Adipurush: ‘ಆದಿಪುರುಷ್​’ ಚಿತ್ರತಂಡದ ಮೇಲೆ ಬಿತ್ತು ಕೇಸ್​; ರಾಮನ ಈ ಪೋಸ್ಟರ್​ನಲ್ಲಿ ಅಂಥ ತಪ್ಪು ಏನಿದೆ?

|

Updated on: Apr 05, 2023 | 3:26 PM

Prabhas | Om Raut: ಧಾರ್ಮಿಕ ಭಾವನೆಗೆ ಧಕ್ಕೆ ಆಗಿದೆ ಎಂದು ‘ಆದಿಪುರುಷ್​’ ತಂಡದ ವಿರುದ್ಧ ದೂರು ನೀಡಲಾಗಿದೆ. ಈ ಹಿಂದೆ ಟೀಸರ್​ ಬಿಡುಗಡೆ ಆದಾಗಲೂ ಕಿರಿಕ್​ ಮಾಡಲಾಗಿತ್ತು.

Adipurush: ‘ಆದಿಪುರುಷ್​’ ಚಿತ್ರತಂಡದ ಮೇಲೆ ಬಿತ್ತು ಕೇಸ್​; ರಾಮನ ಈ ಪೋಸ್ಟರ್​ನಲ್ಲಿ ಅಂಥ ತಪ್ಪು ಏನಿದೆ?
ಆದಿಪುರುಷ್ ಸಿನಿಮಾ ಪೋಸ್ಟರ್
Follow us on

ಪ್ಯಾನ್​ ಇಂಡಿಯಾ ಸ್ಟಾರ್​ ಪ್ರಭಾಸ್​ (Prabhas) ನಟನೆಯ ‘ಆದಿಪುರುಷ್​’ ಸಿನಿಮಾಗೆ ಪ್ರತಿ ಹಂತದಲ್ಲೂ ಟ್ರೋಲ್​ ಕಾಟ ಎದುರಾಗುತ್ತಲೇ ಇದೆ. ಈ ಚಿತ್ರದಲ್ಲಿ ಪ್ರಭಾಸ್​ ಅವರು ರಾಮನ ಪಾತ್ರ ಮಾಡುತ್ತಿದ್ದಾರೆ. ಕೃತಿ ಸನೋನ್​ ಅವರು ಸೀತೆಯಾಗಿ ಕಾಣಿಸಿಕೊಳ್ಳಲಿದ್ದಾರೆ. ರಾಮನವಮಿ ಪ್ರಯುಕ್ತ ಆದಿಪುರುಷ್​’ ಸಿನಿಮಾ (Adipurush Movie) ತಂಡದಿಂದ ಹೊಸ ಪೋಸ್ಟರ್​ ರಿಲೀಸ್​ ಮಾಡಲಾಯಿತು. ಆದರೆ ಅದನ್ನು ಕಂಡು ಕೆಲವರು ಅಸಮಾಧಾನ ವ್ಯಕ್ತಪಡಿಸಿದರು. ಅಷ್ಟೇ ಅಲ್ಲ, ಈ ವಿಷಯ ಈಗ ಪೊಲೀಸ್​ ಠಾಣೆಯ ಮೆಟ್ಟಿಲೇರಿದೆ. ನಿರ್ದೇಶಕ ಓಂ ರಾವತ್ (Om Raut)​, ನಟ ಪ್ರಭಾಸ್​ ಸೇರಿದಂತೆ ಇಡೀ ಚಿತ್ರತಂಡದ ಮೇಲೆ ದೂರು ನೀಡಲಾಗಿದೆ. ಈ ಪೋಸ್ಟರ್​ನಿಂದ ಹಿಂದೂಗಳ ಧಾರ್ಮಿಕ ಭಾವನೆಗೆ ಧಕ್ಕೆ ಆಗಿದೆ ಎಂದು ಆರೋಪಿಸಲಾಗಿದೆ.

ಸಂಜಯ್​ ದೀನನಾಥ್​ ತಿವಾರಿ ಎಂಬುವವರು ‘ಆದಿಪುರುಷ್​’ ಸಿನಿಮಾತಂಡದ ವಿರುದ್ಧ ದೂರು ನೀಡಿದ್ದಾರೆ. ಹೊಸ ಪೋಸ್ಟರ್​ನಲ್ಲಿ ರಾಮಚರಿತಮಾನಸದ ವಿವರಗಳನ್ನು ಆಕ್ಷೇಪಾರ್ಹವಾಗಿ ಚಿತ್ರಿಸಲಾಗಿದೆ ಎಂದು ಅವರು ಆರೋಪಿಸಿದ್ದಾರೆ. ರಾಮ ಧರಿಸಿದ ವಸ್ತ್ರ ಸರಿಯಾಗಿಲ್ಲ. ಜನಿವಾರವನ್ನು ತೆಗೆಯಕಲಾಗಿದೆ. ಇದರಿಂದ ಧಾರ್ಮಿಕ ಭಾವನೆಗೆ ಧಕ್ಕೆ ಆಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಈ ಹಿಂದೆ ಟೀಸರ್​ ಬಿಡುಗಡೆ ಆದಾಗಲೂ ಕಿರಿಕ್​ ಮಾಡಲಾಗಿತ್ತು.

ಇದನ್ನೂ ಓದಿ
Adipurush: ಪ್ರಭಾಸ್​ ಫ್ಯಾನ್ಸ್​ ಮನ ಗೆದ್ದ ‘ಆದಿಪುರುಷ್​’ ಟೀಸರ್​; ಇಲ್ಲಿದೆ ರಾಮ-ರಾವಣರ ಮುಖಾಮುಖಿ
Adipurush Teaser: ‘ಆದಿಪುರುಷ್​’ ಟೀಸರ್​ ಬಿಡುಗಡೆ; ಅಯೋಧ್ಯೆಯಲ್ಲಿ ರಾಮನಾಗಿ ದರ್ಶನ ನೀಡಿದ ಪ್ರಭಾಸ್​
Prabhas: ದೊಡ್ಡಪ್ಪನ ನಿಧನದ ನೋವಿಟ್ಟುಕೊಂಡು ಕೆಲಸಕ್ಕೆ ಬಂದ ಪ್ರಭಾಸ್​; ‘ಸಲಾರ್​’ ಶೂಟಿಂಗ್​ ಮತ್ತೆ ಶುರು
Prabhas: ದೊಡ್ಡಪ್ಪನ ಅಂತ್ಯ ಸಂಸ್ಕಾರಕ್ಕೆ ಬಂದ ಫ್ಯಾನ್ಸ್​ಗೆ ಊಟದ ವ್ಯವಸ್ಥೆ ಮಾಡಿಸಿ ಕಾಳಜಿ ತೋರಿದ ಪ್ರಭಾಸ್​

‘ಆದಿಪುರುಷ್​​’ ಚಿತ್ರಕ್ಕೆ ಮುಳುವಾದ ವಿವಾದ; ಉತ್ತರಿಸಲು ಸೆನ್ಸಾರ್ ಮಂಡಳಿಗೆ ಕೋರ್ಟ್​ ಆದೇಶ

ಚಿತ್ರಕ್ಕೆ ನೂರಾರು ಕೋಟಿ ಸುರಿಯಲಾಗಿದೆ. ಗ್ರಾಫಿಕ್ಸ್ ಗಮನ ಸೆಳೆಯಲಿದೆ ಅನ್ನೋದು ಪ್ರೇಕ್ಷಕರ ಅಭಿಪ್ರಾಯ ಆಗಿತ್ತು. ಆದರೆ, ಈ ನಿರೀಕ್ಷೆ ಸುಳ್ಳಾಯಿತು. ಕಳೆದ ವರ್ಷ ರಿಲೀಸ್ ಆದ ಟೀಸರ್ ಸಿನಿಮಾದ ಮೇಲಿದ್ದ ನಿರೀಕ್ಷೆಯನ್ನು ನುಚ್ಚು ನೂರು ಮಾಡಿತ್ತು. ಇದೇ ಕಾರಣಕ್ಕೆ ಸಿನಿಮಾ ರಿಲೀಸ್ ದಿನಾಂಕ ಮುಂದೂಡಲ್ಪಟ್ಟಿದೆ ಎಂದು ವರದಿ ಆಗಿತ್ತು.

‘ಆದಿಪುರುಷ್​’ ಸಿನಿಮಾದ ದೃಶ್ಯಗಳಲ್ಲಿನ ಗ್ರಾಫಿಕ್ಸ್​ನಲ್ಲಿ ಕೆಲ ಬದಲಾವಣೆ ಮಾಡಲು ತಂಡ ನಿರ್ಧರಿಸಿದೆ ಎನ್ನಲಾಗಿತ್ತು. ಆದರೆ, ಹೊಸ ಪೋಸ್ಟರ್ ನೋಡಿದ ಅಭಿಮಾನಿಗಳಿಗೆ ನಿರಾಸೆ ಆಗಿದೆ. ರಾಮ, ಲಕ್ಷ್ಮಣ ಹಾಗೂ ಸೀತೆ ನಿಂತಿದ್ದಾರೆ. ಹನುಮಂತ ಇವರಿಗೆ ನಮಿಸುತ್ತಿದ್ದಾನೆ. ಈ ರೀತಿಯಲ್ಲಿ ಪೋಸ್ಟರ್ ಮೂಡಿಬಂದಿದೆ. ಅದರಲ್ಲಿನ ತಪ್ಪುಗಳನ್ನು ಗುರುತಿಸಿ ಕೆಲವರು ಪ್ರಶ್ನೆ ಮಾಡುತ್ತಿದ್ದಾರೆ.

ಈ ಚಿತ್ರವನ್ನು ಟಿ-ಸೀರಿಸ್ ಬ್ಯಾನರ್ ಅಡಿಯಲ್ಲಿ ಭುಷಣ್ ಕುಮಾರ್, ಕೃಷನ್ ಕುಮಾರ್, ಓಂ ರಾವತ್​, ಪ್ರಸಾದ್ ಸುತಾರ್ ಹಾಗೂ ರಾಜೇಶ್ ನಾಯರ್ ನಿರ್ಮಾಣ ಮಾಡುತ್ತಿದ್ದಾರೆ. ‘ಆದಿಪುರುಷ್​’ ಸಿನಿಮಾ ಜೂನ್​ 16ರಂದು ಬಿಡುಗಡೆ ಆಗಲಿದೆ. ಈ ಚಿತ್ರದ ಮೇಲೆ ಅಭಿಮಾನಿಗಳಿಗೆ ಸಖತ್​ ನಿರೀಕ್ಷೆ ಇದೆ. ಆದರೆ ನಿರ್ದೇಶಕ ಓಂ ರಾವತ್​ ಅವರು ಸರಿಯಾಗಿ ಪ್ರಚಾರ ಮಾಡುತ್ತಿಲ್ಲ ಎಂದು ಪ್ರಭಾಸ್​ ಫ್ಯಾನ್ಸ್ ಗರಂ ಆಗಿದ್ದಾರೆ. ಸ್ಟಾರ್​ ನಟರ ಸಿನಿಮಾಗೆ ಎರಡೂವರೆ ತಿಂಗಳು ಮಾತ್ರ ಬಾಕಿ ಇದೆ ಎಂದಾಗ ಭರ್ಜರಿಯಾಗಿ ಪ್ರಚಾರ ಕಾರ್ಯ ಆರಂಭ ಆಗುತ್ತದೆ. ಆದರೆ ಓಂ ರಾವತ್​ ಸುಮ್ಮನೆ ಕುಳಿತಿರುವುದಕ್ಕೆ ಅವರನ್ನು ಪ್ರಭಾಸ್​ ಫ್ಯಾನ್ಸ್​ ಟ್ರೋಲ್​ ಮಾಡುತ್ತಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 3:26 pm, Wed, 5 April 23