AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕಾಮಿಡಿ ಕಿಲಾಡಿಗಳು ಚಾಂಪಿಯನ್​ಶಿಪ್ ಸೀಸನ್​ 2’ ಫಿನಾಲೆ; ಯಾರಾಗಲಿದ್ದಾರೆ ವಿನ್ನರ್​?

ನೂರಾರು ಜನರ ಶ್ರಮದಿಂದ ಈ ಅಂತಿಮ ಸಂಚಿಕೆಗಳ ವೇದಿಕೆ ಸಜ್ಜಾಗಿದೆ. ಯಾರು ಚಾಂಪಿಯನ್​ ಆಗಿ ಹೊರಹೊಮ್ಮಲಿದ್ದಾರೆ ಎಂಬುದನ್ನು ತಿಳಿದುಕೊಳ್ಳುವ ಕಾತರ ಪ್ರೇಕ್ಷಕರ ಮನದಲ್ಲಿ ಮೂಡಿದೆ.

‘ಕಾಮಿಡಿ ಕಿಲಾಡಿಗಳು ಚಾಂಪಿಯನ್​ಶಿಪ್ ಸೀಸನ್​ 2’ ಫಿನಾಲೆ; ಯಾರಾಗಲಿದ್ದಾರೆ ವಿನ್ನರ್​?
ಕಾಮಿಡಿ ಕಿಲಾಡಿಗಳು
TV9 Web
| Edited By: |

Updated on: Jul 09, 2021 | 3:47 PM

Share

ಕಾಮಿಡಿ ಕಿಲಾಡಿಗಳು ಕಾರ್ಯಕ್ರಮದಿಂದ ಅನೇಕ ಪ್ರತಿಭಾವಂತರಿಗೆ ವೇದಿಕೆ ಸಿಕ್ಕಿದೆ. ಜೀ ಕನ್ನಡ ವಾಹಿನಿಯ ಕಾರ್ಯಕ್ರಮಗಳಲ್ಲಿ ಇದೂ ಕೂಡ ಹೆಚ್ಚು ಜನಪ್ರಿಯವಾಗಿದೆ. ಇಷ್ಟು ದಿನಗಳ ಕಾಲ ಪ್ರೇಕ್ಷಕರನ್ನು ನಕ್ಕು ನಗಿಸಿದ ‘ಕಾಮಿಡಿ ಕಿಲಾಡಿಗಳು ಚಾಂಪಿಯನ್​ಶಿಪ್​ ಸೀಸನ್​ 2’ ಶೋ ಈಗ ಫಿನಾಲೆ ಹಂತ ತಲುಪಿದೆ. ಇದೇ ಶನಿವಾರ (ಜು.10) ಮತ್ತು ಭಾನುವಾರ (ಜು.11) ಅದ್ದೂರಿಯಾಗಿ ಈ ಕಾರ್ಯಕ್ರಮದ ಫಿನಾಲೆ ಪ್ರಸಾರವಾಗಲಿದೆ.

ಹಲವು ಕಾರಣಗಳಿಗಾಗಿ ಈ ಶೋ ವಿಭಿನ್ನ ಎನಿಸಿಕೊಂಡಿದೆ. ಪ್ರತಿ ದಿನದ ಜಂಜಾಟದ ಬದುಕಿನಲ್ಲಿ ಸಿಲುಕಿದವರಿಗೆ ಕಾಮಿಡಿ ಕಿಲಾಡಿಗಳು ನಗುವಿನ ಕಚಗುಳಿ ಇಡುತ್ತಾರೆ. ಆ ಉದ್ದೇಶದಿಂದ ಆರಂಭವಾದ ಈ ಕಾರ್ಯಕ್ರಮಕ್ಕೆ ಜನರಿಂದ ಉತ್ತಮ ಪ್ರತಿಕ್ರಿಯೆ ಸಿಕ್ಕಿತು. ವಾರ ಪೂರ್ತಿ ತಯಾರಿ ನಡೆಸಿ, ವಾರಾಂತ್ಯದಲ್ಲಿ ಕರುನಾಡಿನ ಜನರನ್ನು ನಕ್ಕು ನಲಿಸಿದ ಖ್ಯಾತಿ ಕಾಮಿಡಿ ಕಿಲಾಡಿಗಳಿಗೆ ಸಲ್ಲುತ್ತದೆ. ಹೊಸ ಪರಿಲ್ಪನೆಯೊಂದಿಗೆ ಶೋ ಆರಂಭ ಆಗಿತ್ತು. ಮೂರು ಸೀಸನ್‍ನ ಕಿಲಾಡಿಗಳು 6 ತಂಡಗಳಾಗಿ ಪೈಪೋಟಿ ನಡೆಸಿದರು. 37 ವಾರಗಳು ನಡೆದ ಈ ಕಾರ್ಯಕ್ರಮದಲ್ಲಿ 220ಕ್ಕೂ ಅಧಿಕ ನಾಟಕಗಳು, ಹಾಸ್ಯದ ಜೊತೆಗೆ ಸಾಮಾಜಿಕ ಸಂದೇಶ ಸಾರುವ ಸ್ಕಿಟ್‍ಗಳನ್ನು ಪ್ರದರ್ಶಿಸಲಾಯಿತು. ಈಗ ಈ ಶೋ ಫಿನಾಲೆ ಹಂತಕ್ಕೆ ಬಂದಿದೆ.

ತೀರ್ಪುಗಾರರಾದ ನವರಸ ನಾಯಕ ಜಗ್ಗೇಶ್, ನಿರ್ದೇಶಕ ಯೋಗರಾಜ್​ ಭಟ್ ಹಾಗೂ ‘ಕ್ರೇಜಿ ಕ್ವೀನ್’ ರಕ್ಷಿತಾ ಪ್ರೇಮ್​ ಈ ಫಿನಾಲೆಯಲ್ಲಿ ಭಾಗವಹಿಸಲಿದ್ದಾರೆ. ಮಾಸ್ಟರ್ ಆನಂದ್‍ ಅವರ ನಿರೂಪಣೆಯಲ್ಲಿ ಫಿನಾಲೆ ಎಪಿಸೋಡ್​ಗಳು ಮೂಡಿಬರಲಿವೆ. ನೂರಾರು ಜನರ ಶ್ರಮದಿಂದ ಈ ಅಂತಿಮ ಸಂಚಿಕೆಗಳ ವೇದಿಕೆ ಸಜ್ಜಾಗಿದೆ. ಯಾರು ಚಾಂಪಿಯನ್​ ಆಗಿ ಹೊರಹೊಮ್ಮಲಿದ್ದಾರೆ ಎಂಬುದನ್ನು ತಿಳಿದುಕೊಳ್ಳುವ ಕಾತರ ಪ್ರೇಕ್ಷಕರ ಮನದಲ್ಲಿ ಮೂಡಿದೆ.

6 ತಂಡಗಳ ವಿಭಿನ್ನ ಹಾಸ್ಯ ನಾಟಕಗಳ ಜೊತೆ ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ರಿಯಾಲಿಟಿ ಶೋನ ಪ್ರತಿಭೆಗಳು ಕೂಡ ಪ್ರೇಕ್ಷಕರನ್ನು ಈ ವೇದಿಕೆಯಲ್ಲೇ ರಂಜಿಸಲು ಸಿದ್ಧರಾಗಿದ್ದಾರೆ. ಜುಲೈ 10ರ ಶನಿವಾರ ಹಾಗು 11ರ ಭಾನುವಾರ ರಾತ್ರಿ 9 ಗಂಟೆಗೆ ಪ್ರಸಾರವಾಗಲಿರುವ ಈ ಸಂಚಿಕೆಗಳಲ್ಲಿ ಮನರಂಜನೆಯ ಮಹಾಪೂರ ಹರಿಸುವ ಭರವಸೆಯನ್ನು ಜೀ ಕನ್ನಡ ವಾಹಿನಿ ನೀಡಿದೆ.

ಇದನ್ನೂ ಓದಿ:

‘ಇದು ಕೊನೆಯ ದಿನದ ಶೂಟಿಂಗ್’​; ಕಾಮಿಡಿ ಕಿಲಾಡಿಗೆ ರಕ್ಷಿತಾ ಭಾವುಕ ವಿದಾಯ

ರಿಯಾಲಿಟಿ ಶೋ ಸುಳ್ಳು ಅನ್ನೋದಕ್ಕೆ ಮತ್ತೊಂದು ಸಾಕ್ಷಿ? ಹಿಗ್ಗಾಮುಗ್ಗ ಟ್ರೋಲ್​ ಮಾಡಿದ ನೆಟ್ಟಿಗರು

Follow Us
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ
Video: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ, ಭೂಕುಸಿತ
Video: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ, ಭೂಕುಸಿತ
ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್: ಹುಚ್ಚಾಟ ಮೆರೆದಿದ್ದು ಮುತ್ತಪ್ಪ ರೈ ಪುತ್ರ?
ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್: ಹುಚ್ಚಾಟ ಮೆರೆದಿದ್ದು ಮುತ್ತಪ್ಪ ರೈ ಪುತ್ರ?