AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೂ ಎನ್​ಟಿಆರ್ ಅಭಿಮಾನಿಗಳ ಹುಚ್ಚಾಟ, ಬುದ್ಧಿ ಹೇಳಿ ಎಂದ ನೆಟ್ಟಿಗರು

Jr NTR Fans: ಜೂ ಎನ್​ಟಿಆರ್ ಅಭಿಮಾನಿಗಳ ಅತಿರೇಕದ ವರ್ತನೆ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗಿದ್ದು, ನಿಮ್ಮ ಅಭಿಮಾನಿಗಳಿಗೆ ಬುದ್ಧಿಹೇಳಿ ಎಂದು ನೆಟ್ಟಿಗರು ಜೂ ಎನ್​ಟಿಆರ್​ ಅನ್ನು ಒತ್ತಾಯಿಸಿದ್ದಾರೆ.

ಜೂ ಎನ್​ಟಿಆರ್ ಅಭಿಮಾನಿಗಳ ಹುಚ್ಚಾಟ, ಬುದ್ಧಿ ಹೇಳಿ ಎಂದ ನೆಟ್ಟಿಗರು
ಜೂ ಎನ್​ಟಿಆರ್
ಮಂಜುನಾಥ ಸಿ.
|

Updated on:May 21, 2023 | 10:39 PM

Share

ಉಳಿಕೆ ಚಿತ್ರರಂಗಗಳಿಗೆ (Movie Industry) ಹೋಲಿಸಿದರೆ ತೆಲುಗು ಚಿತ್ರರಂಗದಲ್ಲಿ (Tollywood) ಅಭಿಮಾನಿಗಳ ಅಬ್ಬರ ತುಸು ಹೆಚ್ಚು. ಅದನ್ನು ಅಭಿಮಾನ ಎನ್ನುವುದಕ್ಕಿಂತಲೂ ಹುಚ್ಚು ಅಭಿಮಾನ ಎನ್ನಬಹುದು. ಸ್ವತಃ ಅವರೂ ಸಹ ಅಭಿಮಾನವನ್ನು ‘ವೀರಾಭಿಮಾನ’ ಎಂದೇ ಕರೆಯುವುದು. ನೆಟ್ಟಿನ ನಟರಿಗಾಗಿ ಕಿಲೋಮೀಟರ್ ಗಟ್ಟಲೆ ಪಾದಯಾತ್ರೆ ಮಾಡುವುದು, ಇತರೆ ನಟರ ಅಭಿಮಾನಿಗಳೊಟ್ಟಿಗೆ ಕೈ-ಕೈ ಮಿಲಾಯಿಸುವುದು, ಕೊಲೆಗಳೂ ಆಗಿದ್ದಿದೆ. ಹುಚ್ಚಾಟ ಮೆರೆದ ಅಭಿಮಾನಿಗಳು ಜೈಲು ಸೇರಿದ್ದೂ ಇದೆ. ಹಾಗಿದ್ದರೂ ಅಭಿಮಾನಿಗಳು ತಮ್ಮ ದುರ್ವರ್ತನೆ, ಹುಚ್ಚಾಟ ನಿಲ್ಲಿಸಿಲ್ಲ. ಇದೀಗ ಜೂ ಎನ್​ಟಿಆರ್ ಅಭಿಮಾನಿಗಳು ಮಾಡಿರುವ ಕೃತ್ಯವೊಂದು ಸಾಮಾಜಿಕ ಜಾಲತಾಣದಲ್ಲಿ ಚರ್ಚೆಗೆ ಕಾರಣವಾಗಿದ್ದು ನಿಮ್ಮ ಅಭಿಮಾನಿಗಳಿಗೆ ಬುದ್ಧಿ ಹೇಳಿ ಎಂದು ನೆಟ್ಟಿಗರು ಜೂ ಎನ್​ಟಿಆರ್ (Jr NTR) ಅನ್ನು ಒತ್ತಾಯಿಸಿದ್ದಾರೆ.

ಮೇ 20 ಜೂ ಎನ್​ಟಿಆರ್ ಹುಟ್ಟುಹಬ್ಬ. ಅದೇ ಸಂದರ್ಭದಲ್ಲಿ ಜೂ ಎನ್​ಟಿಆರ್​ರ ಮುಂದಿನ ಸಿನಿಮಾ ದೇವರ ಸಿನಿಮಾದ ಟೈಟಲ್ ಟೀಸರ್ ಹಾಗೂ ಪೋಸ್ಟರ್ ಬಿಡುಗಡೆ ಮಾಡಲಾಗಿದೆ. ಮಚಲಿಪಟ್ಟಣದಲ್ಲಿ ಜೂ ಎನ್​ಟಿಆರ್ ಅಭಿಮಾನಿಗಳು ತಮ್ಮ ಮೆಚ್ಚಿನ ನಟನ ಹೊಸ ಸಿನಿಮಾದ ಪೋಸ್ಟರ್ ಬಿಡುಗಡೆ ಆಗಿರುವುದನ್ನು ಸಂಭ್ರಮಿಸಿದ್ದಾರೆ. ಕೇವಲ ಸಂಭ್ರಮಿಸಿದ್ದರೆ ಯಾರೂ ಪ್ರಶ್ನೆ ಮಾಡುತ್ತಿರಲಿಲ್ಲ ಆದರೆ ಇವರ ಸಂಭ್ರಮ ತುಸು ಎಲ್ಲೆ ಮೀರಿದೆ.

ದೇವರ ಸಿನಿಮಾದ ಪೋಸ್ಟರ್​ ಅನ್ನು ದೊಡ್ಡದಾಗಿ ಪ್ರಿಂಟ್ ಹಾಕಿಸಿ ಅದರ ಮುಂದೆ ಮೇಕೆಯೊಂದನ್ನು ಬಹಿರಂಗವಾಗಿ ಕಡಿದು ಅದರ ರಕ್ತದಿಂದ ದೇವರ ಸಿನಿಮಾದ ಪೋಸ್ಟರ್​ಗೆ ಅಭಿಷೇಕ ಮಾಡಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಹಲವರು ಈ ಬಹಿರಂಗ ಹಿಂಸೆಯನ್ನು ಖಂಡಿಸಿದ್ದಾರೆ. ಮಾಂಸಕ್ಕಾಗಿ ಪ್ರಾಣಿಗಳನ್ನು ಕಡಿಯುವುದು ಸರಿ, ಆದರೆ ಪೋಸ್ಟರ್​ಗೆ ರಕ್ತದ ಅಭಿಷೇಕ ಮಾಡಲು ಅದೂ ಬಹಿರಂಗವಾಗಿ ಹೀಗೆ ಹಿಂಸೆ ಮೆರೆದಿರುವುದು ಸರಿಯಲ್ಲ ಎಂದು ಹಲವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇನ್ನು ಕೆಲವರು ಜೂ ಎನ್​ಟಿಆರ್​ಗೆ ಟ್ವಿಟರ್​ನಲ್ಲಿ ಟ್ಯಾಗ್ ಮಾಡಿ ನಿಮ್ಮ ಅಭಿಮಾನಿಗಳಗೆ ತುಸು ಬುದ್ಧಿಹೇಳಿ ಎಂದು ಒತ್ತಾಯಿಸಿದ್ದಾರೆ. ಇನ್ನು ಕೆಲವರು ಇವರ ವಿರುದ್ಧ ಪೊಲೀಸ್ ಪ್ರಕರಣ ದಾಖಲಾಗಬೇಕೆಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ:ನನ್ನ ಸಿನಿಮಾ ಟೈಟಲ್ ಕದ್ದಿದ್ದಾರೆ: ಜೂ ಎನ್​ಟಿಆರ್ ಹೊಸ ಸಿನಿಮಾ ವಿರುದ್ಧ ಬಂಡ್ಲ ಗಣೇಶ್ ಆಕ್ರೋಶ

ಸ್ವತಃ ಜೂ ಎನ್​ಟಿಆರ್ ಅವರೇ ಕೆಲವು ಕಾರ್ಯಕ್ರಮಗಳಲ್ಲಿ, ಸಂದರ್ಶನಗಳಲ್ಲಿ ತಮ್ಮ ಕಟೌಟ್​ಗೆ ಹಾಲಿನ ಅಭಿಷೇಕವನ್ನು ಸಹ ಮಾಡಬೇಡಿ ಎಂದು ಮನವಿ ಮಾಡಿದ್ದಿದೆ. ಆದರೆ ಅಭಿಮಾನಿಗಳು ಅವರ ಮಾತು ಕೇಳುತ್ತಿಲ್ಲ. ಒಂದು ಸಂದರ್ಶನದಲ್ಲಿ ತಮ್ಮ ಅಭಿಮಾನಿಗಳ ಬಗ್ಗೆ ಮಾತನಾಡಿದ್ದ ಜೂ ಎನ್​ಟಿಆರ್, ನನ್ನ ಅಭಿಮಾನಿಗಳು ನನಗೇ ಒಂದಾದ ಮೇಲೊಂದು ಶಾಕ್ ಕೊಡುತ್ತಲೇ ಇರುತ್ತಾರೆ. ಒಂದಕ್ಕಿಂತಲೂ ಒಂದು ಕ್ರೇಜಿ ಸಂಗತಿಗಳನ್ನು ಅವರು ಮಾಡುತ್ತಲೇ ಬಂದಿದ್ದಾರೆ ಎಂದಿದ್ದರು. ಕೆಲ ವರ್ಷದ ಹಿಂದೆ ಕರ್ನಾಟಕದ ಕೋಲಾರದಲ್ಲಿ ಜೂ ಎನ್​ಟಿಆರ್ ಅಭಿಮಾನಿ ಹತ್ಯೆ ಮಾಡಿದ್ದ.

ಜೂ ಎನ್​ಟಿಆರ್ ಪ್ರಸ್ತುತ ದೇವರ ಹೆಸರಿನ ಸಿನಿಮಾದಲ್ಲಿ ನಟಿಸುತ್ತಿದ್ದು ಇದು ಪ್ಯಾನ್ ಇಂಡಿಯಾ ಸಿನಿಮಾ ಆಗಿದೆ. ಕೊರಟಾಲ ಶಿವ ಈ ಸಿನಿಮಾದ ನಿರ್ದೇಶಕರಾಗಿದ್ದು ನಾಯಕಿ ಬಾಲಿವುಡ್​ನ ಜಾನ್ಹವಿ ಕಪೂರ್. ಸಿನಿಮಾಕ್ಕೆ ವಿಲನ್ ಬಾಲಿವುಡ್​ನ ಸೈಫ್ ಅಲಿ ಖಾನ್ ಮತ್ತು ಶ್ರೀಕಾಂತ್. ಸಿನಿಮಾ ಮುಂದಿನ ವರ್ಷ ಏಪ್ರಿಲ್​ನಲ್ಲಿ ಬಿಡುಗಡೆ ಆಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:15 pm, Sun, 21 May 23

ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು