Adipurush: ‘ಆದಿಪುರುಷ್​’ ಚಿತ್ರತಂಡದ ಮೇಲೆ ಬಿತ್ತು ಕೇಸ್​; ರಾಮನ ಈ ಪೋಸ್ಟರ್​ನಲ್ಲಿ ಅಂಥ ತಪ್ಪು ಏನಿದೆ?

Prabhas | Om Raut: ಧಾರ್ಮಿಕ ಭಾವನೆಗೆ ಧಕ್ಕೆ ಆಗಿದೆ ಎಂದು ‘ಆದಿಪುರುಷ್​’ ತಂಡದ ವಿರುದ್ಧ ದೂರು ನೀಡಲಾಗಿದೆ. ಈ ಹಿಂದೆ ಟೀಸರ್​ ಬಿಡುಗಡೆ ಆದಾಗಲೂ ಕಿರಿಕ್​ ಮಾಡಲಾಗಿತ್ತು.

Adipurush: ‘ಆದಿಪುರುಷ್​’ ಚಿತ್ರತಂಡದ ಮೇಲೆ ಬಿತ್ತು ಕೇಸ್​; ರಾಮನ ಈ ಪೋಸ್ಟರ್​ನಲ್ಲಿ ಅಂಥ ತಪ್ಪು ಏನಿದೆ?
ಆದಿಪುರುಷ್ ಸಿನಿಮಾ ಪೋಸ್ಟರ್

Updated on: Apr 05, 2023 | 3:26 PM

ಪ್ಯಾನ್​ ಇಂಡಿಯಾ ಸ್ಟಾರ್​ ಪ್ರಭಾಸ್​ (Prabhas) ನಟನೆಯ ‘ಆದಿಪುರುಷ್​’ ಸಿನಿಮಾಗೆ ಪ್ರತಿ ಹಂತದಲ್ಲೂ ಟ್ರೋಲ್​ ಕಾಟ ಎದುರಾಗುತ್ತಲೇ ಇದೆ. ಈ ಚಿತ್ರದಲ್ಲಿ ಪ್ರಭಾಸ್​ ಅವರು ರಾಮನ ಪಾತ್ರ ಮಾಡುತ್ತಿದ್ದಾರೆ. ಕೃತಿ ಸನೋನ್​ ಅವರು ಸೀತೆಯಾಗಿ ಕಾಣಿಸಿಕೊಳ್ಳಲಿದ್ದಾರೆ. ರಾಮನವಮಿ ಪ್ರಯುಕ್ತ ಆದಿಪುರುಷ್​’ ಸಿನಿಮಾ (Adipurush Movie) ತಂಡದಿಂದ ಹೊಸ ಪೋಸ್ಟರ್​ ರಿಲೀಸ್​ ಮಾಡಲಾಯಿತು. ಆದರೆ ಅದನ್ನು ಕಂಡು ಕೆಲವರು ಅಸಮಾಧಾನ ವ್ಯಕ್ತಪಡಿಸಿದರು. ಅಷ್ಟೇ ಅಲ್ಲ, ಈ ವಿಷಯ ಈಗ ಪೊಲೀಸ್​ ಠಾಣೆಯ ಮೆಟ್ಟಿಲೇರಿದೆ. ನಿರ್ದೇಶಕ ಓಂ ರಾವತ್ (Om Raut)​, ನಟ ಪ್ರಭಾಸ್​ ಸೇರಿದಂತೆ ಇಡೀ ಚಿತ್ರತಂಡದ ಮೇಲೆ ದೂರು ನೀಡಲಾಗಿದೆ. ಈ ಪೋಸ್ಟರ್​ನಿಂದ ಹಿಂದೂಗಳ ಧಾರ್ಮಿಕ ಭಾವನೆಗೆ ಧಕ್ಕೆ ಆಗಿದೆ ಎಂದು ಆರೋಪಿಸಲಾಗಿದೆ.

ಸಂಜಯ್​ ದೀನನಾಥ್​ ತಿವಾರಿ ಎಂಬುವವರು ‘ಆದಿಪುರುಷ್​’ ಸಿನಿಮಾತಂಡದ ವಿರುದ್ಧ ದೂರು ನೀಡಿದ್ದಾರೆ. ಹೊಸ ಪೋಸ್ಟರ್​ನಲ್ಲಿ ರಾಮಚರಿತಮಾನಸದ ವಿವರಗಳನ್ನು ಆಕ್ಷೇಪಾರ್ಹವಾಗಿ ಚಿತ್ರಿಸಲಾಗಿದೆ ಎಂದು ಅವರು ಆರೋಪಿಸಿದ್ದಾರೆ. ರಾಮ ಧರಿಸಿದ ವಸ್ತ್ರ ಸರಿಯಾಗಿಲ್ಲ. ಜನಿವಾರವನ್ನು ತೆಗೆಯಕಲಾಗಿದೆ. ಇದರಿಂದ ಧಾರ್ಮಿಕ ಭಾವನೆಗೆ ಧಕ್ಕೆ ಆಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಈ ಹಿಂದೆ ಟೀಸರ್​ ಬಿಡುಗಡೆ ಆದಾಗಲೂ ಕಿರಿಕ್​ ಮಾಡಲಾಗಿತ್ತು.

ಇದನ್ನೂ ಓದಿ
Adipurush: ಪ್ರಭಾಸ್​ ಫ್ಯಾನ್ಸ್​ ಮನ ಗೆದ್ದ ‘ಆದಿಪುರುಷ್​’ ಟೀಸರ್​; ಇಲ್ಲಿದೆ ರಾಮ-ರಾವಣರ ಮುಖಾಮುಖಿ
Adipurush Teaser: ‘ಆದಿಪುರುಷ್​’ ಟೀಸರ್​ ಬಿಡುಗಡೆ; ಅಯೋಧ್ಯೆಯಲ್ಲಿ ರಾಮನಾಗಿ ದರ್ಶನ ನೀಡಿದ ಪ್ರಭಾಸ್​
Prabhas: ದೊಡ್ಡಪ್ಪನ ನಿಧನದ ನೋವಿಟ್ಟುಕೊಂಡು ಕೆಲಸಕ್ಕೆ ಬಂದ ಪ್ರಭಾಸ್​; ‘ಸಲಾರ್​’ ಶೂಟಿಂಗ್​ ಮತ್ತೆ ಶುರು
Prabhas: ದೊಡ್ಡಪ್ಪನ ಅಂತ್ಯ ಸಂಸ್ಕಾರಕ್ಕೆ ಬಂದ ಫ್ಯಾನ್ಸ್​ಗೆ ಊಟದ ವ್ಯವಸ್ಥೆ ಮಾಡಿಸಿ ಕಾಳಜಿ ತೋರಿದ ಪ್ರಭಾಸ್​

‘ಆದಿಪುರುಷ್​​’ ಚಿತ್ರಕ್ಕೆ ಮುಳುವಾದ ವಿವಾದ; ಉತ್ತರಿಸಲು ಸೆನ್ಸಾರ್ ಮಂಡಳಿಗೆ ಕೋರ್ಟ್​ ಆದೇಶ

ಚಿತ್ರಕ್ಕೆ ನೂರಾರು ಕೋಟಿ ಸುರಿಯಲಾಗಿದೆ. ಗ್ರಾಫಿಕ್ಸ್ ಗಮನ ಸೆಳೆಯಲಿದೆ ಅನ್ನೋದು ಪ್ರೇಕ್ಷಕರ ಅಭಿಪ್ರಾಯ ಆಗಿತ್ತು. ಆದರೆ, ಈ ನಿರೀಕ್ಷೆ ಸುಳ್ಳಾಯಿತು. ಕಳೆದ ವರ್ಷ ರಿಲೀಸ್ ಆದ ಟೀಸರ್ ಸಿನಿಮಾದ ಮೇಲಿದ್ದ ನಿರೀಕ್ಷೆಯನ್ನು ನುಚ್ಚು ನೂರು ಮಾಡಿತ್ತು. ಇದೇ ಕಾರಣಕ್ಕೆ ಸಿನಿಮಾ ರಿಲೀಸ್ ದಿನಾಂಕ ಮುಂದೂಡಲ್ಪಟ್ಟಿದೆ ಎಂದು ವರದಿ ಆಗಿತ್ತು.

‘ಆದಿಪುರುಷ್​’ ಸಿನಿಮಾದ ದೃಶ್ಯಗಳಲ್ಲಿನ ಗ್ರಾಫಿಕ್ಸ್​ನಲ್ಲಿ ಕೆಲ ಬದಲಾವಣೆ ಮಾಡಲು ತಂಡ ನಿರ್ಧರಿಸಿದೆ ಎನ್ನಲಾಗಿತ್ತು. ಆದರೆ, ಹೊಸ ಪೋಸ್ಟರ್ ನೋಡಿದ ಅಭಿಮಾನಿಗಳಿಗೆ ನಿರಾಸೆ ಆಗಿದೆ. ರಾಮ, ಲಕ್ಷ್ಮಣ ಹಾಗೂ ಸೀತೆ ನಿಂತಿದ್ದಾರೆ. ಹನುಮಂತ ಇವರಿಗೆ ನಮಿಸುತ್ತಿದ್ದಾನೆ. ಈ ರೀತಿಯಲ್ಲಿ ಪೋಸ್ಟರ್ ಮೂಡಿಬಂದಿದೆ. ಅದರಲ್ಲಿನ ತಪ್ಪುಗಳನ್ನು ಗುರುತಿಸಿ ಕೆಲವರು ಪ್ರಶ್ನೆ ಮಾಡುತ್ತಿದ್ದಾರೆ.

ಈ ಚಿತ್ರವನ್ನು ಟಿ-ಸೀರಿಸ್ ಬ್ಯಾನರ್ ಅಡಿಯಲ್ಲಿ ಭುಷಣ್ ಕುಮಾರ್, ಕೃಷನ್ ಕುಮಾರ್, ಓಂ ರಾವತ್​, ಪ್ರಸಾದ್ ಸುತಾರ್ ಹಾಗೂ ರಾಜೇಶ್ ನಾಯರ್ ನಿರ್ಮಾಣ ಮಾಡುತ್ತಿದ್ದಾರೆ. ‘ಆದಿಪುರುಷ್​’ ಸಿನಿಮಾ ಜೂನ್​ 16ರಂದು ಬಿಡುಗಡೆ ಆಗಲಿದೆ. ಈ ಚಿತ್ರದ ಮೇಲೆ ಅಭಿಮಾನಿಗಳಿಗೆ ಸಖತ್​ ನಿರೀಕ್ಷೆ ಇದೆ. ಆದರೆ ನಿರ್ದೇಶಕ ಓಂ ರಾವತ್​ ಅವರು ಸರಿಯಾಗಿ ಪ್ರಚಾರ ಮಾಡುತ್ತಿಲ್ಲ ಎಂದು ಪ್ರಭಾಸ್​ ಫ್ಯಾನ್ಸ್ ಗರಂ ಆಗಿದ್ದಾರೆ. ಸ್ಟಾರ್​ ನಟರ ಸಿನಿಮಾಗೆ ಎರಡೂವರೆ ತಿಂಗಳು ಮಾತ್ರ ಬಾಕಿ ಇದೆ ಎಂದಾಗ ಭರ್ಜರಿಯಾಗಿ ಪ್ರಚಾರ ಕಾರ್ಯ ಆರಂಭ ಆಗುತ್ತದೆ. ಆದರೆ ಓಂ ರಾವತ್​ ಸುಮ್ಮನೆ ಕುಳಿತಿರುವುದಕ್ಕೆ ಅವರನ್ನು ಪ್ರಭಾಸ್​ ಫ್ಯಾನ್ಸ್​ ಟ್ರೋಲ್​ ಮಾಡುತ್ತಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 3:26 pm, Wed, 5 April 23

Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Follow Us