಿ ನೀಡಿದ ಸಿಎಂ ವಿಜಯ್

ಆಲಿ ಅವರು ‘ದೇವುಡು ಚೇಸಿನ ಮನುಷುಲು’ ಸಿನಿಮಾನಲ್ಲಿ ಲಕ್ಷ್ಮಿ ದೇವಿನ ಅಪ್ಪಟ ಭಕ್ತನ ಪಾತ್ರದಲ್ಲಿ ನಟಿಸಿದ್ದರು. ಆ ಸಿನಿಮಾನಲ್ಲಿ ಅವರು ಲಕ್ಷ್ಮಿ ದೇವಿಯ ಪೂಜಿಸುವಾಗ ಹಾಡೊಂದನ್ನು ಹಿನ್ನೆಲೆಯಲ್ಲಿ ಬಳಸಲಾಗಿತ್ತು. ಆ ಹಾಡು, ಆ ದೃಶ್ಯ ಮತ್ತು ಆಲಿ ನಟಿಸಿದ್ದ ಲಕ್ಷ್ಮಿದೇವಿಯ ಭಕ್ತನ ಪಾತ್ರ ಸಖತ್ ಹಿಟ್ ಆಗಿತ್ತು. ಅದೇ ಕಾರಣಕ್ಕೆ ಆಲಿ ಅವರು ಸೋಪಿನ ಜಾಹೀರಾತಿನಲ್ಲಿ ಅದನ್ನೇ ರೀ ಕ್ರಿಯೇಟ್ ಮಾಡಿದ್ದರು. ಆದರೆ ಹಿಂದೂಪರ ಸಂಘಟನೆಗಳ ಕೆಲ ಸದಸ್ಯರು, ಇದಕ್ಕೆ ಆಕ್ಷೇಪಣೆ ವ್ಯಕ್ತಪಡಿಸಿದ್ದು, ಸೋಪಿನ ಪೂಜೆಗೆ ಲಕ್ಷ್ಮಿ ದೇವಿಯ ಹಾಡು ಬಳಸಿದ್ದಕ್ಕೆ ವಿರೋಧ ವ್ಯಕ್ತಪಡಿಸಿದ್ದರು.

ಇದೀಗ ವಿಡಿಯೋ ಹಂಚಿಕೊಂಡಿರುವ ನಟ ಆಲಿ, ತಮ್ಮ ಕೃತ್ಯಕ್ಕೆ ಕ್ಷಮೆ ಕೇಳಿದ್ದಾರೆ. ‘ಕಂಪೆನಿಯವರು ಹೇಳಿದ್ದಕ್ಕ ನಾನು ನನ್ನದೇ ಹಳೆಯ ಸಿನಿಮಾದ ಬಿಟ್ ಅನ್ನು ತುಸು ಬದಲಾಯಿಸಿ ಮಾಡಿದೆ. ಆದರೆ ಜಾಹೀರಾತು ನೋಡಿದ ಕೆಲವರು ವಿರೋಧ ವ್ಯಕ್ತಪಡಿಸಿದ್ದಾರೆ. ಹಾಗಾಗಿ ಕೂಡಲೇ ಆ ಜಾಹೀರಾತನ್ನು ಡಿಲೀಟ್ ಮಾಡಿದ್ದೇವೆ. ಕಂಪೆನಿ ಸಹ ಅದನ್ನು ಡಿಲೀಟ್ ಮಾಡಿದೆ. ಯಾರಿಗಾದರೂ ಆ ಜಾಹೀರಾತಿನಿಂದ ಮನಸ್ಸಿಗೆ ನೋವಾಗಿದ್ದರೆ ಕ್ಷಮೆ ಕೇಳುತ್ತೇವೆ’ ಎಂದಿದ್ದಾರೆ ಆಲಿ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:29 pm, Wed, 13 May 26

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
Live: ಸಚಿವ ರಾಮಲಿಂಗಾ ರೆಡ್ಡಿ ಮಹತ್ವದ ಸುದ್ದಿಗೋಷ್ಠಿ ನೇರ ಪ್ರಸಾರ
Live: ಸಚಿವ ರಾಮಲಿಂಗಾ ರೆಡ್ಡಿ ಮಹತ್ವದ ಸುದ್ದಿಗೋಷ್ಠಿ ನೇರ ಪ್ರಸಾರ
ಮನೆಯ ಗೆಸ್ಟ್ ರೂಂ ಯಾವ ದಿಕ್ಕಿನಲ್ಲಿದ್ದರೆ ಉತ್ತಮ
ಮನೆಯ ಗೆಸ್ಟ್ ರೂಂ ಯಾವ ದಿಕ್ಕಿನಲ್ಲಿದ್ದರೆ ಉತ್ತಮ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಬಹಳ ಎಚ್ಚರಿಕೆಯಿಂದ ಇರಬೇಕು!
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಬಹಳ ಎಚ್ಚರಿಕೆಯಿಂದ ಇರಬೇಕು!
‘ಬಾಸ್’ ಸಿನಿಮಾ ನಿರ್ದೇಶಕನಿಗೆ ವಾಣಿಜ್ಯ ಮಂಡಳಿ ನೋಟಿಸ್ ನೀಡಿದ್ದು ಯಾಕೆ?
‘ಬಾಸ್’ ಸಿನಿಮಾ ನಿರ್ದೇಶಕನಿಗೆ ವಾಣಿಜ್ಯ ಮಂಡಳಿ ನೋಟಿಸ್ ನೀಡಿದ್ದು ಯಾಕೆ?
ಡಿಕೆ ಶಿವಕುಮಾರ್ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ:ಯಾರಿಗೆ ಯಾವ ಖಾತೆ?
ಡಿಕೆ ಶಿವಕುಮಾರ್ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ:ಯಾರಿಗೆ ಯಾವ ಖಾತೆ?
ದರ್ಶನ್ ತಂಡದ ನೊಟೀಸ್​​ ಬಗ್ಗೆ ‘ಬಾಸ್’ ಸಿನಿಮಾ ತಂಡ ಮಾತು
ದರ್ಶನ್ ತಂಡದ ನೊಟೀಸ್​​ ಬಗ್ಗೆ ‘ಬಾಸ್’ ಸಿನಿಮಾ ತಂಡ ಮಾತು
ಜಿಲ್ಲೆಗಳ ಸಮಸ್ಯೆ ಪಟ್ಟಿ ಮಾಡಿ 25 ದಿನಗಳ ಒಳಗೆ ಕೊಡಿ: ಡಿಕೆಶಿ ಸೂಚನೆ
ಜಿಲ್ಲೆಗಳ ಸಮಸ್ಯೆ ಪಟ್ಟಿ ಮಾಡಿ 25 ದಿನಗಳ ಒಳಗೆ ಕೊಡಿ: ಡಿಕೆಶಿ ಸೂಚನೆ
ಸಿಎಂ ಆದ 2ನೇ ದಿನಕ್ಕೆ ರೌಡಿಗಳ ವಿರುದ್ಧ ಸಮರ ಸಾರಿದ ಡಿಕೆ ಶಿವಕುಮಾರ್!
ಸಿಎಂ ಆದ 2ನೇ ದಿನಕ್ಕೆ ರೌಡಿಗಳ ವಿರುದ್ಧ ಸಮರ ಸಾರಿದ ಡಿಕೆ ಶಿವಕುಮಾರ್!
ಪಾರದರ್ಶಕವಾಗಿ ಕೆಲಸ ಮಾಡಲು ಅಧಿಕಾರಿಗಳಿಗೆ ಡಿಕೆಶಿ ಖಡಕ್ ಸೂಚನೆ​​
ಪಾರದರ್ಶಕವಾಗಿ ಕೆಲಸ ಮಾಡಲು ಅಧಿಕಾರಿಗಳಿಗೆ ಡಿಕೆಶಿ ಖಡಕ್ ಸೂಚನೆ​​
ರೋಗಿ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಕ್ಯಾಂಟರ್​​ಗೆ ಡಿಕ್ಕಿ
ರೋಗಿ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಕ್ಯಾಂಟರ್​​ಗೆ ಡಿಕ್ಕಿ