AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಮಹಾನ್ ಕಿಲಾಡಿ’ ರಿಯಾಲಿಟಿ ಶೋ ಆರಂಭಿಸಿದ ಮಿಂಚು: ಏನಿದರ ವಿಶೇಷ?

ಖಾಸಗಿ ವಾಹಿನಿಯ ‘ಕಾಮಿಡಿ ಕಿಲಾಡಿಗಳು’ ರಿಯಾಲಿಟಿ ಶೋ ಮೂಲಕ ಮಿಂಚು, ಪ್ರವೀಣ್ ಗಸ್ತಿ ಗೋಕಾಕ್, ಚಿದಂಬರ ಪೂಜಾರಿ ಗಮನ ಸೆಳೆದಿದ್ದರು. ಈಗ ಅವರೆಲ್ಲ ಸೇರಿಕೊಂಡು ‘ಮಹಾನ್ ಕಿಲಾಡಿ’ ಎಂಬ ರಿಯಾಲಿಟಿ ಶೋ ಆರಂಭಿಸುತ್ತಿದ್ದಾರೆ. ‘ಟ್ಯಾಲೆಂಟ್ ನಿಮ್ಮದು ವೇದಿಕೆ ನಮ್ಮದು’ ಎಂಬ ಟ್ಯಾಗ್​ಲೈನ್​ನೊಂದಿಗೆ ಈ ಶೋ ಆರಂಭ ಆಗುತ್ತಿದೆ.

‘ಮಹಾನ್ ಕಿಲಾಡಿ’ ರಿಯಾಲಿಟಿ ಶೋ ಆರಂಭಿಸಿದ ಮಿಂಚು: ಏನಿದರ ವಿಶೇಷ?
Mahan Khiladi
ಮದನ್​ ಕುಮಾರ್​
|

Updated on: Jun 11, 2026 | 9:27 PM

Share

ಒಂದಷ್ಟು ತಿಂಗಳ ಹಿಂದೆ ನಟಿ ಮಿಂಚು (Minchu) ಅವರು ವಿವಾದದ ಮೂಲಕ ಸುದ್ದಿ ಆಗಿದ್ದರು. ಆದರೆ ಈಗ ಅವರು ಆ ಘಟನೆಗಳಿಂದ ಹೊರಬಂದಿದ್ದಾರೆ. ಸಂಪೂರ್ಣ ಒಳ್ಳೆಯ ಕಾರಣಕ್ಕೆ ಅವರೀಗ ಮಾಧ್ಯಮಗಳ ಮುಂದೆ ಬಂದಿದ್ದಾರೆ. ಈ ಮೊದಲು ರಿಯಾಲಿಟಿ ಶೋಗಳ (Reality Show) ಮೂಲಕವೇ ಮಿಂಚು ಅವರು ಗುರುತಿಸಿಕೊಂಡಿದ್ದರು. ಈಗ ಅವರು ಹೊಸ ಪ್ರತಿಭೆಗಳಿಗೆ ಅವಕಾಶ ನೀಡಲು ಮುಂದಾಗಿದ್ದಾರೆ. ಅದಕ್ಕಾಗಿ ತಾವೇ ಸ್ವತಃ ಒಂದು ಹೊಸ ರಿಯಾಲಿಟಿ ಶೋ ಆರಂಭಿಸುತ್ತಿದ್ದಾರೆ. ಆ ಕಾರ್ಯಕ್ರಮಕ್ಕೆ ‘ಮಹಾನ್ ಕಿಲಾಡಿ’ (Mahan Khiladi) ಎಂದು ಟೈಟಲ್ ಇಡಲಾಗಿದೆ. ಆ ಬಗ್ಗೆ ಮಾಹಿತಿ ನೀಡಲು ಇತ್ತೀಚೆಗೆ ಸುದ್ದಿಗೋಷ್ಠಿ ಕರೆಯಲಾಗಿತ್ತು.

‘ಮಿಂಚು ಎಂಟರ್‌ಟೈನ್​ಮೆಂಟ್ಸ್ ಯೂಟ್ಯೂಬ್’ ಮೂಲಕ ‘ಮಹಾನ್ ಕಿಲಾಡಿ’ ಶೋ ಪ್ರಸಾರವಾಗಲಿದೆ. ಪ್ರಚಾರದ ಮೊದಲ ಹಂತವಾಗಿ ಪೋಸ್ಟರ್, ಟೈಟಲ್ ಸಾಂಗ್ ಹಾಗೂ ಟ್ರೇಲರ್ ಅನಾವರಣ ಮಾಡಲಾಗಿದೆ. ಈ ಕಾರ್ಯಕ್ರಮಕ್ಕೆ ವಿಧಾನ ಪರಿಷತ್ ಸದಸ್ಯ ಟಿ. ಶರವಣ, ಉದ್ಯಮಿ ಡಾ. ಎನ್. ನರಸಿಂಹಮೂರ್ತಿ, ಶ್ರೀಕಾಂತ್, ಡಾ. ಮೋಕ್ಷಗುಂಡಂ ಗುರೂಜಿ, ಭಾರ್ಗವ ಅವರು ಸಾಕ್ಷಿಯಾದರು. ಈ ವೇಳೆ ಮಾತಾಡಿದ ಶರವಣ ಅವರು, ‘ಕಲಾವಿದರಿಗೆ ಮೊದಲಿನಿಂದಲೂ ಸಹಕಾರ ನೀಡುತ್ತಾ ಬಂದಿದ್ದೇನೆ. ಇಂಥವರು ಮುನ್ನೆಲೆಗೆ ಬರಬೇಕು. ನಿಮಗೆ ಸರ್ಕಾರದಿಂದಲೂ ಅನುದಾನ ಬರಲು ಶಿಪಾರಸ್ಸು ಮಾಡುತ್ತೇನೆ’ ಎಂದು ಭರವಸೆ ನೀಡಿದರು.

ರಿಯಾಲಿಟಿ ಶೋ ಬಗ್ಗೆ ಮಿಂಚು ಅವರು ಮಾಹಿತಿ ಹಂಚಿಕೊಂಡರು. ‘ಒಂದಷ್ಟು ವಿಷಯಗಳಿಂದ ಅವಕಾಶಗಳು ಇಲ್ಲದೆ ಇರುವಾಗ ಹೊಸತನದೊಂದಿಗೆ ನನ್ನ ಅವಕಾಶವನ್ನು ನಾನೇ ರೂಪಿಸಿಕೊಳ್ಳಬೇಕು. ನಾನು ಕಲಿತದ್ದನ್ನು ಬೇರೆಯವರಿಗೆ ಹೇಳಿಕೊಡಬೇಕು ಎಂಬ ಕಲ್ಪನೆಯನ್ನು ಗೆಳಯ ಪ್ರವೀಣ್ ಗಸ್ತಿಗೆ ಹೇಳಿದಾಗ, ಆತ ಬೆನ್ನಲುಬಾಗಿ ನಿಂತುಕೊಂಡಿದ್ದರಿಂದ ಇಲ್ಲಿಯವರೆಗೂ ಬರಲು ಸಾಧ್ಯವಾಯಿತು’ ಎಂದು ಅವರು ಹೇಳಿದರು.

‘ಸಣ್ಣ ಬಜೆಟ್‌ನೊಂದಿಗೆ ಆರಂಭಿಸಿ, ಮುಂದೆ ದೊಡ್ಡದಾಗಿ ಬೆಳೆಯುತ್ತಾ ಹೋಯಿತು. ಅಕ್ಷರ ಸ್ಟುಡಿಯೋದ ಗೌರಿಪ್ರಸಾದ್ ಚಿತ್ರೀಕರಿಸಲು ಅನುವು ಮಾಡಿಕೊಟ್ಟರು. ಸಾಮಾಜಿಕ ಜಾಲತಾಣದಲ್ಲಿ ಜಾಹಿರಾತು ಕೊಟ್ಟಾಗ ಕರ್ನಾಟಕದಾದ್ಯಂತ ಸಾವಿರಕ್ಕೂ ಹೆಚ್ಚು ಆಕಾಂಕ್ಷಿಗಳು ಬಂದರು. ಇದರಲ್ಲಿ 3 ಸಲ ಆಡಿಷನ್ ಮಾಡಿ, ಅಂತಿಮವಾಗಿ 22 ಪ್ರತಿಭೆಗಳು ಆಯ್ಕೆಯಾಗಿದ್ದಾರೆ. ಅವರಿಗೆಲ್ಲ 7 ವಾರಗಳ ತರಬೇತಿ ನೀಡಲಾಗಿದೆ’ ಎಂದಿದ್ದಾರೆ ಮಿಂಚು.

ಇದನ್ನೂ ಓದಿ: ಹೊಸ ರಿಯಾಲಿಟಿ ಶೋಗೆ ಜಡ್ಜ್​ ಆಗಿ ಬಂದ ಮೇಘನಾ ರಾಜ್

ಕಿರಣ್‌ಕುಮಾರ್ ಅವರು ಈ ರಿಯಾಲಿಟಿ ಶೋ ನಿರ್ದೇಶನ ಜವಾಬ್ದಾರಿಯನ್ನು ಹೊತ್ತುಕೊಂಡಿದ್ದಾರೆ. ದಿಲೀಪ್ ಕುಮಾರ್ ಹೆಚ್.ಆರ್. ಅವರು ಕ್ರಿಯೇಟೀವ್ ಹೆಡ್ ಆಗಿ ಕೆಲಸ ಮಾಡುತ್ತಿದ್ದಾರೆ. ಪುಟ್ಟರಾಜು ಡಿಜಿಟಲ್ ಪ್ರಮೋಟರ್ ಆಗಿದ್ದಾರೆ. ಚಿದಂಬರ ಪೂಜಾರಿ ಮೆಂಟರ್ ಆಗಿದ್ದು, ಪಲ್ಲವಿ ಸ್ಕ್ರಿಪ್ಟ್ ರೈಟರ್ ಆಗಿರುತ್ತಾರೆ. ಮಿಂಚು, ಮಹೇಶ್ ಕೃಷ್ಣ, ಪ್ರವೀಣ್ ಗಸ್ತಿ ತೀರ್ಪುಗಾರರಾಗಿರುತ್ತಾರೆ ಎಂಬ ಮಾಹಿತಿಯನ್ನು ಸುದ್ದಿಗೋಷ್ಠಿಯಲ್ಲಿ ನೀಡಲಾಯಿತು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಕಲ್ಲು ಕ್ವಾರಿ ದುರಂತ: ಗಾಯಾಳುಗಳ ಆರೋಗ್ಯ ವಿಚಾರಿಸಿ ಡಿಕೆಶಿ ಹೇಳಿದ್ದೇನು?
ಕಲ್ಲು ಕ್ವಾರಿ ದುರಂತ: ಗಾಯಾಳುಗಳ ಆರೋಗ್ಯ ವಿಚಾರಿಸಿ ಡಿಕೆಶಿ ಹೇಳಿದ್ದೇನು?
ಮಳೆಯಿಂದ ಅಪಾಯದ ಮಟ್ಟ ತಲುಪಿದ ಅಲಕಾನಂದ ನದಿ; ರುದ್ರಪ್ರಯಾಗದಲ್ಲಿ ಹೈ ಅಲರ್ಟ್
ಮಳೆಯಿಂದ ಅಪಾಯದ ಮಟ್ಟ ತಲುಪಿದ ಅಲಕಾನಂದ ನದಿ; ರುದ್ರಪ್ರಯಾಗದಲ್ಲಿ ಹೈ ಅಲರ್ಟ್
ಖಾಸಗಿ ಲೇಔಟ್ ರಸ್ತೆಗಳು ಇನ್ನು ಸರ್ಕಾರಿ ಸ್ವತ್ತು: ಸಿಎಂ ಡಿಕೆಶಿ ಘೋಷಣೆ
ಖಾಸಗಿ ಲೇಔಟ್ ರಸ್ತೆಗಳು ಇನ್ನು ಸರ್ಕಾರಿ ಸ್ವತ್ತು: ಸಿಎಂ ಡಿಕೆಶಿ ಘೋಷಣೆ
ಕಾಟನ್ ಪೇಟೆಯಲ್ಲಿ ವಾಲಿದ 2 ಅಂತಸ್ತಿನ ಕಟ್ಟಡ, ಅಕ್ಕಪಕ್ಕದವರಿಗೆ ಆತಂಕ
ಕಾಟನ್ ಪೇಟೆಯಲ್ಲಿ ವಾಲಿದ 2 ಅಂತಸ್ತಿನ ಕಟ್ಟಡ, ಅಕ್ಕಪಕ್ಕದವರಿಗೆ ಆತಂಕ
ಹುಟ್ಟುಹಬ್ಬದ ದಿನ ತಿರುಪತಿಗೆ ಭೇಟಿ ನೀಡಿದ ನಟ ‘ಗೋಲ್ಡನ್ ಸ್ಟಾರ್’ ಗಣೇಶ್
ಹುಟ್ಟುಹಬ್ಬದ ದಿನ ತಿರುಪತಿಗೆ ಭೇಟಿ ನೀಡಿದ ನಟ ‘ಗೋಲ್ಡನ್ ಸ್ಟಾರ್’ ಗಣೇಶ್
SIR​ ಪ್ರಕ್ರಿಯೆ: ಬಾಂಗ್ಲಾದಿಂದ ಬಂದವರ ಪೋಷಣೆ, ಕುಮಾರಸ್ವಾಮಿ ಗಂಭೀರ ಆರೋಪ
SIR​ ಪ್ರಕ್ರಿಯೆ: ಬಾಂಗ್ಲಾದಿಂದ ಬಂದವರ ಪೋಷಣೆ, ಕುಮಾರಸ್ವಾಮಿ ಗಂಭೀರ ಆರೋಪ
’ನನ್ನ ತಂಗಿ’; ಭಾರತಕ್ಕೆ ಬಂದಿರುವ ಜಪಾನ್ ಪ್ರಧಾನಿ ತಕೈಚಿಗೆ ಮೋದಿ ಮೆಚ್ಚುಗೆ
’ನನ್ನ ತಂಗಿ’; ಭಾರತಕ್ಕೆ ಬಂದಿರುವ ಜಪಾನ್ ಪ್ರಧಾನಿ ತಕೈಚಿಗೆ ಮೋದಿ ಮೆಚ್ಚುಗೆ
ಗ್ಯಾರಂಟಿ ಪರಿಷ್ಕರಣೆ ಹೆಸರಲ್ಲಿ ಚುನಾವಣೆಗೆ ಮಾಹಿತಿ ಸಂಗ್ರಹ: ಕುಮಾರಸ್ವಾಮಿ
ಗ್ಯಾರಂಟಿ ಪರಿಷ್ಕರಣೆ ಹೆಸರಲ್ಲಿ ಚುನಾವಣೆಗೆ ಮಾಹಿತಿ ಸಂಗ್ರಹ: ಕುಮಾರಸ್ವಾಮಿ
28 ಕೋಟಿ ರೂ. ಪರಿಹಾರದ ಕ್ರೆಡಿಟ್ ವಾರ್
28 ಕೋಟಿ ರೂ. ಪರಿಹಾರದ ಕ್ರೆಡಿಟ್ ವಾರ್
ಭಾರತಕ್ಕೆ ಜಪಾನ್ ಪ್ರಧಾನಿ ಭೇಟಿ
ಭಾರತಕ್ಕೆ ಜಪಾನ್ ಪ್ರಧಾನಿ ಭೇಟಿ