AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೀವ ಬೆದರಿಕೆ ಆರೋಪ; ದರ್ಶನ್​ ವಿರುದ್ಧ ಸ್ತ್ರೀ ಶಕ್ತಿ ಸಂಘದ ಸದಸ್ಯರಿಂದ ದೂರು ದಾಖಲು

‘ಚಾಲೆಂಜಿಂಗ್​ ಸ್ಟಾರ್​’ ದರ್ಶನ್​ ಅವರು ಇತ್ತೀಚೆಗಿನ ದಿನಗಳಲ್ಲಿ ನೀಡಿದ ಹೇಳಿಕೆಗಳನ್ನು ಗುರಿಯಾಗಿಸಿಕೊಂಡು ಪುಟ್ಟೇನಹಳ್ಳಿ ಪೊಲೀಸ್​ ಠಾಣೆಗೆ ದೂರು ನೀಡಲಾಗಿದೆ. ಅಲ್ಲದೇ, ಈ ಮೊದಲು ಸಂದರ್ಶನಗಳಲ್ಲಿ ಅವರು ಆಡಿದ ಮಾತನ್ನು ಸಹ ಕಾರಣವಾಗಿ ಇಟ್ಟುಕೊಂಡು ದೂರು ದಾಖಲು ಮಾಡಲಾಗಿದೆ. ಈ ದೂರಿನಲ್ಲಿ ದರ್ಶನ್​ ವಿರುದ್ಧ ಹಲವು ಗಂಭೀರ ಆರೋಪಗಳನ್ನು ಮಾಡಲಾಗಿದೆ.

ಜೀವ ಬೆದರಿಕೆ ಆರೋಪ; ದರ್ಶನ್​ ವಿರುದ್ಧ ಸ್ತ್ರೀ ಶಕ್ತಿ ಸಂಘದ ಸದಸ್ಯರಿಂದ ದೂರು ದಾಖಲು
ಮಹಿಳೆಯರ ದೂರು, ದರ್ಶನ್​
ಮಂಗಳ ರಾಜಗೋಪಾಲ್​
| Edited By: |

Updated on: Feb 23, 2024 | 12:37 PM

Share

ಖ್ಯಾತ ನಟ ದರ್ಶನ್​ (Darshan) ಅವರ ವಿರುದ್ಧ ಕೆಲವು ಸಂಘ, ಸಂಸ್ಥೆಗಳು ತಿರುಗಿ ಬಿದ್ದಿವೆ. ನಿರ್ಮಾಪಕ ಉಮಾಪತಿ ಶ್ರೀನಿವಾಸ್​ ಗೌಡ (Umapathy Srinivas Gowda) ಅವರಿಗೆ ‘ತಗಡು’ ಎಂದು ದರ್ಶನ್​ ಹೇಳಿದ ಬಳಿಕ ಅನೇಕರು ಖಂಡನೆ ವ್ಯಕ್ತಪಡಿಸಿದ್ದಾರೆ. ಈಗಾಗಲೇ ರಾಜ್ಯ ಒಕ್ಕಲಿಗರ ಸಂಘ, ಗೌಡತಿಯರ ಸೇನೆ ಕಡೆಯಿಂದ ಆಕ್ಷೇಪ ಕೇಳಿಬಂದಿದೆ. ಈಗ ಸ್ತ್ರೀ ಶಕ್ತಿ ಮಹಿಳಾ ಸ್ವಸಹಾಯ ಸಂಘದ ಸದಸ್ಯರು ದರ್ಶನ್​ ವಿರುದ್ಧ ದೂರು ನೀಡಿದ್ದಾರೆ. ಪುಟ್ಟೇನಹಳ್ಳಿ ಪೊಲೀಸ್​ ಠಾಣೆಯಲ್ಲಿ ದೂರು ದಾಖಲು ಮಾಡಲಾಗಿದೆ. ಇದರಲ್ಲಿ ದರ್ಶನ್​ ವಿರುದ್ಧ ಹಲವು ಆರೋಪಗಳನ್ನು ಮಾಡಲಾಗಿದೆ. ಆ ಬಗ್ಗೆ ಇಲ್ಲಿದೆ ಮಾಹಿತಿ..

ದರ್ಶನ್​ ಅವರು ಚಿತ್ರರಂಗಕ್ಕೆ ಕಾಲಿಟ್ಟು 25 ವರ್ಷಗಳು ಕಳೆದಿರುವ ಹಿನ್ನೆಲೆಯಲ್ಲಿ ಇತ್ತೀಚೆಗೆ ಶ್ರೀರಂಗಪಟ್ಟಣದಲ್ಲಿ ಸಮಾರಂಭ ಏರ್ಪಡಿಸಲಾಗಿತ್ತು. ಆ ವೇದಿಕೆಯಲ್ಲಿ ದರ್ಶನ್​ ಆಡಿದ ಮಾತುಗಳಿಗೆ ಟೀಕೆ ಕೇಳಿಬರುತ್ತಿದೆ. ಅಲ್ಲದೇ, ಈ ಮೊದಲು ಮಾಧ್ಯಮಗಳ ಸಂದರ್ಶನಗಳಲ್ಲಿ ದರ್ಶನ್​ ನೀಡಿದ ಹೇಳಿಕೆಗಳನ್ನು ಇಟ್ಟುಕೊಂಡು ಈಗ ದೂರು ದಾಖಲು ಮಾಡಲಾಗುತ್ತಿದೆ.

ಮಹಿಳೆಯರು ಮಾಡಿದ ಆರೋಪಗಳು:

‘ಕರ್ನಾಟಕದಲ್ಲಿ ಪ್ರಖ್ಯಾತಿ ಹೊಂದಿರುವ ನಟ ದರ್ಶನ್​ ಅವರು ಹಲವಾರು ಬಾರಿ ಮಹಿಳೆಯರಿಗೆ ಅವಮಾನ ಆಗುವ ರೀತಿಯಲ್ಲಿ ಕೆಲವೊಂದು ಟಿವಿ ಇಂಟರ್​ವ್ಯೂಗಳಲ್ಲಿ ಹಾಗೂ ಕೆಲವೊಂದು ವೇದಿಕೆಗಳಲ್ಲಿ ಮಹಿಳೆಯರನ್ನು ಬಹಳ ಕೆಟ್ಟದಾಗಿ ಬಿಂಬಿಸಿರುತ್ತಾರೆ. ಇದನ್ನೆಲ್ಲವನ್ನು ಬಹಳ ದಿನಗಳಿಂದ ಸಹಿಸಿಕೊಂಡು ಬಂದ ನಾವುಗಳು ಇನ್ಮುಂದೆ ಸಹಿಸಿಕೊಳ್ಳಲು ಆಗುತ್ತಿಲ್ಲ. ಕಾರಣ ಏನೆಂದರೆ, ಶ್ರೀರಂಗಪಟ್ಟಣದಲ್ಲಿ ನಡೆದ 25 ವರ್ಷದ ಬೆಳ್ಳಿ ಸಂಭ್ರಮದಲ್ಲಿ ನಟ ದರ್ಶನ್​ ಅವರು ಮಹಿಳೆಯರಿಗೆ ಅವಮಾನ ಆಗುವ ರೀತಿಯಲ್ಲಿ ಮಾನ್ಯ ಮಠಾಧೀಶರು, ಗಣ್ಯ ವ್ಯಕ್ತಿಗಳು ಹಾಗೂ ಸಾರ್ವಜನಿಕರ ಮಧ್ಯದಲ್ಲಿ ಘಂಟಾಘೋಷವಾಗಿ ಮಹಿಳೆಯರನ್ನು ನಿಂದಿಸಿದ್ದಾರೆ’ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: ದರ್ಶನ್​ ವಿರುದ್ಧ ಗೌಡತಿಯರ ಸೇನೆ ಗರಂ; ನಟನ ಮೇಲೆ ಕ್ರಮ ಕೈಗೊಳ್ಳುವಂತೆ ಮಹಿಳಾ ಆಯೋಗಕ್ಕೆ ಪತ್ರ

‘ಅವರ ವೈಯಕ್ತಿಕ ಜೀವನದ ವಿಚಾರದಲ್ಲಿ ತಮ್ಮ ಹೆಂಡತಿಗೂ ಸಹ ಸುಮಾರು ವರ್ಷಗಳಿಂದ ಕಿರುಕುಳ ನೀಡುತ್ತಿದ್ದು, ಅದರ ವಿಚಾರವಾಗಿ ಕಾರಾಗೃಹಕ್ಕೂ ಹೋಗಿಬಂದಿರುತ್ತಾರೆ. ಇಡೀ ದೇಶವೇ ಪೂಜಿಸಿ ಆರಾಧಿಸುವಂತಹ ಮಹಾಲಕ್ಷ್ಮಿಯೂ ಸಹ ಒಂದು ಹೆಣ್ಣಾಗಿದ್ದು, ಆ ದೇವತೆಯನ್ನೂ ಸಹ ಬಿಡದೆ ಬೆತ್ತಲೆ ಮಾಡಬೇಕೆಂದು ಹೇಳಿಕೆಯನ್ನು ನೀಡಿ ಹೆಣ್ಣಿನ ಕುಲಕ್ಕೆ ಧಕ್ಕೆ ಬರುವುದಾಗಿ ನಿಂದಿಸಿರುತ್ತಾರೆ’ ಎಂದು ಕೂಡ ದೂರಿನಲ್ಲಿ ಆರೋಪಿಸಲಾಗಿದೆ.

ಇದನ್ನೂ ಓದಿ: ಚಾಕೊಲೇಟ್​ನಿಂದ ತಯಾರಾದ ದರ್ಶನ್​​ ಪ್ರತಿಮೆ; ಡಿ ಬಾಸ್​ಗೆ ಸ್ನೇಹಿತರ ಸರ್ಪ್ರೈಸ್​

‘ಈ ಸಂಬಂಧವಾಗಿ ವಿಡಿಯೋ ಮತ್ತು ಆಡಿಯೋ ಸಾಕ್ಷಿ ನಮ್ಮ ಬಳಿಕ ಇರುತ್ತವೆ. ಹೆಣ್ಣು ಮಕ್ಕಳನ್ನು ಹೆದರಿಸಿ, ಬೆದರಿಸಿ, ಕೆಟ್ಟ ಕೆಟ್ಟ ಅವಾಚ್ಯ ಶಬ್ದಗಳಿಂದ ಬೈದು ಜೀವ ಬೆದರಿಕೆಯನ್ನು ಸಹ ಹಾಕಿರುತ್ತಾರೆ. ಆದ್ದರಿಂದ ಈ ರೀತಿ ಪದೇಪದೇ ಹೇಳಿಕೆ ನೀಡಿ ಮಹಿಳೆಯರಿಗೆ ಮಾನಸಿಕವಾಗಿ ಹಾಗೂ ವ್ಯಕ್ತಿ ಚಾರಿತ್ರ್ಯಕ್ಕೆ ತೊಂದರೆ ನೀಡುತ್ತಿರುವ ದರ್ಶನ್​ ಅವರ ವಿರುದ್ಧ ಸೂಕ್ತವಾದ ಕಾನೂನು ರೀತಿ ಕ್ರಮ ಜರುಗಿಸಿ ಬಂಧಿಸಬೇಕೆಂದು ತಮ್ಮಲ್ಲಿ ಈ ಪತ್ರದ ಮೂಲಕ ಕೋರಲಾಗಿದೆ’ ಎಂದು ಮಹಿಳಾ ಸಂಘದವರು ದೂರು ನೀಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ