AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿರ್ದೇಶಕ ವೆಟ್ರಿಮಾರನ್​ ಹೇಳಿಕೆಯಿಂದ ದಳಪತಿ ವಿಜಯ್​ ಅಭಿಮಾನಿಗಳಿಗೆ ಬೇಸರ

ಸಾಮಾಜಿಕ ಕಳಕಳಿಯ ವಿಷಯವನ್ನು ಇಟ್ಟುಕೊಂಡು ಕಮರ್ಷಿಯಲ್​ ಶೈಲಿಯ ಸಿನಿಮಾ ಮಾಡುವಲ್ಲಿ ವೆಟ್ರಿಮಾರನ್​ ಫೇಮಸ್. ಅವರ ಜೊತೆ ದಳಪತಿ ವಿಜಯ್​ ಕೊನೇ ಸಿನಿಮಾ ಮಾಡಲಿದ್ದಾರೆ ಎಂದು ಎಲ್ಲರೂ ಕಾಯುತ್ತಿದ್ದರು. ಈ ಬಗ್ಗೆ ವೆಟ್ರಿಮಾರನ್​ ಅವರು ಈಗ ಹೇಳಿರುವ ಮಾತು ಕೇಳಿ ದಳಪತಿ ವಿಜಯ್​ ಫ್ಯಾನ್ಸ್​ ಬೇಸರ ಮಾಡಿಕೊಂಡಿದ್ದಾರೆ. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ..

ನಿರ್ದೇಶಕ ವೆಟ್ರಿಮಾರನ್​ ಹೇಳಿಕೆಯಿಂದ ದಳಪತಿ ವಿಜಯ್​ ಅಭಿಮಾನಿಗಳಿಗೆ ಬೇಸರ
ವೆಟ್ರಿಮಾರನ್​, ದಳಪತಿ ವಿಜಯ್​
ಮದನ್​ ಕುಮಾರ್​
|

Updated on: Apr 24, 2024 | 10:21 PM

Share

ನಟ ದಳಪತಿ ವಿಜಯ್​ (Thalapathy Vijay) ಅವರು ಅಧಿಕೃತವಾಗಿಯೇ ರಾಜಕೀಯಕ್ಕೆ ಎಂಟ್ರಿ ಆಗಿರುವುದು ಗೊತ್ತೇ ಇದೆ. ಹಾಗಾದರೆ ಅವರ ಕೊನೇ ಸಿನಿಮಾ ಯಾವುದು? 69ನೇ (Thalapathy 69) ಸಿನಿಮಾದ ಬಳಿಕ ಅವರು ಬೇರೆ ಯಾವುದೇ ಚಿತ್ರದಲ್ಲಿ ನಟಿಸುವುದಿಲ್ಲ ಎಂದು ಊಹಿಸಲಾಗಿತ್ತು. ದಳಪತಿ ವಿಜಯ್​ ನಟನೆಯ 69ನೇ ಸಿನಿಮಾಗೆ ತಮಿಳಿನ ಖ್ಯಾತ ನಿರ್ದೇಶಕ ವೆಟ್ರಿಮಾರನ್​ (Vetrimaaran) ಅವರು ಆ್ಯಕ್ಷನ್​-ಕಟ್​ ಹೇಳುತ್ತಾರೆ ಎಂದು ನಿರೀಕ್ಷಿಸಲಾಗಿತ್ತು. ಆದರೆ ಆ ವಿಚಾರಕ್ಕೆ ಸಂಬಂಧಪಟ್ಟಂತೆ ವೆಟ್ರಿಮಾರನ್​ ಅವರು ನೀಡಿದ ಒಂದು ಹೇಳಿಕೆಯಿಂದ ದಳಪತಿ ವಿಜಯ್​ ಅವರ ಅಭಿಮಾನಿಗಳಿಗೆ ಬೇಸರ ಆಗಿದೆ.

ದಳಪತಿ ವಿಜಯ್​ ಮತ್ತು ವೆಟ್ರಿಮಾರನ್​ ಅವರು ಜೊತೆಯಾಗಿ ಸಿನಿಮಾ ಮಾಡುತ್ತಾರೆ ಎಂಬ ನಿರೀಕ್ಷೆಯಲ್ಲಿದ್ದ ಅಭಿಮಾನಿಗಳ ಮನದಲ್ಲಿ ಹೈಪ್​ ಹೆಚ್ಚಾಗಿತ್ತು. ತೆಲುಗು ಚಿತ್ರರಂಗದ ದೊಡ್ಡ ನಿರ್ಮಾಪಕರೊಬ್ಬರು ಈ ಸಿನಿಮಾಗೆ ಬಂಡವಾಳ ಹೂಡಲಿದ್ದಾರೆ ಎಂದು ಕೂಡ ಗಾಸಿಪ್​ ಹಬ್ಬಿತ್ತು. ಆ ಬಳಿಕ ದಳಪತಿ ವಿಜಯ್​ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದರು. ಆದರೆ ಅದೆಲ್ಲವೂ ಈಗ ಹುಸಿ ಆಗಿದೆ.

ಇತ್ತೀಚೆಗೆ ನಡೆದ ಒಂದು ಕಾರ್ಯಕ್ರಮದಲ್ಲಿ ದಳಪತಿ ವಿಜಯ್​ ಜೊತೆಗಿನ ಸಿನಿಮಾ ಬಗ್ಗೆ ವೆಟ್ರಿಮಾರನ್​ ಅವರಿಗೆ ಪ್ರಶ್ನೆ ಕೇಳಲಾಗಿದೆ. ಆಗ ಅವರು ಬೇಸರದ ವಿಷಯವನ್ನು ಬಹಿರಂಗಪಡಿಸಿದ್ದಾರೆ. ‘ತುಂಬ ಸಮಯದ ಹಿಂದೆ ನಾನು ಮತ್ತು ದಳಪತಿ ವಿಜಯ್​ ಅವರು ಒಂದು ಕಥೆಯ ಬಗ್ಗೆ ಚರ್ಚೆ ಮಾಡಿದ್ದೆವು. ಆದರೆ ಆ ಸಿನಿಮಾ ನಿರ್ಮಾಣ ಆಗುತ್ತದೆ ಅಂತ ನನಗೆ ಅನಿಸುತ್ತಿಲ್ಲ. ನಾವು ಆ ಸಿನಿಮಾವನ್ನು ಮಾಡುತ್ತಿಲ್ಲ ಎಂದುಕೊಂಡಿದ್ದೇನೆ’ ಎಂದಿದ್ದಾರೆ ವೆಟ್ರಿಮಾರನ್​.

ಇದನ್ನೂ ಓದಿ: ತಾಯಿಗಾಗಿ ಸಾಯಿ ಬಾಬಾ ಮಂದಿರ ಕಟ್ಟಿದ ದಳಪತಿ ವಿಜಯ್

ದಳಪತಿ ವಿಜಯ್​ ಅಭಿನಯದ ಈ ಕೊನೇ ಸಿನಿಮಾಗೆ ವೆಟ್ರಿಮಾರನ್​ ನಿರ್ದೇಶನ ಮಾಡುತ್ತಿಲ್ಲ ಎಂಬುದು ಈಗ ಖಚಿತವಾಗಿದೆ. ಹಾಗಾದರೆ ಆ ಚಾನ್ಸ್​ ಬೇರೆ ಯಾವ ನಿರ್ದೇಶಕನಿಗೆ ಸಿಗಲಿದೆ? ವರದಿಗಳ ಪ್ರಕಾರ ಎಚ್​. ವಿನೋದ್​ ಅವರು ‘ದಳಪತಿ 69’ ಸಿನಿಮಾಗೆ ನಿರ್ದೇಶನ ಮಾಡುವ ಸಾಧ್ಯತೆ ಇದೆ. ಈ ಸಿನಿಮಾಗೆ ದಳಪತಿ ವಿಜಯ್​ ಅವರು ನೂರಾರು ಕೋಟಿ ರೂಪಾಯಿ ಸಂಭಾವನೆ ಪಡೆಯಲಿದ್ದಾರೆ. ಈ ಸಿನಿಮಾದ ಶೂಟಿಂಗ್​ ಮುಗಿಸಿದ ಬಳಿಕ 2026ರ ತಮಿಳುನಾಡು ವಿಧಾನಸಭಾ ಚುನಾವಣೆ ಬಗ್ಗೆ ವಿಜಯ್​ ಅವರು ಸಂಪೂರ್ಣ ಗಮನ ಹರಿಸಲಿದ್ದಾರೆ ಎನ್ನಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ
ಮುಂಬೈನಲ್ಲಿರುವ ಮಹಾರಾಷ್ಟ್ರ ವಿಧಾನ ಭವನಕ್ಕೆ ಬಾಂಬ್ ಬೆದರಿಕೆ
ಮುಂಬೈನಲ್ಲಿರುವ ಮಹಾರಾಷ್ಟ್ರ ವಿಧಾನ ಭವನಕ್ಕೆ ಬಾಂಬ್ ಬೆದರಿಕೆ