AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೀವ ಬೆದರಿಕೆ ಆರೋಪ; ದರ್ಶನ್​ ವಿರುದ್ಧ ಸ್ತ್ರೀ ಶಕ್ತಿ ಸಂಘದ ಸದಸ್ಯರಿಂದ ದೂರು ದಾಖಲು

‘ಚಾಲೆಂಜಿಂಗ್​ ಸ್ಟಾರ್​’ ದರ್ಶನ್​ ಅವರು ಇತ್ತೀಚೆಗಿನ ದಿನಗಳಲ್ಲಿ ನೀಡಿದ ಹೇಳಿಕೆಗಳನ್ನು ಗುರಿಯಾಗಿಸಿಕೊಂಡು ಪುಟ್ಟೇನಹಳ್ಳಿ ಪೊಲೀಸ್​ ಠಾಣೆಗೆ ದೂರು ನೀಡಲಾಗಿದೆ. ಅಲ್ಲದೇ, ಈ ಮೊದಲು ಸಂದರ್ಶನಗಳಲ್ಲಿ ಅವರು ಆಡಿದ ಮಾತನ್ನು ಸಹ ಕಾರಣವಾಗಿ ಇಟ್ಟುಕೊಂಡು ದೂರು ದಾಖಲು ಮಾಡಲಾಗಿದೆ. ಈ ದೂರಿನಲ್ಲಿ ದರ್ಶನ್​ ವಿರುದ್ಧ ಹಲವು ಗಂಭೀರ ಆರೋಪಗಳನ್ನು ಮಾಡಲಾಗಿದೆ.

ಜೀವ ಬೆದರಿಕೆ ಆರೋಪ; ದರ್ಶನ್​ ವಿರುದ್ಧ ಸ್ತ್ರೀ ಶಕ್ತಿ ಸಂಘದ ಸದಸ್ಯರಿಂದ ದೂರು ದಾಖಲು
ಮಹಿಳೆಯರ ದೂರು, ದರ್ಶನ್​
Mangala RR
| Edited By: |

Updated on: Feb 23, 2024 | 12:37 PM

Share

ಖ್ಯಾತ ನಟ ದರ್ಶನ್​ (Darshan) ಅವರ ವಿರುದ್ಧ ಕೆಲವು ಸಂಘ, ಸಂಸ್ಥೆಗಳು ತಿರುಗಿ ಬಿದ್ದಿವೆ. ನಿರ್ಮಾಪಕ ಉಮಾಪತಿ ಶ್ರೀನಿವಾಸ್​ ಗೌಡ (Umapathy Srinivas Gowda) ಅವರಿಗೆ ‘ತಗಡು’ ಎಂದು ದರ್ಶನ್​ ಹೇಳಿದ ಬಳಿಕ ಅನೇಕರು ಖಂಡನೆ ವ್ಯಕ್ತಪಡಿಸಿದ್ದಾರೆ. ಈಗಾಗಲೇ ರಾಜ್ಯ ಒಕ್ಕಲಿಗರ ಸಂಘ, ಗೌಡತಿಯರ ಸೇನೆ ಕಡೆಯಿಂದ ಆಕ್ಷೇಪ ಕೇಳಿಬಂದಿದೆ. ಈಗ ಸ್ತ್ರೀ ಶಕ್ತಿ ಮಹಿಳಾ ಸ್ವಸಹಾಯ ಸಂಘದ ಸದಸ್ಯರು ದರ್ಶನ್​ ವಿರುದ್ಧ ದೂರು ನೀಡಿದ್ದಾರೆ. ಪುಟ್ಟೇನಹಳ್ಳಿ ಪೊಲೀಸ್​ ಠಾಣೆಯಲ್ಲಿ ದೂರು ದಾಖಲು ಮಾಡಲಾಗಿದೆ. ಇದರಲ್ಲಿ ದರ್ಶನ್​ ವಿರುದ್ಧ ಹಲವು ಆರೋಪಗಳನ್ನು ಮಾಡಲಾಗಿದೆ. ಆ ಬಗ್ಗೆ ಇಲ್ಲಿದೆ ಮಾಹಿತಿ..

ದರ್ಶನ್​ ಅವರು ಚಿತ್ರರಂಗಕ್ಕೆ ಕಾಲಿಟ್ಟು 25 ವರ್ಷಗಳು ಕಳೆದಿರುವ ಹಿನ್ನೆಲೆಯಲ್ಲಿ ಇತ್ತೀಚೆಗೆ ಶ್ರೀರಂಗಪಟ್ಟಣದಲ್ಲಿ ಸಮಾರಂಭ ಏರ್ಪಡಿಸಲಾಗಿತ್ತು. ಆ ವೇದಿಕೆಯಲ್ಲಿ ದರ್ಶನ್​ ಆಡಿದ ಮಾತುಗಳಿಗೆ ಟೀಕೆ ಕೇಳಿಬರುತ್ತಿದೆ. ಅಲ್ಲದೇ, ಈ ಮೊದಲು ಮಾಧ್ಯಮಗಳ ಸಂದರ್ಶನಗಳಲ್ಲಿ ದರ್ಶನ್​ ನೀಡಿದ ಹೇಳಿಕೆಗಳನ್ನು ಇಟ್ಟುಕೊಂಡು ಈಗ ದೂರು ದಾಖಲು ಮಾಡಲಾಗುತ್ತಿದೆ.

ಮಹಿಳೆಯರು ಮಾಡಿದ ಆರೋಪಗಳು:

‘ಕರ್ನಾಟಕದಲ್ಲಿ ಪ್ರಖ್ಯಾತಿ ಹೊಂದಿರುವ ನಟ ದರ್ಶನ್​ ಅವರು ಹಲವಾರು ಬಾರಿ ಮಹಿಳೆಯರಿಗೆ ಅವಮಾನ ಆಗುವ ರೀತಿಯಲ್ಲಿ ಕೆಲವೊಂದು ಟಿವಿ ಇಂಟರ್​ವ್ಯೂಗಳಲ್ಲಿ ಹಾಗೂ ಕೆಲವೊಂದು ವೇದಿಕೆಗಳಲ್ಲಿ ಮಹಿಳೆಯರನ್ನು ಬಹಳ ಕೆಟ್ಟದಾಗಿ ಬಿಂಬಿಸಿರುತ್ತಾರೆ. ಇದನ್ನೆಲ್ಲವನ್ನು ಬಹಳ ದಿನಗಳಿಂದ ಸಹಿಸಿಕೊಂಡು ಬಂದ ನಾವುಗಳು ಇನ್ಮುಂದೆ ಸಹಿಸಿಕೊಳ್ಳಲು ಆಗುತ್ತಿಲ್ಲ. ಕಾರಣ ಏನೆಂದರೆ, ಶ್ರೀರಂಗಪಟ್ಟಣದಲ್ಲಿ ನಡೆದ 25 ವರ್ಷದ ಬೆಳ್ಳಿ ಸಂಭ್ರಮದಲ್ಲಿ ನಟ ದರ್ಶನ್​ ಅವರು ಮಹಿಳೆಯರಿಗೆ ಅವಮಾನ ಆಗುವ ರೀತಿಯಲ್ಲಿ ಮಾನ್ಯ ಮಠಾಧೀಶರು, ಗಣ್ಯ ವ್ಯಕ್ತಿಗಳು ಹಾಗೂ ಸಾರ್ವಜನಿಕರ ಮಧ್ಯದಲ್ಲಿ ಘಂಟಾಘೋಷವಾಗಿ ಮಹಿಳೆಯರನ್ನು ನಿಂದಿಸಿದ್ದಾರೆ’ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: ದರ್ಶನ್​ ವಿರುದ್ಧ ಗೌಡತಿಯರ ಸೇನೆ ಗರಂ; ನಟನ ಮೇಲೆ ಕ್ರಮ ಕೈಗೊಳ್ಳುವಂತೆ ಮಹಿಳಾ ಆಯೋಗಕ್ಕೆ ಪತ್ರ

‘ಅವರ ವೈಯಕ್ತಿಕ ಜೀವನದ ವಿಚಾರದಲ್ಲಿ ತಮ್ಮ ಹೆಂಡತಿಗೂ ಸಹ ಸುಮಾರು ವರ್ಷಗಳಿಂದ ಕಿರುಕುಳ ನೀಡುತ್ತಿದ್ದು, ಅದರ ವಿಚಾರವಾಗಿ ಕಾರಾಗೃಹಕ್ಕೂ ಹೋಗಿಬಂದಿರುತ್ತಾರೆ. ಇಡೀ ದೇಶವೇ ಪೂಜಿಸಿ ಆರಾಧಿಸುವಂತಹ ಮಹಾಲಕ್ಷ್ಮಿಯೂ ಸಹ ಒಂದು ಹೆಣ್ಣಾಗಿದ್ದು, ಆ ದೇವತೆಯನ್ನೂ ಸಹ ಬಿಡದೆ ಬೆತ್ತಲೆ ಮಾಡಬೇಕೆಂದು ಹೇಳಿಕೆಯನ್ನು ನೀಡಿ ಹೆಣ್ಣಿನ ಕುಲಕ್ಕೆ ಧಕ್ಕೆ ಬರುವುದಾಗಿ ನಿಂದಿಸಿರುತ್ತಾರೆ’ ಎಂದು ಕೂಡ ದೂರಿನಲ್ಲಿ ಆರೋಪಿಸಲಾಗಿದೆ.

ಇದನ್ನೂ ಓದಿ: ಚಾಕೊಲೇಟ್​ನಿಂದ ತಯಾರಾದ ದರ್ಶನ್​​ ಪ್ರತಿಮೆ; ಡಿ ಬಾಸ್​ಗೆ ಸ್ನೇಹಿತರ ಸರ್ಪ್ರೈಸ್​

‘ಈ ಸಂಬಂಧವಾಗಿ ವಿಡಿಯೋ ಮತ್ತು ಆಡಿಯೋ ಸಾಕ್ಷಿ ನಮ್ಮ ಬಳಿಕ ಇರುತ್ತವೆ. ಹೆಣ್ಣು ಮಕ್ಕಳನ್ನು ಹೆದರಿಸಿ, ಬೆದರಿಸಿ, ಕೆಟ್ಟ ಕೆಟ್ಟ ಅವಾಚ್ಯ ಶಬ್ದಗಳಿಂದ ಬೈದು ಜೀವ ಬೆದರಿಕೆಯನ್ನು ಸಹ ಹಾಕಿರುತ್ತಾರೆ. ಆದ್ದರಿಂದ ಈ ರೀತಿ ಪದೇಪದೇ ಹೇಳಿಕೆ ನೀಡಿ ಮಹಿಳೆಯರಿಗೆ ಮಾನಸಿಕವಾಗಿ ಹಾಗೂ ವ್ಯಕ್ತಿ ಚಾರಿತ್ರ್ಯಕ್ಕೆ ತೊಂದರೆ ನೀಡುತ್ತಿರುವ ದರ್ಶನ್​ ಅವರ ವಿರುದ್ಧ ಸೂಕ್ತವಾದ ಕಾನೂನು ರೀತಿ ಕ್ರಮ ಜರುಗಿಸಿ ಬಂಧಿಸಬೇಕೆಂದು ತಮ್ಮಲ್ಲಿ ಈ ಪತ್ರದ ಮೂಲಕ ಕೋರಲಾಗಿದೆ’ ಎಂದು ಮಹಿಳಾ ಸಂಘದವರು ದೂರು ನೀಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?