AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಭಾಸ್ ಪಿಆರ್​ಓ ವಿರುದ್ಧ ಪೊಲೀಸ್ ದೂರು ದಾಖಲು, ಕಾರಣವೇನು?

Prabhas: ನಟ ಪ್ರಭಾಸ್​ ಅವರ ಪಿಆರ್​ಓ ಎಂದು ಹೇಳಿಕೊಂಡಿರುವ ವ್ಯಕ್ತಿಯೊಬ್ಬಾತನ ಮೇಲೆ ಕೊಲೆ ಬೆದರಿಕೆ ಆರೋಪದಲ್ಲಿ ಹೈದರಾಬಾದ್​ನಲ್ಲಿ ದೂರು ದಾಖಲಾಗಿದೆ. ಪ್ರಭಾಸ್ ಕುರಿತು ಯೂಟ್ಯೂಬ್ ಚಾನೆಲ್ ಒಂದರಲ್ಲಿ ಇತ್ತೀಚೆಗೆ ವಿಡಿಯೋ ಒಂದನ್ನು ಹಂಚಿಕೊಳ್ಳಲಾಗಿತ್ತು. ಈ ವಿಡಿಯೋಕ್ಕೆ ಸಂಭಂಧಿಸಿದಂತೆ ಪ್ರಭಾಸ್​ ಪಿಆರ್​ಓ ಎಂದು ಹೇಳಿಕೊಂಡಿರುವ ವ್ಯಕ್ತಿಯೊಬ್ಬ ಯೂಟ್ಯೂಬ್ ಚಾನೆಲ್ ಪತ್ರಕರ್ತನಿಗೆ ಬೆದರಿಕೆ ಹಾಕಿದ್ದಾನಂತೆ.

ಪ್ರಭಾಸ್ ಪಿಆರ್​ಓ ವಿರುದ್ಧ ಪೊಲೀಸ್ ದೂರು ದಾಖಲು, ಕಾರಣವೇನು?
Prabhas
ಮಂಜುನಾಥ ಸಿ.
|

Updated on:Mar 30, 2025 | 4:00 PM

Share

ತಾನು ಪ್ರಭಾಸ್ (Prabhas)​ ಪಿಆರ್​ಓ (ಪಬ್ಲಿಕ್ ರಿಲೇಷನ್ ಆಫೀಸರ್) ಎಂದು ಹೇಳಿಕೊಂಡಿರುವ ಸುರೇಶ್ ಕೊಂಡಿ ಹೆಸರಿನ ವ್ಯಕ್ತಿಯ ವಿರುದ್ಧ ಹೈದರಾಬಾದ್​ನಲ್ಲಿ ಪೊಲೀಸ್ ದೂರು ದಾಖಲಾಗಿದೆ. ವ್ಯಕ್ತಿಯೊಬ್ಬಾತನಿಗೆ ಬೆದರಿಕೆ ಹಾಕಿದ ಆರೋಪದ ಮೇಲೆ ಸುರೇಶ್ ವಿರುದ್ಧ ಕೇಸು ನಮೂದಾಗಿದೆ. ಸುರೇಶ್, ಎಂಬಾತ ಯೂಟ್ಯೂಬ್ ಚಾನೆಲ್​ ಒಂದನ್ನು ನಡೆಸುತ್ತಿರುವ ಪತ್ರಕರ್ತ ಒಬ್ಬರಿಗೆ ಕೊಲೆ ಬೆದರಿಕೆ ಹಾಕಿದ್ದಾರೆ ಎನ್ನಲಾಗುತ್ತಿದೆ. ಈ ಕೊಲೆ ಬೆದರಿಕೆ ಹಾಕಲು ಪ್ರಭಾಸ್ ಬಗ್ಗೆ ಪ್ರಕಟವಾಗಿದ್ದ ಸುದ್ದಿ ಕಾರಣವಂತೆ.

ಜ್ಯೂಬ್ಲಿಹಿಲ್ಸ್ ರಸ್ತೆಯಲ್ಲಿ ಕಚೇರಿ ಹೊಂದಿರುವ ಯೂಟ್ಯೂಬ್ ಚಾನೆಲ್ ಒಂದು ಇತ್ತೀಚೆಗೆ ಪ್ರಭಾಸ್ ಬಗ್ಗೆ ವಿಡಿಯೋ ಒಂದನ್ನು ಹಂಚಿಕೊಂಡಿತ್ತು. ಪ್ರಭಾಸ್​ಗೆ ಭಾರಿ ಅನಾರೋಗ್ಯ ಎದುರಾಗಿದೆ ಕೆಲವೇ ದಿನಗಳಲ್ಲಿ ಶಸ್ತ್ರಚಿಕಿತ್ಸೆಗೆ ಪ್ರಭಾಸ್ ಒಳಗಾಗಲಿದ್ದಾರೆ ಎಂದು ಸುದ್ದಿಯಲ್ಲಿ ಹೇಳಲಾಗಿತ್ತು. ಆ ವಿಡಿಯೋ ಅನ್ನು ದೊಡ್ಡ ಸಂಖ್ಯೆಯ ಜನ ನೋಡಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು.

ವಿಡಿಯೋ ಪ್ರಕಟವಾದ ಮರುದಿನ ಯೂಟ್ಯೂಬ್ ಚಾನೆಲ್​ನ ಪತ್ರಕರ್ತನಿಗೆ ಕರೆ ಮಾಡಿದ ಸುರೇಶ್ ಕೊಂಡಿ, ತಾನು ಪ್ರಭಾಸ್ ಅವರ ಪಿಆರ್​ಓ ಎಂದು ಪರಿಚಯಿಸಿಕೊಂಡಿದ್ದು, ನೀವು ಹಾಕಿರುವ ಸುದ್ದಿಗೆ ಸಾಕ್ಷಿ ಕೊಡಿ ಎಂದು ಕೇಳಿದ್ದಾನೆ. ಮುಂದುವರೆದು, ಪ್ರಭಾಸ್ ಆರೋಗ್ಯದ ಬಗ್ಗೆ ಹಾಕಲಾಗಿರುವ ವಿಡಿಯೋ ಅನ್ನು ಡಿಲೀಟ್ ಮಾಡದೇ ಇದ್ದರೆ ಗಲಾಟೆ ಮಾಡುವುದಾಗಿಯೂ ಕೊಲ್ಲುವುದಾಗಿಯೂ ಬೆದರಿಕೆ ಹಾಕಿದ್ದಾಗಿ ಯೂಟ್ಯೂಬ್ ಚಾನೆಲ್​ನ ಪತ್ರಕರ್ತ ಆರೋಪಿಸಿದ್ದು, ಪೊಲೀಸ್ ಠಾಣೆಗೆ ದೂರು ಸಹ ನೀಡಿದ್ದಾರೆ.

ಇದನ್ನೂ ಓದಿ:ಕಡೆಗೂ ಮದುವೆಗೆ ಮನಸ್ಸು ಮಾಡಿದ ಟಾಲಿವುಡ್ ನಟ ಪ್ರಭಾಸ್

ಆ ನಂತರ ಆ ಯೂಟ್ಯೂಬ್ ಚಾನೆಲ್​ನ ಪತ್ರಕರ್ತನಿಗೆ ಹಲವಾರು ಪ್ರಭಾಸ್ ಅಭಿಮಾನಿಗಳ ಕರೆ ಮತ್ತು ಸಂದೇಶಗಳು ಎಡಬಿಡದೇ ಬರುತ್ತಿದ್ದು, ವಿಡಿಯೋ ಡಿಲೀಟ್ ಮಾಡದಿದ್ದರೆ ಕಚೇರಿಗೆ ಬೆಂಕಿ ಇಡುವುದಾಗಿ ಬೆದರಿಕೆ ಸಹ ಹಾಕಿದ್ದಾರಂತೆ ಕೆಲವರು. ಇದೇ ಕಾರಣಕ್ಕೆ ಈಗ ಆ ಪತ್ರಕರ್ತ ಪೊಲೀಸರಿಗೆ ದೂರು ನೀಡಿದ್ದಾರೆ. ದೂರು ದಾಖಲಾಗಿರುವ ಸುರೇಶ್ ಕೊಂಡಿ ಹೈದರಾಬಾದ್​ನಲ್ಲಿ ಪಿಆರ್​ಓ ಆಗಿದ್ದು, ಪ್ರಭಾಸ್ ಮಾತ್ರವೇ ಅಲ್ಲದೆ ಹಲವು ಸಿನಿಮಾಗಳಿಗೆ ಪಿಆರ್​ಓ ಆಗಿ ಕಾರ್ಯ ನಿವರ್ಹಿಸುತ್ತಿದ್ದಾರೆ.

ಪ್ರಭಾಸ್​ರ ಆರೋಗ್ಯ, ಪ್ರಭಾಸ್ ಮದುವೆ ಬಗ್ಗೆ ಆಗಾಗ್ಗೆ ಗಾಳಿ ಸುದ್ದಿಗಳು ಹರಿದಾಡುತ್ತಲೇ ಇರುತ್ತವೆ. ಕೆಲ ತಿಂಗಳ ಹಿಂದೆ ಸಹ ಪ್ರಭಾಸ್ ಆರೋಗ್ಯದ ಬಗ್ಗೆ ಸುದ್ದಿ ಹರಡಿತ್ತು, ಪ್ರಭಾಸ್ ವಿದೇಶಕ್ಕೆ ಹೋಗಿ ಕಾಲಿನ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ ಎನ್ನಲಾಗಿತ್ತು.

ಸಿನಿಮಾ ವಿಷಯಗಳಿಗೆ ಮರಳುವುದಾದರೆ ಪ್ರಭಾಸ್ ಪ್ರಸ್ತುತ ‘ರಾಜಾ ಸಾಬ್’ ಸಿನಿಮಾ ಶೂಟಿಂಗ್ ಮುಗಿಸಿದ್ದಾರೆ. ರಘು ಹನುಪುಡಿ ನಿರ್ದೇಶನದ ಹೊಸ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಸಂದೀಪ್ ರೆಡ್ಡಿ ವಂಗಾ ನಿರ್ದೇಶನದ ‘ಸ್ಪಿರಿಟ್’ ಸಿನಿಮಾದಲ್ಲಿ ಸಹ ನಟಿಸಲಿದ್ದಾರೆ. ಈ ಮೂರು ಸಿನಿಮಾಗಳ ಬಳಿಕವಷ್ಟೆ ಅವರು ಪ್ರಶಾಂತ್ ನೀಲ್ ನಿರ್ದೇಶನದ ‘ಸಲಾರ್ 2’ ಸಿನಿಮಾದಲ್ಲಿ ನಟಿಸಲಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:58 pm, Sun, 30 March 25

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ