AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಇದು ಕೊನೆಯ ದಿನದ ಶೂಟಿಂಗ್’​; ಕಾಮಿಡಿ ಕಿಲಾಡಿಗೆ ರಕ್ಷಿತಾ ಭಾವುಕ ವಿದಾಯ

ಕಾಮಿಡಿ ಕಿಲಾಡಿಗಳು ರಿಯಾಲಿಟಿ ಶೋಗೆ ಎಲ್ಲೆಡೆ ಉತ್ತಮ ಪ್ರತಿಕ್ರಿಯೆ ಇದೆ. ರಾಜ್ಯದ ಸಾಕಷ್ಟು ಪ್ರತಿಭೆಗಳಿಗೆ ಒಂದು ವೇದಿಕೆ ಕಲ್ಪಿಸಿದ ಖ್ಯಾತಿ ಈ ಶೋಗೆ ಇದೆ.

‘ಇದು ಕೊನೆಯ ದಿನದ ಶೂಟಿಂಗ್’​; ಕಾಮಿಡಿ ಕಿಲಾಡಿಗೆ ರಕ್ಷಿತಾ ಭಾವುಕ ವಿದಾಯ
ಕಾಮಿಡಿ ಕಿಲಾಡಿಗಳು ಸೆಟ್​ನಲ್ಲಿ ರಕ್ಷಿತಾ
TV9 Web
| Edited By: |

Updated on:Jun 28, 2021 | 7:53 PM

Share

ಜೀ ಕನ್ನಡದಲ್ಲಿ ಪ್ರಸಾರವಾಗುತ್ತಿದ್ದ ‘ಕಾಮಿಡಿ ಕಿಲಾಡಿ ಚಾಂಪಿಯನ್​ಶಿಪ್​’ ಅಂತಿಮಘಟ್ಟ ತಲುಪಿದೆ. 36 ವಾರಗಳ ಕಾಲ ಪ್ರೇಕ್ಷಕರನ್ನು ರಂಜಿಸಿದ ಈ ಶೋ ಈಗ ಪೂರ್ಣಗೊಳ್ಳುತ್ತಿದೆ. ಇದರಲ್ಲಿ ಜಡ್ಜ್​ ಆಗಿ ಕಾಣಿಸಿಕೊಂಡಿದ್ದ ರಕ್ಷಿತಾ ಪ್ರೇಮ್​ ಈ ಬಗ್ಗೆ ಭಾವುಕ ನುಡಿಗಳನ್ನು ಹಂಚಿಕೊಂಡಿದ್ದಾರೆ. ‘ಸೆಟ್​ನಲ್ಲಿ ಕೊನೆಯ ದಿನ. ಈ ಸೀಸನ್​ 36 ವಾರಗಳ ಕಾಲ ಕಾಮಿಡಿ ಇತ್ತು. ಇದೊಂದು ಸುಂದರ ಪ್ರಯಾಣ. ಈ ಸಾಂಕ್ರಾಮಿಕ ರೋಗದ ಸಂದರ್ಭದಲ್ಲೂ ಕಾಮಿಡಿ ಕಿಲಾಡಿಗಳು ಚಾಂಪಿಯನ್​ಶಿಪ್​ ಶೂಟ್​ ಮಾಡೋದು ನಿಜಕ್ಕೂ ಫನ್​ ಆಗಿತ್ತು. ಪ್ರತಿ ವಾರ 6 ಗಂಟೆಗಳ ಶುದ್ಧ ಸಂತೋಷ. ಇಂದು ಸೆಟ್​ನಲ್ಲಿ ಕೊನೆಯ ದಿನ ಕಳೆಯುತ್ತಿದ್ದೇವೆ. ಈ ಸೆಟ್​, ನನ್ನ ಉಳಿದ ಜಡ್ಜ್​ಗಳು, ಈ ತಂಡವನ್ನು ನಾನು ಮಿಸ್​ ಮಾಡಿಕೊಳ್ಳುತ್ತೇನೆ’ ಎಂದು ರಕ್ಷಿತಾ ಬರೆದುಕೊಂಡಿದ್ದಾರೆ.

ಕಾಮಿಡಿ ಕಿಲಾಡಿಗಳು ರಿಯಾಲಿಟಿ ಶೋಗೆ ಎಲ್ಲೆಡೆ ಉತ್ತಮ ಪ್ರತಿಕ್ರಿಯೆ ಇದೆ. ರಾಜ್ಯದ ಸಾಕಷ್ಟು ಪ್ರತಿಭೆಗಳಿಗೆ ಒಂದು ವೇದಿಕೆ ಕಲ್ಪಿಸಿದ ಖ್ಯಾತಿ ಈ ಶೋಗೆ ಇದೆ. ಯೋಗರಾಜ್​ ಭಟ್​ ಹಾಗೂ ಜಗ್ಗೇಶ್​ ಕೂಡ ಈ ಶೋನಲ್ಲಿ ಜಡ್ಜ್​ ಆಗಿ ಕಾಣಿಸಿಕೊಂಡಿದ್ದಾರೆ.

ಇತ್ತೀಚೆಗೆ ನಟ ಜಗ್ಗೇಶ್​ ಟ್ವಿಟರ್​ನಿಂದ ಕೊಂಚ ಬಿಡುವುದು ತೆಗೆದುಕೊಂಡಿದ್ದರು. ಈಗ ಅವರು ಮತ್ತೆ ಟ್ವಿಟರ್​ಗೆ ಮರಳಿದ್ದಾರೆ. ಅವರು ಕೂಡ ಈ ರಿಯಾಲಿಟಿ ಶೋ ಶೂಟಿಂಗ್​ ಮಾಡುತ್ತಿರುವ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: BBK8 Shruthi Controversy : ಲ್ಯಾಗ್ ಮಂಜ-ಚಕ್ರವರ್ತಿ ನಡುವಿನ ಬಿಗ್‌ ಫೈಟ್‌ನಲ್ಲಿ ಕೇಳಿ ಬಂತು ನಟಿ ಶೃತಿ ವಿಚಾರ

ಬಡತನ, ಫೇಕ್​ ಲವ್​ ಸ್ಟೋರಿಗಳೇ ರಿಯಾಲಿಟಿ ಶೋಗಳ ಬಂಡವಾಳ; ಇಂಡಿಯನ್​ ಐಡಲ್​ ವಿನ್ನರ್​ ಆರೋಪ

Published On - 7:51 pm, Mon, 28 June 21

Follow Us
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ