AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಲಯಾಳಂ ಸ್ಟಾರ್ ನಟ ಉನ್ನಿ ಮುಕುಂದನ್ ವಿರುದ್ಧ ದೂರು, ಹಲ್ಲೆ ಆರೋಪ

Unni Mukundan: ಇತ್ತೀಚೆಗೆ ಬಿಡುಗಡೆ ಆದ ಮಲಯಾಳಂನ ಚಿತ್ರರಂಗದ ವಿವಾದಿತ ಜೊತೆಗೆ ಸೂಪರ್ ಹಿಟ್ ಸಿನಿಮಾ ‘ಮಾರ್ಕೊ’ದ ನಾಯಕ ಉನ್ನಿ ಮುಕುಂದನ್ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಉನ್ನಿ ಮುಕುಂದನ್ ವಿರುದ್ಧ ಅವರ ಮ್ಯಾನೇಜರ್ ಅವರೇ ದೂರು ನೀಡಿದ್ದಾರೆ. ಉನ್ನಿ ಮುಕುಂದನ್ ವಿರುದ್ಧ ದೂರು ನೀಡಿದವರ್ಯಾರು? ಕಾರಣ ಏನು?

ಮಲಯಾಳಂ ಸ್ಟಾರ್ ನಟ ಉನ್ನಿ ಮುಕುಂದನ್ ವಿರುದ್ಧ ದೂರು, ಹಲ್ಲೆ ಆರೋಪ
Unni Mukundan
ಮಂಜುನಾಥ ಸಿ.
|

Updated on: May 28, 2025 | 2:55 PM

Share

ಕೆಲ ತಿಂಗಳ ಹಿಂದಷ್ಟೆ ಬಿಡುಗಡೆ ಆದ ಮಲಯಾಳಂನ (Malayalam) ವಿವಾದಿತ ಜೊತೆಗೆ ಸೂಪರ್ ಹಿಟ್ ಸಿನಿಮಾ ‘ಮಾರ್ಕೊ’ದ ನಾಯಕ ಉನ್ನಿ ಮುಕುಂದನ್ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಉನ್ನಿ ಮುಕುಂದನ್ ವಿರುದ್ಧ ಅವರ ಮ್ಯಾನೇಜರ್ ಅವರೇ ದೂರು ನೀಡಿದ್ದಾರೆ. ಇದೀಗ ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಸ್ಪಷ್ಟನೆ ನೀಡಿರುವ ನಟ ಉನ್ನಿ ಮುಕುಂದನ್ ನನ್ನ ಮೇಲೆ ಹೇರಲಾಗಿರುವ ಆರೋಪಗಳೆಲ್ಲ ಸುಳ್ಳು ಎಂದಿದ್ದಾರೆ.

ನಟ ಉನ್ನಿ ಮುಕುಂದನ್ ಅವರ ಬಳಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದ ವಿಪಿನ್ ಎಂಬುವರು ಕೇರಳದ ಕೊಚ್ಚಿಯಲ್ಲಿ ಉನ್ನಿ ಮುಕುಂದನ್ ವಿರುದ್ಧ ದೂರು ನೀಡಿದ್ದಾರೆ. ಉನ್ನಿ ಮುಕುಂದನ್ ತಮ್ಮ ಮೇಲೆ ಅಮಾನುಷವಾಗಿ ಹಲ್ಲೆ ಮಾಡಿರುವುದು ಮಾತ್ರವೇ ಅಲ್ಲದೆ ಅಶ್ಲೀಲ ಪದಗಳನ್ನು ಬಳಸಿ ನಿಂದನೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಅಲ್ಲದೆ ವಿಪಿನ್, ಕೊಚ್ಚಿನ ಆಸ್ಪತ್ರೆಯೊಂದರಲ್ಲಿ ದಾಖಲಾಗಿದ್ದು ಗಾಯಗಳಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ.

ಘಟನೆ ಬಳಿಕ ಸಾಮಾಜಿಕ ಜಾಲತಾಣದಲ್ಲಿ ಸಂದೇಶ ಹಂಚಿಕೊಂಡಿರುವ ನಟ ಉನ್ನಿ ಮುಕುಂದನ್, ‘ನನ್ನ ಮೇಲೆ ವಿಪಿನ್ ಮಾಡಿರುವ ಎಲ್ಲ ಆರೋಪಗಳು ಸುಳ್ಳು. ನಾನು ಹಾಗೂ ವಿಪಿನ್ ಭೇಟಿ ಮಾಡಿದ ಸಂದರ್ಭದ ಸಿಸಿಟಿವಿ ದೃಶ್ಯಾವಳಿ ಸಾಕ್ಷಿಯಾಗಿದೆ. ಅಲ್ಲದೆ ವಿಪಿನ್ ನನ್ನ ಖಾಸಗಿ ಮ್ಯಾನೇಜರ್ ಆಗಿಯೇ ಇರಲಿಲ್ಲ’ ಎಂದಿದ್ದಾರೆ ಉನ್ನಿ ಮುಕುಂದನ್.

ಇದನ್ನೂ ಓದಿ: ನನ್ನ ರೀತಿ ಸಿಗರೇಟ್ ಸೇದಬೇಡಿ, ಸಿಕ್ಸ್ ಪ್ಯಾಕ್ ಮಾಡಿ: ಅಭಿಮಾನಿಗಳಿಗೆ ನಟನ ಬುದ್ಧಿಮಾತು

ತಮ್ಮ ಹಾಗೂ ವಿಪಿನ್ ನಡುವೆ ಭಿನ್ನಾಭಿಪ್ರಾಯಕ್ಕೆ ಕಾರಣವೇನು ಎಂದು ವಿವರಿಸಿರುವ ಉನ್ನಿ ಮುಕುಂದನ್, ‘ಮಲಯಾಳಂನ ಕೆಲವು ನಟಿಯರನ್ನು ಭೇಟಿ ಆಗುತ್ತಿದ್ದ ವಿಪಿನ್, ಮುಕುಂದನ್ ಅನ್ನು ಮದುವೆ ಆಗುವಂತೆ ನಟಿಯರನ್ನು ಕೇಳುತ್ತಿದ್ದ, ಇದೇ ಕಾರಣಕ್ಕೆ ನನ್ನ ಹಾಗೂ ವಿಪಿನ್ ನಡುವೆ ಭಿನ್ನಾಭಿಪ್ರಾಯ ಮೂಡಿತು. 2018 ರಲ್ಲಿ ಆ ವ್ಯಕ್ತಿ ತಮ್ಮ ಬ್ಯಾನರ್​ನಲ್ಲಿ ಸಿನಿಮಾ ನಿರ್ಮಾಣ ಮಾಡುವುದಾಗಿ ನನ್ನ ಪರಿಚಯ ಬೆಳೆಸಿಕೊಂಡ. ತಾನು ಮಲಯಾಳಂ ಚಿತ್ರರಂಗದ ಜನಪ್ರಿಯ ಸ್ಟಾರ್ ನಟರ ಪಿಆರ್ ಹ್ಯಾಂಡಲ್ ಮಾಡುವುದಾಗಿ ಹೇಳಿಕೊಂಡಿದ್ದ’ ಎಂದಿದ್ದಾರೆ ಮುಕುಂದನ್.

‘ಈ ವ್ಯಕ್ತಿ ವಿಷ. ಚಿತ್ರರಂಗದಲ್ಲಿ ನನ್ನ ಬಗ್ಗೆ ಹಲವು ಗಾಸಿಪ್​ಗಳನ್ನು ಹರಿಯಬಿಟ್ಟಿದ್ದಾನೆ. ಇದರಿಂದಾಗಿ ನನ್ನ ವೃತ್ತಿ ಜೀವನ ಹಾಗೂ ಖಾಸಗಿ ಜೀವನ ಸಮಸ್ಯೆಗೆ ಸಿಲುಕಿದೆ. ಈ ವ್ಯಕ್ತಿಯಿಂದಾಗಿ ನಾನು ಕೆಲವು ಗೆಳೆಯರನ್ನು ಕಳೆದುಕೊಳ್ಳಬೇಕಾಯ್ತು, ನನ್ನ ಇಮೇಜು ಹಾಳಾಯ್ತು, ಕೆಲವು ಸಿನಿಮಾಗಳು ಸಹ ನನ್ನ ಕೈತಪ್ಪಿದವು’ ಎಂದಿದ್ದಾರೆ ಉನ್ನಿ ಮುಕುಂದನ್.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ